Homeಚಳವಳಿಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಉತ್ತರ ಪ್ರದೇಶದ ಗೋರಖ್‌ಪುರದ ನಿವಾಸಿಯಾಗಿರುವ ಅಭಿಷೇಕ್ ಯಾದವ್, ಈ ದೇಶದಲ್ಲಿ ಮಹಿಳೆಯರಿಗೆ ಸಾಕಷ್ಟು ರಕ್ಷಣೆ ಇಲ್ಲದಿರುವುದನ್ನು ಕಂಡು ದೇಶದ ಬಹುತೇಕ ಮಾನವೀಯತೆಯುಳ್ಳ ನಾಗರಿಕರಂತೆ ಮರುಗಿದ್ದರು. ಅದಕ್ಕಾಗಿ ಏನನ್ನಾದರೂ ‌ಮಾಡಲೇಬೇಕೆಂದು ಹೊರಟ ಅವರ ಸಾಧನೆ ಮಾತ್ರ ಅಸಾಧಾರಣವಾದುದು.

- Advertisement -
- Advertisement -

ಕೃಪೆ: ಇಂಡಿಯಾಟೈಮ್ಸ್‌

ಅನುವಾದ: ನಿಖಿಲ್ ಕೋಲ್ಪೆ

ಡಿಸೆಂಬರ್ 16, 2012ರ ರಾತ್ರಿ ದಿಲ್ಲಿಯಲ್ಲಿ ಪುಂಡರ ಗುಂಪೊಂದು ಅರೆ ವೈದ್ಯಕೀಯ ವಿದ್ಯಾರ್ಥಿನಿ ಯುವತಿಯೊಬ್ಬರ ಮೇಲೆ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘೋರ ಘಟನೆ ನಡೆದಿತ್ತು. ನಿರ್ಭಯಾ ಪ್ರಕರಣವೆಂದು ಮಾಧ್ಯಮಗಳು ಹೆಸರಿಸಿದ್ದ ಈ ಘಟನೆಯಿಂದ ದೇಶದ ಜನರಂತೆ ಗೋರಖ್‌ಪುರದ ಅಭಿಷೇಕ್ ಯಾದವ್ ಅವರಿಗೂ ತೀವ್ರ ನೋವಾಗಿತ್ತು.

ಈ ಕುರಿತು ಏನನ್ನಾದರೂ ಮಾಡಲೇಬೇಕು ಎಂಬ ದೃಢ ಸಂಕಲ್ಪ ಮಾಡಿದಾಗ ಅವರು ಹೆಚ್ಚು ಆ ಕಡೆ, ಈ ಕಡೆ ನೋಡಬೇಕಾಗಿರಲಿಲ್ಲ. ಹಲವು ರೀತಿಯ ಸ್ವಯಂರಕ್ಷಣಾ ಕಲೆಗಳಲ್ಲಿ ನಿಷ್ಣಾತರಾಗಿರುವ ಅವರು, ಮಹಿಳೆಯರು ಮತ್ತು ಹುಡುಗಿಯರಿಗೆ ಈ ರೀತಿಯ ದಾಳಿಕೋರರ ವಿರುದ್ಧ ತಮ್ಮನ್ನು ರಕ್ಷಿಸಿಕೊಳ್ಳುವ ತರಬೇತಿ ನೀಡಲು ನಿರ್ಧರಿಸಿದರು. ಅಂದಿನಿಂದ ಅವರು 2.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರಿಗೆ ಸ್ವಯಂ ರಕ್ಷಣೆಯಲ್ಲಿ ತರಬೇತಿ ನೀಡಿದ್ದಾರೆ.

28 ವರ್ಷ ಪ್ರಾಯದ ಅವರು, ‘ಅಭಿಸೆಲ್ಫ್ ಪ್ರೊಟೆಕ್ಷನ್ ಟ್ರಸ್ಟ್’ (Abhiself Protection Trust) ಎಂಬ ಸ್ವಯಂಸೇವಾ ಸಂಸ್ಥೆಯನ್ನು ನಡೆಸುತ್ತಿದ್ದು, ಅದರ ಅಡಿಯಲ್ಲಿ ‘ಮೇರಿ ರಕ್ಷಾ ಮೇರಿ ಹಾತೋಂಮೆ’ (ನನ್ನ ರಕ್ಷಣೆ ನನ್ನ ಕೈಗಳಲ್ಲಿ) ಕಾರ್ಯಕ್ರಮದಡಿ ಹೆಣ್ಣುಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅವರಲ್ಲಿ ತರಬೇತಿ ಪಡೆಯುತ್ತಿರುವವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದವರೇ ಆಗಿರುವುದು ವಿಶೇಷವಾಗಿದೆ.

ಅಭಿಷೇಕ್ ಮೂಲತಃ ಜಪಾನ್ ಮೂಲದ ಐಕಿಡೋ (Aikido) ಪರಿಣಿತರಾಗಿದ್ದು, ಆರಂಭದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ತರಬೇತಿ ನೀಡುತ್ತಿದ್ದರು.

“ನಾನು 2007ರಲ್ಲಿ ಉತ್ತರ ಪ್ರದೇಶದ ಪೊಲೀಸ್ ಕಮಾಂಡೊಗಳಿಗೆ ತರಬೇತಿ ಆರಂಭಿಸಿದೆ. ಆದರೆ, 2012ರಲ್ಲಿ ದಿಲ್ಲಿಯ ಸಾಮೂಹಿಕ ಅತ್ಯಾಚಾರದ ಬಳಿಕ, ಅದೇ ರಕ್ಷಣಾ ತಂತ್ರವನ್ನು ಹೆಣ್ಣುಮಕ್ಕಳಿಗೆ ಕಲಿಸಲು ನಾವೊಂದು ಅಭಿಯಾನ ಆರಂಭಿಸಿದೆವು. ಒಂದು ವಾರ ಅವಧಿಯ ಈ ತರಬೇತಿಯು ಯಾವುದೇ ದಾಳಿಕೋರರನ್ನು ಸ್ವಂತವಾಗಿ ಎದುರಿಸಲು ಅವರನ್ನು ಶಕ್ತರನ್ನಾಗಿ ಮಾಡುತ್ತದೆ” ಎಂದು ಅಭಿಷೇಕ್ ಹೇಳುತ್ತಾರೆ.

ಅವರ ಶಿಬಿರಗಳಲ್ಲಿ ಸಾಮಾನ್ಯವಾಗಿ ನೂರಾರು ಹೆಣ್ಣುಮಕ್ಕಳಿರುತ್ತಾರೆ. ಆದರೆ, ಅವರು 2016ರಲ್ಲಿ ಪ್ರತಾಪಗಢದ ಕುಂದಾ ಎಂಬಲ್ಲಿ 5,700ರಷ್ಟು ಭಾರೀ ಸಂಖ್ಯೆಯ ಹೆಣ್ಣುಮಕ್ಕಳಿಗೆ ತರಬೇತಿ ನೀಡಿ ಲಿಮ್ಕಾ ವಿಶ್ವದಾಖಲೆ ಮಾಡಿದರು.

2002ರಿಂದ ಸ್ವಯಂರಕ್ಷಣಾ ಕಲೆಯಲ್ಲಿ ತರಬೇತಿ ಪಡೆಯಲು ಆರಂಭಿಸಿದ ಅವರು, ಅಂತರರಾಷ್ಟ್ರೀಯ ಕರಾಟೆಯಲ್ಲಿ ಚಿನ್ನದ ಪದಕ ವಿಜೇತರೂ ಹೌದು. ಈಗ ತರಬೇತಿಯಲ್ಲಿ ಅವರಿಗೆ ನೆರವಾಗಲು 12 ಮಂದಿಯ ತಂಡವಿದೆ.

“ನಮ್ಮ ಗುರಿಯೆಂದರೆ ಹೆಣ್ಣುಮಕ್ಕಳನ್ನು ಸಶಕ್ತಗೊಳಿಸಿ, ಯಾವುದೇ ಸವಾಲನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುವಂತಹ ವ್ಯಕ್ತಿಗಳಾಗಿ ಅವರನ್ನು ಗಟ್ಟಿಗೊಳಿಸುವುದು. ಐಕಿಡೋದಲ್ಲಿ ಯಾರೂ ಬೇಕಾದರೂ ನಿಯಮಿತ ಅಭ್ಯಾಸದಿಂದ ಕಲಿತು ನಿಜಜೀವನದಲ್ಲಿ ಉಪಯೋಗಿಸಬಹುದಾದ ಹಲವಾರು ಪಟ್ಟುಗಳು ಮತ್ತು ತಂತ್ರಗಳಿವೆ” ಎಂದು ಅಭಿಷೇಕ್ ವಿವರಿಸುತ್ತಾರೆ.

“ನಾವು ಶಾಲೆಯಿಂದ ಶಾಲೆಗೆ ಹೋಗುತ್ತೇವೆ. ಅಲ್ಲಿ ನಾವು ಅವರು ಏಕೆ ಸ್ವಯಂರಕ್ಷಣೆಯನ್ನು ಕಲಿಯುವುದು ಅಗತ್ಯ ಮತ್ತು ಅದರಲ್ಲೂ ಮಹಿಳೆಯರ ಸುರಕ್ಷಿತತೆಯ ವಿಷಯದಲ್ಲಿ ನಮ್ಮ ದೇಶದಲ್ಲಿ ಪರಿಸ್ಥಿತಿ ಇಷ್ಟೊಂದು ಕೆಟ್ಟಿರುವ ಸಂದರ್ಭದಲ್ಲಿ ಇದು ಏಕೆ ಮುಖ್ಯ ಎಂದು ವಿವರಿಸುತ್ತೇವೆ” ಎಂದವರು ಹೇಳುತ್ತಾರೆ.

ಉತ್ತರ ಪ್ರದೇಶದಲ್ಲಿ ತರಬೇತಿ ನೀಡಿದ ಮೇಲೆ ಈ ತರಬೇತಿ ಕಾರ್ಯಕ್ರಮವನ್ನು ರಾಜ್ಯದಾಚೆಗೂ ವಿಸ್ತರಿಸುವ ಗುರಿಯಿದೆ ಎನ್ನುವ ಅವರು, ಸದ್ಯವೇ ದಿಲ್ಲಿ ಮತ್ತು ಹರ್ಯಾಣದಲ್ಲಿ ತರಬೇತಿ ಕಾರ್ಯಕ್ರಮ ಆರಂಭಿಸುವುದಾಗಿ ತಿಳಿಸಿದ್ದಾರೆ…

ಅವರಿಗೆ ನಾವೆಲ್ಲರೂ ಒಂದು ಸಲಾಂ ಹೇಳೋಣ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...