Homeಚಳವಳಿಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಉತ್ತರ ಪ್ರದೇಶದ ಗೋರಖ್‌ಪುರದ ನಿವಾಸಿಯಾಗಿರುವ ಅಭಿಷೇಕ್ ಯಾದವ್, ಈ ದೇಶದಲ್ಲಿ ಮಹಿಳೆಯರಿಗೆ ಸಾಕಷ್ಟು ರಕ್ಷಣೆ ಇಲ್ಲದಿರುವುದನ್ನು ಕಂಡು ದೇಶದ ಬಹುತೇಕ ಮಾನವೀಯತೆಯುಳ್ಳ ನಾಗರಿಕರಂತೆ ಮರುಗಿದ್ದರು. ಅದಕ್ಕಾಗಿ ಏನನ್ನಾದರೂ ‌ಮಾಡಲೇಬೇಕೆಂದು ಹೊರಟ ಅವರ ಸಾಧನೆ ಮಾತ್ರ ಅಸಾಧಾರಣವಾದುದು.

- Advertisement -
- Advertisement -

ಕೃಪೆ: ಇಂಡಿಯಾಟೈಮ್ಸ್‌

ಅನುವಾದ: ನಿಖಿಲ್ ಕೋಲ್ಪೆ

ಡಿಸೆಂಬರ್ 16, 2012ರ ರಾತ್ರಿ ದಿಲ್ಲಿಯಲ್ಲಿ ಪುಂಡರ ಗುಂಪೊಂದು ಅರೆ ವೈದ್ಯಕೀಯ ವಿದ್ಯಾರ್ಥಿನಿ ಯುವತಿಯೊಬ್ಬರ ಮೇಲೆ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘೋರ ಘಟನೆ ನಡೆದಿತ್ತು. ನಿರ್ಭಯಾ ಪ್ರಕರಣವೆಂದು ಮಾಧ್ಯಮಗಳು ಹೆಸರಿಸಿದ್ದ ಈ ಘಟನೆಯಿಂದ ದೇಶದ ಜನರಂತೆ ಗೋರಖ್‌ಪುರದ ಅಭಿಷೇಕ್ ಯಾದವ್ ಅವರಿಗೂ ತೀವ್ರ ನೋವಾಗಿತ್ತು.

ಈ ಕುರಿತು ಏನನ್ನಾದರೂ ಮಾಡಲೇಬೇಕು ಎಂಬ ದೃಢ ಸಂಕಲ್ಪ ಮಾಡಿದಾಗ ಅವರು ಹೆಚ್ಚು ಆ ಕಡೆ, ಈ ಕಡೆ ನೋಡಬೇಕಾಗಿರಲಿಲ್ಲ. ಹಲವು ರೀತಿಯ ಸ್ವಯಂರಕ್ಷಣಾ ಕಲೆಗಳಲ್ಲಿ ನಿಷ್ಣಾತರಾಗಿರುವ ಅವರು, ಮಹಿಳೆಯರು ಮತ್ತು ಹುಡುಗಿಯರಿಗೆ ಈ ರೀತಿಯ ದಾಳಿಕೋರರ ವಿರುದ್ಧ ತಮ್ಮನ್ನು ರಕ್ಷಿಸಿಕೊಳ್ಳುವ ತರಬೇತಿ ನೀಡಲು ನಿರ್ಧರಿಸಿದರು. ಅಂದಿನಿಂದ ಅವರು 2.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರಿಗೆ ಸ್ವಯಂ ರಕ್ಷಣೆಯಲ್ಲಿ ತರಬೇತಿ ನೀಡಿದ್ದಾರೆ.

28 ವರ್ಷ ಪ್ರಾಯದ ಅವರು, ‘ಅಭಿಸೆಲ್ಫ್ ಪ್ರೊಟೆಕ್ಷನ್ ಟ್ರಸ್ಟ್’ (Abhiself Protection Trust) ಎಂಬ ಸ್ವಯಂಸೇವಾ ಸಂಸ್ಥೆಯನ್ನು ನಡೆಸುತ್ತಿದ್ದು, ಅದರ ಅಡಿಯಲ್ಲಿ ‘ಮೇರಿ ರಕ್ಷಾ ಮೇರಿ ಹಾತೋಂಮೆ’ (ನನ್ನ ರಕ್ಷಣೆ ನನ್ನ ಕೈಗಳಲ್ಲಿ) ಕಾರ್ಯಕ್ರಮದಡಿ ಹೆಣ್ಣುಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅವರಲ್ಲಿ ತರಬೇತಿ ಪಡೆಯುತ್ತಿರುವವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದವರೇ ಆಗಿರುವುದು ವಿಶೇಷವಾಗಿದೆ.

ಅಭಿಷೇಕ್ ಮೂಲತಃ ಜಪಾನ್ ಮೂಲದ ಐಕಿಡೋ (Aikido) ಪರಿಣಿತರಾಗಿದ್ದು, ಆರಂಭದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ತರಬೇತಿ ನೀಡುತ್ತಿದ್ದರು.

“ನಾನು 2007ರಲ್ಲಿ ಉತ್ತರ ಪ್ರದೇಶದ ಪೊಲೀಸ್ ಕಮಾಂಡೊಗಳಿಗೆ ತರಬೇತಿ ಆರಂಭಿಸಿದೆ. ಆದರೆ, 2012ರಲ್ಲಿ ದಿಲ್ಲಿಯ ಸಾಮೂಹಿಕ ಅತ್ಯಾಚಾರದ ಬಳಿಕ, ಅದೇ ರಕ್ಷಣಾ ತಂತ್ರವನ್ನು ಹೆಣ್ಣುಮಕ್ಕಳಿಗೆ ಕಲಿಸಲು ನಾವೊಂದು ಅಭಿಯಾನ ಆರಂಭಿಸಿದೆವು. ಒಂದು ವಾರ ಅವಧಿಯ ಈ ತರಬೇತಿಯು ಯಾವುದೇ ದಾಳಿಕೋರರನ್ನು ಸ್ವಂತವಾಗಿ ಎದುರಿಸಲು ಅವರನ್ನು ಶಕ್ತರನ್ನಾಗಿ ಮಾಡುತ್ತದೆ” ಎಂದು ಅಭಿಷೇಕ್ ಹೇಳುತ್ತಾರೆ.

ಅವರ ಶಿಬಿರಗಳಲ್ಲಿ ಸಾಮಾನ್ಯವಾಗಿ ನೂರಾರು ಹೆಣ್ಣುಮಕ್ಕಳಿರುತ್ತಾರೆ. ಆದರೆ, ಅವರು 2016ರಲ್ಲಿ ಪ್ರತಾಪಗಢದ ಕುಂದಾ ಎಂಬಲ್ಲಿ 5,700ರಷ್ಟು ಭಾರೀ ಸಂಖ್ಯೆಯ ಹೆಣ್ಣುಮಕ್ಕಳಿಗೆ ತರಬೇತಿ ನೀಡಿ ಲಿಮ್ಕಾ ವಿಶ್ವದಾಖಲೆ ಮಾಡಿದರು.

2002ರಿಂದ ಸ್ವಯಂರಕ್ಷಣಾ ಕಲೆಯಲ್ಲಿ ತರಬೇತಿ ಪಡೆಯಲು ಆರಂಭಿಸಿದ ಅವರು, ಅಂತರರಾಷ್ಟ್ರೀಯ ಕರಾಟೆಯಲ್ಲಿ ಚಿನ್ನದ ಪದಕ ವಿಜೇತರೂ ಹೌದು. ಈಗ ತರಬೇತಿಯಲ್ಲಿ ಅವರಿಗೆ ನೆರವಾಗಲು 12 ಮಂದಿಯ ತಂಡವಿದೆ.

“ನಮ್ಮ ಗುರಿಯೆಂದರೆ ಹೆಣ್ಣುಮಕ್ಕಳನ್ನು ಸಶಕ್ತಗೊಳಿಸಿ, ಯಾವುದೇ ಸವಾಲನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುವಂತಹ ವ್ಯಕ್ತಿಗಳಾಗಿ ಅವರನ್ನು ಗಟ್ಟಿಗೊಳಿಸುವುದು. ಐಕಿಡೋದಲ್ಲಿ ಯಾರೂ ಬೇಕಾದರೂ ನಿಯಮಿತ ಅಭ್ಯಾಸದಿಂದ ಕಲಿತು ನಿಜಜೀವನದಲ್ಲಿ ಉಪಯೋಗಿಸಬಹುದಾದ ಹಲವಾರು ಪಟ್ಟುಗಳು ಮತ್ತು ತಂತ್ರಗಳಿವೆ” ಎಂದು ಅಭಿಷೇಕ್ ವಿವರಿಸುತ್ತಾರೆ.

“ನಾವು ಶಾಲೆಯಿಂದ ಶಾಲೆಗೆ ಹೋಗುತ್ತೇವೆ. ಅಲ್ಲಿ ನಾವು ಅವರು ಏಕೆ ಸ್ವಯಂರಕ್ಷಣೆಯನ್ನು ಕಲಿಯುವುದು ಅಗತ್ಯ ಮತ್ತು ಅದರಲ್ಲೂ ಮಹಿಳೆಯರ ಸುರಕ್ಷಿತತೆಯ ವಿಷಯದಲ್ಲಿ ನಮ್ಮ ದೇಶದಲ್ಲಿ ಪರಿಸ್ಥಿತಿ ಇಷ್ಟೊಂದು ಕೆಟ್ಟಿರುವ ಸಂದರ್ಭದಲ್ಲಿ ಇದು ಏಕೆ ಮುಖ್ಯ ಎಂದು ವಿವರಿಸುತ್ತೇವೆ” ಎಂದವರು ಹೇಳುತ್ತಾರೆ.

ಉತ್ತರ ಪ್ರದೇಶದಲ್ಲಿ ತರಬೇತಿ ನೀಡಿದ ಮೇಲೆ ಈ ತರಬೇತಿ ಕಾರ್ಯಕ್ರಮವನ್ನು ರಾಜ್ಯದಾಚೆಗೂ ವಿಸ್ತರಿಸುವ ಗುರಿಯಿದೆ ಎನ್ನುವ ಅವರು, ಸದ್ಯವೇ ದಿಲ್ಲಿ ಮತ್ತು ಹರ್ಯಾಣದಲ್ಲಿ ತರಬೇತಿ ಕಾರ್ಯಕ್ರಮ ಆರಂಭಿಸುವುದಾಗಿ ತಿಳಿಸಿದ್ದಾರೆ…

ಅವರಿಗೆ ನಾವೆಲ್ಲರೂ ಒಂದು ಸಲಾಂ ಹೇಳೋಣ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...