Homeಮುಖಪುಟ'ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ' ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

‘ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ’ ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ ಎನ್ನತ್ತಾರೆ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಚಿನ್ನದುರೈ...

- Advertisement -
- Advertisement -

ಚುನಾವಣೆಯಲ್ಲಿ ನಿಂತು ಗೆಲ್ಲಬೇಕು ಎಂದರೆ, ಸ್ಪರ್ಧಿಸುವವನು ಹಣವಂತನಾಗಿದ್ದರೆ ಮಾತ್ರ ಸಾಧ್ಯ ಎನ್ನುವ ಮಾತನ್ನು ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಮ್ಯನಿಸ್ಟ್ ಪಕ್ಷದ ಅಭ್ಯರ್ಥಿ ಚಿನ್ನದುರೈ ಸುಳ್ಳು ಮಾಡಲು ಹೊರಟಿದ್ದಾರೆ. ಪುದುಕೋಟ್ಟೈ ಜಿಲ್ಲೆಯ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದಿಂದ ಕಮ್ಯುನಿಸ್ಟ್ (ಮಾರ್ಕ್ಸಿಸ್ಟ್‌) ಪಕ್ಷದಿಂದ ಯಾವುದೇ ಆಸ್ತಿಯಿಲ್ಲದ, ಚಳವಳಿಯ ಹಿನ್ನೆಲೆಯಿರುವ ವ್ಯಕ್ತಿಯೊಬ್ಬರನ್ನು ಕಣಕ್ಕಿಳಿಸಲಾಗಿದೆ. ಇದು ಈ ಚುನಾವಣೆಯಲ್ಲಿ ಅತ್ಯಂತ ವಿಶೇಷವೆನಿಸಿದೆ.

ಮೂಲತಃ ಗಂಧರ್ವಕೋಟ್ಟೈನವರಾದ ಚಿನ್ನದುರೈ ಕಾರ್ಮಿಕರಾಗಿದ್ದಾಗಿನಿಂದಲೂ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಸಿಐಟಿಯುನಲ್ಲಿ ಸಕ್ರಿಯ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈಗ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕಾಮ್ರೇಡ್ ಟಾಕೀಸ್ ಎನ್ನುವ ಯೂಟ್ಯೂಬ್ ಚಾನೆಲ್ ಇವರ ಸಂದರ್ಶನ ಮಾಡಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಹೆಂಚಿನ ಮನೆಯಲ್ಲಿ ವಾಸಿಸುತ್ತಿರುವ ಇವರ ಬಳಿಯಿರುವ ಆಸ್ತಿ ಒಂದು ಟಾಟಾ ಏಸ್ ಮಾತ್ರ. ಇದನ್ನು ಚಿನ್ನದುರೈ ಅವರ ಮಗ ಬಾಡಿಗೆಗೆ ಓಡಿಸುತ್ತಾರೆ. ಇದೇ ಇವರ ಕುಟುಂಬದ ಮೂಲ ಆದಾಯ.

ಈ ಕುರಿತು ಸ್ವತಃ ಚಿನ್ನದುರೈ ಅವರೇ ಹೇಳಿರುವಂತೆ, “ನಾನು ನಾಮಪತ್ರ ಸಲ್ಲಿಸಲು ಹೋದಾಗ ಆಸ್ತಿ ವಿವರಗಳನ್ನು ಸಲ್ಲಿಸಬೆಕಾಗಿತ್ತು. ಜೊತೆಗೆ ಐಟಿ ವಿವರಗಳನ್ನು ಸಲ್ಲಿಸಬೇಕಾಗಿತ್ತು. ಆದರೆ ನನ್ನ ಬಳಿ ಆಸ್ತಿಯೆ ಇಲ್ಲದಿರುವುದರಿಂದ ಅದರ ವಿವರಗಳನ್ನು ಸಲ್ಲಿಸಿರಲಿಲ್ಲ. ಆದರೆ ಆಸ್ತಿ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಬಿಡದೇ ಒತ್ತಾಯ ಮಾಡುತ್ತಿದ್ದರು. ನಂತರ ನಮ್ಮ ಊರಿನ ಡಿಎಂಕೆ ಮುಖಂಡರು ಬಂದು ನೇರವಾಗಿ ಹೇಳಿದ ನಂತರ ನನಗೆ ತೊಂದರೆ ಕೊಡುವುದನ್ನು ನಿಲ್ಲಿಸಿದರು. ಠೇವಣಿ ಕಟ್ಟಲೂ ಸಹ ನನ್ನ ಬಳಿ ಹಣವಿರಲಿಲ್ಲ. ಊರಿನ ಮುಖಂಡರು, ಡಿಎಂಕೆ ಮುಖಂಡರು ಮತ್ತು ಇನ್ನೂ ಕೆಲವು ಸ್ನೇಹಿತರು ಸೇರಿ ಹಣ ಕಟ್ಟಿದರು. ಇದನ್ನು ನೋಡಿದಾಗ ನನಗೆ ಜನಸೇವೆ ಮಾಡಲು ಇನ್ನಷ್ಟು ಹುರುಪು ಹೆಚ್ಚಾಯಿತು” ಎನ್ನುತ್ತಾರೆ.

“ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ. ಆದರೆ ಕೆಲವರೆಲ್ಲಾ, ‘ನಿನ್ನ ಗಂಡ ಎಂಎಲ್‌ಎ ಆಗುತ್ತಾನಲ್ಲ. ನೀನ್ಯಾಕೆ ಆಡು ಮೇಯಿಸಲು ಬರುತ್ತೀಯ’ ಎಂದು ನನ್ನ ಹೆಂಡತಿಗೆ ಕೇಳುತ್ತಾರೆ. ಆದರೆ ಆಕೆ ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳದೆ ಪ್ರತಿನಿತ್ಯ ತನ್ನ ಕಾಯಕ ಮಾಡುತ್ತಾಳೆ. ಆದರೆ ನಮ್ಮ ಮುಖಂಡರು ಹೇಳುವಂತೆ, ನಾನು ಚುನಾವಣೆಯಲ್ಲಿ ಗೆದ್ದು 5 ವರ್ಷ ಸಂಪೂರ್ಣವಾಗಿ ಶಾಸಕನಾಗಿ ನನ್ನ ಜನರಿಗೆ ಸೇವೆ ಮಾಡಿದ ನಂತರವೂ ನಾನು ಹೀಗೇ ಇರುತ್ತೇನೆ” ಎಂದು ಆಶ್ವಾಸನೆ ನೀಡಿದ್ದಾರೆ.

“ನನ್ನ ಕ್ಷೇತ್ರದ ಬಹುಪಾಲು ಹಳ್ಳಿಗಳಿಗೆ ಬಸ್ ವ್ಯವಸ್ಥೆಯಿಲ್ಲ. ರಸ್ತೆಯೇ ಇಲ್ಲದಿರುವಾಗ ಬಸ್ ವ್ಯವಸ್ಥೆ ಇರಲು ಹೇಗೆ ಸಾಧ್ಯ. ಹಾಗಾಗಿ ಮೂಲಭೂತವಾಗಿ ಒಂದು ಹಳ್ಳಿಗೆ ಸಿಗಬೇಕಾದ ಯಾವುದೇ ಸೌಕರ್ಯಗಳೂ ಸಹ ಸಿಗುತ್ತಿಲ್ಲ. ಇದನ್ನು ಒದಗಿಸುವುದು ನನ್ನ ಆದ್ಯತೆ. ಇದರಲ್ಲಿ ಶಿಕ್ಷಣ ಮತ್ತು ಆರೋಗ್ಯದಂತಹ ವಿಷಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

“ನನಗೆ ಆಗ ತಿಂಗಳಿಗೆ ಕೇವಲ 50 ರೂ. ಸಂಬಳವಿತ್ತು. ಇದರ ಜೊತೆ 20 ರೂ.ಗಳನ್ನು ಸೇರಿಸಿ 70 ರೂ. ಸಂಬಳ ಕೊಡಿ ಎಂದು ಕೇಳಿದೆ. ಮಾಲೀಕ ಒಪ್ಪಲಿಲ್ಲ. ಆಗ ಸಿಐಟಿಯು ಸಂಘಟನೆ ಸೇರಿದೆ. ಆಗ ನನ್ನ ವಯಸ್ಸು 21. ಸಂಘಟನೆ ಸೇರಿದ ನಂತರ ನನ್ನ ಜೊತೆಗಿನ ಕಾರ್ಮಿಕರ ಹಕ್ಕುಗಳಿಗಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. ಇದಕ್ಕಾಗಿ 3 ಬಾರಿ ಜೈಲಿಗೂ ಹೋಗಿದ್ದೇನೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, “ತಮಿಳು ನೆಲದಲ್ಲಿ ಬಿಜೆಪಿಯನ್ನು ತಳವೂರಲು ಬಿಡಬಾರದು ಎನ್ನುವುದೇ ನಮ್ಮ ಮೈತ್ರಿಯ ಗುರಿಯಾಗಿದೆ. ಜೊತೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆ ಪಕ್ಷವನ್ನು 234 ಕ್ಷೇತ್ರಗಳಲ್ಲಿಯೂ ಸೋಲಿಸಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ. ಯಾಕೆಂದರೆ ಈ ಸರ್ಕಾರ ಕೃಷಿಕರಿಗೆ, ಕೃಷಿ ಕಾರ್ಮಿಕರಿಗಾಗಿ ಏನನ್ನೂ ಮಾಡಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಅನೈತಿಕ ಕಾನೂನುಗಳ ವಿರುದ್ಧ ದನಿಯೆತ್ತಿಲ್ಲ. ಅಪಾಯದಲ್ಲಿರುವ ತಮಿಳಿನ ಅಸ್ಮಿತೆಗಾಗಿ ಯಾವುದೇ ಕ್ರಮ ಕೈಗೊಂಡಿಲ್ಲ” ಎನ್ನುತ್ತಾರೆ.

ಇವರನ್ನು ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಕಮ್ಯನಿಸ್ಟ್ ಪಕ್ಷವು ತಾನು ತಳಸಮುದಾಯದ ಪರ ಎಂಬುದನ್ನು ಸಾಬೀತುಪಡಿಸಿದೆ.

ಪಂಚರಾಜ್ಯ ಚುನಾವಣೆಗಳು ಘೋಷಣೆಯಾಗಿದ್ದು, ಏಪ್ರಿಲ್ ತಿಂಗಳಿನಲ್ಲಿ ಮತದಾನ ನಡೆದು, ಮೇ ತಿಂಗಳಿನಲ್ಲಿ ಫಲಿತಾಂಶ ಹೊರಬೀಳಲಿದೆ.

ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್-ಕಮ್ಯುನಿಸ್ಟ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಎಐಎಡಿಎಂಕೆ ಪಕ್ಷವನ್ನು ಸೋಲಿಸಬೇಕು ಎಂಬ ಪಣತೊಟ್ಟಿವೆ. ಹಾಗಾಗಿ ತಮಿಳುನಾಡಿನ 234 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ಆಯ್ಕೆಯನ್ನು ಬಹಳ ಎಚ್ಚರದಿಂದ ಮಾಡಿದೆ.


ಇದನ್ನೂ ಓದಿ: ಸಂಪರ್ಕದ ಮೂಲಕ ಕೊರೊನಾ : ಭಾರತದಲ್ಲೇ ಅತಿ ಹೆಚ್ಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...