Homeಮುಖಪುಟ'ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ' ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

‘ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ’ ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ ಎನ್ನತ್ತಾರೆ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಚಿನ್ನದುರೈ...

- Advertisement -
- Advertisement -

ಚುನಾವಣೆಯಲ್ಲಿ ನಿಂತು ಗೆಲ್ಲಬೇಕು ಎಂದರೆ, ಸ್ಪರ್ಧಿಸುವವನು ಹಣವಂತನಾಗಿದ್ದರೆ ಮಾತ್ರ ಸಾಧ್ಯ ಎನ್ನುವ ಮಾತನ್ನು ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಮ್ಯನಿಸ್ಟ್ ಪಕ್ಷದ ಅಭ್ಯರ್ಥಿ ಚಿನ್ನದುರೈ ಸುಳ್ಳು ಮಾಡಲು ಹೊರಟಿದ್ದಾರೆ. ಪುದುಕೋಟ್ಟೈ ಜಿಲ್ಲೆಯ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದಿಂದ ಕಮ್ಯುನಿಸ್ಟ್ (ಮಾರ್ಕ್ಸಿಸ್ಟ್‌) ಪಕ್ಷದಿಂದ ಯಾವುದೇ ಆಸ್ತಿಯಿಲ್ಲದ, ಚಳವಳಿಯ ಹಿನ್ನೆಲೆಯಿರುವ ವ್ಯಕ್ತಿಯೊಬ್ಬರನ್ನು ಕಣಕ್ಕಿಳಿಸಲಾಗಿದೆ. ಇದು ಈ ಚುನಾವಣೆಯಲ್ಲಿ ಅತ್ಯಂತ ವಿಶೇಷವೆನಿಸಿದೆ.

ಮೂಲತಃ ಗಂಧರ್ವಕೋಟ್ಟೈನವರಾದ ಚಿನ್ನದುರೈ ಕಾರ್ಮಿಕರಾಗಿದ್ದಾಗಿನಿಂದಲೂ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಸಿಐಟಿಯುನಲ್ಲಿ ಸಕ್ರಿಯ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈಗ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕಾಮ್ರೇಡ್ ಟಾಕೀಸ್ ಎನ್ನುವ ಯೂಟ್ಯೂಬ್ ಚಾನೆಲ್ ಇವರ ಸಂದರ್ಶನ ಮಾಡಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಹೆಂಚಿನ ಮನೆಯಲ್ಲಿ ವಾಸಿಸುತ್ತಿರುವ ಇವರ ಬಳಿಯಿರುವ ಆಸ್ತಿ ಒಂದು ಟಾಟಾ ಏಸ್ ಮಾತ್ರ. ಇದನ್ನು ಚಿನ್ನದುರೈ ಅವರ ಮಗ ಬಾಡಿಗೆಗೆ ಓಡಿಸುತ್ತಾರೆ. ಇದೇ ಇವರ ಕುಟುಂಬದ ಮೂಲ ಆದಾಯ.

ಈ ಕುರಿತು ಸ್ವತಃ ಚಿನ್ನದುರೈ ಅವರೇ ಹೇಳಿರುವಂತೆ, “ನಾನು ನಾಮಪತ್ರ ಸಲ್ಲಿಸಲು ಹೋದಾಗ ಆಸ್ತಿ ವಿವರಗಳನ್ನು ಸಲ್ಲಿಸಬೆಕಾಗಿತ್ತು. ಜೊತೆಗೆ ಐಟಿ ವಿವರಗಳನ್ನು ಸಲ್ಲಿಸಬೇಕಾಗಿತ್ತು. ಆದರೆ ನನ್ನ ಬಳಿ ಆಸ್ತಿಯೆ ಇಲ್ಲದಿರುವುದರಿಂದ ಅದರ ವಿವರಗಳನ್ನು ಸಲ್ಲಿಸಿರಲಿಲ್ಲ. ಆದರೆ ಆಸ್ತಿ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಬಿಡದೇ ಒತ್ತಾಯ ಮಾಡುತ್ತಿದ್ದರು. ನಂತರ ನಮ್ಮ ಊರಿನ ಡಿಎಂಕೆ ಮುಖಂಡರು ಬಂದು ನೇರವಾಗಿ ಹೇಳಿದ ನಂತರ ನನಗೆ ತೊಂದರೆ ಕೊಡುವುದನ್ನು ನಿಲ್ಲಿಸಿದರು. ಠೇವಣಿ ಕಟ್ಟಲೂ ಸಹ ನನ್ನ ಬಳಿ ಹಣವಿರಲಿಲ್ಲ. ಊರಿನ ಮುಖಂಡರು, ಡಿಎಂಕೆ ಮುಖಂಡರು ಮತ್ತು ಇನ್ನೂ ಕೆಲವು ಸ್ನೇಹಿತರು ಸೇರಿ ಹಣ ಕಟ್ಟಿದರು. ಇದನ್ನು ನೋಡಿದಾಗ ನನಗೆ ಜನಸೇವೆ ಮಾಡಲು ಇನ್ನಷ್ಟು ಹುರುಪು ಹೆಚ್ಚಾಯಿತು” ಎನ್ನುತ್ತಾರೆ.

“ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ. ಆದರೆ ಕೆಲವರೆಲ್ಲಾ, ‘ನಿನ್ನ ಗಂಡ ಎಂಎಲ್‌ಎ ಆಗುತ್ತಾನಲ್ಲ. ನೀನ್ಯಾಕೆ ಆಡು ಮೇಯಿಸಲು ಬರುತ್ತೀಯ’ ಎಂದು ನನ್ನ ಹೆಂಡತಿಗೆ ಕೇಳುತ್ತಾರೆ. ಆದರೆ ಆಕೆ ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳದೆ ಪ್ರತಿನಿತ್ಯ ತನ್ನ ಕಾಯಕ ಮಾಡುತ್ತಾಳೆ. ಆದರೆ ನಮ್ಮ ಮುಖಂಡರು ಹೇಳುವಂತೆ, ನಾನು ಚುನಾವಣೆಯಲ್ಲಿ ಗೆದ್ದು 5 ವರ್ಷ ಸಂಪೂರ್ಣವಾಗಿ ಶಾಸಕನಾಗಿ ನನ್ನ ಜನರಿಗೆ ಸೇವೆ ಮಾಡಿದ ನಂತರವೂ ನಾನು ಹೀಗೇ ಇರುತ್ತೇನೆ” ಎಂದು ಆಶ್ವಾಸನೆ ನೀಡಿದ್ದಾರೆ.

“ನನ್ನ ಕ್ಷೇತ್ರದ ಬಹುಪಾಲು ಹಳ್ಳಿಗಳಿಗೆ ಬಸ್ ವ್ಯವಸ್ಥೆಯಿಲ್ಲ. ರಸ್ತೆಯೇ ಇಲ್ಲದಿರುವಾಗ ಬಸ್ ವ್ಯವಸ್ಥೆ ಇರಲು ಹೇಗೆ ಸಾಧ್ಯ. ಹಾಗಾಗಿ ಮೂಲಭೂತವಾಗಿ ಒಂದು ಹಳ್ಳಿಗೆ ಸಿಗಬೇಕಾದ ಯಾವುದೇ ಸೌಕರ್ಯಗಳೂ ಸಹ ಸಿಗುತ್ತಿಲ್ಲ. ಇದನ್ನು ಒದಗಿಸುವುದು ನನ್ನ ಆದ್ಯತೆ. ಇದರಲ್ಲಿ ಶಿಕ್ಷಣ ಮತ್ತು ಆರೋಗ್ಯದಂತಹ ವಿಷಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

“ನನಗೆ ಆಗ ತಿಂಗಳಿಗೆ ಕೇವಲ 50 ರೂ. ಸಂಬಳವಿತ್ತು. ಇದರ ಜೊತೆ 20 ರೂ.ಗಳನ್ನು ಸೇರಿಸಿ 70 ರೂ. ಸಂಬಳ ಕೊಡಿ ಎಂದು ಕೇಳಿದೆ. ಮಾಲೀಕ ಒಪ್ಪಲಿಲ್ಲ. ಆಗ ಸಿಐಟಿಯು ಸಂಘಟನೆ ಸೇರಿದೆ. ಆಗ ನನ್ನ ವಯಸ್ಸು 21. ಸಂಘಟನೆ ಸೇರಿದ ನಂತರ ನನ್ನ ಜೊತೆಗಿನ ಕಾರ್ಮಿಕರ ಹಕ್ಕುಗಳಿಗಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. ಇದಕ್ಕಾಗಿ 3 ಬಾರಿ ಜೈಲಿಗೂ ಹೋಗಿದ್ದೇನೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, “ತಮಿಳು ನೆಲದಲ್ಲಿ ಬಿಜೆಪಿಯನ್ನು ತಳವೂರಲು ಬಿಡಬಾರದು ಎನ್ನುವುದೇ ನಮ್ಮ ಮೈತ್ರಿಯ ಗುರಿಯಾಗಿದೆ. ಜೊತೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆ ಪಕ್ಷವನ್ನು 234 ಕ್ಷೇತ್ರಗಳಲ್ಲಿಯೂ ಸೋಲಿಸಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ. ಯಾಕೆಂದರೆ ಈ ಸರ್ಕಾರ ಕೃಷಿಕರಿಗೆ, ಕೃಷಿ ಕಾರ್ಮಿಕರಿಗಾಗಿ ಏನನ್ನೂ ಮಾಡಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಅನೈತಿಕ ಕಾನೂನುಗಳ ವಿರುದ್ಧ ದನಿಯೆತ್ತಿಲ್ಲ. ಅಪಾಯದಲ್ಲಿರುವ ತಮಿಳಿನ ಅಸ್ಮಿತೆಗಾಗಿ ಯಾವುದೇ ಕ್ರಮ ಕೈಗೊಂಡಿಲ್ಲ” ಎನ್ನುತ್ತಾರೆ.

ಇವರನ್ನು ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಕಮ್ಯನಿಸ್ಟ್ ಪಕ್ಷವು ತಾನು ತಳಸಮುದಾಯದ ಪರ ಎಂಬುದನ್ನು ಸಾಬೀತುಪಡಿಸಿದೆ.

ಪಂಚರಾಜ್ಯ ಚುನಾವಣೆಗಳು ಘೋಷಣೆಯಾಗಿದ್ದು, ಏಪ್ರಿಲ್ ತಿಂಗಳಿನಲ್ಲಿ ಮತದಾನ ನಡೆದು, ಮೇ ತಿಂಗಳಿನಲ್ಲಿ ಫಲಿತಾಂಶ ಹೊರಬೀಳಲಿದೆ.

ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್-ಕಮ್ಯುನಿಸ್ಟ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಎಐಎಡಿಎಂಕೆ ಪಕ್ಷವನ್ನು ಸೋಲಿಸಬೇಕು ಎಂಬ ಪಣತೊಟ್ಟಿವೆ. ಹಾಗಾಗಿ ತಮಿಳುನಾಡಿನ 234 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ಆಯ್ಕೆಯನ್ನು ಬಹಳ ಎಚ್ಚರದಿಂದ ಮಾಡಿದೆ.


ಇದನ್ನೂ ಓದಿ: ಸಂಪರ್ಕದ ಮೂಲಕ ಕೊರೊನಾ : ಭಾರತದಲ್ಲೇ ಅತಿ ಹೆಚ್ಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...