Homeಅಂತರಾಷ್ಟ್ರೀಯಇಸ್ರೇಲ್‌-ಪ್ಯಾಲೆಸ್ತೀನ್‌ ಸಂಘರ್ಷ 'ಜಾಗತಿಕ ಬಿಕ್ಕಟ್ಟು': ಮಾರ್ಟಿನ್ ಗ್ರಿಫಿತ್ಸ್

ಇಸ್ರೇಲ್‌-ಪ್ಯಾಲೆಸ್ತೀನ್‌ ಸಂಘರ್ಷ ‘ಜಾಗತಿಕ ಬಿಕ್ಕಟ್ಟು’: ಮಾರ್ಟಿನ್ ಗ್ರಿಫಿತ್ಸ್

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ಗೆ ಎರಡು ದಿನಗಳ ಪ್ರವಾಸದ ಬಳಿಕ ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳು ಮತ್ತು ತುರ್ತು ಪರಿಹಾರ ಸಂಯೋಜಕರಾದ ಮಾರ್ಟಿನ್ ಗ್ರಿಫಿತ್ಸ್ ಅವರು ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದು, ಪ್ಯಾಲೆಸ್ತೀನ್‌ ಮೇಲಿನ ಇಸ್ರೇಲ್‌ ದಾಳಿಯನ್ನು ಜಾಗತಿಕ ಬಿಕ್ಕಟ್ಟು ಎಂದು ಕರೆದಿದ್ದು, ಇದು ಮುಂದುವರಿಯಬಾರದು ಎಂದು ಹೇಳಿದ್ದಾರೆ.

ಯದ್ಧ ವಿರಾಮದ ಅಗತ್ಯವಿದೆ. ಇದು ಮಾತ್ರ ಗಾಝಾಕ್ಕೆ ಪರಿಹಾರ ವಸ್ತುಗಳನ್ನು ತಲುಪಿಸಲು ಇರುವ ಆಯ್ಕೆಯಾಗಿದೆ. ಇಸ್ರೇಲ್‌ ಗಾಝಾದ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ನಡಸಿದ ದಾಳಿಯಲ್ಲಿ ಹಲವಾರು ನಾಗರಿಕರು ಮೃತಪಟ್ಟಿದ್ದಾರೆ. ಗಾಜಾದ ಜನರಿಗೆ ಇದು ಇತ್ತೀಚಿನ ದೌರ್ಜನ್ಯವಷ್ಠೆ, ಅಕ್ಟೋಬರ್ 7 ಮತ್ತು ಅದರ ನಂತರದ ಪರಿಣಾಮಗಳು ಲಕ್ಷಾಂತರ ಜನರ ಜೀವನದಲ್ಲಿ ಅಳಿಸಲಾಗದ ಗಾಯಗಳನ್ನು ಮಾಡಿದೆ ಎಂದು ಮಾರ್ಟಿನ್ ಗ್ರಿಫಿತ್ಸ್ ಹೇಳಿದ್ದಾರೆ.

ಗಾಝಾದಲ್ಲಿ, ಮಹಿಳೆಯರು, ಮಕ್ಕಳು ಮತ್ತು ಪುರುಷರು ಹಸಿವಿನಿಂದ ಬಳಲುತ್ತಿದ್ದಾರೆ. ಆಘಾತಕ್ಕೊಳಗಾಗಿದ್ದಾರೆ ಮತ್ತು ಬಾಂಬ್ ದಾಳಿಯಿಂದ ಸಾಯುತ್ತಿದ್ದಾರೆ. ಅವರು ಮಾನವೀಯತೆಯ ಮೇಲಿನ ಎಲ್ಲಾ ನಂಬಿಕೆ ಮತ್ತು ಭವಿಷ್ಯದ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅವರಲ್ಲಿ ಹತಾಶೆ ಎದ್ದುಕಾಣುತ್ತಿದೆ ಎಂದು ಹೇಳಿದ್ದಾರೆ.

ಪಶ್ಚಿಮ ದಂಡೆಯಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಹಿಂಸಾಚಾರ ಮತ್ತು ಚೆಕ್‌ಪೋಸ್ಟ್‌ಗಳನ್ನು ಮುಚ್ಚುವುದರಿಂದ ಜನರು ಆಹಾರ, ಉದ್ಯೋಗಗಳು, ಆರೋಗ್ಯ ರಕ್ಷಣೆ ಮತ್ತು ಇತರ ಅಗತ್ಯ ಸೇವೆಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದು ಮುಂದುವರಿಯಲು ಸಾಧ್ಯವಿಲ್ಲ. ನಮಗೆ ಒಂದು ಹಂತದ ಬದಲಾವಣೆಯ ಅಗತ್ಯವಿದೆ. ಒತ್ತೆಯಾಳುಗಳನ್ನು ತಕ್ಷಣವೇ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಬೇಕಾಗಿದೆ. ನಾವು ಬದುಕುಳಿಯಲು ಅಗತ್ಯವಾದವುಗಳನ್ನು ವಿಶೇಷವಾಗಿ ನೀರು, ಆಹಾರ, ಔಷಧ ಮತ್ತು ಇಂಧನ ತಕ್ಷಣವೇ ಒದಗಿಸಬೇಕು ಎಂದು ಹೇಳಿದ್ದಾರೆ.

ಇಸ್ರೇಲ್‌ ಮೇಲೆ ಹಮಾಸ್‌ ನಡೆಸಿದ ದಾಳಿಯಲ್ಲಿ 1,400 ಜನರ ಹತ್ಯೆಯಾಗಿದೆ. 200 ಮಂದಿಯನ್ನು ಹಮಾಸ್ ಒತ್ತೆಯಾಳಾಗಿ ಇಟ್ಟುಕೊಂಡಿದೆ. ಬಳಿಕ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ಬಾಂಬ್‌ ದಾಳಿಯಲ್ಲಿ ಮಹಿಳೆಯರು ಮಕ್ಕಳು ಸೇರಿ 8000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಇದನ್ನು ಓದಿ: ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...