Homeಚಳವಳಿಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಉತ್ತರ ಪ್ರದೇಶದ ಗೋರಖ್‌ಪುರದ ನಿವಾಸಿಯಾಗಿರುವ ಅಭಿಷೇಕ್ ಯಾದವ್, ಈ ದೇಶದಲ್ಲಿ ಮಹಿಳೆಯರಿಗೆ ಸಾಕಷ್ಟು ರಕ್ಷಣೆ ಇಲ್ಲದಿರುವುದನ್ನು ಕಂಡು ದೇಶದ ಬಹುತೇಕ ಮಾನವೀಯತೆಯುಳ್ಳ ನಾಗರಿಕರಂತೆ ಮರುಗಿದ್ದರು. ಅದಕ್ಕಾಗಿ ಏನನ್ನಾದರೂ ‌ಮಾಡಲೇಬೇಕೆಂದು ಹೊರಟ ಅವರ ಸಾಧನೆ ಮಾತ್ರ ಅಸಾಧಾರಣವಾದುದು.

- Advertisement -
- Advertisement -

ಕೃಪೆ: ಇಂಡಿಯಾಟೈಮ್ಸ್‌

ಅನುವಾದ: ನಿಖಿಲ್ ಕೋಲ್ಪೆ

ಡಿಸೆಂಬರ್ 16, 2012ರ ರಾತ್ರಿ ದಿಲ್ಲಿಯಲ್ಲಿ ಪುಂಡರ ಗುಂಪೊಂದು ಅರೆ ವೈದ್ಯಕೀಯ ವಿದ್ಯಾರ್ಥಿನಿ ಯುವತಿಯೊಬ್ಬರ ಮೇಲೆ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘೋರ ಘಟನೆ ನಡೆದಿತ್ತು. ನಿರ್ಭಯಾ ಪ್ರಕರಣವೆಂದು ಮಾಧ್ಯಮಗಳು ಹೆಸರಿಸಿದ್ದ ಈ ಘಟನೆಯಿಂದ ದೇಶದ ಜನರಂತೆ ಗೋರಖ್‌ಪುರದ ಅಭಿಷೇಕ್ ಯಾದವ್ ಅವರಿಗೂ ತೀವ್ರ ನೋವಾಗಿತ್ತು.

ಈ ಕುರಿತು ಏನನ್ನಾದರೂ ಮಾಡಲೇಬೇಕು ಎಂಬ ದೃಢ ಸಂಕಲ್ಪ ಮಾಡಿದಾಗ ಅವರು ಹೆಚ್ಚು ಆ ಕಡೆ, ಈ ಕಡೆ ನೋಡಬೇಕಾಗಿರಲಿಲ್ಲ. ಹಲವು ರೀತಿಯ ಸ್ವಯಂರಕ್ಷಣಾ ಕಲೆಗಳಲ್ಲಿ ನಿಷ್ಣಾತರಾಗಿರುವ ಅವರು, ಮಹಿಳೆಯರು ಮತ್ತು ಹುಡುಗಿಯರಿಗೆ ಈ ರೀತಿಯ ದಾಳಿಕೋರರ ವಿರುದ್ಧ ತಮ್ಮನ್ನು ರಕ್ಷಿಸಿಕೊಳ್ಳುವ ತರಬೇತಿ ನೀಡಲು ನಿರ್ಧರಿಸಿದರು. ಅಂದಿನಿಂದ ಅವರು 2.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರಿಗೆ ಸ್ವಯಂ ರಕ್ಷಣೆಯಲ್ಲಿ ತರಬೇತಿ ನೀಡಿದ್ದಾರೆ.

28 ವರ್ಷ ಪ್ರಾಯದ ಅವರು, ‘ಅಭಿಸೆಲ್ಫ್ ಪ್ರೊಟೆಕ್ಷನ್ ಟ್ರಸ್ಟ್’ (Abhiself Protection Trust) ಎಂಬ ಸ್ವಯಂಸೇವಾ ಸಂಸ್ಥೆಯನ್ನು ನಡೆಸುತ್ತಿದ್ದು, ಅದರ ಅಡಿಯಲ್ಲಿ ‘ಮೇರಿ ರಕ್ಷಾ ಮೇರಿ ಹಾತೋಂಮೆ’ (ನನ್ನ ರಕ್ಷಣೆ ನನ್ನ ಕೈಗಳಲ್ಲಿ) ಕಾರ್ಯಕ್ರಮದಡಿ ಹೆಣ್ಣುಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅವರಲ್ಲಿ ತರಬೇತಿ ಪಡೆಯುತ್ತಿರುವವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದವರೇ ಆಗಿರುವುದು ವಿಶೇಷವಾಗಿದೆ.

ಅಭಿಷೇಕ್ ಮೂಲತಃ ಜಪಾನ್ ಮೂಲದ ಐಕಿಡೋ (Aikido) ಪರಿಣಿತರಾಗಿದ್ದು, ಆರಂಭದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ತರಬೇತಿ ನೀಡುತ್ತಿದ್ದರು.

“ನಾನು 2007ರಲ್ಲಿ ಉತ್ತರ ಪ್ರದೇಶದ ಪೊಲೀಸ್ ಕಮಾಂಡೊಗಳಿಗೆ ತರಬೇತಿ ಆರಂಭಿಸಿದೆ. ಆದರೆ, 2012ರಲ್ಲಿ ದಿಲ್ಲಿಯ ಸಾಮೂಹಿಕ ಅತ್ಯಾಚಾರದ ಬಳಿಕ, ಅದೇ ರಕ್ಷಣಾ ತಂತ್ರವನ್ನು ಹೆಣ್ಣುಮಕ್ಕಳಿಗೆ ಕಲಿಸಲು ನಾವೊಂದು ಅಭಿಯಾನ ಆರಂಭಿಸಿದೆವು. ಒಂದು ವಾರ ಅವಧಿಯ ಈ ತರಬೇತಿಯು ಯಾವುದೇ ದಾಳಿಕೋರರನ್ನು ಸ್ವಂತವಾಗಿ ಎದುರಿಸಲು ಅವರನ್ನು ಶಕ್ತರನ್ನಾಗಿ ಮಾಡುತ್ತದೆ” ಎಂದು ಅಭಿಷೇಕ್ ಹೇಳುತ್ತಾರೆ.

ಅವರ ಶಿಬಿರಗಳಲ್ಲಿ ಸಾಮಾನ್ಯವಾಗಿ ನೂರಾರು ಹೆಣ್ಣುಮಕ್ಕಳಿರುತ್ತಾರೆ. ಆದರೆ, ಅವರು 2016ರಲ್ಲಿ ಪ್ರತಾಪಗಢದ ಕುಂದಾ ಎಂಬಲ್ಲಿ 5,700ರಷ್ಟು ಭಾರೀ ಸಂಖ್ಯೆಯ ಹೆಣ್ಣುಮಕ್ಕಳಿಗೆ ತರಬೇತಿ ನೀಡಿ ಲಿಮ್ಕಾ ವಿಶ್ವದಾಖಲೆ ಮಾಡಿದರು.

2002ರಿಂದ ಸ್ವಯಂರಕ್ಷಣಾ ಕಲೆಯಲ್ಲಿ ತರಬೇತಿ ಪಡೆಯಲು ಆರಂಭಿಸಿದ ಅವರು, ಅಂತರರಾಷ್ಟ್ರೀಯ ಕರಾಟೆಯಲ್ಲಿ ಚಿನ್ನದ ಪದಕ ವಿಜೇತರೂ ಹೌದು. ಈಗ ತರಬೇತಿಯಲ್ಲಿ ಅವರಿಗೆ ನೆರವಾಗಲು 12 ಮಂದಿಯ ತಂಡವಿದೆ.

“ನಮ್ಮ ಗುರಿಯೆಂದರೆ ಹೆಣ್ಣುಮಕ್ಕಳನ್ನು ಸಶಕ್ತಗೊಳಿಸಿ, ಯಾವುದೇ ಸವಾಲನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುವಂತಹ ವ್ಯಕ್ತಿಗಳಾಗಿ ಅವರನ್ನು ಗಟ್ಟಿಗೊಳಿಸುವುದು. ಐಕಿಡೋದಲ್ಲಿ ಯಾರೂ ಬೇಕಾದರೂ ನಿಯಮಿತ ಅಭ್ಯಾಸದಿಂದ ಕಲಿತು ನಿಜಜೀವನದಲ್ಲಿ ಉಪಯೋಗಿಸಬಹುದಾದ ಹಲವಾರು ಪಟ್ಟುಗಳು ಮತ್ತು ತಂತ್ರಗಳಿವೆ” ಎಂದು ಅಭಿಷೇಕ್ ವಿವರಿಸುತ್ತಾರೆ.

“ನಾವು ಶಾಲೆಯಿಂದ ಶಾಲೆಗೆ ಹೋಗುತ್ತೇವೆ. ಅಲ್ಲಿ ನಾವು ಅವರು ಏಕೆ ಸ್ವಯಂರಕ್ಷಣೆಯನ್ನು ಕಲಿಯುವುದು ಅಗತ್ಯ ಮತ್ತು ಅದರಲ್ಲೂ ಮಹಿಳೆಯರ ಸುರಕ್ಷಿತತೆಯ ವಿಷಯದಲ್ಲಿ ನಮ್ಮ ದೇಶದಲ್ಲಿ ಪರಿಸ್ಥಿತಿ ಇಷ್ಟೊಂದು ಕೆಟ್ಟಿರುವ ಸಂದರ್ಭದಲ್ಲಿ ಇದು ಏಕೆ ಮುಖ್ಯ ಎಂದು ವಿವರಿಸುತ್ತೇವೆ” ಎಂದವರು ಹೇಳುತ್ತಾರೆ.

ಉತ್ತರ ಪ್ರದೇಶದಲ್ಲಿ ತರಬೇತಿ ನೀಡಿದ ಮೇಲೆ ಈ ತರಬೇತಿ ಕಾರ್ಯಕ್ರಮವನ್ನು ರಾಜ್ಯದಾಚೆಗೂ ವಿಸ್ತರಿಸುವ ಗುರಿಯಿದೆ ಎನ್ನುವ ಅವರು, ಸದ್ಯವೇ ದಿಲ್ಲಿ ಮತ್ತು ಹರ್ಯಾಣದಲ್ಲಿ ತರಬೇತಿ ಕಾರ್ಯಕ್ರಮ ಆರಂಭಿಸುವುದಾಗಿ ತಿಳಿಸಿದ್ದಾರೆ…

ಅವರಿಗೆ ನಾವೆಲ್ಲರೂ ಒಂದು ಸಲಾಂ ಹೇಳೋಣ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...