Homeಮುಖಪುಟಅಧಿಕಾರದ ಮದ ನಡೆಯುವುದಿಲ್ಲ ಎಂಬ ಸಂದೇಶ ರವಾನಿಸುವುದಕ್ಕಾಗಿ ಈ ಹೋರಾಟ: ಬಡಗಲಪುರ ನಾಗೇಂದ್ರ

ಅಧಿಕಾರದ ಮದ ನಡೆಯುವುದಿಲ್ಲ ಎಂಬ ಸಂದೇಶ ರವಾನಿಸುವುದಕ್ಕಾಗಿ ಈ ಹೋರಾಟ: ಬಡಗಲಪುರ ನಾಗೇಂದ್ರ

- Advertisement -
- Advertisement -

‘ನಮ್ಮ ರಾಜ್ಯದಲ್ಲಿ ಯಾರೊಬ್ಬರ ಅಧಿಕಾರದ ಮದವೂ ನಡೆಯುವುದಿಲ್ಲ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ರವಾನಿಸುವ ನಿಟ್ಟಿನಲ್ಲಿ ಈ ಹೋರಾಟ ರೂಪಿಸಲಾಗಿದೆ’ ಎಂದು ರೈತ ಸಂಘಟನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜ್ವಲ್‌ ಲೈಂಗಿಕ ಹಗರಣ ಖಂಡಿಸಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಒಂದು ವೇಳೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಗೆದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮಗೆ ಅಧಿಕಾರ ಹೊಂದಲು ಅವಕಾಶವಿಲ್ಲವೆಂದು ತಿಳಿಸಲು ನಾವು ಹಾಸನದ ಮಹಿಳೆಯರೊಂದಿಗೆ ಮತ್ತೊಮ್ಮೆ ಹೋರಾಟ ಮಾಡೋಣ” ಎಂದು ಕರೆ ನೀಡಿದರು.

ಹಿರಿಯ ಡಿಎಸ್‌ಎಸ್‌ ಮುಖಂಡರಾದ ಗುರುಪ್ರಸಾದ್ ಕೆರಗೋಡು ಮಾತನಾಡಿ, “ಮಾಜಿ ಪ್ರಧಾನಿಗಳೇ ನಿಮ್ಮ ಮೊಮ್ಮಗನ ಬಗ್ಗೆ ಮಾತನಾಡುವಾಗ ಕನಿಷ್ಟ ಕ್ಷಮೆ ಕೇಳುವ ವಿವೇಚನೆ ಇರಲಿಲ್ಲ ನಿಮಗೆ. ನಿಮ್ಮ ಹೇಳಿಕೆಗಳು ಖಂಡನೀಯ. ಕಾನೂನಿನ ವ್ಯವಸ್ಥೆಯಲ್ಲಿ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಕುಮಾರಸ್ವಾಮಿ ಹೇಳಿಕೆ ಕೊಡುತ್ತಿದ್ದಾರೆ. ಅಧಿಕಾರದ ದುರುಪಯೋಗ ಮಾಡಿಕೊಂಡು ಅತ್ಯಾಚಾರಗೈದ ನಿಮ್ಮ ಮೊಮ್ಮಗನನ್ನು ಕ್ಷಮಿಸಬಾರದು. ನೀವು ಇಡೀ ರಾಜ್ಯದ ಜನರ ಕ್ಷಮೆ ಕೇಳಬೇಕು. ದೇವೇಗೌಡರು ರಾಜಕೀಯ ನಿವೃತ್ತಿ ಪಡೆಯಬೇಕು. ಅವರ ಕುಟುಂಬಸ್ಥರ ರಾಜಕೀಯ ಅಂತ್ಯವಾಗಬೇಕು. ನಿಮ್ಮ ಅಧಿಕಾರ ದುರುಪಯೋಗದ ಕೆಲಸಗಳು ಸಾಕು” ಎಂದರು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, “ಮಾನಗೆಟ್ಟ ರಾಜಕಾರಣದ ವಿರುದ್ಧ ಈ ಹೋರಾಟ ಸತ್ಯದ ಕನ್ನಡಿ ಹಿಡಿಯುತ್ತಿದೆ. ಪ್ರಜ್ವಲ್ ರೇವಣ್ಣನಿಗೆ ಮರ್ಯಾದೆ ಇದ್ದಿದ್ದರೆ ಇಷ್ಟೊತ್ತಿಗೆ ರಾಜೀನಾಮೆ ಕೊಡಬೇಕಿತ್ತು. ನಾಡಿನ ಜನರ ಕ್ಷಮೆ ಕೇಳಬೇಕಿತ್ತು. ಜನರ ಸಮ್ಮುಖದಲ್ಲಿ ನ್ಯಾಯ ಕೊಡಿಸಬೇಕಿತ್ತು. ನಿಮ್ಮ ಸಮರ್ಥನೆ ಖಂಡನೀಯ. ಇದು ನಿಮಗೆ ಯಾವುದೇ ಗೌರವ ತರುವುದಿಲ್ಲ. ಆತನನ್ನು ಕುಟುಂಬದಿಂದ ಹೊರಗೆ ಹಾಕದೆ ಇರುವುದಕ್ಕೆ ನಮಗೆ ಬೇಸರ ಇದೆ” ಎಂದರು.

“ಪ್ರಜ್ವಲ್ ವಿರುದ್ಧ ಹಾಕಿರುವ ಎಫ್‌ಐಆರ್‌ಗಳು ಸ್ಟೇಷನ್ ಬೇಲ್‌ನಿಂದಲೆ ಹೊರಬರುವಷ್ಟು ಸರಳವಾಗಿವೆ. ಎಸ್‌ಐಟಿ ಒಂದು ತಿಂಗಳ ಬಳಿಕ ಪ್ರಜ್ವಲ್ ಅವರ ಹಾಸಿಗೆ, ದಿಂಬು ವಶಪಡಿಸಿಕೊಂಡಿದೆ. ದಯವಿಟ್ಟು ಅದರಲ್ಲಿ ಒಂದು ಕೂದಲು ಇರದಂತೆ ನೋಡಿಕೊಳ್ಳಿ” ಎಂದು ಪರೋಕ್ಷವಾಗಿ ವ್ಯಂಗ್ಯವಾಡಿದರು.

ವಿಡಿಯೋ ಹಂಚಿಕೆ ನಿಲ್ಲಿಸಿ

“ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕು. ಹಾದಿ ಬೀದಿಯಲ್ಲಿ ಚೆಲ್ಲಾಡುತ್ತಿರುವ ವೀಡಿಯೊಗಳನ್ನು ನಿಲ್ಲಿಸಬೇಕು. ವಿಡಿಯೋ ಹಂಚಿಕೆಯನ್ನು ನಿಲ್ಲಿಸದಿದ್ದರೆ ಸರ್ಕಾರದ ಮೇಲಿನ ವಿಶ್ವಾಸ ಹೋಗಲಿದೆ. ಈ ಹತ್ಯಾಕಾಂಡಕ್ಕೆ ತಾರ್ಕಿಕ ಅಂತ್ಯ ಹಾಡದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು” ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ; ಇಲ್ಲಿ ನಡೆದಿರುವುದು ಲೈಂಗಿಕ ಹಗರಣವಲ್ಲ.. ವಿಕೃತ ಲೈಂಗಿಕ ಹತ್ಯಾಕಾಂಡ: ರೂಪ ಹಾಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...