Homeಮುಖಪುಟಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿಯಾಗಿದೆ.

- Advertisement -
- Advertisement -

ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿವೆ. ಅದು ಚಲಿಸುತ್ತಲೇ ಇಲ್ಲ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಎದ್ದೇಳು ಕರ್ನಾಟಕ ನಾಗರೀಕ ಅಭಿಯಾನ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಂದು ಮತದಾರರು ಹೆಚ್ಚು ಜಾಗೃತರಾಗಿದ್ದಾರೆ ಎಂದು ಅನ್ನಿಸುತ್ತಿದೆ. ಹಿಂದಿನ ಯಾವ ಚುನಾವಣೆಯಲ್ಲೂ ನಾನು ಇಷ್ಟೊಂದು ಜಾಗೃತ ಪ್ರಜ್ಞೆಯನ್ನು ಕಂಡಿಲ್ಲ. ಮತಯಾಚಿಸಿ ಬಂದ ಅಭ್ಯರ್ಥಿಗಳಿಗೆ ಮತದಾರರು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದಾರೆ. ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ” ಎಂದರು.

ʼಡಬಲ್‌ ಇಂಜಿನ್‌ ಸರ್ಕಾರʼ ಎಂಬ ಮಾತನ್ನು ಬಿಜೆಪಿಯ ಚಿಕ್ಕವರಿಂದ ದೊಡ್ಡನಾಯಕರವರೆಗೂ ಹೇಳಿ ಹೇಳಿ ಈಗ ಕರ್ನಾಟಕದ ಜನತೆಯ ಕಿವಿ ತೂತಾಗಿಬಿಟ್ಟಿರಹುದು. ಕೇಂದ್ರದಲ್ಲೂ ರಾಜ್ಯದಲ್ಲೂ ಒಂದೇ ಪಕ್ಷದ ಡಬಲ್‌ ಇಂಜಿನ್‌ ಸರ್ಕಾರ ಇದ್ದರೆ ಮಾತ್ರ ಅಭಿವೃದ್ಧಿಯೇ? ಇಂತಹ ಮಾತುಗಳನ್ನು ಪ್ರಜಾಪ್ರಭುತ್ವ, ಜನತಂತ್ರ ವ್ಯವಸ್ಥೆಯಲ್ಲಿ ಹೇಳುವುದು ಸರಿಯೆ? ಈ ಡಬಲ್‌ ಇಂಜಿನ್‌ ಸರ್ಕಾರ ಇದ್ದಲ್ಲಿ ಹೆಚ್ಚು ಅಭಿವೃದ್ಧಿ ಎನ್ನುವುದು ಒಕ್ಕೂಟ ವ್ಯವಸ್ಥೆಯ ಬುಡ ಅಲ್ಲಾಡಿಸಿದಂತಾಗುವುದಿಲ್ಲವೇ? ಹೀಗೆಲ್ಲಾ ನಾನು ತಲೆ ಕೆಡಿಸಿಕೊಂಡಿದ್ದೆ. ಆದರೆ ಮೊನ್ನೆ ತಾನೇ, ಚುನಾವಣಾ ಸಮೀಕ್ಷೆ ನಡೆಸುತ್ತಿದ್ದ ಟಿವಿ ಚಾನೆಲ್‌ಗೆ ನಮ್ಮ ಹಳ್ಳಿಗಾಡಿನ ವ್ಯಕ್ತಿಯೊಬ್ಬ ಕೇಳುತ್ತಾನೆ – ʼಡಬಲ್‌ ಇಂಜಿನ್‌ ಸರ್ಕಾರ ಅಂತಾರೆ! ಕಾಂಗ್ರೆಸ್‌ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡ್ತಾ ಇತ್ತು. ಬಿಜೆಪಿಯ ಈ ಡಬಲ್‌ ಇಂಜಿನ್‌ ಸರ್ಕಾರ 20 ಕೆ.ಜಿ ಕೊಡಬೇಕಿತ್ತು ತಾನೇ?ʼ. ಈ ಅನುಭವದ ಮಾತು, ಇಂದಿನ ಭ್ರಮಾತ್ಮಕ ಅಭಿವೃದ್ಧಿಗೆ ಮುಖಾಮುಖಿಯಾಗಿದೆ” ಎಂದರು.

ಇದೇ ರೀತಿ ಇನ್ನೊಂದು. ಇದೂ ಕೂಡ ಹಳ್ಳಿಗಾಡಿನ ಮಹಿಳೆಯ ಮಾತು – ʼಈ ಗ್ಯಾಸ್‌ ಬರೋಕು ಮೊದಲು ನಾವು ಅಷ್ಟೋ ಇಷ್ಟು ಸೌದೆ ತಂದು ಅಡಿಗೆ ಮಾಡ್ಕೊತ್ತಿದ್ದೊ, ಆಗ ಹೊಗೆಗೆ ಕಣ್ಣಲ್ಲಿ ನೀರು ಬರುತ್ತಿತ್ತು. ಈಗ ಗ್ಯಾಸ್‌ ಬೆಲೆ ಏರಿಕೆಯಾಗಿ ಕಣ್ಣಲ್ಲಿ ರಕ್ತ ಬರ್ತಾ ಇದೆʼ – ಇಂತಹ ಕರುಳ ನುಡಿಗಳು ಕರ್ನಾಟಕದ ಉದ್ದಗಲಕ್ಕೂ ಆಕ್ರಂದನ ಮಾಡುತ್ತಿವೆ ಎಂದರು.

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿ – ಹೀಗೆ ಸಾಗುತ್ತಿದೆ, ಈ ಸಂಘಪರಿವಾರದ ಬಿಜೆಪಿ ಸರ್ಕಾರದ ದುರಂತ ಕಥೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಯಿ ಬಿಟ್ಟರೆ ಕಾಂಗ್ರೆಸ್‌ ಏನು ಮಾಡ್ತು ಅಂತ ಲೇವಡಿ ಮಾಡುವ ಈ ಬಿಜೆಪಿ ಸರ್ಕಾರ, ಈ ಹಿಂದೆ ಕಾಂಗ್ರೆಸ್‌ ಮಾಡಿದ್ದ ಸಾರ್ವಜನಿಕ ಆಸ್ತಿಪಾಸ್ತಿ ಸಂಪತ್ತನ್ನು ತನ್ನಾಪ್ತ ಖಾಸಗಿಯವರಿಗೆ ಮಾರಿಕೊಂಡು ಬದುಕುತ್ತಿರುವ ಈ ಬಿಜೆಪಿ ಸರ್ಕಾರ ಯಾವುದೇ ಸಂಕೋಚ ನಾಚಿಕೆ ಇಲ್ಲದೆ ʼದಡ್ಡನಿಗೆ ಧೈರ್ಯ ಹೆಚ್ಚುʼ ಎಂಬಂತೆ ಮುನ್ನುಗ್ಗಿ ಧಾಳಿ ಮಾಡುವುದನ್ನು ಮಾತ್ರ ಕಲಿತಿದೆ. ಈ ಡಬಲ್‌ ಇಂಜಿನ್‌ನಲ್ಲಿ ಕಾಣುವುದೇನು? ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿದೆ. ಅದು ಚಲಿಸುತ್ತಲೇ ಇಲ್ಲ. ಅದು ಮಾಡುವ ಸದ್ದಿಗೆ ಕೆಲವರು ಜೈ ಜೈ ಅನ್ನುತ್ತಿದ್ದಾರೆ. ಈಗ ನಾವು ಏನು ಮಾಡಬೇಕು? ಮೊದಲು ಅದನ್ನು ಗುಜರಿಗೆ ಹಾಕಬೇಕಾಗಿದೆ. ಅದಕ್ಕೆ ನಾವು, ನಮ್ಮ ಜನರ ದನಿಗೆ ಸೊಲ್ಲು ಹಾಕಬೇಕಾಗಿದೆ ಎಂದರು.

ಇತ್ತೀಚೆಗೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಅವರಿಗೆ ಒಂದಿಷ್ಟು ತರುಣರು ಮುತ್ತಿಗೆ ಹಾಕಿ – ʼನೀವು, ನಿಮ್ಮ ನಾಯಕರು ನಮ್ಮ ಸಂವಿಧಾನವನ್ನೇ ಬದಲಾಯಿಸ್ತೀವಿ ಅಂತೀರಿ. ಯಾಕೆ ನಾವು ನಿಮಗೆ ಓಟು ಕೊಡಬೇಕು? ಅಂತ ಹಿಗ್ಗಾಮುಗ್ಗಾ ಕೇಳಿದಾಗ, ಆ ಠೇಂಕಾರದ, ಉಡಾಫೆಯ ಸಂಸದರ ಬಾಯಿ ಬಂದ್‌ ಆಗಿತ್ತು. ನಾನು ನಿನ್ನೆ ತಾನೇ ವರುಣಾ ಕ್ಷೇತ್ರಕ್ಕೆ ಒಂದು ರೌಂಡ್‌ ಹೋಗಿದ್ದೆ. ಅಲ್ಲೆ ಸಿಕ್ಕಿದ ಕೆಲವು ಹುಡುಗರಿಗೆ ʼಏನ್ರಪ್ಪಾ, ಸಂಸದನಿಗೇನೆ ಕುತ್ತಿಗೆ ಪಟ್ಟಿ ಹಿಡಿದುಕೊಂಡವರಂತೆ ಕೇಳಿದ್ದು ಸರಿನಾ?ʼ – ಸ್ವಲ್ಪ ಚಿತಾವಣೆ ಮಾಡಿದೆ. ಒಬ್ಬ ಹುಡುಗ ಹೇಳಿದ – “ನಮ್ಮ ಸಂವಿಧಾನ ಬದಲಾವಣೆ ಮಾಡಿ ಅವರ ʼಮನುಧರ್ಮಶಾಸ್ತ್ರʼ ಮತ್ತೆ ತರಬೇಕು ಅಂತ ಇದ್ದಾರೆ. ಹಾಗಾದರೆ ಈ ಹಿಂದೆ ಶೂದ್ರರು ಅಂದರೆ ಸೇವಕರಾಗಿದ್ದ ಒಕ್ಕಲಿಗರು ಲಿಂಗಾಯಿತರು ಮತ್ತೆ ಅವರಿಗೆ ಸೇವಕರಾಗಬೇಕಾ? ತಳಸಮುದಾಯಗಳು ಮತ್ತೆ ಕಾಲಾಳುಗಳಾಗಬೇಕಾ? ಈಗೀಗ ಊರೊಳಕ್ಕೆ ಬರುತ್ತಿರುವ ಅಸ್ಪೃಶ್ಯರು ಮತ್ತೆ ಊರಾಚೆಗೆ ಇರಬೇಕಾ? ಹಳ್ಳೀ ಮಕ್ಕಳ ಸ್ಕಾಲರ್‌ಶಿಪ್‌ ಕಿತ್ತುಕೊಳ್ಳುವ ಬಿಜೆಪಿ ಸರ್ಕಾರದ ಉದ್ದೇಶವಾದರೂ ಏನು?” ಹೀಗೆ ಮುಂದುವರೆದಿತ್ತು ಆ ಹುಡುಗನ ಒಡಲಾಳದ ಮಾತುಗಳು. ನನಗೆ ಅಬ್ಬಾಡೆ ಅನ್ನಿಸಿತು. ನಾನು ಮಾತಾಡಲಿಲ್ಲ. ಆ ಹುಡುಗನಿಗೆ ಒಂದು ಹಗ್‌ ಮಾಡಿದೆ ಎಂದು ತಿಳಿಸಿದರು.

ಬಹುಶಃ ಎದ್ದೇಳು ಕರ್ನಾಟಕ ಮಾಡಬಹುದಾದದ್ದು ಇಷ್ಟೇ ಅನ್ನಿಸುತ್ತದೆ. ಜನಸಮುದಾಯದ ಒಡಲಾಳದ ನುಡಿಗಳಿಗೆ ಅಪ್ಪುಗೆ ಹಾಗೂ ಮೆಚ್ಚುಗೆಯ ಒಂದು ಮುಗುಳ್ನಗೆ. ನೆನಪಿಟ್ಟುಕೊಳ್ಳಬೇಕು – ಎದ್ದೇಳು ಕರ್ನಾಟಕ ಯಾರದೂ ಅಲ್ಲ; ಎಲ್ಲರದು. ಎಲ್ಲೇ, ಯಾರೇ ತಾವೇ ಮಾಡಿಕೊಳ್ಳಬಹುದು. ಪರಸ್ಪರ ಮಾಹಿತಿ ಇರಲಿ, ಅಷ್ಟೇ. ಸಮುದಾಯದ ಎಚ್ಚರ ಮತ್ತು ವಿವೇಕವನ್ನು ವ್ಯಾಪಕಗೊಳಿಸಲು ಎದ್ದೇಳು ಕರ್ನಾಟಕ ವೇಗವರ್ಧಕದಂತೆ ಕೆಲಸ ಮಾಡುತ್ತದೆ. ಈಗ, ಮಂಗಳೂರಿನ ಕಡೆಯ ಒಂದು ಸುದ್ದಿ ಓದಿದೆ. ಅಲ್ಲಿನ ಮತದಾರರು, ಬಿಜೆಪಿ ಅಭ್ಯರ್ಥಿಗಳಿಗೆ ನಮ್ಮ ಅಕೌಂಟಿಗೆ 15 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ, ಅಕೌಂಟ್‌ಗೆ ಹಣ ಹಾಕಿ ಎಂದು ಕೇಳುತ್ತಿದ್ದಾರೆ ಅನ್ನುವುದೇ ಆ ಸುದ್ದಿ! ಜನ ಮರೆತು ಬಿಡುತ್ತಾರೆ ಅಂತಾರೆ. ಆದರೆ ಜನ ಮರೆತಿಲ್ಲ, ಪ್ರಶ್ನಿಸುತ್ತಿದ್ದಾರೆ. ಇದನ್ನು ಎಲ್ಲೆಡೆ ಹಬ್ಬಿಸಲು ಎದ್ದೇಳು ಕರ್ನಾಟಕ ಕ್ರಿಯಾಶೀಲವಾಗಬೇಕಾಗಿದೆ. ಹೀಗೇ ಅನೇಕ ಮತದಾರರು, ರಾಜ್ಯದಿಂದ ಕೇಂದ್ರಕ್ಕೆ ಹೋಗುವ ತೆರಿಗೆ ಎಷ್ಟು, ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲು ಎಷ್ಟು ಎಂದು ಕುಪಿತರಾಗಿ ಪ್ರಶ್ನಿಸುತ್ತಿದ್ದಾರೆ – ಇಂತಹ ಇನ್ನೆಷ್ಟೊ ಸಮುದಾಯದ ವಿವೇಕ ವಿವೇಚನೆಗಳಿಗೆ ಪ್ರಜ್ಞಾವಂತ ವ್ಯಕ್ತಿ, ಸಂಘಟನೆಗಳು ಜೊತೆಗೂಡಬೇಕಾಗಿದೆ. ಜೊತೆಗೂಡಿ, 15 ಲಕ್ಷ ಹಾಕುತ್ತೇವೆ ಎಂದು ಪ್ರಧಾನಿಯಾದ ಮೋದಿಯವರಿಗೆ ಕರ್ನಾಟಕಕ್ಕೆ ಬಂದಾಗಲೆಲ್ಲಾ ʼಅಕೌಂಟ್‌ಗೆ 15 ಲಕ್ಷ ಹಾಕಿʼ ಎಂದು ಕೇಳಬೇಕಾಗಿದೆ. ನೆನಪಿಡಿ, ಯಾವ ಕಾರಣಕ್ಕೂ ಗೃಹಸಚಿವ ಅಮಿತ್‌ ಶಾ ಅವರಿಗೆ ಈ ಪ್ರಶ್ನೆ ಕೇಳಬಾರದು. ಕೇಳಿದರೆ ಅವರು ಮುಗುಳ್ನಗೆಯಲ್ಲೆ ಕೊಲ್ಲುತ್ತಾರೆ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಪುನರುಚ್ಚರಿಸಿದರು.

ಆಮೇಲೆ ಏನು? ಈ ಸಂದಿಗ್ಧದ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಎದ್ದೇಳು ಕರ್ನಾಟಕ ತನ್ನ ಕರೆಯಲ್ಲಿ ಸ್ಪಷ್ಟವಾಗಿ ಹೇಳಿದೆ: “ಮುಂಬರುವ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತದೆ ಎಂಬುದಕ್ಕಿಂತ ಈ ಸುಲಿಗೆ ಸರ್ಕಾರ ಮೊದಲು ಸೋಲಬೇಕು. ಆಮೇಲೆ ಗೆದ್ದವರ ಜೊತೆ ಜನಹಿತದ ಮರುಸ್ಥಾಪನೆಗಾಗಿ ಗುದ್ದಾಡಬೇಕು. ಇದೇ ಪ್ರಜಾಪ್ರಭುತ್ವ ಉಳಿಸಿಕೊಳ್ಳುವ ಪ್ರಕ್ರಿಯೆ” ಎಂದು ದೇವನೂರು ಹೇಳಿದರು.

ಇನ್ನೊಂದು ಸಂದಿಗ್ಧ. ಹಾಗಾದರೆ ಯಾವ ಪಕ್ಷಕ್ಕೆ ಮತ ನೀಡಬೇಕು? ಭಾರತ್‌ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್‌ ಮರುಹುಟ್ಟು ಪಡೆದಂತೆ ಕಾಣಿಸುತ್ತಿದೆ. ಬಹುತೇಕ ಕಾಂಗ್ರೆಸ್‌ ಪಕ್ಷಕ್ಕೇನೇ ಮತ ನೀಡಬೇಕಾಗಿದೆ. ಪ್ರಗತಿಪರ ಪಕ್ಷಗಳು ಎಲ್ಲಿ ಸ್ಪರ್ಧೆ ನೀಡುತ್ತಿವೆ ಎಂದು ಭರವಸೆ ಇರುತ್ತದೋ ಅಲ್ಲಿ ನಾಕಾರು ಕಡೆ ಬೆಂಬಲಿಸಬೇಕಾಗಿದೆ. ಮತ್ತೊಂದು ಸಂದಿಗ್ಧ. ಕಾಂಗ್ರೆಸ್‌ ಮೂರನೆ ಸ್ಥಾನದಲ್ಲಿ ಇರುವ ಕಡೆ? ಜೆಡಿಎಸ್‌ ಎಲ್ಲೆಲ್ಲಿ ಬಿಜೆಪಿಯ ನೇರಸ್ಪರ್ಧಿಯಾಗಿರುವುದು ಖಚಿತವೋ ಅಲ್ಲಿ ಜೆಡಿಎಸ್‌ಗೆ ಮತ ನೀಡಬೇಕು. ಒಟ್ಟಿನಲ್ಲಿ ಸಂಘಪರಿವಾರದ ಬಿಜೆಪಿ ಸೋಲಬೇಕು. ಈ ದುಷ್ಟಶಕ್ತಿಯ ಹಲ್ಲು ಉಗುರು ಕಿತ್ತು ಅದರ ಜೀವವನ್ನೂ ಉಳಿಸಬೇಕು. ಇದು ನಮ್ಮೆಲ್ಲರ ಹೆಗಲ ಮೇಲಿರುವ ಹೊಣೆಗಾರಿಕೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಚಿಂತಕರಾದ ಯೋಗೇಂದ್ರ ಯಾದವ್, ರಹಮತ್ ತರೀಕೆರೆ, ತಾರಾ ರಾವ್, ತ್ರಿಲೋಚನ್ ಶಾಸ್ತ್ರಿ, ಯೂಸುಫ್ ಕಣ್ಣಿ, ವೀರಸಂಗಯ್ಯ ಮತ್ತು ಪ್ರೊ. ಜಾಫೆಟ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿ: ರಾಜ್ಯಪಾಲ ಹುದ್ದೆ ತೊರೆದ ಬಳಿಕ ಮಾತನಾಡುತ್ತಿದ್ದೇನೆ ಎನ್ನುವುದು ತಪ್ಪು: ಶಾಗೆ ಸತ್ಯಪಾಲ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....