Homeಮುಖಪುಟಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿಯಾಗಿದೆ.

- Advertisement -
- Advertisement -

ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿವೆ. ಅದು ಚಲಿಸುತ್ತಲೇ ಇಲ್ಲ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಎದ್ದೇಳು ಕರ್ನಾಟಕ ನಾಗರೀಕ ಅಭಿಯಾನ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಂದು ಮತದಾರರು ಹೆಚ್ಚು ಜಾಗೃತರಾಗಿದ್ದಾರೆ ಎಂದು ಅನ್ನಿಸುತ್ತಿದೆ. ಹಿಂದಿನ ಯಾವ ಚುನಾವಣೆಯಲ್ಲೂ ನಾನು ಇಷ್ಟೊಂದು ಜಾಗೃತ ಪ್ರಜ್ಞೆಯನ್ನು ಕಂಡಿಲ್ಲ. ಮತಯಾಚಿಸಿ ಬಂದ ಅಭ್ಯರ್ಥಿಗಳಿಗೆ ಮತದಾರರು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದಾರೆ. ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ” ಎಂದರು.

ʼಡಬಲ್‌ ಇಂಜಿನ್‌ ಸರ್ಕಾರʼ ಎಂಬ ಮಾತನ್ನು ಬಿಜೆಪಿಯ ಚಿಕ್ಕವರಿಂದ ದೊಡ್ಡನಾಯಕರವರೆಗೂ ಹೇಳಿ ಹೇಳಿ ಈಗ ಕರ್ನಾಟಕದ ಜನತೆಯ ಕಿವಿ ತೂತಾಗಿಬಿಟ್ಟಿರಹುದು. ಕೇಂದ್ರದಲ್ಲೂ ರಾಜ್ಯದಲ್ಲೂ ಒಂದೇ ಪಕ್ಷದ ಡಬಲ್‌ ಇಂಜಿನ್‌ ಸರ್ಕಾರ ಇದ್ದರೆ ಮಾತ್ರ ಅಭಿವೃದ್ಧಿಯೇ? ಇಂತಹ ಮಾತುಗಳನ್ನು ಪ್ರಜಾಪ್ರಭುತ್ವ, ಜನತಂತ್ರ ವ್ಯವಸ್ಥೆಯಲ್ಲಿ ಹೇಳುವುದು ಸರಿಯೆ? ಈ ಡಬಲ್‌ ಇಂಜಿನ್‌ ಸರ್ಕಾರ ಇದ್ದಲ್ಲಿ ಹೆಚ್ಚು ಅಭಿವೃದ್ಧಿ ಎನ್ನುವುದು ಒಕ್ಕೂಟ ವ್ಯವಸ್ಥೆಯ ಬುಡ ಅಲ್ಲಾಡಿಸಿದಂತಾಗುವುದಿಲ್ಲವೇ? ಹೀಗೆಲ್ಲಾ ನಾನು ತಲೆ ಕೆಡಿಸಿಕೊಂಡಿದ್ದೆ. ಆದರೆ ಮೊನ್ನೆ ತಾನೇ, ಚುನಾವಣಾ ಸಮೀಕ್ಷೆ ನಡೆಸುತ್ತಿದ್ದ ಟಿವಿ ಚಾನೆಲ್‌ಗೆ ನಮ್ಮ ಹಳ್ಳಿಗಾಡಿನ ವ್ಯಕ್ತಿಯೊಬ್ಬ ಕೇಳುತ್ತಾನೆ – ʼಡಬಲ್‌ ಇಂಜಿನ್‌ ಸರ್ಕಾರ ಅಂತಾರೆ! ಕಾಂಗ್ರೆಸ್‌ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡ್ತಾ ಇತ್ತು. ಬಿಜೆಪಿಯ ಈ ಡಬಲ್‌ ಇಂಜಿನ್‌ ಸರ್ಕಾರ 20 ಕೆ.ಜಿ ಕೊಡಬೇಕಿತ್ತು ತಾನೇ?ʼ. ಈ ಅನುಭವದ ಮಾತು, ಇಂದಿನ ಭ್ರಮಾತ್ಮಕ ಅಭಿವೃದ್ಧಿಗೆ ಮುಖಾಮುಖಿಯಾಗಿದೆ” ಎಂದರು.

ಇದೇ ರೀತಿ ಇನ್ನೊಂದು. ಇದೂ ಕೂಡ ಹಳ್ಳಿಗಾಡಿನ ಮಹಿಳೆಯ ಮಾತು – ʼಈ ಗ್ಯಾಸ್‌ ಬರೋಕು ಮೊದಲು ನಾವು ಅಷ್ಟೋ ಇಷ್ಟು ಸೌದೆ ತಂದು ಅಡಿಗೆ ಮಾಡ್ಕೊತ್ತಿದ್ದೊ, ಆಗ ಹೊಗೆಗೆ ಕಣ್ಣಲ್ಲಿ ನೀರು ಬರುತ್ತಿತ್ತು. ಈಗ ಗ್ಯಾಸ್‌ ಬೆಲೆ ಏರಿಕೆಯಾಗಿ ಕಣ್ಣಲ್ಲಿ ರಕ್ತ ಬರ್ತಾ ಇದೆʼ – ಇಂತಹ ಕರುಳ ನುಡಿಗಳು ಕರ್ನಾಟಕದ ಉದ್ದಗಲಕ್ಕೂ ಆಕ್ರಂದನ ಮಾಡುತ್ತಿವೆ ಎಂದರು.

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿ – ಹೀಗೆ ಸಾಗುತ್ತಿದೆ, ಈ ಸಂಘಪರಿವಾರದ ಬಿಜೆಪಿ ಸರ್ಕಾರದ ದುರಂತ ಕಥೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಯಿ ಬಿಟ್ಟರೆ ಕಾಂಗ್ರೆಸ್‌ ಏನು ಮಾಡ್ತು ಅಂತ ಲೇವಡಿ ಮಾಡುವ ಈ ಬಿಜೆಪಿ ಸರ್ಕಾರ, ಈ ಹಿಂದೆ ಕಾಂಗ್ರೆಸ್‌ ಮಾಡಿದ್ದ ಸಾರ್ವಜನಿಕ ಆಸ್ತಿಪಾಸ್ತಿ ಸಂಪತ್ತನ್ನು ತನ್ನಾಪ್ತ ಖಾಸಗಿಯವರಿಗೆ ಮಾರಿಕೊಂಡು ಬದುಕುತ್ತಿರುವ ಈ ಬಿಜೆಪಿ ಸರ್ಕಾರ ಯಾವುದೇ ಸಂಕೋಚ ನಾಚಿಕೆ ಇಲ್ಲದೆ ʼದಡ್ಡನಿಗೆ ಧೈರ್ಯ ಹೆಚ್ಚುʼ ಎಂಬಂತೆ ಮುನ್ನುಗ್ಗಿ ಧಾಳಿ ಮಾಡುವುದನ್ನು ಮಾತ್ರ ಕಲಿತಿದೆ. ಈ ಡಬಲ್‌ ಇಂಜಿನ್‌ನಲ್ಲಿ ಕಾಣುವುದೇನು? ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿದೆ. ಅದು ಚಲಿಸುತ್ತಲೇ ಇಲ್ಲ. ಅದು ಮಾಡುವ ಸದ್ದಿಗೆ ಕೆಲವರು ಜೈ ಜೈ ಅನ್ನುತ್ತಿದ್ದಾರೆ. ಈಗ ನಾವು ಏನು ಮಾಡಬೇಕು? ಮೊದಲು ಅದನ್ನು ಗುಜರಿಗೆ ಹಾಕಬೇಕಾಗಿದೆ. ಅದಕ್ಕೆ ನಾವು, ನಮ್ಮ ಜನರ ದನಿಗೆ ಸೊಲ್ಲು ಹಾಕಬೇಕಾಗಿದೆ ಎಂದರು.

ಇತ್ತೀಚೆಗೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಅವರಿಗೆ ಒಂದಿಷ್ಟು ತರುಣರು ಮುತ್ತಿಗೆ ಹಾಕಿ – ʼನೀವು, ನಿಮ್ಮ ನಾಯಕರು ನಮ್ಮ ಸಂವಿಧಾನವನ್ನೇ ಬದಲಾಯಿಸ್ತೀವಿ ಅಂತೀರಿ. ಯಾಕೆ ನಾವು ನಿಮಗೆ ಓಟು ಕೊಡಬೇಕು? ಅಂತ ಹಿಗ್ಗಾಮುಗ್ಗಾ ಕೇಳಿದಾಗ, ಆ ಠೇಂಕಾರದ, ಉಡಾಫೆಯ ಸಂಸದರ ಬಾಯಿ ಬಂದ್‌ ಆಗಿತ್ತು. ನಾನು ನಿನ್ನೆ ತಾನೇ ವರುಣಾ ಕ್ಷೇತ್ರಕ್ಕೆ ಒಂದು ರೌಂಡ್‌ ಹೋಗಿದ್ದೆ. ಅಲ್ಲೆ ಸಿಕ್ಕಿದ ಕೆಲವು ಹುಡುಗರಿಗೆ ʼಏನ್ರಪ್ಪಾ, ಸಂಸದನಿಗೇನೆ ಕುತ್ತಿಗೆ ಪಟ್ಟಿ ಹಿಡಿದುಕೊಂಡವರಂತೆ ಕೇಳಿದ್ದು ಸರಿನಾ?ʼ – ಸ್ವಲ್ಪ ಚಿತಾವಣೆ ಮಾಡಿದೆ. ಒಬ್ಬ ಹುಡುಗ ಹೇಳಿದ – “ನಮ್ಮ ಸಂವಿಧಾನ ಬದಲಾವಣೆ ಮಾಡಿ ಅವರ ʼಮನುಧರ್ಮಶಾಸ್ತ್ರʼ ಮತ್ತೆ ತರಬೇಕು ಅಂತ ಇದ್ದಾರೆ. ಹಾಗಾದರೆ ಈ ಹಿಂದೆ ಶೂದ್ರರು ಅಂದರೆ ಸೇವಕರಾಗಿದ್ದ ಒಕ್ಕಲಿಗರು ಲಿಂಗಾಯಿತರು ಮತ್ತೆ ಅವರಿಗೆ ಸೇವಕರಾಗಬೇಕಾ? ತಳಸಮುದಾಯಗಳು ಮತ್ತೆ ಕಾಲಾಳುಗಳಾಗಬೇಕಾ? ಈಗೀಗ ಊರೊಳಕ್ಕೆ ಬರುತ್ತಿರುವ ಅಸ್ಪೃಶ್ಯರು ಮತ್ತೆ ಊರಾಚೆಗೆ ಇರಬೇಕಾ? ಹಳ್ಳೀ ಮಕ್ಕಳ ಸ್ಕಾಲರ್‌ಶಿಪ್‌ ಕಿತ್ತುಕೊಳ್ಳುವ ಬಿಜೆಪಿ ಸರ್ಕಾರದ ಉದ್ದೇಶವಾದರೂ ಏನು?” ಹೀಗೆ ಮುಂದುವರೆದಿತ್ತು ಆ ಹುಡುಗನ ಒಡಲಾಳದ ಮಾತುಗಳು. ನನಗೆ ಅಬ್ಬಾಡೆ ಅನ್ನಿಸಿತು. ನಾನು ಮಾತಾಡಲಿಲ್ಲ. ಆ ಹುಡುಗನಿಗೆ ಒಂದು ಹಗ್‌ ಮಾಡಿದೆ ಎಂದು ತಿಳಿಸಿದರು.

ಬಹುಶಃ ಎದ್ದೇಳು ಕರ್ನಾಟಕ ಮಾಡಬಹುದಾದದ್ದು ಇಷ್ಟೇ ಅನ್ನಿಸುತ್ತದೆ. ಜನಸಮುದಾಯದ ಒಡಲಾಳದ ನುಡಿಗಳಿಗೆ ಅಪ್ಪುಗೆ ಹಾಗೂ ಮೆಚ್ಚುಗೆಯ ಒಂದು ಮುಗುಳ್ನಗೆ. ನೆನಪಿಟ್ಟುಕೊಳ್ಳಬೇಕು – ಎದ್ದೇಳು ಕರ್ನಾಟಕ ಯಾರದೂ ಅಲ್ಲ; ಎಲ್ಲರದು. ಎಲ್ಲೇ, ಯಾರೇ ತಾವೇ ಮಾಡಿಕೊಳ್ಳಬಹುದು. ಪರಸ್ಪರ ಮಾಹಿತಿ ಇರಲಿ, ಅಷ್ಟೇ. ಸಮುದಾಯದ ಎಚ್ಚರ ಮತ್ತು ವಿವೇಕವನ್ನು ವ್ಯಾಪಕಗೊಳಿಸಲು ಎದ್ದೇಳು ಕರ್ನಾಟಕ ವೇಗವರ್ಧಕದಂತೆ ಕೆಲಸ ಮಾಡುತ್ತದೆ. ಈಗ, ಮಂಗಳೂರಿನ ಕಡೆಯ ಒಂದು ಸುದ್ದಿ ಓದಿದೆ. ಅಲ್ಲಿನ ಮತದಾರರು, ಬಿಜೆಪಿ ಅಭ್ಯರ್ಥಿಗಳಿಗೆ ನಮ್ಮ ಅಕೌಂಟಿಗೆ 15 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ, ಅಕೌಂಟ್‌ಗೆ ಹಣ ಹಾಕಿ ಎಂದು ಕೇಳುತ್ತಿದ್ದಾರೆ ಅನ್ನುವುದೇ ಆ ಸುದ್ದಿ! ಜನ ಮರೆತು ಬಿಡುತ್ತಾರೆ ಅಂತಾರೆ. ಆದರೆ ಜನ ಮರೆತಿಲ್ಲ, ಪ್ರಶ್ನಿಸುತ್ತಿದ್ದಾರೆ. ಇದನ್ನು ಎಲ್ಲೆಡೆ ಹಬ್ಬಿಸಲು ಎದ್ದೇಳು ಕರ್ನಾಟಕ ಕ್ರಿಯಾಶೀಲವಾಗಬೇಕಾಗಿದೆ. ಹೀಗೇ ಅನೇಕ ಮತದಾರರು, ರಾಜ್ಯದಿಂದ ಕೇಂದ್ರಕ್ಕೆ ಹೋಗುವ ತೆರಿಗೆ ಎಷ್ಟು, ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲು ಎಷ್ಟು ಎಂದು ಕುಪಿತರಾಗಿ ಪ್ರಶ್ನಿಸುತ್ತಿದ್ದಾರೆ – ಇಂತಹ ಇನ್ನೆಷ್ಟೊ ಸಮುದಾಯದ ವಿವೇಕ ವಿವೇಚನೆಗಳಿಗೆ ಪ್ರಜ್ಞಾವಂತ ವ್ಯಕ್ತಿ, ಸಂಘಟನೆಗಳು ಜೊತೆಗೂಡಬೇಕಾಗಿದೆ. ಜೊತೆಗೂಡಿ, 15 ಲಕ್ಷ ಹಾಕುತ್ತೇವೆ ಎಂದು ಪ್ರಧಾನಿಯಾದ ಮೋದಿಯವರಿಗೆ ಕರ್ನಾಟಕಕ್ಕೆ ಬಂದಾಗಲೆಲ್ಲಾ ʼಅಕೌಂಟ್‌ಗೆ 15 ಲಕ್ಷ ಹಾಕಿʼ ಎಂದು ಕೇಳಬೇಕಾಗಿದೆ. ನೆನಪಿಡಿ, ಯಾವ ಕಾರಣಕ್ಕೂ ಗೃಹಸಚಿವ ಅಮಿತ್‌ ಶಾ ಅವರಿಗೆ ಈ ಪ್ರಶ್ನೆ ಕೇಳಬಾರದು. ಕೇಳಿದರೆ ಅವರು ಮುಗುಳ್ನಗೆಯಲ್ಲೆ ಕೊಲ್ಲುತ್ತಾರೆ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಪುನರುಚ್ಚರಿಸಿದರು.

ಆಮೇಲೆ ಏನು? ಈ ಸಂದಿಗ್ಧದ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಎದ್ದೇಳು ಕರ್ನಾಟಕ ತನ್ನ ಕರೆಯಲ್ಲಿ ಸ್ಪಷ್ಟವಾಗಿ ಹೇಳಿದೆ: “ಮುಂಬರುವ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತದೆ ಎಂಬುದಕ್ಕಿಂತ ಈ ಸುಲಿಗೆ ಸರ್ಕಾರ ಮೊದಲು ಸೋಲಬೇಕು. ಆಮೇಲೆ ಗೆದ್ದವರ ಜೊತೆ ಜನಹಿತದ ಮರುಸ್ಥಾಪನೆಗಾಗಿ ಗುದ್ದಾಡಬೇಕು. ಇದೇ ಪ್ರಜಾಪ್ರಭುತ್ವ ಉಳಿಸಿಕೊಳ್ಳುವ ಪ್ರಕ್ರಿಯೆ” ಎಂದು ದೇವನೂರು ಹೇಳಿದರು.

ಇನ್ನೊಂದು ಸಂದಿಗ್ಧ. ಹಾಗಾದರೆ ಯಾವ ಪಕ್ಷಕ್ಕೆ ಮತ ನೀಡಬೇಕು? ಭಾರತ್‌ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್‌ ಮರುಹುಟ್ಟು ಪಡೆದಂತೆ ಕಾಣಿಸುತ್ತಿದೆ. ಬಹುತೇಕ ಕಾಂಗ್ರೆಸ್‌ ಪಕ್ಷಕ್ಕೇನೇ ಮತ ನೀಡಬೇಕಾಗಿದೆ. ಪ್ರಗತಿಪರ ಪಕ್ಷಗಳು ಎಲ್ಲಿ ಸ್ಪರ್ಧೆ ನೀಡುತ್ತಿವೆ ಎಂದು ಭರವಸೆ ಇರುತ್ತದೋ ಅಲ್ಲಿ ನಾಕಾರು ಕಡೆ ಬೆಂಬಲಿಸಬೇಕಾಗಿದೆ. ಮತ್ತೊಂದು ಸಂದಿಗ್ಧ. ಕಾಂಗ್ರೆಸ್‌ ಮೂರನೆ ಸ್ಥಾನದಲ್ಲಿ ಇರುವ ಕಡೆ? ಜೆಡಿಎಸ್‌ ಎಲ್ಲೆಲ್ಲಿ ಬಿಜೆಪಿಯ ನೇರಸ್ಪರ್ಧಿಯಾಗಿರುವುದು ಖಚಿತವೋ ಅಲ್ಲಿ ಜೆಡಿಎಸ್‌ಗೆ ಮತ ನೀಡಬೇಕು. ಒಟ್ಟಿನಲ್ಲಿ ಸಂಘಪರಿವಾರದ ಬಿಜೆಪಿ ಸೋಲಬೇಕು. ಈ ದುಷ್ಟಶಕ್ತಿಯ ಹಲ್ಲು ಉಗುರು ಕಿತ್ತು ಅದರ ಜೀವವನ್ನೂ ಉಳಿಸಬೇಕು. ಇದು ನಮ್ಮೆಲ್ಲರ ಹೆಗಲ ಮೇಲಿರುವ ಹೊಣೆಗಾರಿಕೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಚಿಂತಕರಾದ ಯೋಗೇಂದ್ರ ಯಾದವ್, ರಹಮತ್ ತರೀಕೆರೆ, ತಾರಾ ರಾವ್, ತ್ರಿಲೋಚನ್ ಶಾಸ್ತ್ರಿ, ಯೂಸುಫ್ ಕಣ್ಣಿ, ವೀರಸಂಗಯ್ಯ ಮತ್ತು ಪ್ರೊ. ಜಾಫೆಟ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿ: ರಾಜ್ಯಪಾಲ ಹುದ್ದೆ ತೊರೆದ ಬಳಿಕ ಮಾತನಾಡುತ್ತಿದ್ದೇನೆ ಎನ್ನುವುದು ತಪ್ಪು: ಶಾಗೆ ಸತ್ಯಪಾಲ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...