Homeಮುಖಪುಟಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿಯಾಗಿದೆ.

- Advertisement -
- Advertisement -

ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿವೆ. ಅದು ಚಲಿಸುತ್ತಲೇ ಇಲ್ಲ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಎದ್ದೇಳು ಕರ್ನಾಟಕ ನಾಗರೀಕ ಅಭಿಯಾನ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಂದು ಮತದಾರರು ಹೆಚ್ಚು ಜಾಗೃತರಾಗಿದ್ದಾರೆ ಎಂದು ಅನ್ನಿಸುತ್ತಿದೆ. ಹಿಂದಿನ ಯಾವ ಚುನಾವಣೆಯಲ್ಲೂ ನಾನು ಇಷ್ಟೊಂದು ಜಾಗೃತ ಪ್ರಜ್ಞೆಯನ್ನು ಕಂಡಿಲ್ಲ. ಮತಯಾಚಿಸಿ ಬಂದ ಅಭ್ಯರ್ಥಿಗಳಿಗೆ ಮತದಾರರು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದಾರೆ. ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ” ಎಂದರು.

ʼಡಬಲ್‌ ಇಂಜಿನ್‌ ಸರ್ಕಾರʼ ಎಂಬ ಮಾತನ್ನು ಬಿಜೆಪಿಯ ಚಿಕ್ಕವರಿಂದ ದೊಡ್ಡನಾಯಕರವರೆಗೂ ಹೇಳಿ ಹೇಳಿ ಈಗ ಕರ್ನಾಟಕದ ಜನತೆಯ ಕಿವಿ ತೂತಾಗಿಬಿಟ್ಟಿರಹುದು. ಕೇಂದ್ರದಲ್ಲೂ ರಾಜ್ಯದಲ್ಲೂ ಒಂದೇ ಪಕ್ಷದ ಡಬಲ್‌ ಇಂಜಿನ್‌ ಸರ್ಕಾರ ಇದ್ದರೆ ಮಾತ್ರ ಅಭಿವೃದ್ಧಿಯೇ? ಇಂತಹ ಮಾತುಗಳನ್ನು ಪ್ರಜಾಪ್ರಭುತ್ವ, ಜನತಂತ್ರ ವ್ಯವಸ್ಥೆಯಲ್ಲಿ ಹೇಳುವುದು ಸರಿಯೆ? ಈ ಡಬಲ್‌ ಇಂಜಿನ್‌ ಸರ್ಕಾರ ಇದ್ದಲ್ಲಿ ಹೆಚ್ಚು ಅಭಿವೃದ್ಧಿ ಎನ್ನುವುದು ಒಕ್ಕೂಟ ವ್ಯವಸ್ಥೆಯ ಬುಡ ಅಲ್ಲಾಡಿಸಿದಂತಾಗುವುದಿಲ್ಲವೇ? ಹೀಗೆಲ್ಲಾ ನಾನು ತಲೆ ಕೆಡಿಸಿಕೊಂಡಿದ್ದೆ. ಆದರೆ ಮೊನ್ನೆ ತಾನೇ, ಚುನಾವಣಾ ಸಮೀಕ್ಷೆ ನಡೆಸುತ್ತಿದ್ದ ಟಿವಿ ಚಾನೆಲ್‌ಗೆ ನಮ್ಮ ಹಳ್ಳಿಗಾಡಿನ ವ್ಯಕ್ತಿಯೊಬ್ಬ ಕೇಳುತ್ತಾನೆ – ʼಡಬಲ್‌ ಇಂಜಿನ್‌ ಸರ್ಕಾರ ಅಂತಾರೆ! ಕಾಂಗ್ರೆಸ್‌ ಸರ್ಕಾರ ಇದ್ದಾಗ 10 ಕೆ.ಜಿ ಅಕ್ಕಿ ಕೊಡ್ತಾ ಇತ್ತು. ಬಿಜೆಪಿಯ ಈ ಡಬಲ್‌ ಇಂಜಿನ್‌ ಸರ್ಕಾರ 20 ಕೆ.ಜಿ ಕೊಡಬೇಕಿತ್ತು ತಾನೇ?ʼ. ಈ ಅನುಭವದ ಮಾತು, ಇಂದಿನ ಭ್ರಮಾತ್ಮಕ ಅಭಿವೃದ್ಧಿಗೆ ಮುಖಾಮುಖಿಯಾಗಿದೆ” ಎಂದರು.

ಇದೇ ರೀತಿ ಇನ್ನೊಂದು. ಇದೂ ಕೂಡ ಹಳ್ಳಿಗಾಡಿನ ಮಹಿಳೆಯ ಮಾತು – ʼಈ ಗ್ಯಾಸ್‌ ಬರೋಕು ಮೊದಲು ನಾವು ಅಷ್ಟೋ ಇಷ್ಟು ಸೌದೆ ತಂದು ಅಡಿಗೆ ಮಾಡ್ಕೊತ್ತಿದ್ದೊ, ಆಗ ಹೊಗೆಗೆ ಕಣ್ಣಲ್ಲಿ ನೀರು ಬರುತ್ತಿತ್ತು. ಈಗ ಗ್ಯಾಸ್‌ ಬೆಲೆ ಏರಿಕೆಯಾಗಿ ಕಣ್ಣಲ್ಲಿ ರಕ್ತ ಬರ್ತಾ ಇದೆʼ – ಇಂತಹ ಕರುಳ ನುಡಿಗಳು ಕರ್ನಾಟಕದ ಉದ್ದಗಲಕ್ಕೂ ಆಕ್ರಂದನ ಮಾಡುತ್ತಿವೆ ಎಂದರು.

ಈ ಡಬಲ್‌ ಇಂಜಿನ್‌ ಸರ್ಕಾರ ಮಾಡಿದ್ದೇನು? ಬೆಲೆ ಏರಿಕೆ ಅಭಿವೃದ್ಧಿ, ನಿರುದ್ಯೋಗದ ಏರಿಕೆ ಅಭಿವೃದ್ಧಿ, ಬಡತನದ ಏರಿಕೆ ಅಭಿವೃದ್ಧಿ, ಬಡವ ಬಲ್ಲಿದರ ನಡುವೆ ಅಂತರ ಏರಿಕೆ ಅಭಿವೃದ್ಧಿ – ಹೀಗೆ ಸಾಗುತ್ತಿದೆ, ಈ ಸಂಘಪರಿವಾರದ ಬಿಜೆಪಿ ಸರ್ಕಾರದ ದುರಂತ ಕಥೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಯಿ ಬಿಟ್ಟರೆ ಕಾಂಗ್ರೆಸ್‌ ಏನು ಮಾಡ್ತು ಅಂತ ಲೇವಡಿ ಮಾಡುವ ಈ ಬಿಜೆಪಿ ಸರ್ಕಾರ, ಈ ಹಿಂದೆ ಕಾಂಗ್ರೆಸ್‌ ಮಾಡಿದ್ದ ಸಾರ್ವಜನಿಕ ಆಸ್ತಿಪಾಸ್ತಿ ಸಂಪತ್ತನ್ನು ತನ್ನಾಪ್ತ ಖಾಸಗಿಯವರಿಗೆ ಮಾರಿಕೊಂಡು ಬದುಕುತ್ತಿರುವ ಈ ಬಿಜೆಪಿ ಸರ್ಕಾರ ಯಾವುದೇ ಸಂಕೋಚ ನಾಚಿಕೆ ಇಲ್ಲದೆ ʼದಡ್ಡನಿಗೆ ಧೈರ್ಯ ಹೆಚ್ಚುʼ ಎಂಬಂತೆ ಮುನ್ನುಗ್ಗಿ ಧಾಳಿ ಮಾಡುವುದನ್ನು ಮಾತ್ರ ಕಲಿತಿದೆ. ಈ ಡಬಲ್‌ ಇಂಜಿನ್‌ನಲ್ಲಿ ಕಾಣುವುದೇನು? ಒಂದು ಇಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಇಂಜಿನ್‌ ನುಂಗುವುದನ್ನು ಮಾಡುತ್ತಿದೆ. ಇಂಜಿನ್‌ ಜೋರಾಗಿ ಸದ್ದು ಮಾಡುತ್ತಿದೆ. ಅದು ಚಲಿಸುತ್ತಲೇ ಇಲ್ಲ. ಅದು ಮಾಡುವ ಸದ್ದಿಗೆ ಕೆಲವರು ಜೈ ಜೈ ಅನ್ನುತ್ತಿದ್ದಾರೆ. ಈಗ ನಾವು ಏನು ಮಾಡಬೇಕು? ಮೊದಲು ಅದನ್ನು ಗುಜರಿಗೆ ಹಾಕಬೇಕಾಗಿದೆ. ಅದಕ್ಕೆ ನಾವು, ನಮ್ಮ ಜನರ ದನಿಗೆ ಸೊಲ್ಲು ಹಾಕಬೇಕಾಗಿದೆ ಎಂದರು.

ಇತ್ತೀಚೆಗೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಪ್ರತಾಪ ಸಿಂಹ ಅವರಿಗೆ ಒಂದಿಷ್ಟು ತರುಣರು ಮುತ್ತಿಗೆ ಹಾಕಿ – ʼನೀವು, ನಿಮ್ಮ ನಾಯಕರು ನಮ್ಮ ಸಂವಿಧಾನವನ್ನೇ ಬದಲಾಯಿಸ್ತೀವಿ ಅಂತೀರಿ. ಯಾಕೆ ನಾವು ನಿಮಗೆ ಓಟು ಕೊಡಬೇಕು? ಅಂತ ಹಿಗ್ಗಾಮುಗ್ಗಾ ಕೇಳಿದಾಗ, ಆ ಠೇಂಕಾರದ, ಉಡಾಫೆಯ ಸಂಸದರ ಬಾಯಿ ಬಂದ್‌ ಆಗಿತ್ತು. ನಾನು ನಿನ್ನೆ ತಾನೇ ವರುಣಾ ಕ್ಷೇತ್ರಕ್ಕೆ ಒಂದು ರೌಂಡ್‌ ಹೋಗಿದ್ದೆ. ಅಲ್ಲೆ ಸಿಕ್ಕಿದ ಕೆಲವು ಹುಡುಗರಿಗೆ ʼಏನ್ರಪ್ಪಾ, ಸಂಸದನಿಗೇನೆ ಕುತ್ತಿಗೆ ಪಟ್ಟಿ ಹಿಡಿದುಕೊಂಡವರಂತೆ ಕೇಳಿದ್ದು ಸರಿನಾ?ʼ – ಸ್ವಲ್ಪ ಚಿತಾವಣೆ ಮಾಡಿದೆ. ಒಬ್ಬ ಹುಡುಗ ಹೇಳಿದ – “ನಮ್ಮ ಸಂವಿಧಾನ ಬದಲಾವಣೆ ಮಾಡಿ ಅವರ ʼಮನುಧರ್ಮಶಾಸ್ತ್ರʼ ಮತ್ತೆ ತರಬೇಕು ಅಂತ ಇದ್ದಾರೆ. ಹಾಗಾದರೆ ಈ ಹಿಂದೆ ಶೂದ್ರರು ಅಂದರೆ ಸೇವಕರಾಗಿದ್ದ ಒಕ್ಕಲಿಗರು ಲಿಂಗಾಯಿತರು ಮತ್ತೆ ಅವರಿಗೆ ಸೇವಕರಾಗಬೇಕಾ? ತಳಸಮುದಾಯಗಳು ಮತ್ತೆ ಕಾಲಾಳುಗಳಾಗಬೇಕಾ? ಈಗೀಗ ಊರೊಳಕ್ಕೆ ಬರುತ್ತಿರುವ ಅಸ್ಪೃಶ್ಯರು ಮತ್ತೆ ಊರಾಚೆಗೆ ಇರಬೇಕಾ? ಹಳ್ಳೀ ಮಕ್ಕಳ ಸ್ಕಾಲರ್‌ಶಿಪ್‌ ಕಿತ್ತುಕೊಳ್ಳುವ ಬಿಜೆಪಿ ಸರ್ಕಾರದ ಉದ್ದೇಶವಾದರೂ ಏನು?” ಹೀಗೆ ಮುಂದುವರೆದಿತ್ತು ಆ ಹುಡುಗನ ಒಡಲಾಳದ ಮಾತುಗಳು. ನನಗೆ ಅಬ್ಬಾಡೆ ಅನ್ನಿಸಿತು. ನಾನು ಮಾತಾಡಲಿಲ್ಲ. ಆ ಹುಡುಗನಿಗೆ ಒಂದು ಹಗ್‌ ಮಾಡಿದೆ ಎಂದು ತಿಳಿಸಿದರು.

ಬಹುಶಃ ಎದ್ದೇಳು ಕರ್ನಾಟಕ ಮಾಡಬಹುದಾದದ್ದು ಇಷ್ಟೇ ಅನ್ನಿಸುತ್ತದೆ. ಜನಸಮುದಾಯದ ಒಡಲಾಳದ ನುಡಿಗಳಿಗೆ ಅಪ್ಪುಗೆ ಹಾಗೂ ಮೆಚ್ಚುಗೆಯ ಒಂದು ಮುಗುಳ್ನಗೆ. ನೆನಪಿಟ್ಟುಕೊಳ್ಳಬೇಕು – ಎದ್ದೇಳು ಕರ್ನಾಟಕ ಯಾರದೂ ಅಲ್ಲ; ಎಲ್ಲರದು. ಎಲ್ಲೇ, ಯಾರೇ ತಾವೇ ಮಾಡಿಕೊಳ್ಳಬಹುದು. ಪರಸ್ಪರ ಮಾಹಿತಿ ಇರಲಿ, ಅಷ್ಟೇ. ಸಮುದಾಯದ ಎಚ್ಚರ ಮತ್ತು ವಿವೇಕವನ್ನು ವ್ಯಾಪಕಗೊಳಿಸಲು ಎದ್ದೇಳು ಕರ್ನಾಟಕ ವೇಗವರ್ಧಕದಂತೆ ಕೆಲಸ ಮಾಡುತ್ತದೆ. ಈಗ, ಮಂಗಳೂರಿನ ಕಡೆಯ ಒಂದು ಸುದ್ದಿ ಓದಿದೆ. ಅಲ್ಲಿನ ಮತದಾರರು, ಬಿಜೆಪಿ ಅಭ್ಯರ್ಥಿಗಳಿಗೆ ನಮ್ಮ ಅಕೌಂಟಿಗೆ 15 ಲಕ್ಷ ರೂಪಾಯಿ ಇನ್ನೂ ಬಂದಿಲ್ಲ, ಅಕೌಂಟ್‌ಗೆ ಹಣ ಹಾಕಿ ಎಂದು ಕೇಳುತ್ತಿದ್ದಾರೆ ಅನ್ನುವುದೇ ಆ ಸುದ್ದಿ! ಜನ ಮರೆತು ಬಿಡುತ್ತಾರೆ ಅಂತಾರೆ. ಆದರೆ ಜನ ಮರೆತಿಲ್ಲ, ಪ್ರಶ್ನಿಸುತ್ತಿದ್ದಾರೆ. ಇದನ್ನು ಎಲ್ಲೆಡೆ ಹಬ್ಬಿಸಲು ಎದ್ದೇಳು ಕರ್ನಾಟಕ ಕ್ರಿಯಾಶೀಲವಾಗಬೇಕಾಗಿದೆ. ಹೀಗೇ ಅನೇಕ ಮತದಾರರು, ರಾಜ್ಯದಿಂದ ಕೇಂದ್ರಕ್ಕೆ ಹೋಗುವ ತೆರಿಗೆ ಎಷ್ಟು, ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲು ಎಷ್ಟು ಎಂದು ಕುಪಿತರಾಗಿ ಪ್ರಶ್ನಿಸುತ್ತಿದ್ದಾರೆ – ಇಂತಹ ಇನ್ನೆಷ್ಟೊ ಸಮುದಾಯದ ವಿವೇಕ ವಿವೇಚನೆಗಳಿಗೆ ಪ್ರಜ್ಞಾವಂತ ವ್ಯಕ್ತಿ, ಸಂಘಟನೆಗಳು ಜೊತೆಗೂಡಬೇಕಾಗಿದೆ. ಜೊತೆಗೂಡಿ, 15 ಲಕ್ಷ ಹಾಕುತ್ತೇವೆ ಎಂದು ಪ್ರಧಾನಿಯಾದ ಮೋದಿಯವರಿಗೆ ಕರ್ನಾಟಕಕ್ಕೆ ಬಂದಾಗಲೆಲ್ಲಾ ʼಅಕೌಂಟ್‌ಗೆ 15 ಲಕ್ಷ ಹಾಕಿʼ ಎಂದು ಕೇಳಬೇಕಾಗಿದೆ. ನೆನಪಿಡಿ, ಯಾವ ಕಾರಣಕ್ಕೂ ಗೃಹಸಚಿವ ಅಮಿತ್‌ ಶಾ ಅವರಿಗೆ ಈ ಪ್ರಶ್ನೆ ಕೇಳಬಾರದು. ಕೇಳಿದರೆ ಅವರು ಮುಗುಳ್ನಗೆಯಲ್ಲೆ ಕೊಲ್ಲುತ್ತಾರೆ. ಹಾಗಾಗಿ ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ ಎಂದು ಪುನರುಚ್ಚರಿಸಿದರು.

ಆಮೇಲೆ ಏನು? ಈ ಸಂದಿಗ್ಧದ ಪ್ರಶ್ನೆ ಎದುರಾಗುತ್ತದೆ. ಇದಕ್ಕೆ ಎದ್ದೇಳು ಕರ್ನಾಟಕ ತನ್ನ ಕರೆಯಲ್ಲಿ ಸ್ಪಷ್ಟವಾಗಿ ಹೇಳಿದೆ: “ಮುಂಬರುವ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತದೆ ಎಂಬುದಕ್ಕಿಂತ ಈ ಸುಲಿಗೆ ಸರ್ಕಾರ ಮೊದಲು ಸೋಲಬೇಕು. ಆಮೇಲೆ ಗೆದ್ದವರ ಜೊತೆ ಜನಹಿತದ ಮರುಸ್ಥಾಪನೆಗಾಗಿ ಗುದ್ದಾಡಬೇಕು. ಇದೇ ಪ್ರಜಾಪ್ರಭುತ್ವ ಉಳಿಸಿಕೊಳ್ಳುವ ಪ್ರಕ್ರಿಯೆ” ಎಂದು ದೇವನೂರು ಹೇಳಿದರು.

ಇನ್ನೊಂದು ಸಂದಿಗ್ಧ. ಹಾಗಾದರೆ ಯಾವ ಪಕ್ಷಕ್ಕೆ ಮತ ನೀಡಬೇಕು? ಭಾರತ್‌ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್‌ ಮರುಹುಟ್ಟು ಪಡೆದಂತೆ ಕಾಣಿಸುತ್ತಿದೆ. ಬಹುತೇಕ ಕಾಂಗ್ರೆಸ್‌ ಪಕ್ಷಕ್ಕೇನೇ ಮತ ನೀಡಬೇಕಾಗಿದೆ. ಪ್ರಗತಿಪರ ಪಕ್ಷಗಳು ಎಲ್ಲಿ ಸ್ಪರ್ಧೆ ನೀಡುತ್ತಿವೆ ಎಂದು ಭರವಸೆ ಇರುತ್ತದೋ ಅಲ್ಲಿ ನಾಕಾರು ಕಡೆ ಬೆಂಬಲಿಸಬೇಕಾಗಿದೆ. ಮತ್ತೊಂದು ಸಂದಿಗ್ಧ. ಕಾಂಗ್ರೆಸ್‌ ಮೂರನೆ ಸ್ಥಾನದಲ್ಲಿ ಇರುವ ಕಡೆ? ಜೆಡಿಎಸ್‌ ಎಲ್ಲೆಲ್ಲಿ ಬಿಜೆಪಿಯ ನೇರಸ್ಪರ್ಧಿಯಾಗಿರುವುದು ಖಚಿತವೋ ಅಲ್ಲಿ ಜೆಡಿಎಸ್‌ಗೆ ಮತ ನೀಡಬೇಕು. ಒಟ್ಟಿನಲ್ಲಿ ಸಂಘಪರಿವಾರದ ಬಿಜೆಪಿ ಸೋಲಬೇಕು. ಈ ದುಷ್ಟಶಕ್ತಿಯ ಹಲ್ಲು ಉಗುರು ಕಿತ್ತು ಅದರ ಜೀವವನ್ನೂ ಉಳಿಸಬೇಕು. ಇದು ನಮ್ಮೆಲ್ಲರ ಹೆಗಲ ಮೇಲಿರುವ ಹೊಣೆಗಾರಿಕೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಚಿಂತಕರಾದ ಯೋಗೇಂದ್ರ ಯಾದವ್, ರಹಮತ್ ತರೀಕೆರೆ, ತಾರಾ ರಾವ್, ತ್ರಿಲೋಚನ್ ಶಾಸ್ತ್ರಿ, ಯೂಸುಫ್ ಕಣ್ಣಿ, ವೀರಸಂಗಯ್ಯ ಮತ್ತು ಪ್ರೊ. ಜಾಫೆಟ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿ: ರಾಜ್ಯಪಾಲ ಹುದ್ದೆ ತೊರೆದ ಬಳಿಕ ಮಾತನಾಡುತ್ತಿದ್ದೇನೆ ಎನ್ನುವುದು ತಪ್ಪು: ಶಾಗೆ ಸತ್ಯಪಾಲ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...