Homeಚಳವಳಿಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಉತ್ತರ ಪ್ರದೇಶದ ಗೋರಖ್‌ಪುರದ ನಿವಾಸಿಯಾಗಿರುವ ಅಭಿಷೇಕ್ ಯಾದವ್, ಈ ದೇಶದಲ್ಲಿ ಮಹಿಳೆಯರಿಗೆ ಸಾಕಷ್ಟು ರಕ್ಷಣೆ ಇಲ್ಲದಿರುವುದನ್ನು ಕಂಡು ದೇಶದ ಬಹುತೇಕ ಮಾನವೀಯತೆಯುಳ್ಳ ನಾಗರಿಕರಂತೆ ಮರುಗಿದ್ದರು. ಅದಕ್ಕಾಗಿ ಏನನ್ನಾದರೂ ‌ಮಾಡಲೇಬೇಕೆಂದು ಹೊರಟ ಅವರ ಸಾಧನೆ ಮಾತ್ರ ಅಸಾಧಾರಣವಾದುದು.

- Advertisement -
- Advertisement -

ಕೃಪೆ: ಇಂಡಿಯಾಟೈಮ್ಸ್‌

ಅನುವಾದ: ನಿಖಿಲ್ ಕೋಲ್ಪೆ

ಡಿಸೆಂಬರ್ 16, 2012ರ ರಾತ್ರಿ ದಿಲ್ಲಿಯಲ್ಲಿ ಪುಂಡರ ಗುಂಪೊಂದು ಅರೆ ವೈದ್ಯಕೀಯ ವಿದ್ಯಾರ್ಥಿನಿ ಯುವತಿಯೊಬ್ಬರ ಮೇಲೆ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘೋರ ಘಟನೆ ನಡೆದಿತ್ತು. ನಿರ್ಭಯಾ ಪ್ರಕರಣವೆಂದು ಮಾಧ್ಯಮಗಳು ಹೆಸರಿಸಿದ್ದ ಈ ಘಟನೆಯಿಂದ ದೇಶದ ಜನರಂತೆ ಗೋರಖ್‌ಪುರದ ಅಭಿಷೇಕ್ ಯಾದವ್ ಅವರಿಗೂ ತೀವ್ರ ನೋವಾಗಿತ್ತು.

ಈ ಕುರಿತು ಏನನ್ನಾದರೂ ಮಾಡಲೇಬೇಕು ಎಂಬ ದೃಢ ಸಂಕಲ್ಪ ಮಾಡಿದಾಗ ಅವರು ಹೆಚ್ಚು ಆ ಕಡೆ, ಈ ಕಡೆ ನೋಡಬೇಕಾಗಿರಲಿಲ್ಲ. ಹಲವು ರೀತಿಯ ಸ್ವಯಂರಕ್ಷಣಾ ಕಲೆಗಳಲ್ಲಿ ನಿಷ್ಣಾತರಾಗಿರುವ ಅವರು, ಮಹಿಳೆಯರು ಮತ್ತು ಹುಡುಗಿಯರಿಗೆ ಈ ರೀತಿಯ ದಾಳಿಕೋರರ ವಿರುದ್ಧ ತಮ್ಮನ್ನು ರಕ್ಷಿಸಿಕೊಳ್ಳುವ ತರಬೇತಿ ನೀಡಲು ನಿರ್ಧರಿಸಿದರು. ಅಂದಿನಿಂದ ಅವರು 2.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರಿಗೆ ಸ್ವಯಂ ರಕ್ಷಣೆಯಲ್ಲಿ ತರಬೇತಿ ನೀಡಿದ್ದಾರೆ.

28 ವರ್ಷ ಪ್ರಾಯದ ಅವರು, ‘ಅಭಿಸೆಲ್ಫ್ ಪ್ರೊಟೆಕ್ಷನ್ ಟ್ರಸ್ಟ್’ (Abhiself Protection Trust) ಎಂಬ ಸ್ವಯಂಸೇವಾ ಸಂಸ್ಥೆಯನ್ನು ನಡೆಸುತ್ತಿದ್ದು, ಅದರ ಅಡಿಯಲ್ಲಿ ‘ಮೇರಿ ರಕ್ಷಾ ಮೇರಿ ಹಾತೋಂಮೆ’ (ನನ್ನ ರಕ್ಷಣೆ ನನ್ನ ಕೈಗಳಲ್ಲಿ) ಕಾರ್ಯಕ್ರಮದಡಿ ಹೆಣ್ಣುಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅವರಲ್ಲಿ ತರಬೇತಿ ಪಡೆಯುತ್ತಿರುವವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದವರೇ ಆಗಿರುವುದು ವಿಶೇಷವಾಗಿದೆ.

ಅಭಿಷೇಕ್ ಮೂಲತಃ ಜಪಾನ್ ಮೂಲದ ಐಕಿಡೋ (Aikido) ಪರಿಣಿತರಾಗಿದ್ದು, ಆರಂಭದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ತರಬೇತಿ ನೀಡುತ್ತಿದ್ದರು.

“ನಾನು 2007ರಲ್ಲಿ ಉತ್ತರ ಪ್ರದೇಶದ ಪೊಲೀಸ್ ಕಮಾಂಡೊಗಳಿಗೆ ತರಬೇತಿ ಆರಂಭಿಸಿದೆ. ಆದರೆ, 2012ರಲ್ಲಿ ದಿಲ್ಲಿಯ ಸಾಮೂಹಿಕ ಅತ್ಯಾಚಾರದ ಬಳಿಕ, ಅದೇ ರಕ್ಷಣಾ ತಂತ್ರವನ್ನು ಹೆಣ್ಣುಮಕ್ಕಳಿಗೆ ಕಲಿಸಲು ನಾವೊಂದು ಅಭಿಯಾನ ಆರಂಭಿಸಿದೆವು. ಒಂದು ವಾರ ಅವಧಿಯ ಈ ತರಬೇತಿಯು ಯಾವುದೇ ದಾಳಿಕೋರರನ್ನು ಸ್ವಂತವಾಗಿ ಎದುರಿಸಲು ಅವರನ್ನು ಶಕ್ತರನ್ನಾಗಿ ಮಾಡುತ್ತದೆ” ಎಂದು ಅಭಿಷೇಕ್ ಹೇಳುತ್ತಾರೆ.

ಅವರ ಶಿಬಿರಗಳಲ್ಲಿ ಸಾಮಾನ್ಯವಾಗಿ ನೂರಾರು ಹೆಣ್ಣುಮಕ್ಕಳಿರುತ್ತಾರೆ. ಆದರೆ, ಅವರು 2016ರಲ್ಲಿ ಪ್ರತಾಪಗಢದ ಕುಂದಾ ಎಂಬಲ್ಲಿ 5,700ರಷ್ಟು ಭಾರೀ ಸಂಖ್ಯೆಯ ಹೆಣ್ಣುಮಕ್ಕಳಿಗೆ ತರಬೇತಿ ನೀಡಿ ಲಿಮ್ಕಾ ವಿಶ್ವದಾಖಲೆ ಮಾಡಿದರು.

2002ರಿಂದ ಸ್ವಯಂರಕ್ಷಣಾ ಕಲೆಯಲ್ಲಿ ತರಬೇತಿ ಪಡೆಯಲು ಆರಂಭಿಸಿದ ಅವರು, ಅಂತರರಾಷ್ಟ್ರೀಯ ಕರಾಟೆಯಲ್ಲಿ ಚಿನ್ನದ ಪದಕ ವಿಜೇತರೂ ಹೌದು. ಈಗ ತರಬೇತಿಯಲ್ಲಿ ಅವರಿಗೆ ನೆರವಾಗಲು 12 ಮಂದಿಯ ತಂಡವಿದೆ.

“ನಮ್ಮ ಗುರಿಯೆಂದರೆ ಹೆಣ್ಣುಮಕ್ಕಳನ್ನು ಸಶಕ್ತಗೊಳಿಸಿ, ಯಾವುದೇ ಸವಾಲನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುವಂತಹ ವ್ಯಕ್ತಿಗಳಾಗಿ ಅವರನ್ನು ಗಟ್ಟಿಗೊಳಿಸುವುದು. ಐಕಿಡೋದಲ್ಲಿ ಯಾರೂ ಬೇಕಾದರೂ ನಿಯಮಿತ ಅಭ್ಯಾಸದಿಂದ ಕಲಿತು ನಿಜಜೀವನದಲ್ಲಿ ಉಪಯೋಗಿಸಬಹುದಾದ ಹಲವಾರು ಪಟ್ಟುಗಳು ಮತ್ತು ತಂತ್ರಗಳಿವೆ” ಎಂದು ಅಭಿಷೇಕ್ ವಿವರಿಸುತ್ತಾರೆ.

“ನಾವು ಶಾಲೆಯಿಂದ ಶಾಲೆಗೆ ಹೋಗುತ್ತೇವೆ. ಅಲ್ಲಿ ನಾವು ಅವರು ಏಕೆ ಸ್ವಯಂರಕ್ಷಣೆಯನ್ನು ಕಲಿಯುವುದು ಅಗತ್ಯ ಮತ್ತು ಅದರಲ್ಲೂ ಮಹಿಳೆಯರ ಸುರಕ್ಷಿತತೆಯ ವಿಷಯದಲ್ಲಿ ನಮ್ಮ ದೇಶದಲ್ಲಿ ಪರಿಸ್ಥಿತಿ ಇಷ್ಟೊಂದು ಕೆಟ್ಟಿರುವ ಸಂದರ್ಭದಲ್ಲಿ ಇದು ಏಕೆ ಮುಖ್ಯ ಎಂದು ವಿವರಿಸುತ್ತೇವೆ” ಎಂದವರು ಹೇಳುತ್ತಾರೆ.

ಉತ್ತರ ಪ್ರದೇಶದಲ್ಲಿ ತರಬೇತಿ ನೀಡಿದ ಮೇಲೆ ಈ ತರಬೇತಿ ಕಾರ್ಯಕ್ರಮವನ್ನು ರಾಜ್ಯದಾಚೆಗೂ ವಿಸ್ತರಿಸುವ ಗುರಿಯಿದೆ ಎನ್ನುವ ಅವರು, ಸದ್ಯವೇ ದಿಲ್ಲಿ ಮತ್ತು ಹರ್ಯಾಣದಲ್ಲಿ ತರಬೇತಿ ಕಾರ್ಯಕ್ರಮ ಆರಂಭಿಸುವುದಾಗಿ ತಿಳಿಸಿದ್ದಾರೆ…

ಅವರಿಗೆ ನಾವೆಲ್ಲರೂ ಒಂದು ಸಲಾಂ ಹೇಳೋಣ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...