Homeಅಂತರಾಷ್ಟ್ರೀಯಇಸ್ರೇಲ್‌-ಪ್ಯಾಲೆಸ್ತೀನ್‌ ಸಂಘರ್ಷ 'ಜಾಗತಿಕ ಬಿಕ್ಕಟ್ಟು': ಮಾರ್ಟಿನ್ ಗ್ರಿಫಿತ್ಸ್

ಇಸ್ರೇಲ್‌-ಪ್ಯಾಲೆಸ್ತೀನ್‌ ಸಂಘರ್ಷ ‘ಜಾಗತಿಕ ಬಿಕ್ಕಟ್ಟು’: ಮಾರ್ಟಿನ್ ಗ್ರಿಫಿತ್ಸ್

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ಗೆ ಎರಡು ದಿನಗಳ ಪ್ರವಾಸದ ಬಳಿಕ ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳು ಮತ್ತು ತುರ್ತು ಪರಿಹಾರ ಸಂಯೋಜಕರಾದ ಮಾರ್ಟಿನ್ ಗ್ರಿಫಿತ್ಸ್ ಅವರು ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದು, ಪ್ಯಾಲೆಸ್ತೀನ್‌ ಮೇಲಿನ ಇಸ್ರೇಲ್‌ ದಾಳಿಯನ್ನು ಜಾಗತಿಕ ಬಿಕ್ಕಟ್ಟು ಎಂದು ಕರೆದಿದ್ದು, ಇದು ಮುಂದುವರಿಯಬಾರದು ಎಂದು ಹೇಳಿದ್ದಾರೆ.

ಯದ್ಧ ವಿರಾಮದ ಅಗತ್ಯವಿದೆ. ಇದು ಮಾತ್ರ ಗಾಝಾಕ್ಕೆ ಪರಿಹಾರ ವಸ್ತುಗಳನ್ನು ತಲುಪಿಸಲು ಇರುವ ಆಯ್ಕೆಯಾಗಿದೆ. ಇಸ್ರೇಲ್‌ ಗಾಝಾದ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ನಡಸಿದ ದಾಳಿಯಲ್ಲಿ ಹಲವಾರು ನಾಗರಿಕರು ಮೃತಪಟ್ಟಿದ್ದಾರೆ. ಗಾಜಾದ ಜನರಿಗೆ ಇದು ಇತ್ತೀಚಿನ ದೌರ್ಜನ್ಯವಷ್ಠೆ, ಅಕ್ಟೋಬರ್ 7 ಮತ್ತು ಅದರ ನಂತರದ ಪರಿಣಾಮಗಳು ಲಕ್ಷಾಂತರ ಜನರ ಜೀವನದಲ್ಲಿ ಅಳಿಸಲಾಗದ ಗಾಯಗಳನ್ನು ಮಾಡಿದೆ ಎಂದು ಮಾರ್ಟಿನ್ ಗ್ರಿಫಿತ್ಸ್ ಹೇಳಿದ್ದಾರೆ.

ಗಾಝಾದಲ್ಲಿ, ಮಹಿಳೆಯರು, ಮಕ್ಕಳು ಮತ್ತು ಪುರುಷರು ಹಸಿವಿನಿಂದ ಬಳಲುತ್ತಿದ್ದಾರೆ. ಆಘಾತಕ್ಕೊಳಗಾಗಿದ್ದಾರೆ ಮತ್ತು ಬಾಂಬ್ ದಾಳಿಯಿಂದ ಸಾಯುತ್ತಿದ್ದಾರೆ. ಅವರು ಮಾನವೀಯತೆಯ ಮೇಲಿನ ಎಲ್ಲಾ ನಂಬಿಕೆ ಮತ್ತು ಭವಿಷ್ಯದ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅವರಲ್ಲಿ ಹತಾಶೆ ಎದ್ದುಕಾಣುತ್ತಿದೆ ಎಂದು ಹೇಳಿದ್ದಾರೆ.

ಪಶ್ಚಿಮ ದಂಡೆಯಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಹಿಂಸಾಚಾರ ಮತ್ತು ಚೆಕ್‌ಪೋಸ್ಟ್‌ಗಳನ್ನು ಮುಚ್ಚುವುದರಿಂದ ಜನರು ಆಹಾರ, ಉದ್ಯೋಗಗಳು, ಆರೋಗ್ಯ ರಕ್ಷಣೆ ಮತ್ತು ಇತರ ಅಗತ್ಯ ಸೇವೆಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದು ಮುಂದುವರಿಯಲು ಸಾಧ್ಯವಿಲ್ಲ. ನಮಗೆ ಒಂದು ಹಂತದ ಬದಲಾವಣೆಯ ಅಗತ್ಯವಿದೆ. ಒತ್ತೆಯಾಳುಗಳನ್ನು ತಕ್ಷಣವೇ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಬೇಕಾಗಿದೆ. ನಾವು ಬದುಕುಳಿಯಲು ಅಗತ್ಯವಾದವುಗಳನ್ನು ವಿಶೇಷವಾಗಿ ನೀರು, ಆಹಾರ, ಔಷಧ ಮತ್ತು ಇಂಧನ ತಕ್ಷಣವೇ ಒದಗಿಸಬೇಕು ಎಂದು ಹೇಳಿದ್ದಾರೆ.

ಇಸ್ರೇಲ್‌ ಮೇಲೆ ಹಮಾಸ್‌ ನಡೆಸಿದ ದಾಳಿಯಲ್ಲಿ 1,400 ಜನರ ಹತ್ಯೆಯಾಗಿದೆ. 200 ಮಂದಿಯನ್ನು ಹಮಾಸ್ ಒತ್ತೆಯಾಳಾಗಿ ಇಟ್ಟುಕೊಂಡಿದೆ. ಬಳಿಕ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ಬಾಂಬ್‌ ದಾಳಿಯಲ್ಲಿ ಮಹಿಳೆಯರು ಮಕ್ಕಳು ಸೇರಿ 8000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಇದನ್ನು ಓದಿ: ಪ್ಯಾಲೆಸ್ತೀನ್ ನಾಗರಿಕರ ನರಮೇಧ: ಇಸ್ರೇಲ್‌ ಜೊತೆಗೆ ರಾಜತಾಂತ್ರಿಕ ಸಂಬಂಧ ಕಡಿತಗೊಳಿಸಿದ ಬೊಲಿವಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...