Homeಮುಖಪುಟ'ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ' ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

‘ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ’ ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ ಎನ್ನತ್ತಾರೆ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಚಿನ್ನದುರೈ...

- Advertisement -
- Advertisement -

ಚುನಾವಣೆಯಲ್ಲಿ ನಿಂತು ಗೆಲ್ಲಬೇಕು ಎಂದರೆ, ಸ್ಪರ್ಧಿಸುವವನು ಹಣವಂತನಾಗಿದ್ದರೆ ಮಾತ್ರ ಸಾಧ್ಯ ಎನ್ನುವ ಮಾತನ್ನು ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಮ್ಯನಿಸ್ಟ್ ಪಕ್ಷದ ಅಭ್ಯರ್ಥಿ ಚಿನ್ನದುರೈ ಸುಳ್ಳು ಮಾಡಲು ಹೊರಟಿದ್ದಾರೆ. ಪುದುಕೋಟ್ಟೈ ಜಿಲ್ಲೆಯ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದಿಂದ ಕಮ್ಯುನಿಸ್ಟ್ (ಮಾರ್ಕ್ಸಿಸ್ಟ್‌) ಪಕ್ಷದಿಂದ ಯಾವುದೇ ಆಸ್ತಿಯಿಲ್ಲದ, ಚಳವಳಿಯ ಹಿನ್ನೆಲೆಯಿರುವ ವ್ಯಕ್ತಿಯೊಬ್ಬರನ್ನು ಕಣಕ್ಕಿಳಿಸಲಾಗಿದೆ. ಇದು ಈ ಚುನಾವಣೆಯಲ್ಲಿ ಅತ್ಯಂತ ವಿಶೇಷವೆನಿಸಿದೆ.

ಮೂಲತಃ ಗಂಧರ್ವಕೋಟ್ಟೈನವರಾದ ಚಿನ್ನದುರೈ ಕಾರ್ಮಿಕರಾಗಿದ್ದಾಗಿನಿಂದಲೂ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಸಿಐಟಿಯುನಲ್ಲಿ ಸಕ್ರಿಯ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈಗ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕಾಮ್ರೇಡ್ ಟಾಕೀಸ್ ಎನ್ನುವ ಯೂಟ್ಯೂಬ್ ಚಾನೆಲ್ ಇವರ ಸಂದರ್ಶನ ಮಾಡಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಹೆಂಚಿನ ಮನೆಯಲ್ಲಿ ವಾಸಿಸುತ್ತಿರುವ ಇವರ ಬಳಿಯಿರುವ ಆಸ್ತಿ ಒಂದು ಟಾಟಾ ಏಸ್ ಮಾತ್ರ. ಇದನ್ನು ಚಿನ್ನದುರೈ ಅವರ ಮಗ ಬಾಡಿಗೆಗೆ ಓಡಿಸುತ್ತಾರೆ. ಇದೇ ಇವರ ಕುಟುಂಬದ ಮೂಲ ಆದಾಯ.

ಈ ಕುರಿತು ಸ್ವತಃ ಚಿನ್ನದುರೈ ಅವರೇ ಹೇಳಿರುವಂತೆ, “ನಾನು ನಾಮಪತ್ರ ಸಲ್ಲಿಸಲು ಹೋದಾಗ ಆಸ್ತಿ ವಿವರಗಳನ್ನು ಸಲ್ಲಿಸಬೆಕಾಗಿತ್ತು. ಜೊತೆಗೆ ಐಟಿ ವಿವರಗಳನ್ನು ಸಲ್ಲಿಸಬೇಕಾಗಿತ್ತು. ಆದರೆ ನನ್ನ ಬಳಿ ಆಸ್ತಿಯೆ ಇಲ್ಲದಿರುವುದರಿಂದ ಅದರ ವಿವರಗಳನ್ನು ಸಲ್ಲಿಸಿರಲಿಲ್ಲ. ಆದರೆ ಆಸ್ತಿ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಬಿಡದೇ ಒತ್ತಾಯ ಮಾಡುತ್ತಿದ್ದರು. ನಂತರ ನಮ್ಮ ಊರಿನ ಡಿಎಂಕೆ ಮುಖಂಡರು ಬಂದು ನೇರವಾಗಿ ಹೇಳಿದ ನಂತರ ನನಗೆ ತೊಂದರೆ ಕೊಡುವುದನ್ನು ನಿಲ್ಲಿಸಿದರು. ಠೇವಣಿ ಕಟ್ಟಲೂ ಸಹ ನನ್ನ ಬಳಿ ಹಣವಿರಲಿಲ್ಲ. ಊರಿನ ಮುಖಂಡರು, ಡಿಎಂಕೆ ಮುಖಂಡರು ಮತ್ತು ಇನ್ನೂ ಕೆಲವು ಸ್ನೇಹಿತರು ಸೇರಿ ಹಣ ಕಟ್ಟಿದರು. ಇದನ್ನು ನೋಡಿದಾಗ ನನಗೆ ಜನಸೇವೆ ಮಾಡಲು ಇನ್ನಷ್ಟು ಹುರುಪು ಹೆಚ್ಚಾಯಿತು” ಎನ್ನುತ್ತಾರೆ.

“ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ. ಆದರೆ ಕೆಲವರೆಲ್ಲಾ, ‘ನಿನ್ನ ಗಂಡ ಎಂಎಲ್‌ಎ ಆಗುತ್ತಾನಲ್ಲ. ನೀನ್ಯಾಕೆ ಆಡು ಮೇಯಿಸಲು ಬರುತ್ತೀಯ’ ಎಂದು ನನ್ನ ಹೆಂಡತಿಗೆ ಕೇಳುತ್ತಾರೆ. ಆದರೆ ಆಕೆ ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳದೆ ಪ್ರತಿನಿತ್ಯ ತನ್ನ ಕಾಯಕ ಮಾಡುತ್ತಾಳೆ. ಆದರೆ ನಮ್ಮ ಮುಖಂಡರು ಹೇಳುವಂತೆ, ನಾನು ಚುನಾವಣೆಯಲ್ಲಿ ಗೆದ್ದು 5 ವರ್ಷ ಸಂಪೂರ್ಣವಾಗಿ ಶಾಸಕನಾಗಿ ನನ್ನ ಜನರಿಗೆ ಸೇವೆ ಮಾಡಿದ ನಂತರವೂ ನಾನು ಹೀಗೇ ಇರುತ್ತೇನೆ” ಎಂದು ಆಶ್ವಾಸನೆ ನೀಡಿದ್ದಾರೆ.

“ನನ್ನ ಕ್ಷೇತ್ರದ ಬಹುಪಾಲು ಹಳ್ಳಿಗಳಿಗೆ ಬಸ್ ವ್ಯವಸ್ಥೆಯಿಲ್ಲ. ರಸ್ತೆಯೇ ಇಲ್ಲದಿರುವಾಗ ಬಸ್ ವ್ಯವಸ್ಥೆ ಇರಲು ಹೇಗೆ ಸಾಧ್ಯ. ಹಾಗಾಗಿ ಮೂಲಭೂತವಾಗಿ ಒಂದು ಹಳ್ಳಿಗೆ ಸಿಗಬೇಕಾದ ಯಾವುದೇ ಸೌಕರ್ಯಗಳೂ ಸಹ ಸಿಗುತ್ತಿಲ್ಲ. ಇದನ್ನು ಒದಗಿಸುವುದು ನನ್ನ ಆದ್ಯತೆ. ಇದರಲ್ಲಿ ಶಿಕ್ಷಣ ಮತ್ತು ಆರೋಗ್ಯದಂತಹ ವಿಷಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

“ನನಗೆ ಆಗ ತಿಂಗಳಿಗೆ ಕೇವಲ 50 ರೂ. ಸಂಬಳವಿತ್ತು. ಇದರ ಜೊತೆ 20 ರೂ.ಗಳನ್ನು ಸೇರಿಸಿ 70 ರೂ. ಸಂಬಳ ಕೊಡಿ ಎಂದು ಕೇಳಿದೆ. ಮಾಲೀಕ ಒಪ್ಪಲಿಲ್ಲ. ಆಗ ಸಿಐಟಿಯು ಸಂಘಟನೆ ಸೇರಿದೆ. ಆಗ ನನ್ನ ವಯಸ್ಸು 21. ಸಂಘಟನೆ ಸೇರಿದ ನಂತರ ನನ್ನ ಜೊತೆಗಿನ ಕಾರ್ಮಿಕರ ಹಕ್ಕುಗಳಿಗಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. ಇದಕ್ಕಾಗಿ 3 ಬಾರಿ ಜೈಲಿಗೂ ಹೋಗಿದ್ದೇನೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, “ತಮಿಳು ನೆಲದಲ್ಲಿ ಬಿಜೆಪಿಯನ್ನು ತಳವೂರಲು ಬಿಡಬಾರದು ಎನ್ನುವುದೇ ನಮ್ಮ ಮೈತ್ರಿಯ ಗುರಿಯಾಗಿದೆ. ಜೊತೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆ ಪಕ್ಷವನ್ನು 234 ಕ್ಷೇತ್ರಗಳಲ್ಲಿಯೂ ಸೋಲಿಸಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ. ಯಾಕೆಂದರೆ ಈ ಸರ್ಕಾರ ಕೃಷಿಕರಿಗೆ, ಕೃಷಿ ಕಾರ್ಮಿಕರಿಗಾಗಿ ಏನನ್ನೂ ಮಾಡಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಅನೈತಿಕ ಕಾನೂನುಗಳ ವಿರುದ್ಧ ದನಿಯೆತ್ತಿಲ್ಲ. ಅಪಾಯದಲ್ಲಿರುವ ತಮಿಳಿನ ಅಸ್ಮಿತೆಗಾಗಿ ಯಾವುದೇ ಕ್ರಮ ಕೈಗೊಂಡಿಲ್ಲ” ಎನ್ನುತ್ತಾರೆ.

ಇವರನ್ನು ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಕಮ್ಯನಿಸ್ಟ್ ಪಕ್ಷವು ತಾನು ತಳಸಮುದಾಯದ ಪರ ಎಂಬುದನ್ನು ಸಾಬೀತುಪಡಿಸಿದೆ.

ಪಂಚರಾಜ್ಯ ಚುನಾವಣೆಗಳು ಘೋಷಣೆಯಾಗಿದ್ದು, ಏಪ್ರಿಲ್ ತಿಂಗಳಿನಲ್ಲಿ ಮತದಾನ ನಡೆದು, ಮೇ ತಿಂಗಳಿನಲ್ಲಿ ಫಲಿತಾಂಶ ಹೊರಬೀಳಲಿದೆ.

ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್-ಕಮ್ಯುನಿಸ್ಟ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಎಐಎಡಿಎಂಕೆ ಪಕ್ಷವನ್ನು ಸೋಲಿಸಬೇಕು ಎಂಬ ಪಣತೊಟ್ಟಿವೆ. ಹಾಗಾಗಿ ತಮಿಳುನಾಡಿನ 234 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ಆಯ್ಕೆಯನ್ನು ಬಹಳ ಎಚ್ಚರದಿಂದ ಮಾಡಿದೆ.


ಇದನ್ನೂ ಓದಿ: ಸಂಪರ್ಕದ ಮೂಲಕ ಕೊರೊನಾ : ಭಾರತದಲ್ಲೇ ಅತಿ ಹೆಚ್ಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...