Homeಅಂಕಣಗಳುಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ...!

ಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ…!

- Advertisement -
- Advertisement -

ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟು ಎಂಬ ಪದಪುಂಜ ಅಷ್ಟು ಸರಿಯಲ್ಲ. ಕೊರೊನಾ ಸೋಂಕು ಉದ್ಭವವಾದಾಗ ಅದನ್ನು ನಿಭಾಯಿಸಲಾಗದಂತೆ ನಾವುಗಳು ಸೃಷ್ಟಿಸಿಕೊಂಡಿದ್ದ ಇಕ್ಕಟ್ಟು ಮೂಲ ಸಮಸ್ಯೆಯಾಗಿತ್ತು. ಹಾಗಾಗಿ ಕಣ್ಣಿಗೆ ಕಾಣದ ಮತ್ತು ಪೂರ್ಣ ಜೀವಿಯೂ ಅಲ್ಲದ ವೈರಸ್ ಇಷ್ಟೆಲ್ಲಾ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿತು. ಅಂದರೆ ಇದು ವೈರಸ್‍ನ ಶಕ್ತಿ ಎನ್ನುವುದಕ್ಕಿಂತ ನಮ್ಮ ದೌರ್ಬಲ್ಯ ಇದಕ್ಕೆಲ್ಲಾ ಕಾರಣವಾಯಿತು. ಈ ಕುರಿತು ಮತ್ತಷ್ಟು ಆಳ ಹಾಗೂ ಒಳನೋಟಗಳನ್ನು ಹೆಕ್ಕುವ ಅಗತ್ಯವಿದೆ. ಆದರೆ, ಇಂದು ಕೊರೊನಾ ಇನ್ನೂ ವ್ಯಾಪಕವಾಗುತ್ತಿರುವಾಗಲೇ ‘ಪುನರ್ ನಿರ್ಮಾಣ’ದ ಕೆಲಸವೂ ಶುರುವಾಗಬೇಕಿರುವುದರಿಂದ ಕೆಲವು ಪ್ರಾಥಮಿಕ ಅನಿಸಿಕೆಗಳನ್ನು ಹಂಚಿಕೊಳ್ಳಬೇಕೆನಿಸಿದೆ.

ನಾವು ಮನಸ್ಸು ಮಾಡಿದಲ್ಲಿ ಈ ಸಂದರ್ಭವನ್ನೇ ನಮ್ಮ ದೌರ್ಬಲ್ಯಗಳನ್ನು ಮೆಟ್ಟಿ ನಿಲ್ಲುವ ಸದವಕಾಶವನ್ನಾಗಿ ಪರಿವರ್ತಿಸಿಕೊಳ್ಳಲು ಸಾಧ್ಯ.

ಲೋಕಲ್, ಗ್ಲೋಬಲ್ ನಡುವೆ ಇರಬೇಕಾದ ಸಮತೋಲನ

ಮೊನ್ನೆ ಮಾತನಾಡುವಾಗ ಪ್ರಧಾನಿಗಳು ಹೇಳಿದ್ದರಲ್ಲಿ ತಪ್ಪೇನಿಲ್ಲ. ಆದರೆ ಸ್ಥಳೀಯವಾದುದರ ಕುರಿತು ಮಾತು ಹೆಚ್ಚು; ಮಾಡುವುದೆಲ್ಲಾ ಅದಕ್ಕೆ ತದ್ವಿರುದ್ಧ ಎನ್ನುವುದು ಪ್ರಧಾನಿಗಳಿಗೆ ಮಾತ್ರ ಸೀಮಿತ ವಲ್ಲ. ಅದನ್ನು ನಾವೆಲ್ಲರೂ ಮಾಡುತ್ತಿದ್ದೇವೆ. ಜೊತೆಗೆ ನಮ್ಮದು 100% ಲೋಕಲ್ ಎಂದು ಹೇಳುವ ಸಾಧ್ಯತೆಯೂ ಇರದಾಗ, ಎರಡರ ನಡುವೆ ಇರಬೇಕಾದ ಸಮತೋಲನದ ಬಗ್ಗೆ ಚರ್ಚಿಸಿಕೊಂಡು ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಹಾಗೆ ಮಾಡದೇ ಹೇಳೋದೊಂದು ಮಾಡೋದೊಂದು ಆಷಾಢಭೂತಿತನದಿಂದ ಹಾನಿಯೇ ಹೆಚ್ಚು. ಬಹಳ ಹಳೆಯದಾದ ‘ಥಿಂಕ್ ಗ್ಲೋಬಲಿ, ಆಕ್ಟ್ ಲೋಕಲಿ’ (ಜಾಗತಿಕವಾಗಿ ಯೋಚಿಸಿ, ಸ್ಥಳೀಯವಾಗಿ ಕ್ರಿಯಾಶೀಲರಾಗಿ) ಈಗಲೂ ಪ್ರಸ್ತುತ.

ಆರ್ಥಿಕತೆ ಪುನರ್ ಕಟ್ಟಿಕೊಳ್ಳುವ ಬಗೆ

ಬಂಡವಾಳ ಹೂಡಿಕೆ ಮಾಡಬಲ್ಲವರೇ ಸಂಪತ್ತನ್ನು ಸೃಷ್ಟಿಸುವವರು ಮತ್ತು ಉದ್ಯೋಗ ಕೊಡುವವರು ಎಂಬ ಥಿಯರಿ ಚಾಲ್ತಿಯಲ್ಲಿದೆ. ತಮ್ಮನ್ನು ತಾವು ಅನ್ನದಾತರು ಎಂದು ಕರೆದುಕೊಂಡು ಕರ್ನಾಟಕದ ಮಾಲೀಕರ ಸಂಘದವರು ಸರ್ಕಾರಕ್ಕೆ ಬರೆದ ಪತ್ರ ನೋಡಿದರೆ ಗೊತ್ತಾಗುತ್ತದೆ. ಆದರೆ, ಬೆಂಗಳೂರಿನಿಂದ ವಲಸೆ ಕಾರ್ಮಿಕರು ಹೊರಹೋಗದಿರಲಿ ಎಂದು ಸರ್ಕಾರದ ಮೇಲೆ ಒತ್ತಡ ಹೇರಿದ್ದ ಬಿಲ್ಡರ್‍ಗಳು ‘ಕಾರ್ಮಿಕರಿಲ್ಲದೇ ಕೆಲಸವಾಗಲ್ಲ’ ಎಂಬುದನ್ನು ನಿರೂಪಿಸಿದ್ದಾರೆ. ‘ನಾವು ಬಡವಾಗುತ್ತಿದ್ದೇವೆ, 8 ಗಂಟೆಯ ಬದಲು 12 ಗಂಟೆ ಕೆಲಸ ಮಾಡಲು ಕಾನೂನು ತಿದ್ದುಪಡಿ ತನ್ನಿ’ ಎಂದು ಹೇಳಿದವರೂ ಸಹಾ ದುಡಿಮೆಗಾರರೇ ಸಂಪತ್ತನ್ನು ಸೃಷ್ಟಿಸುತ್ತಾರೆ ಎಂಬುದಕ್ಕೆ ಸಾಕ್ಷಿ ಒದಗಿಸಿದ್ದಾರೆ.

ಇವರು ದುಡಿಮೆಗಾರರು ಮಾತ್ರವಲ್ಲಾ, ಗ್ರಾಹಕರೂ ಸಹಾ. ಈ ಕೋಟಿ ಕೋಟಿ ಜನ ಅಲ್ಪಸ್ವಲ್ಪ ಕೊಳ್ಳುವಿಕೆಯೇ ಆರ್ಥಿಕತೆಯನ್ನು ತಳದಿಂದ ಮೇಲಿನವರೆಗೆ ಚಾಲ್ತಿಯಲ್ಲಿಡುತ್ತದೆ ಎಂಬುದೂ ಪದೇ ಪದೇ ಸಾಬೀತಾಗುತ್ತಿದೆ. ಹೀಗಿರುವಾಗ ಆರ್ಥಿಕತೆಯನ್ನು ಕಟ್ಟಬೇಕಾದ್ದು ತಳದಿಂದ ಮೇಲಕ್ಕೆ ಎಂಬುದರಲ್ಲಿ ಸಂಶಯವೇ ಇಲ್ಲ. ಈಗ ಬರಬೇಕಿರುವ ಎಲ್ಲಾ ಪ್ಯಾಕೇಜುಗಳು, ನೀತಿ ನಿರೂಪಣೆಗಳು ಅದನ್ನು ಗಮನಕ್ಕೆ ತೆಗೆದುಕೊಳ್ಳಬೇಕು. ಇದುವರೆಗೆ ಕೆಲಸ ಮಾಡದಿರುವ ಮೇಲಿನಿಂದ ಕಟ್ಟುವ ಥಿಯರಿಗಳನ್ನು ಈಗಾದರೂ ಕಸದ ಬುಟ್ಟಿಗೆ ಹಾಕಬೇಕು.

ಮನುಷ್ಯ ನಿರ್ಮಿತ ಜಾತಿ, ಧರ್ಮಗಳನ್ನು ನಿವಾರಿಸಿಕೊಂಡು ಮನುಷ್ಯರಾಗುವುದು

ವೈರಸ್ಸು ಪ್ರಾಣಿಗಳನ್ನೂ, ಪ್ರಾಣಿಗಳ ನಂತರ ಮನುಷ್ಯರನ್ನೂ ಆವರಿಸಿಕೊಳ್ಳುತ್ತಿದೆ. ಪ್ರಾಣಿ ಸಂಕುಲವನ್ನೇ ಬಿಡದೇ ಇರುವುದು, ಮನುಷ್ಯರನ್ನೆಲ್ಲಾ ಒಂದು ಪ್ರಬೇಧದಂತೆ ಪರಿಗಣಿಸುತ್ತದೆ ಅಷ್ಟೇ. ಒಂದೇ ಧರ್ಮದವರು ವಾಸಿಸುವ ಕೆಲವು ದೇಶಗಳು ಅತ್ಯುತ್ತಮವಾಗಿ ಈ ಸಂದರ್ಭವನ್ನು ನಿಭಾಯಿಸಿದ್ದರೆ, ಅದೇ ಧರ್ಮದವರು ಇರುವ ಇನ್ನೊಂದು ದೇಶ ಇಕ್ಕಟ್ಟಿಗೆ ಸಿಕ್ಕಿದೆ. ಘಟನೆಯೊಂದನ್ನು ಇಟ್ಟುಕೊಂಡು ನಿರ್ದಿಷ್ಟ ಸಮುದಾಯವೊಂದನ್ನು ಗುರಿಯಾಗಿಸಿದರೆ, ಇನ್ನೊಂದು ಘಟನೆ ಇಟ್ಟುಕೊಂಡು ಮತ್ತೊಂದು ಸಮುದಾಯವನ್ನೂ ದೂಷಿಸಬಹುದು. ಅಂತಿಮವಾಗಿ ಪ್ರಚಾರ ಯುದ್ಧದಲ್ಲಿ ಯಾರು ಗಟ್ಟಿಯೋ ಅವರ ಕೈ ಮೇಲಾಗಲೂಬಹುದು. ಆದರೆ ವೈರಸ್ ಪ್ರಚಾರಕ್ಕೆ ತಕ್ಕಂತೆ ಹರಡುವುದಿಲ್ಲ. ಅದಕ್ಕೆ ಕಣ್ಣು, ಕಿವಿಗಳಿರುವ ಕುರಿತು ಪುರಾವೆಗಳಿಲ್ಲ. ಹಾಗಾಗಿ ಜಾತಿ, ಧರ್ಮಗಳ ಗೋಡೆಗಳು ಹಾಗೂ ತಾರತಮ್ಯಗಳನ್ನು ನಿವಾರಿಸಿಕೊಳ್ಳುವ ಕುರಿತು ಮನುಷ್ಯರು ಆಲೋಚಿಸಲು ಈ ಸಂದರ್ಭ ಕಾರಣವಾಗಬಹುದೇ?

ಬದುಕನ್ನು ನೋಡುವ ದೃಷ್ಟಿಕೋನದಲ್ಲಿ ಮೂಲಭೂತ ಬದಲಾವಣೆ

ಅಗೋಚರವಾದ ಅರೆಜೀವಿಯೊಂದು ನಮ್ಮನ್ನು ಹೀಗೆಲ್ಲಾ ಮಾಡಬಹುದಾದರೆ ಬದುಕಿರುವಷ್ಟು ದಿನ ಏನು ಮಾಡಬೇಕೆಂದು ಮನುಷ್ಯರು ಯೋಚಿಸಬೇಕಲ್ಲವೇ? ಬ್ರಹ್ಮಾಂಡವೆಲ್ಲವನ್ನೂ ಶೋಧಿಸಿ, ಪಾತಾಳವನ್ನೂ ಬಗೆದು ಸಾಮ್ರಾಜ್ಯ ವಿಸ್ತರಿಸುತ್ತಿರುವ ಮನುಷ್ಯರು ಇಷ್ಟು ಕ್ಷುಲ್ಲಕವಾಗಿ ಸೋತು ನಿಂತಿದ್ದಾರೆ. ಈ ಕ್ಷಣದವರೆಗೂ ಕೊರೊನಾ ಸೋಂಕನ್ನು ಹೀಗ್ಹೀಗೇ ನಿಭಾಯಿಸಲು ಸಾಧ್ಯ ಎಂಬ ಅಂತಿಮ ಷರಾ ಬರೆಯಲು ಯಾವ ದೇಶಕ್ಕೂ ಆಗಿಲ್ಲ. ಮಹಾಮಹಿಮರೂ ಊಹೆಗಳನ್ನು ಮಾಡುತ್ತಿದ್ದಾರೆ. ಭಾರೀ ಭಾರೀ ತಜ್ಞರೂ ವಿರುದ್ಧ ದಿಕ್ಕಿನ ನಿರ್ಣಯಗಳನ್ನು ಘೋಷಿಸುತ್ತಿದ್ದಾರೆ. ಮಾಸ್ಕ್‍ನ ಅಗತ್ಯವಿಲ್ಲ; ಮಾಸ್ಕೇ ಮೂಲಮಂತ್ರ. ಲಾಕ್‍ಡೌನ್ ಏಕೈಕ ಪರಿಹಾರ; ಲಾಕ್‍ಡೌನ್‍ನಿಂದ ನಷ್ಟವೇ ಹೆಚ್ಚು. ಒಂದೇ ವಾತಾವರಣವಿರುವ ಎರಡು ದೇಶಗಳ ಮಧ್ಯೆ ವೈರಸ್ ಭಿನ್ನ ರೀತಿಯಲ್ಲಿ ವರ್ತಿಸುತ್ತಿರುವುದಕ್ಕೆ ಇದು ಕಾರಣ; ಅಲ್ಲ ಅದು ಕಾರಣವಲ್ಲ. ಕೇವಲ ಕಪ್ಪು ಬಿಳುಪು ಮಾತ್ರವಲ್ಲದೇ, ವಿವಿಧ ವರ್ಣಗಳ ವೈರುಧ್ಯಗಳೂ ಇವೆ.

ಅಂದ ಮೇಲೆ, ಮನುಷ್ಯ ಸಮಾಜದ ಸಾವಿರಾರು ವರ್ಷಗಳ ಜ್ಞಾನಕ್ಕೆ ಈ ಪರಿ ಮಿತಿಯಿದೆಯೇ? ಇದು ಎಲ್ಲರಲ್ಲಿ ವಿನಮ್ರ ಭಾವವೊಂದನ್ನು ಮೂಡಿಸಿದರೆ ಪ್ರಕೃತಿಯೊಂದಿಗೆ ಸೇರಿ ಬಾಳುವ ಹೊಸ ನಾಗರಿಕತೆಯತ್ತ ಪ್ರಪಂಚವನ್ನು ಕರೆದೊಯ್ಯಬಹುದು.

ಆದರೆ ಇವೆಲ್ಲಕ್ಕೂ ಈ ದಿಕ್ಕಿನತ್ತ ಮನಸ್ಸು ಮಾಡಬೇಕು. ಇಲ್ಲದಿದ್ದರೆ ವಿನಾಶದ ಮತ್ತೊಂದು ದಾರಿಯತ್ತಲೂ ಹೋಗುವ ಅವಕಾಶ ಹೇಗೂ ಇದ್ದೇ ಇದೆ. ಹೆಚ್ಚಿನ ಜನರು ಮನುಷ್ಯರಾಗಿ ಯೋಚಿಸುತ್ತಾರೆಂದು ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...