Homeಮುಖಪುಟಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿಯಾಗಿದೆ.

- Advertisement -
- Advertisement -

ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿವೆ. ಅದು ಚಲಿಸುತ್ತಲೇ ಇಲ್ಲ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಎದ್ದೇಳು ಕರ್ನಾಟಕ ನಾಗರೀಕ ಅಭಿಯಾನ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಂದು ಮತದಾರರು ಹೆಚ್ಚು ಜಾಗೃತರಾಗಿದ್ದಾರೆ ಎಂದು ಅನ್ನಿಸುತ್ತಿದೆ. ಹಿಂದಿನ ಯಾವ ಚುನಾವಣೆಯಲ್ಲೂ ನಾನು ಇಷ್ಟೊಂದು ಜಾಗೃತ ಪ್ರಜ್ಞೆಯನ್ನು ಕಂಡಿಲ್ಲ. ಮತಯಾಚಿಸಿ ಬಂದ ಅಭ್ಯರ್ಥಿಗಳಿಗೆ ಮತದಾರರು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದಾರೆ. ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ” ಎಂದರು.

ʼಡಬಲ್‌ ಇಂಜಿನ್‌ ಸರ್ಕಾರʼ ಎಂಬ ಮಾತನ್ನು ಬಿಜೆಪಿಯ ಚಿಕ್ಕವರಿಂದ ದೊಡ್ಡನಾಯಕರವರೆಗೂ ಹೇಳಿ ಹೇಳಿ ಈಗ ಕರ್ನಾಟಕದ ಜನತೆಯ ಕಿವಿ ತೂತಾಗಿಬಿಟ್ಟಿರಹುದು. ಕೇಂದ್ರದಲ್ಲೂ ರಾಜ್ಯದಲ್ಲೂ ಒಂದೇ ಪಕ್ಷದ ಡಬಲ್‌ ಇಂಜಿನ್‌ ಸರ್ಕಾರ ಇದ್ದರೆ ಮಾತ್ರ ಅಭಿವೃದ್ಧಿಯೇ? ಇಂತಹ ಮಾತುಗಳನ್ನು ಪ್ರಜಾಪ್ರಭುತ್ವ, ಜನತಂತ್ರ ವ್ಯವಸ್ಥೆಯಲ್ಲಿ ಹೇಳುವುದು ಸರಿಯೆ? ಈ ಡಬಲ್‌ ಇಂಜಿನ್‌ ಸರ್ಕಾರ ಇದ್ದಲ್ಲಿ ಹೆಚ್ಚು ಅಭಿವೃದ್ಧಿ ಎನ್ನುವುದು ಒಕ್ಕೂಟ ವ್ಯವಸ್ಥೆಯ ಬುಡ ಅಲ್ಲಾಡಿಸಿದಂತಾಗುವುದಿಲ್ಲವೇ? ಹೀಗೆಲ್ಲಾ ನಾನು ತಲೆ ಕೆಡಿಸಿಕೊಂಡಿದ್ದೆ. ಆದರೆ ಮೊನ್ನೆ ತಾನೇ, ಚುನಾವಣಾ ಸಮೀಕ್ಷೆ ನಡೆಸುತ್ತಿದ್ದ ಟಿವಿ ಚಾನೆಲ್‌ಗೆ ನಮ್ಮ ಹಳ್ಳಿಗಾಡಿನ ವ್ಯಕ್ತಿಯೊಬ್ಬ ಕೇಳುತ್ತಾನೆ – ʼಡಬಲ್‌ ಇಂಜಿನ್‌ ಸರ್ಕಾರ ಅಂತಾರೆ! ಕಾಂಗ್ರೆಸ್‌ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡ್ತಾ ಇತ್ತು. ಬಿಜೆಪಿಯ ಈ ಡಬಲ್‌ ಇಂಜಿನ್‌ ಸರ್ಕಾರ 20 ಕೆ.ಜಿ ಕೊಡಬೇಕಿತ್ತು ತಾನೇ?ʼ. ಈ ಅನುಭವದ ಮಾತು, ಇಂದಿನ ಭ್ರಮಾತ್ಮಕ ಅಭಿವೃದ್ಧಿಗೆ ಮುಖಾಮುಖಿಯಾಗಿದೆ” ಎಂದರು.

ಇದೇ ರೀತಿ ಇನ್ನೊಂದು. ಇದೂ ಕೂಡ ಹಳ್ಳಿಗಾಡಿನ ಮಹಿಳೆಯ ಮಾತು – ʼಈ ಗ್ಯಾಸ್‌ ಬರೋಕು ಮೊದಲು ನಾವು ಅಷ್ಟೋ ಇಷ್ಟು ಸೌದೆ ತಂದು ಅಡಿಗೆ ಮಾಡ್ಕೊತ್ತಿದ್ದೊ, ಆಗ ಹೊಗೆಗೆ ಕಣ್ಣಲ್ಲಿ ನೀರು ಬರುತ್ತಿತ್ತು. ಈಗ ಗ್ಯಾಸ್‌ ಬೆಲೆ ಏರಿಕೆಯಾಗಿ ಕಣ್ಣಲ್ಲಿ ರಕ್ತ ಬರ್ತಾ ಇದೆʼ – ಇಂತಹ ಕರುಳ ನುಡಿಗಳು ಕರ್ನಾಟಕದ ಉದ್ದಗಲಕ್ಕೂ ಆಕ್ರಂದನ ಮಾಡುತ್ತಿವೆ ಎಂದರು.

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿ – ಹೀಗೆ ಸಾಗುತ್ತಿದೆ, ಈ ಸಂಘಪರಿವಾರದ ಬಿಜೆಪಿ ಸರ್ಕಾರದ ದುರಂತ ಕಥೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಯಿ ಬಿಟ್ಟರೆ ಕಾಂಗ್ರೆಸ್‌ ಏನು ಮಾಡ್ತು ಅಂತ ಲೇವಡಿ ಮಾಡುವ ಈ ಬಿಜೆಪಿ ಸರ್ಕಾರ, ಈ ಹಿಂದೆ ಕಾಂಗ್ರೆಸ್‌ ಮಾಡಿದ್ದ ಸಾರ್ವಜನಿಕ ಆಸ್ತಿಪಾಸ್ತಿ ಸಂಪತ್ತನ್ನು ತನ್ನಾಪ್ತ ಖಾಸಗಿಯವರಿಗೆ ಮಾರಿಕೊಂಡು ಬದುಕುತ್ತಿರುವ ಈ ಬಿಜೆಪಿ ಸರ್ಕಾರ ಯಾವುದೇ ಸಂಕೋಚ ನಾಚಿಕೆ ಇಲ್ಲದೆ ʼದಡ್ಡನಿಗೆ ಧೈರ್ಯ ಹೆಚ್ಚುʼ ಎಂಬಂತೆ ಮುನ್ನುಗ್ಗಿ ಧಾಳಿ ಮಾಡುವುದನ್ನು ಮಾತ್ರ ಕಲಿತಿದೆ. ಈ ಡಬಲ್‌ ಇಂಜಿನ್‌ನಲ್ಲಿ ಕಾಣುವುದೇನು? ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿದೆ. ಅದು ಚಲಿಸುತ್ತಲೇ ಇಲ್ಲ. ಅದು ಮಾಡುವ ಸದ್ದಿಗೆ ಕೆಲವರು ಜೈ ಜೈ ಅನ್ನುತ್ತಿದ್ದಾರೆ. ಈಗ ನಾವು ಏನು ಮಾಡಬೇಕು? ಮೊದಲು ಅದನ್ನು ಗುಜರಿಗೆ ಹಾಕಬೇಕಾಗಿದೆ. ಅದಕ್ಕೆ ನಾವು, ನಮ್ಮ ಜನರ ದನಿಗೆ ಸೊಲ್ಲು ಹಾಕಬೇಕಾಗಿದೆ ಎಂದರು.

ಇತ್ತೀಚೆಗೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಅವರಿಗೆ ಒಂದಿಷ್ಟು ತರುಣರು ಮುತ್ತಿಗೆ ಹಾಕಿ – ʼನೀವು, ನಿಮ್ಮ ನಾಯಕರು ನಮ್ಮ ಸಂವಿಧಾನವನ್ನೇ ಬದಲಾಯಿಸ್ತೀವಿ ಅಂತೀರಿ. ಯಾಕೆ ನಾವು ನಿಮಗೆ ಓಟು ಕೊಡಬೇಕು? ಅಂತ ಹಿಗ್ಗಾಮುಗ್ಗಾ ಕೇಳಿದಾಗ, ಆ ಠೇಂಕಾರದ, ಉಡಾಫೆಯ ಸಂಸದರ ಬಾಯಿ ಬಂದ್‌ ಆಗಿತ್ತು. ನಾನು ನಿನ್ನೆ ತಾನೇ ವರುಣಾ ಕ್ಷೇತ್ರಕ್ಕೆ ಒಂದು ರೌಂಡ್‌ ಹೋಗಿದ್ದೆ. ಅಲ್ಲೆ ಸಿಕ್ಕಿದ ಕೆಲವು ಹುಡುಗರಿಗೆ ʼಏನ್ರಪ್ಪಾ, ಸಂಸದನಿಗೇನೆ ಕುತ್ತಿಗೆ ಪಟ್ಟಿ ಹಿಡಿದುಕೊಂಡವರಂತೆ ಕೇಳಿದ್ದು ಸರಿನಾ?ʼ – ಸ್ವಲ್ಪ ಚಿತಾವಣೆ ಮಾಡಿದೆ. ಒಬ್ಬ ಹುಡುಗ ಹೇಳಿದ – “ನಮ್ಮ ಸಂವಿಧಾನ ಬದಲಾವಣೆ ಮಾಡಿ ಅವರ ʼಮನುಧರ್ಮಶಾಸ್ತ್ರʼ ಮತ್ತೆ ತರಬೇಕು ಅಂತ ಇದ್ದಾರೆ. ಹಾಗಾದರೆ ಈ ಹಿಂದೆ ಶೂದ್ರರು ಅಂದರೆ ಸೇವಕರಾಗಿದ್ದ ಒಕ್ಕಲಿಗರು ಲಿಂಗಾಯಿತರು ಮತ್ತೆ ಅವರಿಗೆ ಸೇವಕರಾಗಬೇಕಾ? ತಳಸಮುದಾಯಗಳು ಮತ್ತೆ ಕಾಲಾಳುಗಳಾಗಬೇಕಾ? ಈಗೀಗ ಊರೊಳಕ್ಕೆ ಬರುತ್ತಿರುವ ಅಸ್ಪೃಶ್ಯರು ಮತ್ತೆ ಊರಾಚೆಗೆ ಇರಬೇಕಾ? ಹಳ್ಳೀ ಮಕ್ಕಳ ಸ್ಕಾಲರ್‌ಶಿಪ್‌ ಕಿತ್ತುಕೊಳ್ಳುವ ಬಿಜೆಪಿ ಸರ್ಕಾರದ ಉದ್ದೇಶವಾದರೂ ಏನು?” ಹೀಗೆ ಮುಂದುವರೆದಿತ್ತು ಆ ಹುಡುಗನ ಒಡಲಾಳದ ಮಾತುಗಳು. ನನಗೆ ಅಬ್ಬಾಡೆ ಅನ್ನಿಸಿತು. ನಾನು ಮಾತಾಡಲಿಲ್ಲ. ಆ ಹುಡುಗನಿಗೆ ಒಂದು ಹಗ್‌ ಮಾಡಿದೆ ಎಂದು ತಿಳಿಸಿದರು.

ಬಹುಶಃ ಎದ್ದೇಳು ಕರ್ನಾಟಕ ಮಾಡಬಹುದಾದದ್ದು ಇಷ್ಟೇ ಅನ್ನಿಸುತ್ತದೆ. ಜನಸಮುದಾಯದ ಒಡಲಾಳದ ನುಡಿಗಳಿಗೆ ಅಪ್ಪುಗೆ ಹಾಗೂ ಮೆಚ್ಚುಗೆಯ ಒಂದು ಮುಗುಳ್ನಗೆ. ನೆನಪಿಟ್ಟುಕೊಳ್ಳಬೇಕು – ಎದ್ದೇಳು ಕರ್ನಾಟಕ ಯಾರದೂ ಅಲ್ಲ; ಎಲ್ಲರದು. ಎಲ್ಲೇ, ಯಾರೇ ತಾವೇ ಮಾಡಿಕೊಳ್ಳಬಹುದು. ಪರಸ್ಪರ ಮಾಹಿತಿ ಇರಲಿ, ಅಷ್ಟೇ. ಸಮುದಾಯದ ಎಚ್ಚರ ಮತ್ತು ವಿವೇಕವನ್ನು ವ್ಯಾಪಕಗೊಳಿಸಲು ಎದ್ದೇಳು ಕರ್ನಾಟಕ ವೇಗವರ್ಧಕದಂತೆ ಕೆಲಸ ಮಾಡುತ್ತದೆ. ಈಗ, ಮಂಗಳೂರಿನ ಕಡೆಯ ಒಂದು ಸುದ್ದಿ ಓದಿದೆ. ಅಲ್ಲಿನ ಮತದಾರರು, ಬಿಜೆಪಿ ಅಭ್ಯರ್ಥಿಗಳಿಗೆ ನಮ್ಮ ಅಕೌಂಟಿಗೆ 15 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ, ಅಕೌಂಟ್‌ಗೆ ಹಣ ಹಾಕಿ ಎಂದು ಕೇಳುತ್ತಿದ್ದಾರೆ ಅನ್ನುವುದೇ ಆ ಸುದ್ದಿ! ಜನ ಮರೆತು ಬಿಡುತ್ತಾರೆ ಅಂತಾರೆ. ಆದರೆ ಜನ ಮರೆತಿಲ್ಲ, ಪ್ರಶ್ನಿಸುತ್ತಿದ್ದಾರೆ. ಇದನ್ನು ಎಲ್ಲೆಡೆ ಹಬ್ಬಿಸಲು ಎದ್ದೇಳು ಕರ್ನಾಟಕ ಕ್ರಿಯಾಶೀಲವಾಗಬೇಕಾಗಿದೆ. ಹೀಗೇ ಅನೇಕ ಮತದಾರರು, ರಾಜ್ಯದಿಂದ ಕೇಂದ್ರಕ್ಕೆ ಹೋಗುವ ತೆರಿಗೆ ಎಷ್ಟು, ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲು ಎಷ್ಟು ಎಂದು ಕುಪಿತರಾಗಿ ಪ್ರಶ್ನಿಸುತ್ತಿದ್ದಾರೆ – ಇಂತಹ ಇನ್ನೆಷ್ಟೊ ಸಮುದಾಯದ ವಿವೇಕ ವಿವೇಚನೆಗಳಿಗೆ ಪ್ರಜ್ಞಾವಂತ ವ್ಯಕ್ತಿ, ಸಂಘಟನೆಗಳು ಜೊತೆಗೂಡಬೇಕಾಗಿದೆ. ಜೊತೆಗೂಡಿ, 15 ಲಕ್ಷ ಹಾಕುತ್ತೇವೆ ಎಂದು ಪ್ರಧಾನಿಯಾದ ಮೋದಿಯವರಿಗೆ ಕರ್ನಾಟಕಕ್ಕೆ ಬಂದಾಗಲೆಲ್ಲಾ ʼಅಕೌಂಟ್‌ಗೆ 15 ಲಕ್ಷ ಹಾಕಿʼ ಎಂದು ಕೇಳಬೇಕಾಗಿದೆ. ನೆನಪಿಡಿ, ಯಾವ ಕಾರಣಕ್ಕೂ ಗೃಹಸಚಿವ ಅಮಿತ್‌ ಶಾ ಅವರಿಗೆ ಈ ಪ್ರಶ್ನೆ ಕೇಳಬಾರದು. ಕೇಳಿದರೆ ಅವರು ಮುಗುಳ್ನಗೆಯಲ್ಲೆ ಕೊಲ್ಲುತ್ತಾರೆ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಪುನರುಚ್ಚರಿಸಿದರು.

ಆಮೇಲೆ ಏನು? ಈ ಸಂದಿಗ್ಧದ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಎದ್ದೇಳು ಕರ್ನಾಟಕ ತನ್ನ ಕರೆಯಲ್ಲಿ ಸ್ಪಷ್ಟವಾಗಿ ಹೇಳಿದೆ: “ಮುಂಬರುವ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತದೆ ಎಂಬುದಕ್ಕಿಂತ ಈ ಸುಲಿಗೆ ಸರ್ಕಾರ ಮೊದಲು ಸೋಲಬೇಕು. ಆಮೇಲೆ ಗೆದ್ದವರ ಜೊತೆ ಜನಹಿತದ ಮರುಸ್ಥಾಪನೆಗಾಗಿ ಗುದ್ದಾಡಬೇಕು. ಇದೇ ಪ್ರಜಾಪ್ರಭುತ್ವ ಉಳಿಸಿಕೊಳ್ಳುವ ಪ್ರಕ್ರಿಯೆ” ಎಂದು ದೇವನೂರು ಹೇಳಿದರು.

ಇನ್ನೊಂದು ಸಂದಿಗ್ಧ. ಹಾಗಾದರೆ ಯಾವ ಪಕ್ಷಕ್ಕೆ ಮತ ನೀಡಬೇಕು? ಭಾರತ್‌ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್‌ ಮರುಹುಟ್ಟು ಪಡೆದಂತೆ ಕಾಣಿಸುತ್ತಿದೆ. ಬಹುತೇಕ ಕಾಂಗ್ರೆಸ್‌ ಪಕ್ಷಕ್ಕೇನೇ ಮತ ನೀಡಬೇಕಾಗಿದೆ. ಪ್ರಗತಿಪರ ಪಕ್ಷಗಳು ಎಲ್ಲಿ ಸ್ಪರ್ಧೆ ನೀಡುತ್ತಿವೆ ಎಂದು ಭರವಸೆ ಇರುತ್ತದೋ ಅಲ್ಲಿ ನಾಕಾರು ಕಡೆ ಬೆಂಬಲಿಸಬೇಕಾಗಿದೆ. ಮತ್ತೊಂದು ಸಂದಿಗ್ಧ. ಕಾಂಗ್ರೆಸ್‌ ಮೂರನೆ ಸ್ಥಾನದಲ್ಲಿ ಇರುವ ಕಡೆ? ಜೆಡಿಎಸ್‌ ಎಲ್ಲೆಲ್ಲಿ ಬಿಜೆಪಿಯ ನೇರಸ್ಪರ್ಧಿಯಾಗಿರುವುದು ಖಚಿತವೋ ಅಲ್ಲಿ ಜೆಡಿಎಸ್‌ಗೆ ಮತ ನೀಡಬೇಕು. ಒಟ್ಟಿನಲ್ಲಿ ಸಂಘಪರಿವಾರದ ಬಿಜೆಪಿ ಸೋಲಬೇಕು. ಈ ದುಷ್ಟಶಕ್ತಿಯ ಹಲ್ಲು ಉಗುರು ಕಿತ್ತು ಅದರ ಜೀವವನ್ನೂ ಉಳಿಸಬೇಕು. ಇದು ನಮ್ಮೆಲ್ಲರ ಹೆಗಲ ಮೇಲಿರುವ ಹೊಣೆಗಾರಿಕೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಚಿಂತಕರಾದ ಯೋಗೇಂದ್ರ ಯಾದವ್, ರಹಮತ್ ತರೀಕೆರೆ, ತಾರಾ ರಾವ್, ತ್ರಿಲೋಚನ್ ಶಾಸ್ತ್ರಿ, ಯೂಸುಫ್ ಕಣ್ಣಿ, ವೀರಸಂಗಯ್ಯ ಮತ್ತು ಪ್ರೊ. ಜಾಫೆಟ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿ: ರಾಜ್ಯಪಾಲ ಹುದ್ದೆ ತೊರೆದ ಬಳಿಕ ಮಾತನಾಡುತ್ತಿದ್ದೇನೆ ಎನ್ನುವುದು ತಪ್ಪು: ಶಾಗೆ ಸತ್ಯಪಾಲ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...