Homeಮುಖಪುಟಅಧಿಕಾರದ ಮದ ನಡೆಯುವುದಿಲ್ಲ ಎಂಬ ಸಂದೇಶ ರವಾನಿಸುವುದಕ್ಕಾಗಿ ಈ ಹೋರಾಟ: ಬಡಗಲಪುರ ನಾಗೇಂದ್ರ

ಅಧಿಕಾರದ ಮದ ನಡೆಯುವುದಿಲ್ಲ ಎಂಬ ಸಂದೇಶ ರವಾನಿಸುವುದಕ್ಕಾಗಿ ಈ ಹೋರಾಟ: ಬಡಗಲಪುರ ನಾಗೇಂದ್ರ

- Advertisement -
- Advertisement -

‘ನಮ್ಮ ರಾಜ್ಯದಲ್ಲಿ ಯಾರೊಬ್ಬರ ಅಧಿಕಾರದ ಮದವೂ ನಡೆಯುವುದಿಲ್ಲ ಎಂಬ ಸಂದೇಶವನ್ನು ಇಡೀ ರಾಜ್ಯಕ್ಕೆ ರವಾನಿಸುವ ನಿಟ್ಟಿನಲ್ಲಿ ಈ ಹೋರಾಟ ರೂಪಿಸಲಾಗಿದೆ’ ಎಂದು ರೈತ ಸಂಘಟನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜ್ವಲ್‌ ಲೈಂಗಿಕ ಹಗರಣ ಖಂಡಿಸಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಒಂದು ವೇಳೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಗೆದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮಗೆ ಅಧಿಕಾರ ಹೊಂದಲು ಅವಕಾಶವಿಲ್ಲವೆಂದು ತಿಳಿಸಲು ನಾವು ಹಾಸನದ ಮಹಿಳೆಯರೊಂದಿಗೆ ಮತ್ತೊಮ್ಮೆ ಹೋರಾಟ ಮಾಡೋಣ” ಎಂದು ಕರೆ ನೀಡಿದರು.

ಹಿರಿಯ ಡಿಎಸ್‌ಎಸ್‌ ಮುಖಂಡರಾದ ಗುರುಪ್ರಸಾದ್ ಕೆರಗೋಡು ಮಾತನಾಡಿ, “ಮಾಜಿ ಪ್ರಧಾನಿಗಳೇ ನಿಮ್ಮ ಮೊಮ್ಮಗನ ಬಗ್ಗೆ ಮಾತನಾಡುವಾಗ ಕನಿಷ್ಟ ಕ್ಷಮೆ ಕೇಳುವ ವಿವೇಚನೆ ಇರಲಿಲ್ಲ ನಿಮಗೆ. ನಿಮ್ಮ ಹೇಳಿಕೆಗಳು ಖಂಡನೀಯ. ಕಾನೂನಿನ ವ್ಯವಸ್ಥೆಯಲ್ಲಿ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಕುಮಾರಸ್ವಾಮಿ ಹೇಳಿಕೆ ಕೊಡುತ್ತಿದ್ದಾರೆ. ಅಧಿಕಾರದ ದುರುಪಯೋಗ ಮಾಡಿಕೊಂಡು ಅತ್ಯಾಚಾರಗೈದ ನಿಮ್ಮ ಮೊಮ್ಮಗನನ್ನು ಕ್ಷಮಿಸಬಾರದು. ನೀವು ಇಡೀ ರಾಜ್ಯದ ಜನರ ಕ್ಷಮೆ ಕೇಳಬೇಕು. ದೇವೇಗೌಡರು ರಾಜಕೀಯ ನಿವೃತ್ತಿ ಪಡೆಯಬೇಕು. ಅವರ ಕುಟುಂಬಸ್ಥರ ರಾಜಕೀಯ ಅಂತ್ಯವಾಗಬೇಕು. ನಿಮ್ಮ ಅಧಿಕಾರ ದುರುಪಯೋಗದ ಕೆಲಸಗಳು ಸಾಕು” ಎಂದರು.

ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾತನಾಡಿ, “ಮಾನಗೆಟ್ಟ ರಾಜಕಾರಣದ ವಿರುದ್ಧ ಈ ಹೋರಾಟ ಸತ್ಯದ ಕನ್ನಡಿ ಹಿಡಿಯುತ್ತಿದೆ. ಪ್ರಜ್ವಲ್ ರೇವಣ್ಣನಿಗೆ ಮರ್ಯಾದೆ ಇದ್ದಿದ್ದರೆ ಇಷ್ಟೊತ್ತಿಗೆ ರಾಜೀನಾಮೆ ಕೊಡಬೇಕಿತ್ತು. ನಾಡಿನ ಜನರ ಕ್ಷಮೆ ಕೇಳಬೇಕಿತ್ತು. ಜನರ ಸಮ್ಮುಖದಲ್ಲಿ ನ್ಯಾಯ ಕೊಡಿಸಬೇಕಿತ್ತು. ನಿಮ್ಮ ಸಮರ್ಥನೆ ಖಂಡನೀಯ. ಇದು ನಿಮಗೆ ಯಾವುದೇ ಗೌರವ ತರುವುದಿಲ್ಲ. ಆತನನ್ನು ಕುಟುಂಬದಿಂದ ಹೊರಗೆ ಹಾಕದೆ ಇರುವುದಕ್ಕೆ ನಮಗೆ ಬೇಸರ ಇದೆ” ಎಂದರು.

“ಪ್ರಜ್ವಲ್ ವಿರುದ್ಧ ಹಾಕಿರುವ ಎಫ್‌ಐಆರ್‌ಗಳು ಸ್ಟೇಷನ್ ಬೇಲ್‌ನಿಂದಲೆ ಹೊರಬರುವಷ್ಟು ಸರಳವಾಗಿವೆ. ಎಸ್‌ಐಟಿ ಒಂದು ತಿಂಗಳ ಬಳಿಕ ಪ್ರಜ್ವಲ್ ಅವರ ಹಾಸಿಗೆ, ದಿಂಬು ವಶಪಡಿಸಿಕೊಂಡಿದೆ. ದಯವಿಟ್ಟು ಅದರಲ್ಲಿ ಒಂದು ಕೂದಲು ಇರದಂತೆ ನೋಡಿಕೊಳ್ಳಿ” ಎಂದು ಪರೋಕ್ಷವಾಗಿ ವ್ಯಂಗ್ಯವಾಡಿದರು.

ವಿಡಿಯೋ ಹಂಚಿಕೆ ನಿಲ್ಲಿಸಿ

“ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕು. ಹಾದಿ ಬೀದಿಯಲ್ಲಿ ಚೆಲ್ಲಾಡುತ್ತಿರುವ ವೀಡಿಯೊಗಳನ್ನು ನಿಲ್ಲಿಸಬೇಕು. ವಿಡಿಯೋ ಹಂಚಿಕೆಯನ್ನು ನಿಲ್ಲಿಸದಿದ್ದರೆ ಸರ್ಕಾರದ ಮೇಲಿನ ವಿಶ್ವಾಸ ಹೋಗಲಿದೆ. ಈ ಹತ್ಯಾಕಾಂಡಕ್ಕೆ ತಾರ್ಕಿಕ ಅಂತ್ಯ ಹಾಡದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು” ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ; ಇಲ್ಲಿ ನಡೆದಿರುವುದು ಲೈಂಗಿಕ ಹಗರಣವಲ್ಲ.. ವಿಕೃತ ಲೈಂಗಿಕ ಹತ್ಯಾಕಾಂಡ: ರೂಪ ಹಾಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...