Homeಅಂಕಣಗಳುಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ...!

ಈ ಸಂದರ್ಭ ಒಂದು ತಿರುವು ಬಿಂದುವಾಗಬಲ್ಲುದು, ಮನಸ್ಸು ಮಾಡಿದರೆ…!

- Advertisement -
- Advertisement -

ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟು ಎಂಬ ಪದಪುಂಜ ಅಷ್ಟು ಸರಿಯಲ್ಲ. ಕೊರೊನಾ ಸೋಂಕು ಉದ್ಭವವಾದಾಗ ಅದನ್ನು ನಿಭಾಯಿಸಲಾಗದಂತೆ ನಾವುಗಳು ಸೃಷ್ಟಿಸಿಕೊಂಡಿದ್ದ ಇಕ್ಕಟ್ಟು ಮೂಲ ಸಮಸ್ಯೆಯಾಗಿತ್ತು. ಹಾಗಾಗಿ ಕಣ್ಣಿಗೆ ಕಾಣದ ಮತ್ತು ಪೂರ್ಣ ಜೀವಿಯೂ ಅಲ್ಲದ ವೈರಸ್ ಇಷ್ಟೆಲ್ಲಾ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿತು. ಅಂದರೆ ಇದು ವೈರಸ್‍ನ ಶಕ್ತಿ ಎನ್ನುವುದಕ್ಕಿಂತ ನಮ್ಮ ದೌರ್ಬಲ್ಯ ಇದಕ್ಕೆಲ್ಲಾ ಕಾರಣವಾಯಿತು. ಈ ಕುರಿತು ಮತ್ತಷ್ಟು ಆಳ ಹಾಗೂ ಒಳನೋಟಗಳನ್ನು ಹೆಕ್ಕುವ ಅಗತ್ಯವಿದೆ. ಆದರೆ, ಇಂದು ಕೊರೊನಾ ಇನ್ನೂ ವ್ಯಾಪಕವಾಗುತ್ತಿರುವಾಗಲೇ ‘ಪುನರ್ ನಿರ್ಮಾಣ’ದ ಕೆಲಸವೂ ಶುರುವಾಗಬೇಕಿರುವುದರಿಂದ ಕೆಲವು ಪ್ರಾಥಮಿಕ ಅನಿಸಿಕೆಗಳನ್ನು ಹಂಚಿಕೊಳ್ಳಬೇಕೆನಿಸಿದೆ.

ನಾವು ಮನಸ್ಸು ಮಾಡಿದಲ್ಲಿ ಈ ಸಂದರ್ಭವನ್ನೇ ನಮ್ಮ ದೌರ್ಬಲ್ಯಗಳನ್ನು ಮೆಟ್ಟಿ ನಿಲ್ಲುವ ಸದವಕಾಶವನ್ನಾಗಿ ಪರಿವರ್ತಿಸಿಕೊಳ್ಳಲು ಸಾಧ್ಯ.

ಲೋಕಲ್, ಗ್ಲೋಬಲ್ ನಡುವೆ ಇರಬೇಕಾದ ಸಮತೋಲನ

ಮೊನ್ನೆ ಮಾತನಾಡುವಾಗ ಪ್ರಧಾನಿಗಳು ಹೇಳಿದ್ದರಲ್ಲಿ ತಪ್ಪೇನಿಲ್ಲ. ಆದರೆ ಸ್ಥಳೀಯವಾದುದರ ಕುರಿತು ಮಾತು ಹೆಚ್ಚು; ಮಾಡುವುದೆಲ್ಲಾ ಅದಕ್ಕೆ ತದ್ವಿರುದ್ಧ ಎನ್ನುವುದು ಪ್ರಧಾನಿಗಳಿಗೆ ಮಾತ್ರ ಸೀಮಿತ ವಲ್ಲ. ಅದನ್ನು ನಾವೆಲ್ಲರೂ ಮಾಡುತ್ತಿದ್ದೇವೆ. ಜೊತೆಗೆ ನಮ್ಮದು 100% ಲೋಕಲ್ ಎಂದು ಹೇಳುವ ಸಾಧ್ಯತೆಯೂ ಇರದಾಗ, ಎರಡರ ನಡುವೆ ಇರಬೇಕಾದ ಸಮತೋಲನದ ಬಗ್ಗೆ ಚರ್ಚಿಸಿಕೊಂಡು ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಹಾಗೆ ಮಾಡದೇ ಹೇಳೋದೊಂದು ಮಾಡೋದೊಂದು ಆಷಾಢಭೂತಿತನದಿಂದ ಹಾನಿಯೇ ಹೆಚ್ಚು. ಬಹಳ ಹಳೆಯದಾದ ‘ಥಿಂಕ್ ಗ್ಲೋಬಲಿ, ಆಕ್ಟ್ ಲೋಕಲಿ’ (ಜಾಗತಿಕವಾಗಿ ಯೋಚಿಸಿ, ಸ್ಥಳೀಯವಾಗಿ ಕ್ರಿಯಾಶೀಲರಾಗಿ) ಈಗಲೂ ಪ್ರಸ್ತುತ.

ಆರ್ಥಿಕತೆ ಪುನರ್ ಕಟ್ಟಿಕೊಳ್ಳುವ ಬಗೆ

ಬಂಡವಾಳ ಹೂಡಿಕೆ ಮಾಡಬಲ್ಲವರೇ ಸಂಪತ್ತನ್ನು ಸೃಷ್ಟಿಸುವವರು ಮತ್ತು ಉದ್ಯೋಗ ಕೊಡುವವರು ಎಂಬ ಥಿಯರಿ ಚಾಲ್ತಿಯಲ್ಲಿದೆ. ತಮ್ಮನ್ನು ತಾವು ಅನ್ನದಾತರು ಎಂದು ಕರೆದುಕೊಂಡು ಕರ್ನಾಟಕದ ಮಾಲೀಕರ ಸಂಘದವರು ಸರ್ಕಾರಕ್ಕೆ ಬರೆದ ಪತ್ರ ನೋಡಿದರೆ ಗೊತ್ತಾಗುತ್ತದೆ. ಆದರೆ, ಬೆಂಗಳೂರಿನಿಂದ ವಲಸೆ ಕಾರ್ಮಿಕರು ಹೊರಹೋಗದಿರಲಿ ಎಂದು ಸರ್ಕಾರದ ಮೇಲೆ ಒತ್ತಡ ಹೇರಿದ್ದ ಬಿಲ್ಡರ್‍ಗಳು ‘ಕಾರ್ಮಿಕರಿಲ್ಲದೇ ಕೆಲಸವಾಗಲ್ಲ’ ಎಂಬುದನ್ನು ನಿರೂಪಿಸಿದ್ದಾರೆ. ‘ನಾವು ಬಡವಾಗುತ್ತಿದ್ದೇವೆ, 8 ಗಂಟೆಯ ಬದಲು 12 ಗಂಟೆ ಕೆಲಸ ಮಾಡಲು ಕಾನೂನು ತಿದ್ದುಪಡಿ ತನ್ನಿ’ ಎಂದು ಹೇಳಿದವರೂ ಸಹಾ ದುಡಿಮೆಗಾರರೇ ಸಂಪತ್ತನ್ನು ಸೃಷ್ಟಿಸುತ್ತಾರೆ ಎಂಬುದಕ್ಕೆ ಸಾಕ್ಷಿ ಒದಗಿಸಿದ್ದಾರೆ.

ಇವರು ದುಡಿಮೆಗಾರರು ಮಾತ್ರವಲ್ಲಾ, ಗ್ರಾಹಕರೂ ಸಹಾ. ಈ ಕೋಟಿ ಕೋಟಿ ಜನ ಅಲ್ಪಸ್ವಲ್ಪ ಕೊಳ್ಳುವಿಕೆಯೇ ಆರ್ಥಿಕತೆಯನ್ನು ತಳದಿಂದ ಮೇಲಿನವರೆಗೆ ಚಾಲ್ತಿಯಲ್ಲಿಡುತ್ತದೆ ಎಂಬುದೂ ಪದೇ ಪದೇ ಸಾಬೀತಾಗುತ್ತಿದೆ. ಹೀಗಿರುವಾಗ ಆರ್ಥಿಕತೆಯನ್ನು ಕಟ್ಟಬೇಕಾದ್ದು ತಳದಿಂದ ಮೇಲಕ್ಕೆ ಎಂಬುದರಲ್ಲಿ ಸಂಶಯವೇ ಇಲ್ಲ. ಈಗ ಬರಬೇಕಿರುವ ಎಲ್ಲಾ ಪ್ಯಾಕೇಜುಗಳು, ನೀತಿ ನಿರೂಪಣೆಗಳು ಅದನ್ನು ಗಮನಕ್ಕೆ ತೆಗೆದುಕೊಳ್ಳಬೇಕು. ಇದುವರೆಗೆ ಕೆಲಸ ಮಾಡದಿರುವ ಮೇಲಿನಿಂದ ಕಟ್ಟುವ ಥಿಯರಿಗಳನ್ನು ಈಗಾದರೂ ಕಸದ ಬುಟ್ಟಿಗೆ ಹಾಕಬೇಕು.

ಮನುಷ್ಯ ನಿರ್ಮಿತ ಜಾತಿ, ಧರ್ಮಗಳನ್ನು ನಿವಾರಿಸಿಕೊಂಡು ಮನುಷ್ಯರಾಗುವುದು

ವೈರಸ್ಸು ಪ್ರಾಣಿಗಳನ್ನೂ, ಪ್ರಾಣಿಗಳ ನಂತರ ಮನುಷ್ಯರನ್ನೂ ಆವರಿಸಿಕೊಳ್ಳುತ್ತಿದೆ. ಪ್ರಾಣಿ ಸಂಕುಲವನ್ನೇ ಬಿಡದೇ ಇರುವುದು, ಮನುಷ್ಯರನ್ನೆಲ್ಲಾ ಒಂದು ಪ್ರಬೇಧದಂತೆ ಪರಿಗಣಿಸುತ್ತದೆ ಅಷ್ಟೇ. ಒಂದೇ ಧರ್ಮದವರು ವಾಸಿಸುವ ಕೆಲವು ದೇಶಗಳು ಅತ್ಯುತ್ತಮವಾಗಿ ಈ ಸಂದರ್ಭವನ್ನು ನಿಭಾಯಿಸಿದ್ದರೆ, ಅದೇ ಧರ್ಮದವರು ಇರುವ ಇನ್ನೊಂದು ದೇಶ ಇಕ್ಕಟ್ಟಿಗೆ ಸಿಕ್ಕಿದೆ. ಘಟನೆಯೊಂದನ್ನು ಇಟ್ಟುಕೊಂಡು ನಿರ್ದಿಷ್ಟ ಸಮುದಾಯವೊಂದನ್ನು ಗುರಿಯಾಗಿಸಿದರೆ, ಇನ್ನೊಂದು ಘಟನೆ ಇಟ್ಟುಕೊಂಡು ಮತ್ತೊಂದು ಸಮುದಾಯವನ್ನೂ ದೂಷಿಸಬಹುದು. ಅಂತಿಮವಾಗಿ ಪ್ರಚಾರ ಯುದ್ಧದಲ್ಲಿ ಯಾರು ಗಟ್ಟಿಯೋ ಅವರ ಕೈ ಮೇಲಾಗಲೂಬಹುದು. ಆದರೆ ವೈರಸ್ ಪ್ರಚಾರಕ್ಕೆ ತಕ್ಕಂತೆ ಹರಡುವುದಿಲ್ಲ. ಅದಕ್ಕೆ ಕಣ್ಣು, ಕಿವಿಗಳಿರುವ ಕುರಿತು ಪುರಾವೆಗಳಿಲ್ಲ. ಹಾಗಾಗಿ ಜಾತಿ, ಧರ್ಮಗಳ ಗೋಡೆಗಳು ಹಾಗೂ ತಾರತಮ್ಯಗಳನ್ನು ನಿವಾರಿಸಿಕೊಳ್ಳುವ ಕುರಿತು ಮನುಷ್ಯರು ಆಲೋಚಿಸಲು ಈ ಸಂದರ್ಭ ಕಾರಣವಾಗಬಹುದೇ?

ಬದುಕನ್ನು ನೋಡುವ ದೃಷ್ಟಿಕೋನದಲ್ಲಿ ಮೂಲಭೂತ ಬದಲಾವಣೆ

ಅಗೋಚರವಾದ ಅರೆಜೀವಿಯೊಂದು ನಮ್ಮನ್ನು ಹೀಗೆಲ್ಲಾ ಮಾಡಬಹುದಾದರೆ ಬದುಕಿರುವಷ್ಟು ದಿನ ಏನು ಮಾಡಬೇಕೆಂದು ಮನುಷ್ಯರು ಯೋಚಿಸಬೇಕಲ್ಲವೇ? ಬ್ರಹ್ಮಾಂಡವೆಲ್ಲವನ್ನೂ ಶೋಧಿಸಿ, ಪಾತಾಳವನ್ನೂ ಬಗೆದು ಸಾಮ್ರಾಜ್ಯ ವಿಸ್ತರಿಸುತ್ತಿರುವ ಮನುಷ್ಯರು ಇಷ್ಟು ಕ್ಷುಲ್ಲಕವಾಗಿ ಸೋತು ನಿಂತಿದ್ದಾರೆ. ಈ ಕ್ಷಣದವರೆಗೂ ಕೊರೊನಾ ಸೋಂಕನ್ನು ಹೀಗ್ಹೀಗೇ ನಿಭಾಯಿಸಲು ಸಾಧ್ಯ ಎಂಬ ಅಂತಿಮ ಷರಾ ಬರೆಯಲು ಯಾವ ದೇಶಕ್ಕೂ ಆಗಿಲ್ಲ. ಮಹಾಮಹಿಮರೂ ಊಹೆಗಳನ್ನು ಮಾಡುತ್ತಿದ್ದಾರೆ. ಭಾರೀ ಭಾರೀ ತಜ್ಞರೂ ವಿರುದ್ಧ ದಿಕ್ಕಿನ ನಿರ್ಣಯಗಳನ್ನು ಘೋಷಿಸುತ್ತಿದ್ದಾರೆ. ಮಾಸ್ಕ್‍ನ ಅಗತ್ಯವಿಲ್ಲ; ಮಾಸ್ಕೇ ಮೂಲಮಂತ್ರ. ಲಾಕ್‍ಡೌನ್ ಏಕೈಕ ಪರಿಹಾರ; ಲಾಕ್‍ಡೌನ್‍ನಿಂದ ನಷ್ಟವೇ ಹೆಚ್ಚು. ಒಂದೇ ವಾತಾವರಣವಿರುವ ಎರಡು ದೇಶಗಳ ಮಧ್ಯೆ ವೈರಸ್ ಭಿನ್ನ ರೀತಿಯಲ್ಲಿ ವರ್ತಿಸುತ್ತಿರುವುದಕ್ಕೆ ಇದು ಕಾರಣ; ಅಲ್ಲ ಅದು ಕಾರಣವಲ್ಲ. ಕೇವಲ ಕಪ್ಪು ಬಿಳುಪು ಮಾತ್ರವಲ್ಲದೇ, ವಿವಿಧ ವರ್ಣಗಳ ವೈರುಧ್ಯಗಳೂ ಇವೆ.

ಅಂದ ಮೇಲೆ, ಮನುಷ್ಯ ಸಮಾಜದ ಸಾವಿರಾರು ವರ್ಷಗಳ ಜ್ಞಾನಕ್ಕೆ ಈ ಪರಿ ಮಿತಿಯಿದೆಯೇ? ಇದು ಎಲ್ಲರಲ್ಲಿ ವಿನಮ್ರ ಭಾವವೊಂದನ್ನು ಮೂಡಿಸಿದರೆ ಪ್ರಕೃತಿಯೊಂದಿಗೆ ಸೇರಿ ಬಾಳುವ ಹೊಸ ನಾಗರಿಕತೆಯತ್ತ ಪ್ರಪಂಚವನ್ನು ಕರೆದೊಯ್ಯಬಹುದು.

ಆದರೆ ಇವೆಲ್ಲಕ್ಕೂ ಈ ದಿಕ್ಕಿನತ್ತ ಮನಸ್ಸು ಮಾಡಬೇಕು. ಇಲ್ಲದಿದ್ದರೆ ವಿನಾಶದ ಮತ್ತೊಂದು ದಾರಿಯತ್ತಲೂ ಹೋಗುವ ಅವಕಾಶ ಹೇಗೂ ಇದ್ದೇ ಇದೆ. ಹೆಚ್ಚಿನ ಜನರು ಮನುಷ್ಯರಾಗಿ ಯೋಚಿಸುತ್ತಾರೆಂದು ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...