Homeಅಂಕಣಗಳುಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ...!

ಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ…!

- Advertisement -
- Advertisement -

ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟು ಎಂಬ ಪದಪುಂಜ ಅಷ್ಟು ಸರಿಯಲ್ಲ. ಕೊರೊನಾ ಸೋಂಕು ಉದ್ಭವವಾದಾಗ ಅದನ್ನು ನಿಭಾಯಿಸಲಾಗದಂತೆ ನಾವುಗಳು ಸೃಷ್ಟಿಸಿಕೊಂಡಿದ್ದ ಇಕ್ಕಟ್ಟು ಮೂಲ ಸಮಸ್ಯೆಯಾಗಿತ್ತು. ಹಾಗಾಗಿ ಕಣ್ಣಿಗೆ ಕಾಣದ ಮತ್ತು ಪೂರ್ಣ ಜೀವಿಯೂ ಅಲ್ಲದ ವೈರಸ್ ಇಷ್ಟೆಲ್ಲಾ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿತು. ಅಂದರೆ ಇದು ವೈರಸ್‍ನ ಶಕ್ತಿ ಎನ್ನುವುದಕ್ಕಿಂತ ನಮ್ಮ ದೌರ್ಬಲ್ಯ ಇದಕ್ಕೆಲ್ಲಾ ಕಾರಣವಾಯಿತು. ಈ ಕುರಿತು ಮತ್ತಷ್ಟು ಆಳ ಹಾಗೂ ಒಳನೋಟಗಳನ್ನು ಹೆಕ್ಕುವ ಅಗತ್ಯವಿದೆ. ಆದರೆ, ಇಂದು ಕೊರೊನಾ ಇನ್ನೂ ವ್ಯಾಪಕವಾಗುತ್ತಿರುವಾಗಲೇ ‘ಪುನರ್ ನಿರ್ಮಾಣ’ದ ಕೆಲಸವೂ ಶುರುವಾಗಬೇಕಿರುವುದರಿಂದ ಕೆಲವು ಪ್ರಾಥಮಿಕ ಅನಿಸಿಕೆಗಳನ್ನು ಹಂಚಿಕೊಳ್ಳಬೇಕೆನಿಸಿದೆ.

ನಾವು ಮನಸ್ಸು ಮಾಡಿದಲ್ಲಿ ಈ ಸಂದರ್ಭವನ್ನೇ ನಮ್ಮ ದೌರ್ಬಲ್ಯಗಳನ್ನು ಮೆಟ್ಟಿ ನಿಲ್ಲುವ ಸದವಕಾಶವನ್ನಾಗಿ ಪರಿವರ್ತಿಸಿಕೊಳ್ಳಲು ಸಾಧ್ಯ.

ಲೋಕಲ್, ಗ್ಲೋಬಲ್ ನಡುವೆ ಇರಬೇಕಾದ ಸಮತೋಲನ

ಮೊನ್ನೆ ಮಾತನಾಡುವಾಗ ಪ್ರಧಾನಿಗಳು ಹೇಳಿದ್ದರಲ್ಲಿ ತಪ್ಪೇನಿಲ್ಲ. ಆದರೆ ಸ್ಥಳೀಯವಾದುದರ ಕುರಿತು ಮಾತು ಹೆಚ್ಚು; ಮಾಡುವುದೆಲ್ಲಾ ಅದಕ್ಕೆ ತದ್ವಿರುದ್ಧ ಎನ್ನುವುದು ಪ್ರಧಾನಿಗಳಿಗೆ ಮಾತ್ರ ಸೀಮಿತ ವಲ್ಲ. ಅದನ್ನು ನಾವೆಲ್ಲರೂ ಮಾಡುತ್ತಿದ್ದೇವೆ. ಜೊತೆಗೆ ನಮ್ಮದು 100% ಲೋಕಲ್ ಎಂದು ಹೇಳುವ ಸಾಧ್ಯತೆಯೂ ಇರದಾಗ, ಎರಡರ ನಡುವೆ ಇರಬೇಕಾದ ಸಮತೋಲನದ ಬಗ್ಗೆ ಚರ್ಚಿಸಿಕೊಂಡು ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಹಾಗೆ ಮಾಡದೇ ಹೇಳೋದೊಂದು ಮಾಡೋದೊಂದು ಆಷಾಢಭೂತಿತನದಿಂದ ಹಾನಿಯೇ ಹೆಚ್ಚು. ಬಹಳ ಹಳೆಯದಾದ ‘ಥಿಂಕ್ ಗ್ಲೋಬಲಿ, ಆಕ್ಟ್ ಲೋಕಲಿ’ (ಜಾಗತಿಕವಾಗಿ ಯೋಚಿಸಿ, ಸ್ಥಳೀಯವಾಗಿ ಕ್ರಿಯಾಶೀಲರಾಗಿ) ಈಗಲೂ ಪ್ರಸ್ತುತ.

ಆರ್ಥಿಕತೆ ಪುನರ್ ಕಟ್ಟಿಕೊಳ್ಳುವ ಬಗೆ

ಬಂಡವಾಳ ಹೂಡಿಕೆ ಮಾಡಬಲ್ಲವರೇ ಸಂಪತ್ತನ್ನು ಸೃಷ್ಟಿಸುವವರು ಮತ್ತು ಉದ್ಯೋಗ ಕೊಡುವವರು ಎಂಬ ಥಿಯರಿ ಚಾಲ್ತಿಯಲ್ಲಿದೆ. ತಮ್ಮನ್ನು ತಾವು ಅನ್ನದಾತರು ಎಂದು ಕರೆದುಕೊಂಡು ಕರ್ನಾಟಕದ ಮಾಲೀಕರ ಸಂಘದವರು ಸರ್ಕಾರಕ್ಕೆ ಬರೆದ ಪತ್ರ ನೋಡಿದರೆ ಗೊತ್ತಾಗುತ್ತದೆ. ಆದರೆ, ಬೆಂಗಳೂರಿನಿಂದ ವಲಸೆ ಕಾರ್ಮಿಕರು ಹೊರಹೋಗದಿರಲಿ ಎಂದು ಸರ್ಕಾರದ ಮೇಲೆ ಒತ್ತಡ ಹೇರಿದ್ದ ಬಿಲ್ಡರ್‍ಗಳು ‘ಕಾರ್ಮಿಕರಿಲ್ಲದೇ ಕೆಲಸವಾಗಲ್ಲ’ ಎಂಬುದನ್ನು ನಿರೂಪಿಸಿದ್ದಾರೆ. ‘ನಾವು ಬಡವಾಗುತ್ತಿದ್ದೇವೆ, 8 ಗಂಟೆಯ ಬದಲು 12 ಗಂಟೆ ಕೆಲಸ ಮಾಡಲು ಕಾನೂನು ತಿದ್ದುಪಡಿ ತನ್ನಿ’ ಎಂದು ಹೇಳಿದವರೂ ಸಹಾ ದುಡಿಮೆಗಾರರೇ ಸಂಪತ್ತನ್ನು ಸೃಷ್ಟಿಸುತ್ತಾರೆ ಎಂಬುದಕ್ಕೆ ಸಾಕ್ಷಿ ಒದಗಿಸಿದ್ದಾರೆ.

ಇವರು ದುಡಿಮೆಗಾರರು ಮಾತ್ರವಲ್ಲಾ, ಗ್ರಾಹಕರೂ ಸಹಾ. ಈ ಕೋಟಿ ಕೋಟಿ ಜನ ಅಲ್ಪಸ್ವಲ್ಪ ಕೊಳ್ಳುವಿಕೆಯೇ ಆರ್ಥಿಕತೆಯನ್ನು ತಳದಿಂದ ಮೇಲಿನವರೆಗೆ ಚಾಲ್ತಿಯಲ್ಲಿಡುತ್ತದೆ ಎಂಬುದೂ ಪದೇ ಪದೇ ಸಾಬೀತಾಗುತ್ತಿದೆ. ಹೀಗಿರುವಾಗ ಆರ್ಥಿಕತೆಯನ್ನು ಕಟ್ಟಬೇಕಾದ್ದು ತಳದಿಂದ ಮೇಲಕ್ಕೆ ಎಂಬುದರಲ್ಲಿ ಸಂಶಯವೇ ಇಲ್ಲ. ಈಗ ಬರಬೇಕಿರುವ ಎಲ್ಲಾ ಪ್ಯಾಕೇಜುಗಳು, ನೀತಿ ನಿರೂಪಣೆಗಳು ಅದನ್ನು ಗಮನಕ್ಕೆ ತೆಗೆದುಕೊಳ್ಳಬೇಕು. ಇದುವರೆಗೆ ಕೆಲಸ ಮಾಡದಿರುವ ಮೇಲಿನಿಂದ ಕಟ್ಟುವ ಥಿಯರಿಗಳನ್ನು ಈಗಾದರೂ ಕಸದ ಬುಟ್ಟಿಗೆ ಹಾಕಬೇಕು.

ಮನುಷ್ಯ ನಿರ್ಮಿತ ಜಾತಿ, ಧರ್ಮಗಳನ್ನು ನಿವಾರಿಸಿಕೊಂಡು ಮನುಷ್ಯರಾಗುವುದು

ವೈರಸ್ಸು ಪ್ರಾಣಿಗಳನ್ನೂ, ಪ್ರಾಣಿಗಳ ನಂತರ ಮನುಷ್ಯರನ್ನೂ ಆವರಿಸಿಕೊಳ್ಳುತ್ತಿದೆ. ಪ್ರಾಣಿ ಸಂಕುಲವನ್ನೇ ಬಿಡದೇ ಇರುವುದು, ಮನುಷ್ಯರನ್ನೆಲ್ಲಾ ಒಂದು ಪ್ರಬೇಧದಂತೆ ಪರಿಗಣಿಸುತ್ತದೆ ಅಷ್ಟೇ. ಒಂದೇ ಧರ್ಮದವರು ವಾಸಿಸುವ ಕೆಲವು ದೇಶಗಳು ಅತ್ಯುತ್ತಮವಾಗಿ ಈ ಸಂದರ್ಭವನ್ನು ನಿಭಾಯಿಸಿದ್ದರೆ, ಅದೇ ಧರ್ಮದವರು ಇರುವ ಇನ್ನೊಂದು ದೇಶ ಇಕ್ಕಟ್ಟಿಗೆ ಸಿಕ್ಕಿದೆ. ಘಟನೆಯೊಂದನ್ನು ಇಟ್ಟುಕೊಂಡು ನಿರ್ದಿಷ್ಟ ಸಮುದಾಯವೊಂದನ್ನು ಗುರಿಯಾಗಿಸಿದರೆ, ಇನ್ನೊಂದು ಘಟನೆ ಇಟ್ಟುಕೊಂಡು ಮತ್ತೊಂದು ಸಮುದಾಯವನ್ನೂ ದೂಷಿಸಬಹುದು. ಅಂತಿಮವಾಗಿ ಪ್ರಚಾರ ಯುದ್ಧದಲ್ಲಿ ಯಾರು ಗಟ್ಟಿಯೋ ಅವರ ಕೈ ಮೇಲಾಗಲೂಬಹುದು. ಆದರೆ ವೈರಸ್ ಪ್ರಚಾರಕ್ಕೆ ತಕ್ಕಂತೆ ಹರಡುವುದಿಲ್ಲ. ಅದಕ್ಕೆ ಕಣ್ಣು, ಕಿವಿಗಳಿರುವ ಕುರಿತು ಪುರಾವೆಗಳಿಲ್ಲ. ಹಾಗಾಗಿ ಜಾತಿ, ಧರ್ಮಗಳ ಗೋಡೆಗಳು ಹಾಗೂ ತಾರತಮ್ಯಗಳನ್ನು ನಿವಾರಿಸಿಕೊಳ್ಳುವ ಕುರಿತು ಮನುಷ್ಯರು ಆಲೋಚಿಸಲು ಈ ಸಂದರ್ಭ ಕಾರಣವಾಗಬಹುದೇ?

ಬದುಕನ್ನು ನೋಡುವ ದೃಷ್ಟಿಕೋನದಲ್ಲಿ ಮೂಲಭೂತ ಬದಲಾವಣೆ

ಅಗೋಚರವಾದ ಅರೆಜೀವಿಯೊಂದು ನಮ್ಮನ್ನು ಹೀಗೆಲ್ಲಾ ಮಾಡಬಹುದಾದರೆ ಬದುಕಿರುವಷ್ಟು ದಿನ ಏನು ಮಾಡಬೇಕೆಂದು ಮನುಷ್ಯರು ಯೋಚಿಸಬೇಕಲ್ಲವೇ? ಬ್ರಹ್ಮಾಂಡವೆಲ್ಲವನ್ನೂ ಶೋಧಿಸಿ, ಪಾತಾಳವನ್ನೂ ಬಗೆದು ಸಾಮ್ರಾಜ್ಯ ವಿಸ್ತರಿಸುತ್ತಿರುವ ಮನುಷ್ಯರು ಇಷ್ಟು ಕ್ಷುಲ್ಲಕವಾಗಿ ಸೋತು ನಿಂತಿದ್ದಾರೆ. ಈ ಕ್ಷಣದವರೆಗೂ ಕೊರೊನಾ ಸೋಂಕನ್ನು ಹೀಗ್ಹೀಗೇ ನಿಭಾಯಿಸಲು ಸಾಧ್ಯ ಎಂಬ ಅಂತಿಮ ಷರಾ ಬರೆಯಲು ಯಾವ ದೇಶಕ್ಕೂ ಆಗಿಲ್ಲ. ಮಹಾಮಹಿಮರೂ ಊಹೆಗಳನ್ನು ಮಾಡುತ್ತಿದ್ದಾರೆ. ಭಾರೀ ಭಾರೀ ತಜ್ಞರೂ ವಿರುದ್ಧ ದಿಕ್ಕಿನ ನಿರ್ಣಯಗಳನ್ನು ಘೋಷಿಸುತ್ತಿದ್ದಾರೆ. ಮಾಸ್ಕ್‍ನ ಅಗತ್ಯವಿಲ್ಲ; ಮಾಸ್ಕೇ ಮೂಲಮಂತ್ರ. ಲಾಕ್‍ಡೌನ್ ಏಕೈಕ ಪರಿಹಾರ; ಲಾಕ್‍ಡೌನ್‍ನಿಂದ ನಷ್ಟವೇ ಹೆಚ್ಚು. ಒಂದೇ ವಾತಾವರಣವಿರುವ ಎರಡು ದೇಶಗಳ ಮಧ್ಯೆ ವೈರಸ್ ಭಿನ್ನ ರೀತಿಯಲ್ಲಿ ವರ್ತಿಸುತ್ತಿರುವುದಕ್ಕೆ ಇದು ಕಾರಣ; ಅಲ್ಲ ಅದು ಕಾರಣವಲ್ಲ. ಕೇವಲ ಕಪ್ಪು ಬಿಳುಪು ಮಾತ್ರವಲ್ಲದೇ, ವಿವಿಧ ವರ್ಣಗಳ ವೈರುಧ್ಯಗಳೂ ಇವೆ.

ಅಂದ ಮೇಲೆ, ಮನುಷ್ಯ ಸಮಾಜದ ಸಾವಿರಾರು ವರ್ಷಗಳ ಜ್ಞಾನಕ್ಕೆ ಈ ಪರಿ ಮಿತಿಯಿದೆಯೇ? ಇದು ಎಲ್ಲರಲ್ಲಿ ವಿನಮ್ರ ಭಾವವೊಂದನ್ನು ಮೂಡಿಸಿದರೆ ಪ್ರಕೃತಿಯೊಂದಿಗೆ ಸೇರಿ ಬಾಳುವ ಹೊಸ ನಾಗರಿಕತೆಯತ್ತ ಪ್ರಪಂಚವನ್ನು ಕರೆದೊಯ್ಯಬಹುದು.

ಆದರೆ ಇವೆಲ್ಲಕ್ಕೂ ಈ ದಿಕ್ಕಿನತ್ತ ಮನಸ್ಸು ಮಾಡಬೇಕು. ಇಲ್ಲದಿದ್ದರೆ ವಿನಾಶದ ಮತ್ತೊಂದು ದಾರಿಯತ್ತಲೂ ಹೋಗುವ ಅವಕಾಶ ಹೇಗೂ ಇದ್ದೇ ಇದೆ. ಹೆಚ್ಚಿನ ಜನರು ಮನುಷ್ಯರಾಗಿ ಯೋಚಿಸುತ್ತಾರೆಂದು ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....