Homeಚಳವಳಿಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಉತ್ತರ ಪ್ರದೇಶದ ಗೋರಖ್‌ಪುರದ ನಿವಾಸಿಯಾಗಿರುವ ಅಭಿಷೇಕ್ ಯಾದವ್, ಈ ದೇಶದಲ್ಲಿ ಮಹಿಳೆಯರಿಗೆ ಸಾಕಷ್ಟು ರಕ್ಷಣೆ ಇಲ್ಲದಿರುವುದನ್ನು ಕಂಡು ದೇಶದ ಬಹುತೇಕ ಮಾನವೀಯತೆಯುಳ್ಳ ನಾಗರಿಕರಂತೆ ಮರುಗಿದ್ದರು. ಅದಕ್ಕಾಗಿ ಏನನ್ನಾದರೂ ‌ಮಾಡಲೇಬೇಕೆಂದು ಹೊರಟ ಅವರ ಸಾಧನೆ ಮಾತ್ರ ಅಸಾಧಾರಣವಾದುದು.

- Advertisement -
- Advertisement -

ಕೃಪೆ: ಇಂಡಿಯಾಟೈಮ್ಸ್‌

ಅನುವಾದ: ನಿಖಿಲ್ ಕೋಲ್ಪೆ

ಡಿಸೆಂಬರ್ 16, 2012ರ ರಾತ್ರಿ ದಿಲ್ಲಿಯಲ್ಲಿ ಪುಂಡರ ಗುಂಪೊಂದು ಅರೆ ವೈದ್ಯಕೀಯ ವಿದ್ಯಾರ್ಥಿನಿ ಯುವತಿಯೊಬ್ಬರ ಮೇಲೆ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘೋರ ಘಟನೆ ನಡೆದಿತ್ತು. ನಿರ್ಭಯಾ ಪ್ರಕರಣವೆಂದು ಮಾಧ್ಯಮಗಳು ಹೆಸರಿಸಿದ್ದ ಈ ಘಟನೆಯಿಂದ ದೇಶದ ಜನರಂತೆ ಗೋರಖ್‌ಪುರದ ಅಭಿಷೇಕ್ ಯಾದವ್ ಅವರಿಗೂ ತೀವ್ರ ನೋವಾಗಿತ್ತು.

ಈ ಕುರಿತು ಏನನ್ನಾದರೂ ಮಾಡಲೇಬೇಕು ಎಂಬ ದೃಢ ಸಂಕಲ್ಪ ಮಾಡಿದಾಗ ಅವರು ಹೆಚ್ಚು ಆ ಕಡೆ, ಈ ಕಡೆ ನೋಡಬೇಕಾಗಿರಲಿಲ್ಲ. ಹಲವು ರೀತಿಯ ಸ್ವಯಂರಕ್ಷಣಾ ಕಲೆಗಳಲ್ಲಿ ನಿಷ್ಣಾತರಾಗಿರುವ ಅವರು, ಮಹಿಳೆಯರು ಮತ್ತು ಹುಡುಗಿಯರಿಗೆ ಈ ರೀತಿಯ ದಾಳಿಕೋರರ ವಿರುದ್ಧ ತಮ್ಮನ್ನು ರಕ್ಷಿಸಿಕೊಳ್ಳುವ ತರಬೇತಿ ನೀಡಲು ನಿರ್ಧರಿಸಿದರು. ಅಂದಿನಿಂದ ಅವರು 2.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರಿಗೆ ಸ್ವಯಂ ರಕ್ಷಣೆಯಲ್ಲಿ ತರಬೇತಿ ನೀಡಿದ್ದಾರೆ.

28 ವರ್ಷ ಪ್ರಾಯದ ಅವರು, ‘ಅಭಿಸೆಲ್ಫ್ ಪ್ರೊಟೆಕ್ಷನ್ ಟ್ರಸ್ಟ್’ (Abhiself Protection Trust) ಎಂಬ ಸ್ವಯಂಸೇವಾ ಸಂಸ್ಥೆಯನ್ನು ನಡೆಸುತ್ತಿದ್ದು, ಅದರ ಅಡಿಯಲ್ಲಿ ‘ಮೇರಿ ರಕ್ಷಾ ಮೇರಿ ಹಾತೋಂಮೆ’ (ನನ್ನ ರಕ್ಷಣೆ ನನ್ನ ಕೈಗಳಲ್ಲಿ) ಕಾರ್ಯಕ್ರಮದಡಿ ಹೆಣ್ಣುಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅವರಲ್ಲಿ ತರಬೇತಿ ಪಡೆಯುತ್ತಿರುವವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದವರೇ ಆಗಿರುವುದು ವಿಶೇಷವಾಗಿದೆ.

ಅಭಿಷೇಕ್ ಮೂಲತಃ ಜಪಾನ್ ಮೂಲದ ಐಕಿಡೋ (Aikido) ಪರಿಣಿತರಾಗಿದ್ದು, ಆರಂಭದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ತರಬೇತಿ ನೀಡುತ್ತಿದ್ದರು.

“ನಾನು 2007ರಲ್ಲಿ ಉತ್ತರ ಪ್ರದೇಶದ ಪೊಲೀಸ್ ಕಮಾಂಡೊಗಳಿಗೆ ತರಬೇತಿ ಆರಂಭಿಸಿದೆ. ಆದರೆ, 2012ರಲ್ಲಿ ದಿಲ್ಲಿಯ ಸಾಮೂಹಿಕ ಅತ್ಯಾಚಾರದ ಬಳಿಕ, ಅದೇ ರಕ್ಷಣಾ ತಂತ್ರವನ್ನು ಹೆಣ್ಣುಮಕ್ಕಳಿಗೆ ಕಲಿಸಲು ನಾವೊಂದು ಅಭಿಯಾನ ಆರಂಭಿಸಿದೆವು. ಒಂದು ವಾರ ಅವಧಿಯ ಈ ತರಬೇತಿಯು ಯಾವುದೇ ದಾಳಿಕೋರರನ್ನು ಸ್ವಂತವಾಗಿ ಎದುರಿಸಲು ಅವರನ್ನು ಶಕ್ತರನ್ನಾಗಿ ಮಾಡುತ್ತದೆ” ಎಂದು ಅಭಿಷೇಕ್ ಹೇಳುತ್ತಾರೆ.

ಅವರ ಶಿಬಿರಗಳಲ್ಲಿ ಸಾಮಾನ್ಯವಾಗಿ ನೂರಾರು ಹೆಣ್ಣುಮಕ್ಕಳಿರುತ್ತಾರೆ. ಆದರೆ, ಅವರು 2016ರಲ್ಲಿ ಪ್ರತಾಪಗಢದ ಕುಂದಾ ಎಂಬಲ್ಲಿ 5,700ರಷ್ಟು ಭಾರೀ ಸಂಖ್ಯೆಯ ಹೆಣ್ಣುಮಕ್ಕಳಿಗೆ ತರಬೇತಿ ನೀಡಿ ಲಿಮ್ಕಾ ವಿಶ್ವದಾಖಲೆ ಮಾಡಿದರು.

2002ರಿಂದ ಸ್ವಯಂರಕ್ಷಣಾ ಕಲೆಯಲ್ಲಿ ತರಬೇತಿ ಪಡೆಯಲು ಆರಂಭಿಸಿದ ಅವರು, ಅಂತರರಾಷ್ಟ್ರೀಯ ಕರಾಟೆಯಲ್ಲಿ ಚಿನ್ನದ ಪದಕ ವಿಜೇತರೂ ಹೌದು. ಈಗ ತರಬೇತಿಯಲ್ಲಿ ಅವರಿಗೆ ನೆರವಾಗಲು 12 ಮಂದಿಯ ತಂಡವಿದೆ.

“ನಮ್ಮ ಗುರಿಯೆಂದರೆ ಹೆಣ್ಣುಮಕ್ಕಳನ್ನು ಸಶಕ್ತಗೊಳಿಸಿ, ಯಾವುದೇ ಸವಾಲನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುವಂತಹ ವ್ಯಕ್ತಿಗಳಾಗಿ ಅವರನ್ನು ಗಟ್ಟಿಗೊಳಿಸುವುದು. ಐಕಿಡೋದಲ್ಲಿ ಯಾರೂ ಬೇಕಾದರೂ ನಿಯಮಿತ ಅಭ್ಯಾಸದಿಂದ ಕಲಿತು ನಿಜಜೀವನದಲ್ಲಿ ಉಪಯೋಗಿಸಬಹುದಾದ ಹಲವಾರು ಪಟ್ಟುಗಳು ಮತ್ತು ತಂತ್ರಗಳಿವೆ” ಎಂದು ಅಭಿಷೇಕ್ ವಿವರಿಸುತ್ತಾರೆ.

“ನಾವು ಶಾಲೆಯಿಂದ ಶಾಲೆಗೆ ಹೋಗುತ್ತೇವೆ. ಅಲ್ಲಿ ನಾವು ಅವರು ಏಕೆ ಸ್ವಯಂರಕ್ಷಣೆಯನ್ನು ಕಲಿಯುವುದು ಅಗತ್ಯ ಮತ್ತು ಅದರಲ್ಲೂ ಮಹಿಳೆಯರ ಸುರಕ್ಷಿತತೆಯ ವಿಷಯದಲ್ಲಿ ನಮ್ಮ ದೇಶದಲ್ಲಿ ಪರಿಸ್ಥಿತಿ ಇಷ್ಟೊಂದು ಕೆಟ್ಟಿರುವ ಸಂದರ್ಭದಲ್ಲಿ ಇದು ಏಕೆ ಮುಖ್ಯ ಎಂದು ವಿವರಿಸುತ್ತೇವೆ” ಎಂದವರು ಹೇಳುತ್ತಾರೆ.

ಉತ್ತರ ಪ್ರದೇಶದಲ್ಲಿ ತರಬೇತಿ ನೀಡಿದ ಮೇಲೆ ಈ ತರಬೇತಿ ಕಾರ್ಯಕ್ರಮವನ್ನು ರಾಜ್ಯದಾಚೆಗೂ ವಿಸ್ತರಿಸುವ ಗುರಿಯಿದೆ ಎನ್ನುವ ಅವರು, ಸದ್ಯವೇ ದಿಲ್ಲಿ ಮತ್ತು ಹರ್ಯಾಣದಲ್ಲಿ ತರಬೇತಿ ಕಾರ್ಯಕ್ರಮ ಆರಂಭಿಸುವುದಾಗಿ ತಿಳಿಸಿದ್ದಾರೆ…

ಅವರಿಗೆ ನಾವೆಲ್ಲರೂ ಒಂದು ಸಲಾಂ ಹೇಳೋಣ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...