Homeಚಳವಳಿಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಉತ್ತರ ಪ್ರದೇಶದ ಗೋರಖ್‌ಪುರದ ನಿವಾಸಿಯಾಗಿರುವ ಅಭಿಷೇಕ್ ಯಾದವ್, ಈ ದೇಶದಲ್ಲಿ ಮಹಿಳೆಯರಿಗೆ ಸಾಕಷ್ಟು ರಕ್ಷಣೆ ಇಲ್ಲದಿರುವುದನ್ನು ಕಂಡು ದೇಶದ ಬಹುತೇಕ ಮಾನವೀಯತೆಯುಳ್ಳ ನಾಗರಿಕರಂತೆ ಮರುಗಿದ್ದರು. ಅದಕ್ಕಾಗಿ ಏನನ್ನಾದರೂ ‌ಮಾಡಲೇಬೇಕೆಂದು ಹೊರಟ ಅವರ ಸಾಧನೆ ಮಾತ್ರ ಅಸಾಧಾರಣವಾದುದು.

- Advertisement -
- Advertisement -

ಕೃಪೆ: ಇಂಡಿಯಾಟೈಮ್ಸ್‌

ಅನುವಾದ: ನಿಖಿಲ್ ಕೋಲ್ಪೆ

ಡಿಸೆಂಬರ್ 16, 2012ರ ರಾತ್ರಿ ದಿಲ್ಲಿಯಲ್ಲಿ ಪುಂಡರ ಗುಂಪೊಂದು ಅರೆ ವೈದ್ಯಕೀಯ ವಿದ್ಯಾರ್ಥಿನಿ ಯುವತಿಯೊಬ್ಬರ ಮೇಲೆ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘೋರ ಘಟನೆ ನಡೆದಿತ್ತು. ನಿರ್ಭಯಾ ಪ್ರಕರಣವೆಂದು ಮಾಧ್ಯಮಗಳು ಹೆಸರಿಸಿದ್ದ ಈ ಘಟನೆಯಿಂದ ದೇಶದ ಜನರಂತೆ ಗೋರಖ್‌ಪುರದ ಅಭಿಷೇಕ್ ಯಾದವ್ ಅವರಿಗೂ ತೀವ್ರ ನೋವಾಗಿತ್ತು.

ಈ ಕುರಿತು ಏನನ್ನಾದರೂ ಮಾಡಲೇಬೇಕು ಎಂಬ ದೃಢ ಸಂಕಲ್ಪ ಮಾಡಿದಾಗ ಅವರು ಹೆಚ್ಚು ಆ ಕಡೆ, ಈ ಕಡೆ ನೋಡಬೇಕಾಗಿರಲಿಲ್ಲ. ಹಲವು ರೀತಿಯ ಸ್ವಯಂರಕ್ಷಣಾ ಕಲೆಗಳಲ್ಲಿ ನಿಷ್ಣಾತರಾಗಿರುವ ಅವರು, ಮಹಿಳೆಯರು ಮತ್ತು ಹುಡುಗಿಯರಿಗೆ ಈ ರೀತಿಯ ದಾಳಿಕೋರರ ವಿರುದ್ಧ ತಮ್ಮನ್ನು ರಕ್ಷಿಸಿಕೊಳ್ಳುವ ತರಬೇತಿ ನೀಡಲು ನಿರ್ಧರಿಸಿದರು. ಅಂದಿನಿಂದ ಅವರು 2.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರಿಗೆ ಸ್ವಯಂ ರಕ್ಷಣೆಯಲ್ಲಿ ತರಬೇತಿ ನೀಡಿದ್ದಾರೆ.

28 ವರ್ಷ ಪ್ರಾಯದ ಅವರು, ‘ಅಭಿಸೆಲ್ಫ್ ಪ್ರೊಟೆಕ್ಷನ್ ಟ್ರಸ್ಟ್’ (Abhiself Protection Trust) ಎಂಬ ಸ್ವಯಂಸೇವಾ ಸಂಸ್ಥೆಯನ್ನು ನಡೆಸುತ್ತಿದ್ದು, ಅದರ ಅಡಿಯಲ್ಲಿ ‘ಮೇರಿ ರಕ್ಷಾ ಮೇರಿ ಹಾತೋಂಮೆ’ (ನನ್ನ ರಕ್ಷಣೆ ನನ್ನ ಕೈಗಳಲ್ಲಿ) ಕಾರ್ಯಕ್ರಮದಡಿ ಹೆಣ್ಣುಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅವರಲ್ಲಿ ತರಬೇತಿ ಪಡೆಯುತ್ತಿರುವವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದವರೇ ಆಗಿರುವುದು ವಿಶೇಷವಾಗಿದೆ.

ಅಭಿಷೇಕ್ ಮೂಲತಃ ಜಪಾನ್ ಮೂಲದ ಐಕಿಡೋ (Aikido) ಪರಿಣಿತರಾಗಿದ್ದು, ಆರಂಭದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ತರಬೇತಿ ನೀಡುತ್ತಿದ್ದರು.

“ನಾನು 2007ರಲ್ಲಿ ಉತ್ತರ ಪ್ರದೇಶದ ಪೊಲೀಸ್ ಕಮಾಂಡೊಗಳಿಗೆ ತರಬೇತಿ ಆರಂಭಿಸಿದೆ. ಆದರೆ, 2012ರಲ್ಲಿ ದಿಲ್ಲಿಯ ಸಾಮೂಹಿಕ ಅತ್ಯಾಚಾರದ ಬಳಿಕ, ಅದೇ ರಕ್ಷಣಾ ತಂತ್ರವನ್ನು ಹೆಣ್ಣುಮಕ್ಕಳಿಗೆ ಕಲಿಸಲು ನಾವೊಂದು ಅಭಿಯಾನ ಆರಂಭಿಸಿದೆವು. ಒಂದು ವಾರ ಅವಧಿಯ ಈ ತರಬೇತಿಯು ಯಾವುದೇ ದಾಳಿಕೋರರನ್ನು ಸ್ವಂತವಾಗಿ ಎದುರಿಸಲು ಅವರನ್ನು ಶಕ್ತರನ್ನಾಗಿ ಮಾಡುತ್ತದೆ” ಎಂದು ಅಭಿಷೇಕ್ ಹೇಳುತ್ತಾರೆ.

ಅವರ ಶಿಬಿರಗಳಲ್ಲಿ ಸಾಮಾನ್ಯವಾಗಿ ನೂರಾರು ಹೆಣ್ಣುಮಕ್ಕಳಿರುತ್ತಾರೆ. ಆದರೆ, ಅವರು 2016ರಲ್ಲಿ ಪ್ರತಾಪಗಢದ ಕುಂದಾ ಎಂಬಲ್ಲಿ 5,700ರಷ್ಟು ಭಾರೀ ಸಂಖ್ಯೆಯ ಹೆಣ್ಣುಮಕ್ಕಳಿಗೆ ತರಬೇತಿ ನೀಡಿ ಲಿಮ್ಕಾ ವಿಶ್ವದಾಖಲೆ ಮಾಡಿದರು.

2002ರಿಂದ ಸ್ವಯಂರಕ್ಷಣಾ ಕಲೆಯಲ್ಲಿ ತರಬೇತಿ ಪಡೆಯಲು ಆರಂಭಿಸಿದ ಅವರು, ಅಂತರರಾಷ್ಟ್ರೀಯ ಕರಾಟೆಯಲ್ಲಿ ಚಿನ್ನದ ಪದಕ ವಿಜೇತರೂ ಹೌದು. ಈಗ ತರಬೇತಿಯಲ್ಲಿ ಅವರಿಗೆ ನೆರವಾಗಲು 12 ಮಂದಿಯ ತಂಡವಿದೆ.

“ನಮ್ಮ ಗುರಿಯೆಂದರೆ ಹೆಣ್ಣುಮಕ್ಕಳನ್ನು ಸಶಕ್ತಗೊಳಿಸಿ, ಯಾವುದೇ ಸವಾಲನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುವಂತಹ ವ್ಯಕ್ತಿಗಳಾಗಿ ಅವರನ್ನು ಗಟ್ಟಿಗೊಳಿಸುವುದು. ಐಕಿಡೋದಲ್ಲಿ ಯಾರೂ ಬೇಕಾದರೂ ನಿಯಮಿತ ಅಭ್ಯಾಸದಿಂದ ಕಲಿತು ನಿಜಜೀವನದಲ್ಲಿ ಉಪಯೋಗಿಸಬಹುದಾದ ಹಲವಾರು ಪಟ್ಟುಗಳು ಮತ್ತು ತಂತ್ರಗಳಿವೆ” ಎಂದು ಅಭಿಷೇಕ್ ವಿವರಿಸುತ್ತಾರೆ.

“ನಾವು ಶಾಲೆಯಿಂದ ಶಾಲೆಗೆ ಹೋಗುತ್ತೇವೆ. ಅಲ್ಲಿ ನಾವು ಅವರು ಏಕೆ ಸ್ವಯಂರಕ್ಷಣೆಯನ್ನು ಕಲಿಯುವುದು ಅಗತ್ಯ ಮತ್ತು ಅದರಲ್ಲೂ ಮಹಿಳೆಯರ ಸುರಕ್ಷಿತತೆಯ ವಿಷಯದಲ್ಲಿ ನಮ್ಮ ದೇಶದಲ್ಲಿ ಪರಿಸ್ಥಿತಿ ಇಷ್ಟೊಂದು ಕೆಟ್ಟಿರುವ ಸಂದರ್ಭದಲ್ಲಿ ಇದು ಏಕೆ ಮುಖ್ಯ ಎಂದು ವಿವರಿಸುತ್ತೇವೆ” ಎಂದವರು ಹೇಳುತ್ತಾರೆ.

ಉತ್ತರ ಪ್ರದೇಶದಲ್ಲಿ ತರಬೇತಿ ನೀಡಿದ ಮೇಲೆ ಈ ತರಬೇತಿ ಕಾರ್ಯಕ್ರಮವನ್ನು ರಾಜ್ಯದಾಚೆಗೂ ವಿಸ್ತರಿಸುವ ಗುರಿಯಿದೆ ಎನ್ನುವ ಅವರು, ಸದ್ಯವೇ ದಿಲ್ಲಿ ಮತ್ತು ಹರ್ಯಾಣದಲ್ಲಿ ತರಬೇತಿ ಕಾರ್ಯಕ್ರಮ ಆರಂಭಿಸುವುದಾಗಿ ತಿಳಿಸಿದ್ದಾರೆ…

ಅವರಿಗೆ ನಾವೆಲ್ಲರೂ ಒಂದು ಸಲಾಂ ಹೇಳೋಣ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...