Homeಚಳವಳಿಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಉತ್ತರ ಪ್ರದೇಶದ ಗೋರಖ್‌ಪುರದ ನಿವಾಸಿಯಾಗಿರುವ ಅಭಿಷೇಕ್ ಯಾದವ್, ಈ ದೇಶದಲ್ಲಿ ಮಹಿಳೆಯರಿಗೆ ಸಾಕಷ್ಟು ರಕ್ಷಣೆ ಇಲ್ಲದಿರುವುದನ್ನು ಕಂಡು ದೇಶದ ಬಹುತೇಕ ಮಾನವೀಯತೆಯುಳ್ಳ ನಾಗರಿಕರಂತೆ ಮರುಗಿದ್ದರು. ಅದಕ್ಕಾಗಿ ಏನನ್ನಾದರೂ ‌ಮಾಡಲೇಬೇಕೆಂದು ಹೊರಟ ಅವರ ಸಾಧನೆ ಮಾತ್ರ ಅಸಾಧಾರಣವಾದುದು.

- Advertisement -
- Advertisement -

ಕೃಪೆ: ಇಂಡಿಯಾಟೈಮ್ಸ್‌

ಅನುವಾದ: ನಿಖಿಲ್ ಕೋಲ್ಪೆ

ಡಿಸೆಂಬರ್ 16, 2012ರ ರಾತ್ರಿ ದಿಲ್ಲಿಯಲ್ಲಿ ಪುಂಡರ ಗುಂಪೊಂದು ಅರೆ ವೈದ್ಯಕೀಯ ವಿದ್ಯಾರ್ಥಿನಿ ಯುವತಿಯೊಬ್ಬರ ಮೇಲೆ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘೋರ ಘಟನೆ ನಡೆದಿತ್ತು. ನಿರ್ಭಯಾ ಪ್ರಕರಣವೆಂದು ಮಾಧ್ಯಮಗಳು ಹೆಸರಿಸಿದ್ದ ಈ ಘಟನೆಯಿಂದ ದೇಶದ ಜನರಂತೆ ಗೋರಖ್‌ಪುರದ ಅಭಿಷೇಕ್ ಯಾದವ್ ಅವರಿಗೂ ತೀವ್ರ ನೋವಾಗಿತ್ತು.

ಈ ಕುರಿತು ಏನನ್ನಾದರೂ ಮಾಡಲೇಬೇಕು ಎಂಬ ದೃಢ ಸಂಕಲ್ಪ ಮಾಡಿದಾಗ ಅವರು ಹೆಚ್ಚು ಆ ಕಡೆ, ಈ ಕಡೆ ನೋಡಬೇಕಾಗಿರಲಿಲ್ಲ. ಹಲವು ರೀತಿಯ ಸ್ವಯಂರಕ್ಷಣಾ ಕಲೆಗಳಲ್ಲಿ ನಿಷ್ಣಾತರಾಗಿರುವ ಅವರು, ಮಹಿಳೆಯರು ಮತ್ತು ಹುಡುಗಿಯರಿಗೆ ಈ ರೀತಿಯ ದಾಳಿಕೋರರ ವಿರುದ್ಧ ತಮ್ಮನ್ನು ರಕ್ಷಿಸಿಕೊಳ್ಳುವ ತರಬೇತಿ ನೀಡಲು ನಿರ್ಧರಿಸಿದರು. ಅಂದಿನಿಂದ ಅವರು 2.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರಿಗೆ ಸ್ವಯಂ ರಕ್ಷಣೆಯಲ್ಲಿ ತರಬೇತಿ ನೀಡಿದ್ದಾರೆ.

28 ವರ್ಷ ಪ್ರಾಯದ ಅವರು, ‘ಅಭಿಸೆಲ್ಫ್ ಪ್ರೊಟೆಕ್ಷನ್ ಟ್ರಸ್ಟ್’ (Abhiself Protection Trust) ಎಂಬ ಸ್ವಯಂಸೇವಾ ಸಂಸ್ಥೆಯನ್ನು ನಡೆಸುತ್ತಿದ್ದು, ಅದರ ಅಡಿಯಲ್ಲಿ ‘ಮೇರಿ ರಕ್ಷಾ ಮೇರಿ ಹಾತೋಂಮೆ’ (ನನ್ನ ರಕ್ಷಣೆ ನನ್ನ ಕೈಗಳಲ್ಲಿ) ಕಾರ್ಯಕ್ರಮದಡಿ ಹೆಣ್ಣುಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅವರಲ್ಲಿ ತರಬೇತಿ ಪಡೆಯುತ್ತಿರುವವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದವರೇ ಆಗಿರುವುದು ವಿಶೇಷವಾಗಿದೆ.

ಅಭಿಷೇಕ್ ಮೂಲತಃ ಜಪಾನ್ ಮೂಲದ ಐಕಿಡೋ (Aikido) ಪರಿಣಿತರಾಗಿದ್ದು, ಆರಂಭದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ತರಬೇತಿ ನೀಡುತ್ತಿದ್ದರು.

“ನಾನು 2007ರಲ್ಲಿ ಉತ್ತರ ಪ್ರದೇಶದ ಪೊಲೀಸ್ ಕಮಾಂಡೊಗಳಿಗೆ ತರಬೇತಿ ಆರಂಭಿಸಿದೆ. ಆದರೆ, 2012ರಲ್ಲಿ ದಿಲ್ಲಿಯ ಸಾಮೂಹಿಕ ಅತ್ಯಾಚಾರದ ಬಳಿಕ, ಅದೇ ರಕ್ಷಣಾ ತಂತ್ರವನ್ನು ಹೆಣ್ಣುಮಕ್ಕಳಿಗೆ ಕಲಿಸಲು ನಾವೊಂದು ಅಭಿಯಾನ ಆರಂಭಿಸಿದೆವು. ಒಂದು ವಾರ ಅವಧಿಯ ಈ ತರಬೇತಿಯು ಯಾವುದೇ ದಾಳಿಕೋರರನ್ನು ಸ್ವಂತವಾಗಿ ಎದುರಿಸಲು ಅವರನ್ನು ಶಕ್ತರನ್ನಾಗಿ ಮಾಡುತ್ತದೆ” ಎಂದು ಅಭಿಷೇಕ್ ಹೇಳುತ್ತಾರೆ.

ಅವರ ಶಿಬಿರಗಳಲ್ಲಿ ಸಾಮಾನ್ಯವಾಗಿ ನೂರಾರು ಹೆಣ್ಣುಮಕ್ಕಳಿರುತ್ತಾರೆ. ಆದರೆ, ಅವರು 2016ರಲ್ಲಿ ಪ್ರತಾಪಗಢದ ಕುಂದಾ ಎಂಬಲ್ಲಿ 5,700ರಷ್ಟು ಭಾರೀ ಸಂಖ್ಯೆಯ ಹೆಣ್ಣುಮಕ್ಕಳಿಗೆ ತರಬೇತಿ ನೀಡಿ ಲಿಮ್ಕಾ ವಿಶ್ವದಾಖಲೆ ಮಾಡಿದರು.

2002ರಿಂದ ಸ್ವಯಂರಕ್ಷಣಾ ಕಲೆಯಲ್ಲಿ ತರಬೇತಿ ಪಡೆಯಲು ಆರಂಭಿಸಿದ ಅವರು, ಅಂತರರಾಷ್ಟ್ರೀಯ ಕರಾಟೆಯಲ್ಲಿ ಚಿನ್ನದ ಪದಕ ವಿಜೇತರೂ ಹೌದು. ಈಗ ತರಬೇತಿಯಲ್ಲಿ ಅವರಿಗೆ ನೆರವಾಗಲು 12 ಮಂದಿಯ ತಂಡವಿದೆ.

“ನಮ್ಮ ಗುರಿಯೆಂದರೆ ಹೆಣ್ಣುಮಕ್ಕಳನ್ನು ಸಶಕ್ತಗೊಳಿಸಿ, ಯಾವುದೇ ಸವಾಲನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುವಂತಹ ವ್ಯಕ್ತಿಗಳಾಗಿ ಅವರನ್ನು ಗಟ್ಟಿಗೊಳಿಸುವುದು. ಐಕಿಡೋದಲ್ಲಿ ಯಾರೂ ಬೇಕಾದರೂ ನಿಯಮಿತ ಅಭ್ಯಾಸದಿಂದ ಕಲಿತು ನಿಜಜೀವನದಲ್ಲಿ ಉಪಯೋಗಿಸಬಹುದಾದ ಹಲವಾರು ಪಟ್ಟುಗಳು ಮತ್ತು ತಂತ್ರಗಳಿವೆ” ಎಂದು ಅಭಿಷೇಕ್ ವಿವರಿಸುತ್ತಾರೆ.

“ನಾವು ಶಾಲೆಯಿಂದ ಶಾಲೆಗೆ ಹೋಗುತ್ತೇವೆ. ಅಲ್ಲಿ ನಾವು ಅವರು ಏಕೆ ಸ್ವಯಂರಕ್ಷಣೆಯನ್ನು ಕಲಿಯುವುದು ಅಗತ್ಯ ಮತ್ತು ಅದರಲ್ಲೂ ಮಹಿಳೆಯರ ಸುರಕ್ಷಿತತೆಯ ವಿಷಯದಲ್ಲಿ ನಮ್ಮ ದೇಶದಲ್ಲಿ ಪರಿಸ್ಥಿತಿ ಇಷ್ಟೊಂದು ಕೆಟ್ಟಿರುವ ಸಂದರ್ಭದಲ್ಲಿ ಇದು ಏಕೆ ಮುಖ್ಯ ಎಂದು ವಿವರಿಸುತ್ತೇವೆ” ಎಂದವರು ಹೇಳುತ್ತಾರೆ.

ಉತ್ತರ ಪ್ರದೇಶದಲ್ಲಿ ತರಬೇತಿ ನೀಡಿದ ಮೇಲೆ ಈ ತರಬೇತಿ ಕಾರ್ಯಕ್ರಮವನ್ನು ರಾಜ್ಯದಾಚೆಗೂ ವಿಸ್ತರಿಸುವ ಗುರಿಯಿದೆ ಎನ್ನುವ ಅವರು, ಸದ್ಯವೇ ದಿಲ್ಲಿ ಮತ್ತು ಹರ್ಯಾಣದಲ್ಲಿ ತರಬೇತಿ ಕಾರ್ಯಕ್ರಮ ಆರಂಭಿಸುವುದಾಗಿ ತಿಳಿಸಿದ್ದಾರೆ…

ಅವರಿಗೆ ನಾವೆಲ್ಲರೂ ಒಂದು ಸಲಾಂ ಹೇಳೋಣ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...