Homeಮುಖಪುಟಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿಯಾಗಿದೆ.

- Advertisement -
- Advertisement -

ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿವೆ. ಅದು ಚಲಿಸುತ್ತಲೇ ಇಲ್ಲ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಎದ್ದೇಳು ಕರ್ನಾಟಕ ನಾಗರೀಕ ಅಭಿಯಾನ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಂದು ಮತದಾರರು ಹೆಚ್ಚು ಜಾಗೃತರಾಗಿದ್ದಾರೆ ಎಂದು ಅನ್ನಿಸುತ್ತಿದೆ. ಹಿಂದಿನ ಯಾವ ಚುನಾವಣೆಯಲ್ಲೂ ನಾನು ಇಷ್ಟೊಂದು ಜಾಗೃತ ಪ್ರಜ್ಞೆಯನ್ನು ಕಂಡಿಲ್ಲ. ಮತಯಾಚಿಸಿ ಬಂದ ಅಭ್ಯರ್ಥಿಗಳಿಗೆ ಮತದಾರರು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದಾರೆ. ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ” ಎಂದರು.

ʼಡಬಲ್‌ ಇಂಜಿನ್‌ ಸರ್ಕಾರʼ ಎಂಬ ಮಾತನ್ನು ಬಿಜೆಪಿಯ ಚಿಕ್ಕವರಿಂದ ದೊಡ್ಡನಾಯಕರವರೆಗೂ ಹೇಳಿ ಹೇಳಿ ಈಗ ಕರ್ನಾಟಕದ ಜನತೆಯ ಕಿವಿ ತೂತಾಗಿಬಿಟ್ಟಿರಹುದು. ಕೇಂದ್ರದಲ್ಲೂ ರಾಜ್ಯದಲ್ಲೂ ಒಂದೇ ಪಕ್ಷದ ಡಬಲ್‌ ಇಂಜಿನ್‌ ಸರ್ಕಾರ ಇದ್ದರೆ ಮಾತ್ರ ಅಭಿವೃದ್ಧಿಯೇ? ಇಂತಹ ಮಾತುಗಳನ್ನು ಪ್ರಜಾಪ್ರಭುತ್ವ, ಜನತಂತ್ರ ವ್ಯವಸ್ಥೆಯಲ್ಲಿ ಹೇಳುವುದು ಸರಿಯೆ? ಈ ಡಬಲ್‌ ಇಂಜಿನ್‌ ಸರ್ಕಾರ ಇದ್ದಲ್ಲಿ ಹೆಚ್ಚು ಅಭಿವೃದ್ಧಿ ಎನ್ನುವುದು ಒಕ್ಕೂಟ ವ್ಯವಸ್ಥೆಯ ಬುಡ ಅಲ್ಲಾಡಿಸಿದಂತಾಗುವುದಿಲ್ಲವೇ? ಹೀಗೆಲ್ಲಾ ನಾನು ತಲೆ ಕೆಡಿಸಿಕೊಂಡಿದ್ದೆ. ಆದರೆ ಮೊನ್ನೆ ತಾನೇ, ಚುನಾವಣಾ ಸಮೀಕ್ಷೆ ನಡೆಸುತ್ತಿದ್ದ ಟಿವಿ ಚಾನೆಲ್‌ಗೆ ನಮ್ಮ ಹಳ್ಳಿಗಾಡಿನ ವ್ಯಕ್ತಿಯೊಬ್ಬ ಕೇಳುತ್ತಾನೆ – ʼಡಬಲ್‌ ಇಂಜಿನ್‌ ಸರ್ಕಾರ ಅಂತಾರೆ! ಕಾಂಗ್ರೆಸ್‌ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡ್ತಾ ಇತ್ತು. ಬಿಜೆಪಿಯ ಈ ಡಬಲ್‌ ಇಂಜಿನ್‌ ಸರ್ಕಾರ 20 ಕೆ.ಜಿ ಕೊಡಬೇಕಿತ್ತು ತಾನೇ?ʼ. ಈ ಅನುಭವದ ಮಾತು, ಇಂದಿನ ಭ್ರಮಾತ್ಮಕ ಅಭಿವೃದ್ಧಿಗೆ ಮುಖಾಮುಖಿಯಾಗಿದೆ” ಎಂದರು.

ಇದೇ ರೀತಿ ಇನ್ನೊಂದು. ಇದೂ ಕೂಡ ಹಳ್ಳಿಗಾಡಿನ ಮಹಿಳೆಯ ಮಾತು – ʼಈ ಗ್ಯಾಸ್‌ ಬರೋಕು ಮೊದಲು ನಾವು ಅಷ್ಟೋ ಇಷ್ಟು ಸೌದೆ ತಂದು ಅಡಿಗೆ ಮಾಡ್ಕೊತ್ತಿದ್ದೊ, ಆಗ ಹೊಗೆಗೆ ಕಣ್ಣಲ್ಲಿ ನೀರು ಬರುತ್ತಿತ್ತು. ಈಗ ಗ್ಯಾಸ್‌ ಬೆಲೆ ಏರಿಕೆಯಾಗಿ ಕಣ್ಣಲ್ಲಿ ರಕ್ತ ಬರ್ತಾ ಇದೆʼ – ಇಂತಹ ಕರುಳ ನುಡಿಗಳು ಕರ್ನಾಟಕದ ಉದ್ದಗಲಕ್ಕೂ ಆಕ್ರಂದನ ಮಾಡುತ್ತಿವೆ ಎಂದರು.

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿ – ಹೀಗೆ ಸಾಗುತ್ತಿದೆ, ಈ ಸಂಘಪರಿವಾರದ ಬಿಜೆಪಿ ಸರ್ಕಾರದ ದುರಂತ ಕಥೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಯಿ ಬಿಟ್ಟರೆ ಕಾಂಗ್ರೆಸ್‌ ಏನು ಮಾಡ್ತು ಅಂತ ಲೇವಡಿ ಮಾಡುವ ಈ ಬಿಜೆಪಿ ಸರ್ಕಾರ, ಈ ಹಿಂದೆ ಕಾಂಗ್ರೆಸ್‌ ಮಾಡಿದ್ದ ಸಾರ್ವಜನಿಕ ಆಸ್ತಿಪಾಸ್ತಿ ಸಂಪತ್ತನ್ನು ತನ್ನಾಪ್ತ ಖಾಸಗಿಯವರಿಗೆ ಮಾರಿಕೊಂಡು ಬದುಕುತ್ತಿರುವ ಈ ಬಿಜೆಪಿ ಸರ್ಕಾರ ಯಾವುದೇ ಸಂಕೋಚ ನಾಚಿಕೆ ಇಲ್ಲದೆ ʼದಡ್ಡನಿಗೆ ಧೈರ್ಯ ಹೆಚ್ಚುʼ ಎಂಬಂತೆ ಮುನ್ನುಗ್ಗಿ ಧಾಳಿ ಮಾಡುವುದನ್ನು ಮಾತ್ರ ಕಲಿತಿದೆ. ಈ ಡಬಲ್‌ ಇಂಜಿನ್‌ನಲ್ಲಿ ಕಾಣುವುದೇನು? ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿದೆ. ಅದು ಚಲಿಸುತ್ತಲೇ ಇಲ್ಲ. ಅದು ಮಾಡುವ ಸದ್ದಿಗೆ ಕೆಲವರು ಜೈ ಜೈ ಅನ್ನುತ್ತಿದ್ದಾರೆ. ಈಗ ನಾವು ಏನು ಮಾಡಬೇಕು? ಮೊದಲು ಅದನ್ನು ಗುಜರಿಗೆ ಹಾಕಬೇಕಾಗಿದೆ. ಅದಕ್ಕೆ ನಾವು, ನಮ್ಮ ಜನರ ದನಿಗೆ ಸೊಲ್ಲು ಹಾಕಬೇಕಾಗಿದೆ ಎಂದರು.

ಇತ್ತೀಚೆಗೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಅವರಿಗೆ ಒಂದಿಷ್ಟು ತರುಣರು ಮುತ್ತಿಗೆ ಹಾಕಿ – ʼನೀವು, ನಿಮ್ಮ ನಾಯಕರು ನಮ್ಮ ಸಂವಿಧಾನವನ್ನೇ ಬದಲಾಯಿಸ್ತೀವಿ ಅಂತೀರಿ. ಯಾಕೆ ನಾವು ನಿಮಗೆ ಓಟು ಕೊಡಬೇಕು? ಅಂತ ಹಿಗ್ಗಾಮುಗ್ಗಾ ಕೇಳಿದಾಗ, ಆ ಠೇಂಕಾರದ, ಉಡಾಫೆಯ ಸಂಸದರ ಬಾಯಿ ಬಂದ್‌ ಆಗಿತ್ತು. ನಾನು ನಿನ್ನೆ ತಾನೇ ವರುಣಾ ಕ್ಷೇತ್ರಕ್ಕೆ ಒಂದು ರೌಂಡ್‌ ಹೋಗಿದ್ದೆ. ಅಲ್ಲೆ ಸಿಕ್ಕಿದ ಕೆಲವು ಹುಡುಗರಿಗೆ ʼಏನ್ರಪ್ಪಾ, ಸಂಸದನಿಗೇನೆ ಕುತ್ತಿಗೆ ಪಟ್ಟಿ ಹಿಡಿದುಕೊಂಡವರಂತೆ ಕೇಳಿದ್ದು ಸರಿನಾ?ʼ – ಸ್ವಲ್ಪ ಚಿತಾವಣೆ ಮಾಡಿದೆ. ಒಬ್ಬ ಹುಡುಗ ಹೇಳಿದ – “ನಮ್ಮ ಸಂವಿಧಾನ ಬದಲಾವಣೆ ಮಾಡಿ ಅವರ ʼಮನುಧರ್ಮಶಾಸ್ತ್ರʼ ಮತ್ತೆ ತರಬೇಕು ಅಂತ ಇದ್ದಾರೆ. ಹಾಗಾದರೆ ಈ ಹಿಂದೆ ಶೂದ್ರರು ಅಂದರೆ ಸೇವಕರಾಗಿದ್ದ ಒಕ್ಕಲಿಗರು ಲಿಂಗಾಯಿತರು ಮತ್ತೆ ಅವರಿಗೆ ಸೇವಕರಾಗಬೇಕಾ? ತಳಸಮುದಾಯಗಳು ಮತ್ತೆ ಕಾಲಾಳುಗಳಾಗಬೇಕಾ? ಈಗೀಗ ಊರೊಳಕ್ಕೆ ಬರುತ್ತಿರುವ ಅಸ್ಪೃಶ್ಯರು ಮತ್ತೆ ಊರಾಚೆಗೆ ಇರಬೇಕಾ? ಹಳ್ಳೀ ಮಕ್ಕಳ ಸ್ಕಾಲರ್‌ಶಿಪ್‌ ಕಿತ್ತುಕೊಳ್ಳುವ ಬಿಜೆಪಿ ಸರ್ಕಾರದ ಉದ್ದೇಶವಾದರೂ ಏನು?” ಹೀಗೆ ಮುಂದುವರೆದಿತ್ತು ಆ ಹುಡುಗನ ಒಡಲಾಳದ ಮಾತುಗಳು. ನನಗೆ ಅಬ್ಬಾಡೆ ಅನ್ನಿಸಿತು. ನಾನು ಮಾತಾಡಲಿಲ್ಲ. ಆ ಹುಡುಗನಿಗೆ ಒಂದು ಹಗ್‌ ಮಾಡಿದೆ ಎಂದು ತಿಳಿಸಿದರು.

ಬಹುಶಃ ಎದ್ದೇಳು ಕರ್ನಾಟಕ ಮಾಡಬಹುದಾದದ್ದು ಇಷ್ಟೇ ಅನ್ನಿಸುತ್ತದೆ. ಜನಸಮುದಾಯದ ಒಡಲಾಳದ ನುಡಿಗಳಿಗೆ ಅಪ್ಪುಗೆ ಹಾಗೂ ಮೆಚ್ಚುಗೆಯ ಒಂದು ಮುಗುಳ್ನಗೆ. ನೆನಪಿಟ್ಟುಕೊಳ್ಳಬೇಕು – ಎದ್ದೇಳು ಕರ್ನಾಟಕ ಯಾರದೂ ಅಲ್ಲ; ಎಲ್ಲರದು. ಎಲ್ಲೇ, ಯಾರೇ ತಾವೇ ಮಾಡಿಕೊಳ್ಳಬಹುದು. ಪರಸ್ಪರ ಮಾಹಿತಿ ಇರಲಿ, ಅಷ್ಟೇ. ಸಮುದಾಯದ ಎಚ್ಚರ ಮತ್ತು ವಿವೇಕವನ್ನು ವ್ಯಾಪಕಗೊಳಿಸಲು ಎದ್ದೇಳು ಕರ್ನಾಟಕ ವೇಗವರ್ಧಕದಂತೆ ಕೆಲಸ ಮಾಡುತ್ತದೆ. ಈಗ, ಮಂಗಳೂರಿನ ಕಡೆಯ ಒಂದು ಸುದ್ದಿ ಓದಿದೆ. ಅಲ್ಲಿನ ಮತದಾರರು, ಬಿಜೆಪಿ ಅಭ್ಯರ್ಥಿಗಳಿಗೆ ನಮ್ಮ ಅಕೌಂಟಿಗೆ 15 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ, ಅಕೌಂಟ್‌ಗೆ ಹಣ ಹಾಕಿ ಎಂದು ಕೇಳುತ್ತಿದ್ದಾರೆ ಅನ್ನುವುದೇ ಆ ಸುದ್ದಿ! ಜನ ಮರೆತು ಬಿಡುತ್ತಾರೆ ಅಂತಾರೆ. ಆದರೆ ಜನ ಮರೆತಿಲ್ಲ, ಪ್ರಶ್ನಿಸುತ್ತಿದ್ದಾರೆ. ಇದನ್ನು ಎಲ್ಲೆಡೆ ಹಬ್ಬಿಸಲು ಎದ್ದೇಳು ಕರ್ನಾಟಕ ಕ್ರಿಯಾಶೀಲವಾಗಬೇಕಾಗಿದೆ. ಹೀಗೇ ಅನೇಕ ಮತದಾರರು, ರಾಜ್ಯದಿಂದ ಕೇಂದ್ರಕ್ಕೆ ಹೋಗುವ ತೆರಿಗೆ ಎಷ್ಟು, ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲು ಎಷ್ಟು ಎಂದು ಕುಪಿತರಾಗಿ ಪ್ರಶ್ನಿಸುತ್ತಿದ್ದಾರೆ – ಇಂತಹ ಇನ್ನೆಷ್ಟೊ ಸಮುದಾಯದ ವಿವೇಕ ವಿವೇಚನೆಗಳಿಗೆ ಪ್ರಜ್ಞಾವಂತ ವ್ಯಕ್ತಿ, ಸಂಘಟನೆಗಳು ಜೊತೆಗೂಡಬೇಕಾಗಿದೆ. ಜೊತೆಗೂಡಿ, 15 ಲಕ್ಷ ಹಾಕುತ್ತೇವೆ ಎಂದು ಪ್ರಧಾನಿಯಾದ ಮೋದಿಯವರಿಗೆ ಕರ್ನಾಟಕಕ್ಕೆ ಬಂದಾಗಲೆಲ್ಲಾ ʼಅಕೌಂಟ್‌ಗೆ 15 ಲಕ್ಷ ಹಾಕಿʼ ಎಂದು ಕೇಳಬೇಕಾಗಿದೆ. ನೆನಪಿಡಿ, ಯಾವ ಕಾರಣಕ್ಕೂ ಗೃಹಸಚಿವ ಅಮಿತ್‌ ಶಾ ಅವರಿಗೆ ಈ ಪ್ರಶ್ನೆ ಕೇಳಬಾರದು. ಕೇಳಿದರೆ ಅವರು ಮುಗುಳ್ನಗೆಯಲ್ಲೆ ಕೊಲ್ಲುತ್ತಾರೆ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಪುನರುಚ್ಚರಿಸಿದರು.

ಆಮೇಲೆ ಏನು? ಈ ಸಂದಿಗ್ಧದ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಎದ್ದೇಳು ಕರ್ನಾಟಕ ತನ್ನ ಕರೆಯಲ್ಲಿ ಸ್ಪಷ್ಟವಾಗಿ ಹೇಳಿದೆ: “ಮುಂಬರುವ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತದೆ ಎಂಬುದಕ್ಕಿಂತ ಈ ಸುಲಿಗೆ ಸರ್ಕಾರ ಮೊದಲು ಸೋಲಬೇಕು. ಆಮೇಲೆ ಗೆದ್ದವರ ಜೊತೆ ಜನಹಿತದ ಮರುಸ್ಥಾಪನೆಗಾಗಿ ಗುದ್ದಾಡಬೇಕು. ಇದೇ ಪ್ರಜಾಪ್ರಭುತ್ವ ಉಳಿಸಿಕೊಳ್ಳುವ ಪ್ರಕ್ರಿಯೆ” ಎಂದು ದೇವನೂರು ಹೇಳಿದರು.

ಇನ್ನೊಂದು ಸಂದಿಗ್ಧ. ಹಾಗಾದರೆ ಯಾವ ಪಕ್ಷಕ್ಕೆ ಮತ ನೀಡಬೇಕು? ಭಾರತ್‌ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್‌ ಮರುಹುಟ್ಟು ಪಡೆದಂತೆ ಕಾಣಿಸುತ್ತಿದೆ. ಬಹುತೇಕ ಕಾಂಗ್ರೆಸ್‌ ಪಕ್ಷಕ್ಕೇನೇ ಮತ ನೀಡಬೇಕಾಗಿದೆ. ಪ್ರಗತಿಪರ ಪಕ್ಷಗಳು ಎಲ್ಲಿ ಸ್ಪರ್ಧೆ ನೀಡುತ್ತಿವೆ ಎಂದು ಭರವಸೆ ಇರುತ್ತದೋ ಅಲ್ಲಿ ನಾಕಾರು ಕಡೆ ಬೆಂಬಲಿಸಬೇಕಾಗಿದೆ. ಮತ್ತೊಂದು ಸಂದಿಗ್ಧ. ಕಾಂಗ್ರೆಸ್‌ ಮೂರನೆ ಸ್ಥಾನದಲ್ಲಿ ಇರುವ ಕಡೆ? ಜೆಡಿಎಸ್‌ ಎಲ್ಲೆಲ್ಲಿ ಬಿಜೆಪಿಯ ನೇರಸ್ಪರ್ಧಿಯಾಗಿರುವುದು ಖಚಿತವೋ ಅಲ್ಲಿ ಜೆಡಿಎಸ್‌ಗೆ ಮತ ನೀಡಬೇಕು. ಒಟ್ಟಿನಲ್ಲಿ ಸಂಘಪರಿವಾರದ ಬಿಜೆಪಿ ಸೋಲಬೇಕು. ಈ ದುಷ್ಟಶಕ್ತಿಯ ಹಲ್ಲು ಉಗುರು ಕಿತ್ತು ಅದರ ಜೀವವನ್ನೂ ಉಳಿಸಬೇಕು. ಇದು ನಮ್ಮೆಲ್ಲರ ಹೆಗಲ ಮೇಲಿರುವ ಹೊಣೆಗಾರಿಕೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಚಿಂತಕರಾದ ಯೋಗೇಂದ್ರ ಯಾದವ್, ರಹಮತ್ ತರೀಕೆರೆ, ತಾರಾ ರಾವ್, ತ್ರಿಲೋಚನ್ ಶಾಸ್ತ್ರಿ, ಯೂಸುಫ್ ಕಣ್ಣಿ, ವೀರಸಂಗಯ್ಯ ಮತ್ತು ಪ್ರೊ. ಜಾಫೆಟ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿ: ರಾಜ್ಯಪಾಲ ಹುದ್ದೆ ತೊರೆದ ಬಳಿಕ ಮಾತನಾಡುತ್ತಿದ್ದೇನೆ ಎನ್ನುವುದು ತಪ್ಪು: ಶಾಗೆ ಸತ್ಯಪಾಲ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...