Homeಮುಖಪುಟ'ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ' ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

‘ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ’ ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ ಎನ್ನತ್ತಾರೆ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಚಿನ್ನದುರೈ...

- Advertisement -
- Advertisement -

ಚುನಾವಣೆಯಲ್ಲಿ ನಿಂತು ಗೆಲ್ಲಬೇಕು ಎಂದರೆ, ಸ್ಪರ್ಧಿಸುವವನು ಹಣವಂತನಾಗಿದ್ದರೆ ಮಾತ್ರ ಸಾಧ್ಯ ಎನ್ನುವ ಮಾತನ್ನು ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಮ್ಯನಿಸ್ಟ್ ಪಕ್ಷದ ಅಭ್ಯರ್ಥಿ ಚಿನ್ನದುರೈ ಸುಳ್ಳು ಮಾಡಲು ಹೊರಟಿದ್ದಾರೆ. ಪುದುಕೋಟ್ಟೈ ಜಿಲ್ಲೆಯ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದಿಂದ ಕಮ್ಯುನಿಸ್ಟ್ (ಮಾರ್ಕ್ಸಿಸ್ಟ್‌) ಪಕ್ಷದಿಂದ ಯಾವುದೇ ಆಸ್ತಿಯಿಲ್ಲದ, ಚಳವಳಿಯ ಹಿನ್ನೆಲೆಯಿರುವ ವ್ಯಕ್ತಿಯೊಬ್ಬರನ್ನು ಕಣಕ್ಕಿಳಿಸಲಾಗಿದೆ. ಇದು ಈ ಚುನಾವಣೆಯಲ್ಲಿ ಅತ್ಯಂತ ವಿಶೇಷವೆನಿಸಿದೆ.

ಮೂಲತಃ ಗಂಧರ್ವಕೋಟ್ಟೈನವರಾದ ಚಿನ್ನದುರೈ ಕಾರ್ಮಿಕರಾಗಿದ್ದಾಗಿನಿಂದಲೂ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಸಿಐಟಿಯುನಲ್ಲಿ ಸಕ್ರಿಯ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈಗ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕಾಮ್ರೇಡ್ ಟಾಕೀಸ್ ಎನ್ನುವ ಯೂಟ್ಯೂಬ್ ಚಾನೆಲ್ ಇವರ ಸಂದರ್ಶನ ಮಾಡಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಹೆಂಚಿನ ಮನೆಯಲ್ಲಿ ವಾಸಿಸುತ್ತಿರುವ ಇವರ ಬಳಿಯಿರುವ ಆಸ್ತಿ ಒಂದು ಟಾಟಾ ಏಸ್ ಮಾತ್ರ. ಇದನ್ನು ಚಿನ್ನದುರೈ ಅವರ ಮಗ ಬಾಡಿಗೆಗೆ ಓಡಿಸುತ್ತಾರೆ. ಇದೇ ಇವರ ಕುಟುಂಬದ ಮೂಲ ಆದಾಯ.

ಈ ಕುರಿತು ಸ್ವತಃ ಚಿನ್ನದುರೈ ಅವರೇ ಹೇಳಿರುವಂತೆ, “ನಾನು ನಾಮಪತ್ರ ಸಲ್ಲಿಸಲು ಹೋದಾಗ ಆಸ್ತಿ ವಿವರಗಳನ್ನು ಸಲ್ಲಿಸಬೆಕಾಗಿತ್ತು. ಜೊತೆಗೆ ಐಟಿ ವಿವರಗಳನ್ನು ಸಲ್ಲಿಸಬೇಕಾಗಿತ್ತು. ಆದರೆ ನನ್ನ ಬಳಿ ಆಸ್ತಿಯೆ ಇಲ್ಲದಿರುವುದರಿಂದ ಅದರ ವಿವರಗಳನ್ನು ಸಲ್ಲಿಸಿರಲಿಲ್ಲ. ಆದರೆ ಆಸ್ತಿ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಬಿಡದೇ ಒತ್ತಾಯ ಮಾಡುತ್ತಿದ್ದರು. ನಂತರ ನಮ್ಮ ಊರಿನ ಡಿಎಂಕೆ ಮುಖಂಡರು ಬಂದು ನೇರವಾಗಿ ಹೇಳಿದ ನಂತರ ನನಗೆ ತೊಂದರೆ ಕೊಡುವುದನ್ನು ನಿಲ್ಲಿಸಿದರು. ಠೇವಣಿ ಕಟ್ಟಲೂ ಸಹ ನನ್ನ ಬಳಿ ಹಣವಿರಲಿಲ್ಲ. ಊರಿನ ಮುಖಂಡರು, ಡಿಎಂಕೆ ಮುಖಂಡರು ಮತ್ತು ಇನ್ನೂ ಕೆಲವು ಸ್ನೇಹಿತರು ಸೇರಿ ಹಣ ಕಟ್ಟಿದರು. ಇದನ್ನು ನೋಡಿದಾಗ ನನಗೆ ಜನಸೇವೆ ಮಾಡಲು ಇನ್ನಷ್ಟು ಹುರುಪು ಹೆಚ್ಚಾಯಿತು” ಎನ್ನುತ್ತಾರೆ.

“ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ. ಆದರೆ ಕೆಲವರೆಲ್ಲಾ, ‘ನಿನ್ನ ಗಂಡ ಎಂಎಲ್‌ಎ ಆಗುತ್ತಾನಲ್ಲ. ನೀನ್ಯಾಕೆ ಆಡು ಮೇಯಿಸಲು ಬರುತ್ತೀಯ’ ಎಂದು ನನ್ನ ಹೆಂಡತಿಗೆ ಕೇಳುತ್ತಾರೆ. ಆದರೆ ಆಕೆ ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳದೆ ಪ್ರತಿನಿತ್ಯ ತನ್ನ ಕಾಯಕ ಮಾಡುತ್ತಾಳೆ. ಆದರೆ ನಮ್ಮ ಮುಖಂಡರು ಹೇಳುವಂತೆ, ನಾನು ಚುನಾವಣೆಯಲ್ಲಿ ಗೆದ್ದು 5 ವರ್ಷ ಸಂಪೂರ್ಣವಾಗಿ ಶಾಸಕನಾಗಿ ನನ್ನ ಜನರಿಗೆ ಸೇವೆ ಮಾಡಿದ ನಂತರವೂ ನಾನು ಹೀಗೇ ಇರುತ್ತೇನೆ” ಎಂದು ಆಶ್ವಾಸನೆ ನೀಡಿದ್ದಾರೆ.

“ನನ್ನ ಕ್ಷೇತ್ರದ ಬಹುಪಾಲು ಹಳ್ಳಿಗಳಿಗೆ ಬಸ್ ವ್ಯವಸ್ಥೆಯಿಲ್ಲ. ರಸ್ತೆಯೇ ಇಲ್ಲದಿರುವಾಗ ಬಸ್ ವ್ಯವಸ್ಥೆ ಇರಲು ಹೇಗೆ ಸಾಧ್ಯ. ಹಾಗಾಗಿ ಮೂಲಭೂತವಾಗಿ ಒಂದು ಹಳ್ಳಿಗೆ ಸಿಗಬೇಕಾದ ಯಾವುದೇ ಸೌಕರ್ಯಗಳೂ ಸಹ ಸಿಗುತ್ತಿಲ್ಲ. ಇದನ್ನು ಒದಗಿಸುವುದು ನನ್ನ ಆದ್ಯತೆ. ಇದರಲ್ಲಿ ಶಿಕ್ಷಣ ಮತ್ತು ಆರೋಗ್ಯದಂತಹ ವಿಷಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

“ನನಗೆ ಆಗ ತಿಂಗಳಿಗೆ ಕೇವಲ 50 ರೂ. ಸಂಬಳವಿತ್ತು. ಇದರ ಜೊತೆ 20 ರೂ.ಗಳನ್ನು ಸೇರಿಸಿ 70 ರೂ. ಸಂಬಳ ಕೊಡಿ ಎಂದು ಕೇಳಿದೆ. ಮಾಲೀಕ ಒಪ್ಪಲಿಲ್ಲ. ಆಗ ಸಿಐಟಿಯು ಸಂಘಟನೆ ಸೇರಿದೆ. ಆಗ ನನ್ನ ವಯಸ್ಸು 21. ಸಂಘಟನೆ ಸೇರಿದ ನಂತರ ನನ್ನ ಜೊತೆಗಿನ ಕಾರ್ಮಿಕರ ಹಕ್ಕುಗಳಿಗಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. ಇದಕ್ಕಾಗಿ 3 ಬಾರಿ ಜೈಲಿಗೂ ಹೋಗಿದ್ದೇನೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, “ತಮಿಳು ನೆಲದಲ್ಲಿ ಬಿಜೆಪಿಯನ್ನು ತಳವೂರಲು ಬಿಡಬಾರದು ಎನ್ನುವುದೇ ನಮ್ಮ ಮೈತ್ರಿಯ ಗುರಿಯಾಗಿದೆ. ಜೊತೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆ ಪಕ್ಷವನ್ನು 234 ಕ್ಷೇತ್ರಗಳಲ್ಲಿಯೂ ಸೋಲಿಸಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ. ಯಾಕೆಂದರೆ ಈ ಸರ್ಕಾರ ಕೃಷಿಕರಿಗೆ, ಕೃಷಿ ಕಾರ್ಮಿಕರಿಗಾಗಿ ಏನನ್ನೂ ಮಾಡಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಅನೈತಿಕ ಕಾನೂನುಗಳ ವಿರುದ್ಧ ದನಿಯೆತ್ತಿಲ್ಲ. ಅಪಾಯದಲ್ಲಿರುವ ತಮಿಳಿನ ಅಸ್ಮಿತೆಗಾಗಿ ಯಾವುದೇ ಕ್ರಮ ಕೈಗೊಂಡಿಲ್ಲ” ಎನ್ನುತ್ತಾರೆ.

ಇವರನ್ನು ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಕಮ್ಯನಿಸ್ಟ್ ಪಕ್ಷವು ತಾನು ತಳಸಮುದಾಯದ ಪರ ಎಂಬುದನ್ನು ಸಾಬೀತುಪಡಿಸಿದೆ.

ಪಂಚರಾಜ್ಯ ಚುನಾವಣೆಗಳು ಘೋಷಣೆಯಾಗಿದ್ದು, ಏಪ್ರಿಲ್ ತಿಂಗಳಿನಲ್ಲಿ ಮತದಾನ ನಡೆದು, ಮೇ ತಿಂಗಳಿನಲ್ಲಿ ಫಲಿತಾಂಶ ಹೊರಬೀಳಲಿದೆ.

ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್-ಕಮ್ಯುನಿಸ್ಟ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಎಐಎಡಿಎಂಕೆ ಪಕ್ಷವನ್ನು ಸೋಲಿಸಬೇಕು ಎಂಬ ಪಣತೊಟ್ಟಿವೆ. ಹಾಗಾಗಿ ತಮಿಳುನಾಡಿನ 234 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ಆಯ್ಕೆಯನ್ನು ಬಹಳ ಎಚ್ಚರದಿಂದ ಮಾಡಿದೆ.


ಇದನ್ನೂ ಓದಿ: ಸಂಪರ್ಕದ ಮೂಲಕ ಕೊರೊನಾ : ಭಾರತದಲ್ಲೇ ಅತಿ ಹೆಚ್ಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...