Homeಚಳವಳಿಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಉತ್ತರ ಪ್ರದೇಶದ ಗೋರಖ್‌ಪುರದ ನಿವಾಸಿಯಾಗಿರುವ ಅಭಿಷೇಕ್ ಯಾದವ್, ಈ ದೇಶದಲ್ಲಿ ಮಹಿಳೆಯರಿಗೆ ಸಾಕಷ್ಟು ರಕ್ಷಣೆ ಇಲ್ಲದಿರುವುದನ್ನು ಕಂಡು ದೇಶದ ಬಹುತೇಕ ಮಾನವೀಯತೆಯುಳ್ಳ ನಾಗರಿಕರಂತೆ ಮರುಗಿದ್ದರು. ಅದಕ್ಕಾಗಿ ಏನನ್ನಾದರೂ ‌ಮಾಡಲೇಬೇಕೆಂದು ಹೊರಟ ಅವರ ಸಾಧನೆ ಮಾತ್ರ ಅಸಾಧಾರಣವಾದುದು.

- Advertisement -
- Advertisement -

ಕೃಪೆ: ಇಂಡಿಯಾಟೈಮ್ಸ್‌

ಅನುವಾದ: ನಿಖಿಲ್ ಕೋಲ್ಪೆ

ಡಿಸೆಂಬರ್ 16, 2012ರ ರಾತ್ರಿ ದಿಲ್ಲಿಯಲ್ಲಿ ಪುಂಡರ ಗುಂಪೊಂದು ಅರೆ ವೈದ್ಯಕೀಯ ವಿದ್ಯಾರ್ಥಿನಿ ಯುವತಿಯೊಬ್ಬರ ಮೇಲೆ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘೋರ ಘಟನೆ ನಡೆದಿತ್ತು. ನಿರ್ಭಯಾ ಪ್ರಕರಣವೆಂದು ಮಾಧ್ಯಮಗಳು ಹೆಸರಿಸಿದ್ದ ಈ ಘಟನೆಯಿಂದ ದೇಶದ ಜನರಂತೆ ಗೋರಖ್‌ಪುರದ ಅಭಿಷೇಕ್ ಯಾದವ್ ಅವರಿಗೂ ತೀವ್ರ ನೋವಾಗಿತ್ತು.

ಈ ಕುರಿತು ಏನನ್ನಾದರೂ ಮಾಡಲೇಬೇಕು ಎಂಬ ದೃಢ ಸಂಕಲ್ಪ ಮಾಡಿದಾಗ ಅವರು ಹೆಚ್ಚು ಆ ಕಡೆ, ಈ ಕಡೆ ನೋಡಬೇಕಾಗಿರಲಿಲ್ಲ. ಹಲವು ರೀತಿಯ ಸ್ವಯಂರಕ್ಷಣಾ ಕಲೆಗಳಲ್ಲಿ ನಿಷ್ಣಾತರಾಗಿರುವ ಅವರು, ಮಹಿಳೆಯರು ಮತ್ತು ಹುಡುಗಿಯರಿಗೆ ಈ ರೀತಿಯ ದಾಳಿಕೋರರ ವಿರುದ್ಧ ತಮ್ಮನ್ನು ರಕ್ಷಿಸಿಕೊಳ್ಳುವ ತರಬೇತಿ ನೀಡಲು ನಿರ್ಧರಿಸಿದರು. ಅಂದಿನಿಂದ ಅವರು 2.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರಿಗೆ ಸ್ವಯಂ ರಕ್ಷಣೆಯಲ್ಲಿ ತರಬೇತಿ ನೀಡಿದ್ದಾರೆ.

28 ವರ್ಷ ಪ್ರಾಯದ ಅವರು, ‘ಅಭಿಸೆಲ್ಫ್ ಪ್ರೊಟೆಕ್ಷನ್ ಟ್ರಸ್ಟ್’ (Abhiself Protection Trust) ಎಂಬ ಸ್ವಯಂಸೇವಾ ಸಂಸ್ಥೆಯನ್ನು ನಡೆಸುತ್ತಿದ್ದು, ಅದರ ಅಡಿಯಲ್ಲಿ ‘ಮೇರಿ ರಕ್ಷಾ ಮೇರಿ ಹಾತೋಂಮೆ’ (ನನ್ನ ರಕ್ಷಣೆ ನನ್ನ ಕೈಗಳಲ್ಲಿ) ಕಾರ್ಯಕ್ರಮದಡಿ ಹೆಣ್ಣುಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅವರಲ್ಲಿ ತರಬೇತಿ ಪಡೆಯುತ್ತಿರುವವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದವರೇ ಆಗಿರುವುದು ವಿಶೇಷವಾಗಿದೆ.

ಅಭಿಷೇಕ್ ಮೂಲತಃ ಜಪಾನ್ ಮೂಲದ ಐಕಿಡೋ (Aikido) ಪರಿಣಿತರಾಗಿದ್ದು, ಆರಂಭದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ತರಬೇತಿ ನೀಡುತ್ತಿದ್ದರು.

“ನಾನು 2007ರಲ್ಲಿ ಉತ್ತರ ಪ್ರದೇಶದ ಪೊಲೀಸ್ ಕಮಾಂಡೊಗಳಿಗೆ ತರಬೇತಿ ಆರಂಭಿಸಿದೆ. ಆದರೆ, 2012ರಲ್ಲಿ ದಿಲ್ಲಿಯ ಸಾಮೂಹಿಕ ಅತ್ಯಾಚಾರದ ಬಳಿಕ, ಅದೇ ರಕ್ಷಣಾ ತಂತ್ರವನ್ನು ಹೆಣ್ಣುಮಕ್ಕಳಿಗೆ ಕಲಿಸಲು ನಾವೊಂದು ಅಭಿಯಾನ ಆರಂಭಿಸಿದೆವು. ಒಂದು ವಾರ ಅವಧಿಯ ಈ ತರಬೇತಿಯು ಯಾವುದೇ ದಾಳಿಕೋರರನ್ನು ಸ್ವಂತವಾಗಿ ಎದುರಿಸಲು ಅವರನ್ನು ಶಕ್ತರನ್ನಾಗಿ ಮಾಡುತ್ತದೆ” ಎಂದು ಅಭಿಷೇಕ್ ಹೇಳುತ್ತಾರೆ.

ಅವರ ಶಿಬಿರಗಳಲ್ಲಿ ಸಾಮಾನ್ಯವಾಗಿ ನೂರಾರು ಹೆಣ್ಣುಮಕ್ಕಳಿರುತ್ತಾರೆ. ಆದರೆ, ಅವರು 2016ರಲ್ಲಿ ಪ್ರತಾಪಗಢದ ಕುಂದಾ ಎಂಬಲ್ಲಿ 5,700ರಷ್ಟು ಭಾರೀ ಸಂಖ್ಯೆಯ ಹೆಣ್ಣುಮಕ್ಕಳಿಗೆ ತರಬೇತಿ ನೀಡಿ ಲಿಮ್ಕಾ ವಿಶ್ವದಾಖಲೆ ಮಾಡಿದರು.

2002ರಿಂದ ಸ್ವಯಂರಕ್ಷಣಾ ಕಲೆಯಲ್ಲಿ ತರಬೇತಿ ಪಡೆಯಲು ಆರಂಭಿಸಿದ ಅವರು, ಅಂತರರಾಷ್ಟ್ರೀಯ ಕರಾಟೆಯಲ್ಲಿ ಚಿನ್ನದ ಪದಕ ವಿಜೇತರೂ ಹೌದು. ಈಗ ತರಬೇತಿಯಲ್ಲಿ ಅವರಿಗೆ ನೆರವಾಗಲು 12 ಮಂದಿಯ ತಂಡವಿದೆ.

“ನಮ್ಮ ಗುರಿಯೆಂದರೆ ಹೆಣ್ಣುಮಕ್ಕಳನ್ನು ಸಶಕ್ತಗೊಳಿಸಿ, ಯಾವುದೇ ಸವಾಲನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುವಂತಹ ವ್ಯಕ್ತಿಗಳಾಗಿ ಅವರನ್ನು ಗಟ್ಟಿಗೊಳಿಸುವುದು. ಐಕಿಡೋದಲ್ಲಿ ಯಾರೂ ಬೇಕಾದರೂ ನಿಯಮಿತ ಅಭ್ಯಾಸದಿಂದ ಕಲಿತು ನಿಜಜೀವನದಲ್ಲಿ ಉಪಯೋಗಿಸಬಹುದಾದ ಹಲವಾರು ಪಟ್ಟುಗಳು ಮತ್ತು ತಂತ್ರಗಳಿವೆ” ಎಂದು ಅಭಿಷೇಕ್ ವಿವರಿಸುತ್ತಾರೆ.

“ನಾವು ಶಾಲೆಯಿಂದ ಶಾಲೆಗೆ ಹೋಗುತ್ತೇವೆ. ಅಲ್ಲಿ ನಾವು ಅವರು ಏಕೆ ಸ್ವಯಂರಕ್ಷಣೆಯನ್ನು ಕಲಿಯುವುದು ಅಗತ್ಯ ಮತ್ತು ಅದರಲ್ಲೂ ಮಹಿಳೆಯರ ಸುರಕ್ಷಿತತೆಯ ವಿಷಯದಲ್ಲಿ ನಮ್ಮ ದೇಶದಲ್ಲಿ ಪರಿಸ್ಥಿತಿ ಇಷ್ಟೊಂದು ಕೆಟ್ಟಿರುವ ಸಂದರ್ಭದಲ್ಲಿ ಇದು ಏಕೆ ಮುಖ್ಯ ಎಂದು ವಿವರಿಸುತ್ತೇವೆ” ಎಂದವರು ಹೇಳುತ್ತಾರೆ.

ಉತ್ತರ ಪ್ರದೇಶದಲ್ಲಿ ತರಬೇತಿ ನೀಡಿದ ಮೇಲೆ ಈ ತರಬೇತಿ ಕಾರ್ಯಕ್ರಮವನ್ನು ರಾಜ್ಯದಾಚೆಗೂ ವಿಸ್ತರಿಸುವ ಗುರಿಯಿದೆ ಎನ್ನುವ ಅವರು, ಸದ್ಯವೇ ದಿಲ್ಲಿ ಮತ್ತು ಹರ್ಯಾಣದಲ್ಲಿ ತರಬೇತಿ ಕಾರ್ಯಕ್ರಮ ಆರಂಭಿಸುವುದಾಗಿ ತಿಳಿಸಿದ್ದಾರೆ…

ಅವರಿಗೆ ನಾವೆಲ್ಲರೂ ಒಂದು ಸಲಾಂ ಹೇಳೋಣ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...

ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ

ಜನಸಂಖ್ಯೆ ಅನುಪಾತದ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆಯ...

ನೋಯ್ಡಾ ಕಾರ್ಮಿಕ ಪ್ರತಿಭಟನೆ: 300ಕ್ಕೂ ಹೆಚ್ಚು ಜನರ ಬಂಧನ, 7 ಎಫ್‌ಐಆರ್‌: ಅಶಾಂತಿಯ ಹಿಂದೆ ‘ಸಂಘಟಿತ ಸಿಂಡಿಕೇಟ್’ ಕುರಿತು ತನಿಖೆ

ನೋಯ್ಡಾದಲ್ಲಿ ಹಿಂಸಾತ್ಮಕವಾಗಿ ತಿರುಗಿದ ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಮಂಗಳವಾರ ಹೇಳಿದ್ದಾರೆ,...