Homeಮುಖಪುಟಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿಯಾಗಿದೆ.

- Advertisement -
- Advertisement -

ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿವೆ. ಅದು ಚಲಿಸುತ್ತಲೇ ಇಲ್ಲ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಎದ್ದೇಳು ಕರ್ನಾಟಕ ನಾಗರೀಕ ಅಭಿಯಾನ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಂದು ಮತದಾರರು ಹೆಚ್ಚು ಜಾಗೃತರಾಗಿದ್ದಾರೆ ಎಂದು ಅನ್ನಿಸುತ್ತಿದೆ. ಹಿಂದಿನ ಯಾವ ಚುನಾವಣೆಯಲ್ಲೂ ನಾನು ಇಷ್ಟೊಂದು ಜಾಗೃತ ಪ್ರಜ್ಞೆಯನ್ನು ಕಂಡಿಲ್ಲ. ಮತಯಾಚಿಸಿ ಬಂದ ಅಭ್ಯರ್ಥಿಗಳಿಗೆ ಮತದಾರರು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದಾರೆ. ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ” ಎಂದರು.

ʼಡಬಲ್‌ ಇಂಜಿನ್‌ ಸರ್ಕಾರʼ ಎಂಬ ಮಾತನ್ನು ಬಿಜೆಪಿಯ ಚಿಕ್ಕವರಿಂದ ದೊಡ್ಡನಾಯಕರವರೆಗೂ ಹೇಳಿ ಹೇಳಿ ಈಗ ಕರ್ನಾಟಕದ ಜನತೆಯ ಕಿವಿ ತೂತಾಗಿಬಿಟ್ಟಿರಹುದು. ಕೇಂದ್ರದಲ್ಲೂ ರಾಜ್ಯದಲ್ಲೂ ಒಂದೇ ಪಕ್ಷದ ಡಬಲ್‌ ಇಂಜಿನ್‌ ಸರ್ಕಾರ ಇದ್ದರೆ ಮಾತ್ರ ಅಭಿವೃದ್ಧಿಯೇ? ಇಂತಹ ಮಾತುಗಳನ್ನು ಪ್ರಜಾಪ್ರಭುತ್ವ, ಜನತಂತ್ರ ವ್ಯವಸ್ಥೆಯಲ್ಲಿ ಹೇಳುವುದು ಸರಿಯೆ? ಈ ಡಬಲ್‌ ಇಂಜಿನ್‌ ಸರ್ಕಾರ ಇದ್ದಲ್ಲಿ ಹೆಚ್ಚು ಅಭಿವೃದ್ಧಿ ಎನ್ನುವುದು ಒಕ್ಕೂಟ ವ್ಯವಸ್ಥೆಯ ಬುಡ ಅಲ್ಲಾಡಿಸಿದಂತಾಗುವುದಿಲ್ಲವೇ? ಹೀಗೆಲ್ಲಾ ನಾನು ತಲೆ ಕೆಡಿಸಿಕೊಂಡಿದ್ದೆ. ಆದರೆ ಮೊನ್ನೆ ತಾನೇ, ಚುನಾವಣಾ ಸಮೀಕ್ಷೆ ನಡೆಸುತ್ತಿದ್ದ ಟಿವಿ ಚಾನೆಲ್‌ಗೆ ನಮ್ಮ ಹಳ್ಳಿಗಾಡಿನ ವ್ಯಕ್ತಿಯೊಬ್ಬ ಕೇಳುತ್ತಾನೆ – ʼಡಬಲ್‌ ಇಂಜಿನ್‌ ಸರ್ಕಾರ ಅಂತಾರೆ! ಕಾಂಗ್ರೆಸ್‌ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡ್ತಾ ಇತ್ತು. ಬಿಜೆಪಿಯ ಈ ಡಬಲ್‌ ಇಂಜಿನ್‌ ಸರ್ಕಾರ 20 ಕೆ.ಜಿ ಕೊಡಬೇಕಿತ್ತು ತಾನೇ?ʼ. ಈ ಅನುಭವದ ಮಾತು, ಇಂದಿನ ಭ್ರಮಾತ್ಮಕ ಅಭಿವೃದ್ಧಿಗೆ ಮುಖಾಮುಖಿಯಾಗಿದೆ” ಎಂದರು.

ಇದೇ ರೀತಿ ಇನ್ನೊಂದು. ಇದೂ ಕೂಡ ಹಳ್ಳಿಗಾಡಿನ ಮಹಿಳೆಯ ಮಾತು – ʼಈ ಗ್ಯಾಸ್‌ ಬರೋಕು ಮೊದಲು ನಾವು ಅಷ್ಟೋ ಇಷ್ಟು ಸೌದೆ ತಂದು ಅಡಿಗೆ ಮಾಡ್ಕೊತ್ತಿದ್ದೊ, ಆಗ ಹೊಗೆಗೆ ಕಣ್ಣಲ್ಲಿ ನೀರು ಬರುತ್ತಿತ್ತು. ಈಗ ಗ್ಯಾಸ್‌ ಬೆಲೆ ಏರಿಕೆಯಾಗಿ ಕಣ್ಣಲ್ಲಿ ರಕ್ತ ಬರ್ತಾ ಇದೆʼ – ಇಂತಹ ಕರುಳ ನುಡಿಗಳು ಕರ್ನಾಟಕದ ಉದ್ದಗಲಕ್ಕೂ ಆಕ್ರಂದನ ಮಾಡುತ್ತಿವೆ ಎಂದರು.

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿ – ಹೀಗೆ ಸಾಗುತ್ತಿದೆ, ಈ ಸಂಘಪರಿವಾರದ ಬಿಜೆಪಿ ಸರ್ಕಾರದ ದುರಂತ ಕಥೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಯಿ ಬಿಟ್ಟರೆ ಕಾಂಗ್ರೆಸ್‌ ಏನು ಮಾಡ್ತು ಅಂತ ಲೇವಡಿ ಮಾಡುವ ಈ ಬಿಜೆಪಿ ಸರ್ಕಾರ, ಈ ಹಿಂದೆ ಕಾಂಗ್ರೆಸ್‌ ಮಾಡಿದ್ದ ಸಾರ್ವಜನಿಕ ಆಸ್ತಿಪಾಸ್ತಿ ಸಂಪತ್ತನ್ನು ತನ್ನಾಪ್ತ ಖಾಸಗಿಯವರಿಗೆ ಮಾರಿಕೊಂಡು ಬದುಕುತ್ತಿರುವ ಈ ಬಿಜೆಪಿ ಸರ್ಕಾರ ಯಾವುದೇ ಸಂಕೋಚ ನಾಚಿಕೆ ಇಲ್ಲದೆ ʼದಡ್ಡನಿಗೆ ಧೈರ್ಯ ಹೆಚ್ಚುʼ ಎಂಬಂತೆ ಮುನ್ನುಗ್ಗಿ ಧಾಳಿ ಮಾಡುವುದನ್ನು ಮಾತ್ರ ಕಲಿತಿದೆ. ಈ ಡಬಲ್‌ ಇಂಜಿನ್‌ನಲ್ಲಿ ಕಾಣುವುದೇನು? ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿದೆ. ಅದು ಚಲಿಸುತ್ತಲೇ ಇಲ್ಲ. ಅದು ಮಾಡುವ ಸದ್ದಿಗೆ ಕೆಲವರು ಜೈ ಜೈ ಅನ್ನುತ್ತಿದ್ದಾರೆ. ಈಗ ನಾವು ಏನು ಮಾಡಬೇಕು? ಮೊದಲು ಅದನ್ನು ಗುಜರಿಗೆ ಹಾಕಬೇಕಾಗಿದೆ. ಅದಕ್ಕೆ ನಾವು, ನಮ್ಮ ಜನರ ದನಿಗೆ ಸೊಲ್ಲು ಹಾಕಬೇಕಾಗಿದೆ ಎಂದರು.

ಇತ್ತೀಚೆಗೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಅವರಿಗೆ ಒಂದಿಷ್ಟು ತರುಣರು ಮುತ್ತಿಗೆ ಹಾಕಿ – ʼನೀವು, ನಿಮ್ಮ ನಾಯಕರು ನಮ್ಮ ಸಂವಿಧಾನವನ್ನೇ ಬದಲಾಯಿಸ್ತೀವಿ ಅಂತೀರಿ. ಯಾಕೆ ನಾವು ನಿಮಗೆ ಓಟು ಕೊಡಬೇಕು? ಅಂತ ಹಿಗ್ಗಾಮುಗ್ಗಾ ಕೇಳಿದಾಗ, ಆ ಠೇಂಕಾರದ, ಉಡಾಫೆಯ ಸಂಸದರ ಬಾಯಿ ಬಂದ್‌ ಆಗಿತ್ತು. ನಾನು ನಿನ್ನೆ ತಾನೇ ವರುಣಾ ಕ್ಷೇತ್ರಕ್ಕೆ ಒಂದು ರೌಂಡ್‌ ಹೋಗಿದ್ದೆ. ಅಲ್ಲೆ ಸಿಕ್ಕಿದ ಕೆಲವು ಹುಡುಗರಿಗೆ ʼಏನ್ರಪ್ಪಾ, ಸಂಸದನಿಗೇನೆ ಕುತ್ತಿಗೆ ಪಟ್ಟಿ ಹಿಡಿದುಕೊಂಡವರಂತೆ ಕೇಳಿದ್ದು ಸರಿನಾ?ʼ – ಸ್ವಲ್ಪ ಚಿತಾವಣೆ ಮಾಡಿದೆ. ಒಬ್ಬ ಹುಡುಗ ಹೇಳಿದ – “ನಮ್ಮ ಸಂವಿಧಾನ ಬದಲಾವಣೆ ಮಾಡಿ ಅವರ ʼಮನುಧರ್ಮಶಾಸ್ತ್ರʼ ಮತ್ತೆ ತರಬೇಕು ಅಂತ ಇದ್ದಾರೆ. ಹಾಗಾದರೆ ಈ ಹಿಂದೆ ಶೂದ್ರರು ಅಂದರೆ ಸೇವಕರಾಗಿದ್ದ ಒಕ್ಕಲಿಗರು ಲಿಂಗಾಯಿತರು ಮತ್ತೆ ಅವರಿಗೆ ಸೇವಕರಾಗಬೇಕಾ? ತಳಸಮುದಾಯಗಳು ಮತ್ತೆ ಕಾಲಾಳುಗಳಾಗಬೇಕಾ? ಈಗೀಗ ಊರೊಳಕ್ಕೆ ಬರುತ್ತಿರುವ ಅಸ್ಪೃಶ್ಯರು ಮತ್ತೆ ಊರಾಚೆಗೆ ಇರಬೇಕಾ? ಹಳ್ಳೀ ಮಕ್ಕಳ ಸ್ಕಾಲರ್‌ಶಿಪ್‌ ಕಿತ್ತುಕೊಳ್ಳುವ ಬಿಜೆಪಿ ಸರ್ಕಾರದ ಉದ್ದೇಶವಾದರೂ ಏನು?” ಹೀಗೆ ಮುಂದುವರೆದಿತ್ತು ಆ ಹುಡುಗನ ಒಡಲಾಳದ ಮಾತುಗಳು. ನನಗೆ ಅಬ್ಬಾಡೆ ಅನ್ನಿಸಿತು. ನಾನು ಮಾತಾಡಲಿಲ್ಲ. ಆ ಹುಡುಗನಿಗೆ ಒಂದು ಹಗ್‌ ಮಾಡಿದೆ ಎಂದು ತಿಳಿಸಿದರು.

ಬಹುಶಃ ಎದ್ದೇಳು ಕರ್ನಾಟಕ ಮಾಡಬಹುದಾದದ್ದು ಇಷ್ಟೇ ಅನ್ನಿಸುತ್ತದೆ. ಜನಸಮುದಾಯದ ಒಡಲಾಳದ ನುಡಿಗಳಿಗೆ ಅಪ್ಪುಗೆ ಹಾಗೂ ಮೆಚ್ಚುಗೆಯ ಒಂದು ಮುಗುಳ್ನಗೆ. ನೆನಪಿಟ್ಟುಕೊಳ್ಳಬೇಕು – ಎದ್ದೇಳು ಕರ್ನಾಟಕ ಯಾರದೂ ಅಲ್ಲ; ಎಲ್ಲರದು. ಎಲ್ಲೇ, ಯಾರೇ ತಾವೇ ಮಾಡಿಕೊಳ್ಳಬಹುದು. ಪರಸ್ಪರ ಮಾಹಿತಿ ಇರಲಿ, ಅಷ್ಟೇ. ಸಮುದಾಯದ ಎಚ್ಚರ ಮತ್ತು ವಿವೇಕವನ್ನು ವ್ಯಾಪಕಗೊಳಿಸಲು ಎದ್ದೇಳು ಕರ್ನಾಟಕ ವೇಗವರ್ಧಕದಂತೆ ಕೆಲಸ ಮಾಡುತ್ತದೆ. ಈಗ, ಮಂಗಳೂರಿನ ಕಡೆಯ ಒಂದು ಸುದ್ದಿ ಓದಿದೆ. ಅಲ್ಲಿನ ಮತದಾರರು, ಬಿಜೆಪಿ ಅಭ್ಯರ್ಥಿಗಳಿಗೆ ನಮ್ಮ ಅಕೌಂಟಿಗೆ 15 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ, ಅಕೌಂಟ್‌ಗೆ ಹಣ ಹಾಕಿ ಎಂದು ಕೇಳುತ್ತಿದ್ದಾರೆ ಅನ್ನುವುದೇ ಆ ಸುದ್ದಿ! ಜನ ಮರೆತು ಬಿಡುತ್ತಾರೆ ಅಂತಾರೆ. ಆದರೆ ಜನ ಮರೆತಿಲ್ಲ, ಪ್ರಶ್ನಿಸುತ್ತಿದ್ದಾರೆ. ಇದನ್ನು ಎಲ್ಲೆಡೆ ಹಬ್ಬಿಸಲು ಎದ್ದೇಳು ಕರ್ನಾಟಕ ಕ್ರಿಯಾಶೀಲವಾಗಬೇಕಾಗಿದೆ. ಹೀಗೇ ಅನೇಕ ಮತದಾರರು, ರಾಜ್ಯದಿಂದ ಕೇಂದ್ರಕ್ಕೆ ಹೋಗುವ ತೆರಿಗೆ ಎಷ್ಟು, ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲು ಎಷ್ಟು ಎಂದು ಕುಪಿತರಾಗಿ ಪ್ರಶ್ನಿಸುತ್ತಿದ್ದಾರೆ – ಇಂತಹ ಇನ್ನೆಷ್ಟೊ ಸಮುದಾಯದ ವಿವೇಕ ವಿವೇಚನೆಗಳಿಗೆ ಪ್ರಜ್ಞಾವಂತ ವ್ಯಕ್ತಿ, ಸಂಘಟನೆಗಳು ಜೊತೆಗೂಡಬೇಕಾಗಿದೆ. ಜೊತೆಗೂಡಿ, 15 ಲಕ್ಷ ಹಾಕುತ್ತೇವೆ ಎಂದು ಪ್ರಧಾನಿಯಾದ ಮೋದಿಯವರಿಗೆ ಕರ್ನಾಟಕಕ್ಕೆ ಬಂದಾಗಲೆಲ್ಲಾ ʼಅಕೌಂಟ್‌ಗೆ 15 ಲಕ್ಷ ಹಾಕಿʼ ಎಂದು ಕೇಳಬೇಕಾಗಿದೆ. ನೆನಪಿಡಿ, ಯಾವ ಕಾರಣಕ್ಕೂ ಗೃಹಸಚಿವ ಅಮಿತ್‌ ಶಾ ಅವರಿಗೆ ಈ ಪ್ರಶ್ನೆ ಕೇಳಬಾರದು. ಕೇಳಿದರೆ ಅವರು ಮುಗುಳ್ನಗೆಯಲ್ಲೆ ಕೊಲ್ಲುತ್ತಾರೆ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಪುನರುಚ್ಚರಿಸಿದರು.

ಆಮೇಲೆ ಏನು? ಈ ಸಂದಿಗ್ಧದ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಎದ್ದೇಳು ಕರ್ನಾಟಕ ತನ್ನ ಕರೆಯಲ್ಲಿ ಸ್ಪಷ್ಟವಾಗಿ ಹೇಳಿದೆ: “ಮುಂಬರುವ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತದೆ ಎಂಬುದಕ್ಕಿಂತ ಈ ಸುಲಿಗೆ ಸರ್ಕಾರ ಮೊದಲು ಸೋಲಬೇಕು. ಆಮೇಲೆ ಗೆದ್ದವರ ಜೊತೆ ಜನಹಿತದ ಮರುಸ್ಥಾಪನೆಗಾಗಿ ಗುದ್ದಾಡಬೇಕು. ಇದೇ ಪ್ರಜಾಪ್ರಭುತ್ವ ಉಳಿಸಿಕೊಳ್ಳುವ ಪ್ರಕ್ರಿಯೆ” ಎಂದು ದೇವನೂರು ಹೇಳಿದರು.

ಇನ್ನೊಂದು ಸಂದಿಗ್ಧ. ಹಾಗಾದರೆ ಯಾವ ಪಕ್ಷಕ್ಕೆ ಮತ ನೀಡಬೇಕು? ಭಾರತ್‌ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್‌ ಮರುಹುಟ್ಟು ಪಡೆದಂತೆ ಕಾಣಿಸುತ್ತಿದೆ. ಬಹುತೇಕ ಕಾಂಗ್ರೆಸ್‌ ಪಕ್ಷಕ್ಕೇನೇ ಮತ ನೀಡಬೇಕಾಗಿದೆ. ಪ್ರಗತಿಪರ ಪಕ್ಷಗಳು ಎಲ್ಲಿ ಸ್ಪರ್ಧೆ ನೀಡುತ್ತಿವೆ ಎಂದು ಭರವಸೆ ಇರುತ್ತದೋ ಅಲ್ಲಿ ನಾಕಾರು ಕಡೆ ಬೆಂಬಲಿಸಬೇಕಾಗಿದೆ. ಮತ್ತೊಂದು ಸಂದಿಗ್ಧ. ಕಾಂಗ್ರೆಸ್‌ ಮೂರನೆ ಸ್ಥಾನದಲ್ಲಿ ಇರುವ ಕಡೆ? ಜೆಡಿಎಸ್‌ ಎಲ್ಲೆಲ್ಲಿ ಬಿಜೆಪಿಯ ನೇರಸ್ಪರ್ಧಿಯಾಗಿರುವುದು ಖಚಿತವೋ ಅಲ್ಲಿ ಜೆಡಿಎಸ್‌ಗೆ ಮತ ನೀಡಬೇಕು. ಒಟ್ಟಿನಲ್ಲಿ ಸಂಘಪರಿವಾರದ ಬಿಜೆಪಿ ಸೋಲಬೇಕು. ಈ ದುಷ್ಟಶಕ್ತಿಯ ಹಲ್ಲು ಉಗುರು ಕಿತ್ತು ಅದರ ಜೀವವನ್ನೂ ಉಳಿಸಬೇಕು. ಇದು ನಮ್ಮೆಲ್ಲರ ಹೆಗಲ ಮೇಲಿರುವ ಹೊಣೆಗಾರಿಕೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಚಿಂತಕರಾದ ಯೋಗೇಂದ್ರ ಯಾದವ್, ರಹಮತ್ ತರೀಕೆರೆ, ತಾರಾ ರಾವ್, ತ್ರಿಲೋಚನ್ ಶಾಸ್ತ್ರಿ, ಯೂಸುಫ್ ಕಣ್ಣಿ, ವೀರಸಂಗಯ್ಯ ಮತ್ತು ಪ್ರೊ. ಜಾಫೆಟ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿ: ರಾಜ್ಯಪಾಲ ಹುದ್ದೆ ತೊರೆದ ಬಳಿಕ ಮಾತನಾಡುತ್ತಿದ್ದೇನೆ ಎನ್ನುವುದು ತಪ್ಪು: ಶಾಗೆ ಸತ್ಯಪಾಲ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...