Homeಮುಖಪುಟ'ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ' ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

‘ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ’ ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ ಎನ್ನತ್ತಾರೆ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಚಿನ್ನದುರೈ...

- Advertisement -
- Advertisement -

ಚುನಾವಣೆಯಲ್ಲಿ ನಿಂತು ಗೆಲ್ಲಬೇಕು ಎಂದರೆ, ಸ್ಪರ್ಧಿಸುವವನು ಹಣವಂತನಾಗಿದ್ದರೆ ಮಾತ್ರ ಸಾಧ್ಯ ಎನ್ನುವ ಮಾತನ್ನು ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಮ್ಯನಿಸ್ಟ್ ಪಕ್ಷದ ಅಭ್ಯರ್ಥಿ ಚಿನ್ನದುರೈ ಸುಳ್ಳು ಮಾಡಲು ಹೊರಟಿದ್ದಾರೆ. ಪುದುಕೋಟ್ಟೈ ಜಿಲ್ಲೆಯ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದಿಂದ ಕಮ್ಯುನಿಸ್ಟ್ (ಮಾರ್ಕ್ಸಿಸ್ಟ್‌) ಪಕ್ಷದಿಂದ ಯಾವುದೇ ಆಸ್ತಿಯಿಲ್ಲದ, ಚಳವಳಿಯ ಹಿನ್ನೆಲೆಯಿರುವ ವ್ಯಕ್ತಿಯೊಬ್ಬರನ್ನು ಕಣಕ್ಕಿಳಿಸಲಾಗಿದೆ. ಇದು ಈ ಚುನಾವಣೆಯಲ್ಲಿ ಅತ್ಯಂತ ವಿಶೇಷವೆನಿಸಿದೆ.

ಮೂಲತಃ ಗಂಧರ್ವಕೋಟ್ಟೈನವರಾದ ಚಿನ್ನದುರೈ ಕಾರ್ಮಿಕರಾಗಿದ್ದಾಗಿನಿಂದಲೂ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಸಿಐಟಿಯುನಲ್ಲಿ ಸಕ್ರಿಯ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈಗ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕಾಮ್ರೇಡ್ ಟಾಕೀಸ್ ಎನ್ನುವ ಯೂಟ್ಯೂಬ್ ಚಾನೆಲ್ ಇವರ ಸಂದರ್ಶನ ಮಾಡಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಹೆಂಚಿನ ಮನೆಯಲ್ಲಿ ವಾಸಿಸುತ್ತಿರುವ ಇವರ ಬಳಿಯಿರುವ ಆಸ್ತಿ ಒಂದು ಟಾಟಾ ಏಸ್ ಮಾತ್ರ. ಇದನ್ನು ಚಿನ್ನದುರೈ ಅವರ ಮಗ ಬಾಡಿಗೆಗೆ ಓಡಿಸುತ್ತಾರೆ. ಇದೇ ಇವರ ಕುಟುಂಬದ ಮೂಲ ಆದಾಯ.

ಈ ಕುರಿತು ಸ್ವತಃ ಚಿನ್ನದುರೈ ಅವರೇ ಹೇಳಿರುವಂತೆ, “ನಾನು ನಾಮಪತ್ರ ಸಲ್ಲಿಸಲು ಹೋದಾಗ ಆಸ್ತಿ ವಿವರಗಳನ್ನು ಸಲ್ಲಿಸಬೆಕಾಗಿತ್ತು. ಜೊತೆಗೆ ಐಟಿ ವಿವರಗಳನ್ನು ಸಲ್ಲಿಸಬೇಕಾಗಿತ್ತು. ಆದರೆ ನನ್ನ ಬಳಿ ಆಸ್ತಿಯೆ ಇಲ್ಲದಿರುವುದರಿಂದ ಅದರ ವಿವರಗಳನ್ನು ಸಲ್ಲಿಸಿರಲಿಲ್ಲ. ಆದರೆ ಆಸ್ತಿ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಬಿಡದೇ ಒತ್ತಾಯ ಮಾಡುತ್ತಿದ್ದರು. ನಂತರ ನಮ್ಮ ಊರಿನ ಡಿಎಂಕೆ ಮುಖಂಡರು ಬಂದು ನೇರವಾಗಿ ಹೇಳಿದ ನಂತರ ನನಗೆ ತೊಂದರೆ ಕೊಡುವುದನ್ನು ನಿಲ್ಲಿಸಿದರು. ಠೇವಣಿ ಕಟ್ಟಲೂ ಸಹ ನನ್ನ ಬಳಿ ಹಣವಿರಲಿಲ್ಲ. ಊರಿನ ಮುಖಂಡರು, ಡಿಎಂಕೆ ಮುಖಂಡರು ಮತ್ತು ಇನ್ನೂ ಕೆಲವು ಸ್ನೇಹಿತರು ಸೇರಿ ಹಣ ಕಟ್ಟಿದರು. ಇದನ್ನು ನೋಡಿದಾಗ ನನಗೆ ಜನಸೇವೆ ಮಾಡಲು ಇನ್ನಷ್ಟು ಹುರುಪು ಹೆಚ್ಚಾಯಿತು” ಎನ್ನುತ್ತಾರೆ.

“ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ. ಆದರೆ ಕೆಲವರೆಲ್ಲಾ, ‘ನಿನ್ನ ಗಂಡ ಎಂಎಲ್‌ಎ ಆಗುತ್ತಾನಲ್ಲ. ನೀನ್ಯಾಕೆ ಆಡು ಮೇಯಿಸಲು ಬರುತ್ತೀಯ’ ಎಂದು ನನ್ನ ಹೆಂಡತಿಗೆ ಕೇಳುತ್ತಾರೆ. ಆದರೆ ಆಕೆ ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳದೆ ಪ್ರತಿನಿತ್ಯ ತನ್ನ ಕಾಯಕ ಮಾಡುತ್ತಾಳೆ. ಆದರೆ ನಮ್ಮ ಮುಖಂಡರು ಹೇಳುವಂತೆ, ನಾನು ಚುನಾವಣೆಯಲ್ಲಿ ಗೆದ್ದು 5 ವರ್ಷ ಸಂಪೂರ್ಣವಾಗಿ ಶಾಸಕನಾಗಿ ನನ್ನ ಜನರಿಗೆ ಸೇವೆ ಮಾಡಿದ ನಂತರವೂ ನಾನು ಹೀಗೇ ಇರುತ್ತೇನೆ” ಎಂದು ಆಶ್ವಾಸನೆ ನೀಡಿದ್ದಾರೆ.

“ನನ್ನ ಕ್ಷೇತ್ರದ ಬಹುಪಾಲು ಹಳ್ಳಿಗಳಿಗೆ ಬಸ್ ವ್ಯವಸ್ಥೆಯಿಲ್ಲ. ರಸ್ತೆಯೇ ಇಲ್ಲದಿರುವಾಗ ಬಸ್ ವ್ಯವಸ್ಥೆ ಇರಲು ಹೇಗೆ ಸಾಧ್ಯ. ಹಾಗಾಗಿ ಮೂಲಭೂತವಾಗಿ ಒಂದು ಹಳ್ಳಿಗೆ ಸಿಗಬೇಕಾದ ಯಾವುದೇ ಸೌಕರ್ಯಗಳೂ ಸಹ ಸಿಗುತ್ತಿಲ್ಲ. ಇದನ್ನು ಒದಗಿಸುವುದು ನನ್ನ ಆದ್ಯತೆ. ಇದರಲ್ಲಿ ಶಿಕ್ಷಣ ಮತ್ತು ಆರೋಗ್ಯದಂತಹ ವಿಷಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

“ನನಗೆ ಆಗ ತಿಂಗಳಿಗೆ ಕೇವಲ 50 ರೂ. ಸಂಬಳವಿತ್ತು. ಇದರ ಜೊತೆ 20 ರೂ.ಗಳನ್ನು ಸೇರಿಸಿ 70 ರೂ. ಸಂಬಳ ಕೊಡಿ ಎಂದು ಕೇಳಿದೆ. ಮಾಲೀಕ ಒಪ್ಪಲಿಲ್ಲ. ಆಗ ಸಿಐಟಿಯು ಸಂಘಟನೆ ಸೇರಿದೆ. ಆಗ ನನ್ನ ವಯಸ್ಸು 21. ಸಂಘಟನೆ ಸೇರಿದ ನಂತರ ನನ್ನ ಜೊತೆಗಿನ ಕಾರ್ಮಿಕರ ಹಕ್ಕುಗಳಿಗಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. ಇದಕ್ಕಾಗಿ 3 ಬಾರಿ ಜೈಲಿಗೂ ಹೋಗಿದ್ದೇನೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, “ತಮಿಳು ನೆಲದಲ್ಲಿ ಬಿಜೆಪಿಯನ್ನು ತಳವೂರಲು ಬಿಡಬಾರದು ಎನ್ನುವುದೇ ನಮ್ಮ ಮೈತ್ರಿಯ ಗುರಿಯಾಗಿದೆ. ಜೊತೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆ ಪಕ್ಷವನ್ನು 234 ಕ್ಷೇತ್ರಗಳಲ್ಲಿಯೂ ಸೋಲಿಸಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ. ಯಾಕೆಂದರೆ ಈ ಸರ್ಕಾರ ಕೃಷಿಕರಿಗೆ, ಕೃಷಿ ಕಾರ್ಮಿಕರಿಗಾಗಿ ಏನನ್ನೂ ಮಾಡಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಅನೈತಿಕ ಕಾನೂನುಗಳ ವಿರುದ್ಧ ದನಿಯೆತ್ತಿಲ್ಲ. ಅಪಾಯದಲ್ಲಿರುವ ತಮಿಳಿನ ಅಸ್ಮಿತೆಗಾಗಿ ಯಾವುದೇ ಕ್ರಮ ಕೈಗೊಂಡಿಲ್ಲ” ಎನ್ನುತ್ತಾರೆ.

ಇವರನ್ನು ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಕಮ್ಯನಿಸ್ಟ್ ಪಕ್ಷವು ತಾನು ತಳಸಮುದಾಯದ ಪರ ಎಂಬುದನ್ನು ಸಾಬೀತುಪಡಿಸಿದೆ.

ಪಂಚರಾಜ್ಯ ಚುನಾವಣೆಗಳು ಘೋಷಣೆಯಾಗಿದ್ದು, ಏಪ್ರಿಲ್ ತಿಂಗಳಿನಲ್ಲಿ ಮತದಾನ ನಡೆದು, ಮೇ ತಿಂಗಳಿನಲ್ಲಿ ಫಲಿತಾಂಶ ಹೊರಬೀಳಲಿದೆ.

ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್-ಕಮ್ಯುನಿಸ್ಟ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಎಐಎಡಿಎಂಕೆ ಪಕ್ಷವನ್ನು ಸೋಲಿಸಬೇಕು ಎಂಬ ಪಣತೊಟ್ಟಿವೆ. ಹಾಗಾಗಿ ತಮಿಳುನಾಡಿನ 234 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ಆಯ್ಕೆಯನ್ನು ಬಹಳ ಎಚ್ಚರದಿಂದ ಮಾಡಿದೆ.


ಇದನ್ನೂ ಓದಿ: ಸಂಪರ್ಕದ ಮೂಲಕ ಕೊರೊನಾ : ಭಾರತದಲ್ಲೇ ಅತಿ ಹೆಚ್ಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...