Homeಚಳವಳಿಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಉತ್ತರ ಪ್ರದೇಶದ ಗೋರಖ್‌ಪುರದ ನಿವಾಸಿಯಾಗಿರುವ ಅಭಿಷೇಕ್ ಯಾದವ್, ಈ ದೇಶದಲ್ಲಿ ಮಹಿಳೆಯರಿಗೆ ಸಾಕಷ್ಟು ರಕ್ಷಣೆ ಇಲ್ಲದಿರುವುದನ್ನು ಕಂಡು ದೇಶದ ಬಹುತೇಕ ಮಾನವೀಯತೆಯುಳ್ಳ ನಾಗರಿಕರಂತೆ ಮರುಗಿದ್ದರು. ಅದಕ್ಕಾಗಿ ಏನನ್ನಾದರೂ ‌ಮಾಡಲೇಬೇಕೆಂದು ಹೊರಟ ಅವರ ಸಾಧನೆ ಮಾತ್ರ ಅಸಾಧಾರಣವಾದುದು.

- Advertisement -
- Advertisement -

ಕೃಪೆ: ಇಂಡಿಯಾಟೈಮ್ಸ್‌

ಅನುವಾದ: ನಿಖಿಲ್ ಕೋಲ್ಪೆ

ಡಿಸೆಂಬರ್ 16, 2012ರ ರಾತ್ರಿ ದಿಲ್ಲಿಯಲ್ಲಿ ಪುಂಡರ ಗುಂಪೊಂದು ಅರೆ ವೈದ್ಯಕೀಯ ವಿದ್ಯಾರ್ಥಿನಿ ಯುವತಿಯೊಬ್ಬರ ಮೇಲೆ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘೋರ ಘಟನೆ ನಡೆದಿತ್ತು. ನಿರ್ಭಯಾ ಪ್ರಕರಣವೆಂದು ಮಾಧ್ಯಮಗಳು ಹೆಸರಿಸಿದ್ದ ಈ ಘಟನೆಯಿಂದ ದೇಶದ ಜನರಂತೆ ಗೋರಖ್‌ಪುರದ ಅಭಿಷೇಕ್ ಯಾದವ್ ಅವರಿಗೂ ತೀವ್ರ ನೋವಾಗಿತ್ತು.

ಈ ಕುರಿತು ಏನನ್ನಾದರೂ ಮಾಡಲೇಬೇಕು ಎಂಬ ದೃಢ ಸಂಕಲ್ಪ ಮಾಡಿದಾಗ ಅವರು ಹೆಚ್ಚು ಆ ಕಡೆ, ಈ ಕಡೆ ನೋಡಬೇಕಾಗಿರಲಿಲ್ಲ. ಹಲವು ರೀತಿಯ ಸ್ವಯಂರಕ್ಷಣಾ ಕಲೆಗಳಲ್ಲಿ ನಿಷ್ಣಾತರಾಗಿರುವ ಅವರು, ಮಹಿಳೆಯರು ಮತ್ತು ಹುಡುಗಿಯರಿಗೆ ಈ ರೀತಿಯ ದಾಳಿಕೋರರ ವಿರುದ್ಧ ತಮ್ಮನ್ನು ರಕ್ಷಿಸಿಕೊಳ್ಳುವ ತರಬೇತಿ ನೀಡಲು ನಿರ್ಧರಿಸಿದರು. ಅಂದಿನಿಂದ ಅವರು 2.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರಿಗೆ ಸ್ವಯಂ ರಕ್ಷಣೆಯಲ್ಲಿ ತರಬೇತಿ ನೀಡಿದ್ದಾರೆ.

28 ವರ್ಷ ಪ್ರಾಯದ ಅವರು, ‘ಅಭಿಸೆಲ್ಫ್ ಪ್ರೊಟೆಕ್ಷನ್ ಟ್ರಸ್ಟ್’ (Abhiself Protection Trust) ಎಂಬ ಸ್ವಯಂಸೇವಾ ಸಂಸ್ಥೆಯನ್ನು ನಡೆಸುತ್ತಿದ್ದು, ಅದರ ಅಡಿಯಲ್ಲಿ ‘ಮೇರಿ ರಕ್ಷಾ ಮೇರಿ ಹಾತೋಂಮೆ’ (ನನ್ನ ರಕ್ಷಣೆ ನನ್ನ ಕೈಗಳಲ್ಲಿ) ಕಾರ್ಯಕ್ರಮದಡಿ ಹೆಣ್ಣುಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅವರಲ್ಲಿ ತರಬೇತಿ ಪಡೆಯುತ್ತಿರುವವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದವರೇ ಆಗಿರುವುದು ವಿಶೇಷವಾಗಿದೆ.

ಅಭಿಷೇಕ್ ಮೂಲತಃ ಜಪಾನ್ ಮೂಲದ ಐಕಿಡೋ (Aikido) ಪರಿಣಿತರಾಗಿದ್ದು, ಆರಂಭದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ತರಬೇತಿ ನೀಡುತ್ತಿದ್ದರು.

“ನಾನು 2007ರಲ್ಲಿ ಉತ್ತರ ಪ್ರದೇಶದ ಪೊಲೀಸ್ ಕಮಾಂಡೊಗಳಿಗೆ ತರಬೇತಿ ಆರಂಭಿಸಿದೆ. ಆದರೆ, 2012ರಲ್ಲಿ ದಿಲ್ಲಿಯ ಸಾಮೂಹಿಕ ಅತ್ಯಾಚಾರದ ಬಳಿಕ, ಅದೇ ರಕ್ಷಣಾ ತಂತ್ರವನ್ನು ಹೆಣ್ಣುಮಕ್ಕಳಿಗೆ ಕಲಿಸಲು ನಾವೊಂದು ಅಭಿಯಾನ ಆರಂಭಿಸಿದೆವು. ಒಂದು ವಾರ ಅವಧಿಯ ಈ ತರಬೇತಿಯು ಯಾವುದೇ ದಾಳಿಕೋರರನ್ನು ಸ್ವಂತವಾಗಿ ಎದುರಿಸಲು ಅವರನ್ನು ಶಕ್ತರನ್ನಾಗಿ ಮಾಡುತ್ತದೆ” ಎಂದು ಅಭಿಷೇಕ್ ಹೇಳುತ್ತಾರೆ.

ಅವರ ಶಿಬಿರಗಳಲ್ಲಿ ಸಾಮಾನ್ಯವಾಗಿ ನೂರಾರು ಹೆಣ್ಣುಮಕ್ಕಳಿರುತ್ತಾರೆ. ಆದರೆ, ಅವರು 2016ರಲ್ಲಿ ಪ್ರತಾಪಗಢದ ಕುಂದಾ ಎಂಬಲ್ಲಿ 5,700ರಷ್ಟು ಭಾರೀ ಸಂಖ್ಯೆಯ ಹೆಣ್ಣುಮಕ್ಕಳಿಗೆ ತರಬೇತಿ ನೀಡಿ ಲಿಮ್ಕಾ ವಿಶ್ವದಾಖಲೆ ಮಾಡಿದರು.

2002ರಿಂದ ಸ್ವಯಂರಕ್ಷಣಾ ಕಲೆಯಲ್ಲಿ ತರಬೇತಿ ಪಡೆಯಲು ಆರಂಭಿಸಿದ ಅವರು, ಅಂತರರಾಷ್ಟ್ರೀಯ ಕರಾಟೆಯಲ್ಲಿ ಚಿನ್ನದ ಪದಕ ವಿಜೇತರೂ ಹೌದು. ಈಗ ತರಬೇತಿಯಲ್ಲಿ ಅವರಿಗೆ ನೆರವಾಗಲು 12 ಮಂದಿಯ ತಂಡವಿದೆ.

“ನಮ್ಮ ಗುರಿಯೆಂದರೆ ಹೆಣ್ಣುಮಕ್ಕಳನ್ನು ಸಶಕ್ತಗೊಳಿಸಿ, ಯಾವುದೇ ಸವಾಲನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುವಂತಹ ವ್ಯಕ್ತಿಗಳಾಗಿ ಅವರನ್ನು ಗಟ್ಟಿಗೊಳಿಸುವುದು. ಐಕಿಡೋದಲ್ಲಿ ಯಾರೂ ಬೇಕಾದರೂ ನಿಯಮಿತ ಅಭ್ಯಾಸದಿಂದ ಕಲಿತು ನಿಜಜೀವನದಲ್ಲಿ ಉಪಯೋಗಿಸಬಹುದಾದ ಹಲವಾರು ಪಟ್ಟುಗಳು ಮತ್ತು ತಂತ್ರಗಳಿವೆ” ಎಂದು ಅಭಿಷೇಕ್ ವಿವರಿಸುತ್ತಾರೆ.

“ನಾವು ಶಾಲೆಯಿಂದ ಶಾಲೆಗೆ ಹೋಗುತ್ತೇವೆ. ಅಲ್ಲಿ ನಾವು ಅವರು ಏಕೆ ಸ್ವಯಂರಕ್ಷಣೆಯನ್ನು ಕಲಿಯುವುದು ಅಗತ್ಯ ಮತ್ತು ಅದರಲ್ಲೂ ಮಹಿಳೆಯರ ಸುರಕ್ಷಿತತೆಯ ವಿಷಯದಲ್ಲಿ ನಮ್ಮ ದೇಶದಲ್ಲಿ ಪರಿಸ್ಥಿತಿ ಇಷ್ಟೊಂದು ಕೆಟ್ಟಿರುವ ಸಂದರ್ಭದಲ್ಲಿ ಇದು ಏಕೆ ಮುಖ್ಯ ಎಂದು ವಿವರಿಸುತ್ತೇವೆ” ಎಂದವರು ಹೇಳುತ್ತಾರೆ.

ಉತ್ತರ ಪ್ರದೇಶದಲ್ಲಿ ತರಬೇತಿ ನೀಡಿದ ಮೇಲೆ ಈ ತರಬೇತಿ ಕಾರ್ಯಕ್ರಮವನ್ನು ರಾಜ್ಯದಾಚೆಗೂ ವಿಸ್ತರಿಸುವ ಗುರಿಯಿದೆ ಎನ್ನುವ ಅವರು, ಸದ್ಯವೇ ದಿಲ್ಲಿ ಮತ್ತು ಹರ್ಯಾಣದಲ್ಲಿ ತರಬೇತಿ ಕಾರ್ಯಕ್ರಮ ಆರಂಭಿಸುವುದಾಗಿ ತಿಳಿಸಿದ್ದಾರೆ…

ಅವರಿಗೆ ನಾವೆಲ್ಲರೂ ಒಂದು ಸಲಾಂ ಹೇಳೋಣ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...