Homeಕರ್ನಾಟಕಇದೊಂದು "ಅಡ್ಡಕಸುಬಿ" ಬಜೆಟ್‌: ಸಿದ್ದರಾಮಯ್ಯ ತೀವ್ರ ವಾಗ್ದಾಳಿ

ಇದೊಂದು “ಅಡ್ಡಕಸುಬಿ” ಬಜೆಟ್‌: ಸಿದ್ದರಾಮಯ್ಯ ತೀವ್ರ ವಾಗ್ದಾಳಿ

- Advertisement -
- Advertisement -

ರಾಜ್ಯ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಮುಖ್ಯಮಂತ್ರಿ ಯಡಿಯೂರಪ್ಪರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

“ಬಜೆಟ್ ತಯಾರಿಕೆ ಎನ್ನುವುದು ಗಂಭೀರವಾದ ಪವಿತ್ರ ಕಾರ್ಯ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಮಂಡಿಸಿದ ಬಜೆಟ್ ನೋಡಿದರೆ ಇದೊಂದು “ಅಡ್ಡಕಸುಬಿ” ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರ, ಗಣಿತ, ಹೀಗೆ ಯಾವ ವೃತ್ತಿಪರತೆಯೂ ಇಲ್ಲ ಎಲ್ಲವೂ ಅಸ್ಪಷ್ಟ, ಗೊಂದಲಮಯ” ಎಂದಿದ್ದಾರೆ.

“2013ರ ನನ್ನ ಮೊದಲ ಬಜೆಟ್ ಹಾಗೂ 2018ರ ಕೊನೆಯ ಬಜೆಟ್‌ ಗಾತ್ರದ ನಡುವಿನ ವ್ಯತ್ಯಾಸ ರೂ.1.16.000 ಕೋಟಿ. ಈ ಬಾರಿಯ ಬಜೆಟ್ ಗಾತ್ರ ಹಿಂದಿನ ಬಜೆಟ್‌ಗಿಂತ ಕೇವಲ 1.5% ಹೆಚ್ಚಾಗಿದೆ ಅಷ್ಟೆ. ಹೀಗಾದಾಗ ಎಲ್ಲಾ ವಲಯಗಳ ಅಭಿವೃದ್ಧಿಗೆ ಅಗತ್ಯ ಪ್ರಾಶಸ್ತ್ಯ ನೀಡಲು ಸಾಧ್ಯವಿಲ್ಲ. 14ನೇ ಹಣಕಾಸು ಆಯೋಗದ ಪ್ರಕಾರ ನಮ್ಮ ರಾಜ್ಯಕ್ಕೆ 4.71% ಅನುದಾನ ಹಂಚಿಕೆಯಾಗಿತ್ತು. ಇತ್ತೀಚೆಗೆ ಮಂಡಿಸಲಾದ 15ನೇ ಹಣಕಾಸು ಆಯೋಗದ ಪ್ರಕಾರ ನಮ್ಮ ಹಂಚಿಕೆ ಪಾಲು 3.64%ಗೆ ಇಳಿಕೆಯಾಗಿದೆ. ಇದರಿಂದ ರೂ.11,215 ಕೋಟಿ ನಷ್ಟವಾಗಿದೆ. ಯಡಿಯೂರಪ್ಪ ಅವರು ಎಲ್ಲದಕ್ಕೂ ಬಜೆಟ್ ಮೂಲಕ ಉತ್ತರಿಸುತ್ತೇನೆ ಅಂತಿದ್ರು, ಈಗೇನು ಹೇಳ್ತಾರೆ?” ಎಂದು ಪ್ರಶ್ನಿಸಿದ್ದಾರೆ.

“ಮಹದಾಯಿ ಯೋಜನೆಗೆ 500 ಕೋಟಿ, ಎತ್ತಿನಹೊಳೆ ಯೋಜನೆಗೆ 1,500 ಕೋಟಿ, ತುಂಗಭದ್ರಾ ಜಲಾಶಯದ ಹೂಳೆತ್ತಲು 20 ಕೋಟಿ ಅನುದಾನ ನೀಡಲಾಗುವುದು ಎಂದು ಬಜೆಟ್‍ನಲ್ಲಿ ಹೇಳಲಾಗಿದೆ. ರಾಜ್ಯದ ಎರಡು ಜೀವನದಿಗಳಾದ ಕೃಷ್ಣ ಮೇಲ್ದಂಡೆ ಮತ್ತು ಕಾವೇರಿ ನದಿ ಯೋಜನೆಗಳ ಅನುದಾನದ ಬಗ್ಗೆ ಬಜೆಟ್‍ನಲ್ಲಿ ಯಾವ ಉಲ್ಲೇಖವು ಇಲ್ಲ. ಪ್ರಸಕ್ತ ಬಜೆಟ್‌ನಲ್ಲಿ ರೈತರ ಸಾಲಮನ್ನಾದ ಬಗ್ಗೆ ಒಂದಕ್ಷರವೂ ಮಾಹಿತಿ ಇಲ್ಲ. ಹಿಂದಿನ ಸಮ್ಮಿಶ್ರ ಸರ್ಕಾರ ಹಂತ ಹಂತವಾಗಿ ಸಾಲ ಮನ್ನಾ ಮಾಡುವ ಘೋಷಣೆ ಮಾಡಿತ್ತು, ಅದರ ಬಗ್ಗೆ ಕನಿಷ್ಠ ಮಾಹಿತಿಯನ್ನಾದರೂ ನೀಡಬೇಕಲ್ಲವೇ?” ಎಂದರು.

“2018ರ ಬಜೆಟ್‌ನಲ್ಲಿ ನಾನು ಕೃಷಿ, ತೋಟಗಾರಿಕೆ, ನೀರಾವರಿ, ರೇಷ್ಮೆ, ಹೈನುಗಾರಿಕೆ ಸೇರಿದಂತೆ ಇದಕ್ಕೆ ಸಂಬಂಧಿತ ಚಟುವಟಿಕೆಗಳಿಗೆ ಒಟ್ಟು ರೂ.38,073 ಕೋಟಿ ಅನುದಾನ ಮೀಸಲಿಟ್ಟಿದ್ದೆ. ಪ್ರಸಕ್ತ ಬಜೆಟ್‌ನಲ್ಲಿ ಇದನ್ನು ರೂ.32,259 ಕೋಟಿಗೆ ಇಳಿಕೆ ಮಾಡಲಾಗಿದೆ. ಹಾಗಿದ್ದರೆ, ಇದು ಹೇಗೆ ರೈತಪರ ಬಜೆಟ್ ಆಗಲು ಸಾಧ್ಯ?” ಎಂದು ಹೇಳಿದರು.

ಶಿಕ್ಷಣ ಕ್ಷೇತ್ರಕ್ಕೆ 2018-19ರಲ್ಲಿ ಬಜೆಟ್‍ನ ಶೇ.12 ಪಾಲು ಇತ್ತು. ಈ ಬಾರಿ ಶೇ.11 ಮಾತ್ರ. ಹಿಂದಿಗಿಂತ ಶೇ.1 ರಷ್ಟು ಕಡಿಮೆ ಮಾಡಲಾಗಿದೆ. ಈ ಅನುದಾನ ವರ್ಷದಿಂದ ವರ್ಷಕ್ಕೆ ಏರಿಕೆ ಕಾಣಬೇಕೆ ಹೊರತು ಕಡಿಮೆಯಾಗಬಾರದು. ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಕಳೆದ ಬಾರಿ ರೂ.30,150 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ರೂ.26,131 ಕೋಟಿ ನೀಡಲಾಗಿದೆ. ಸುಮಾರು ರೂ.4000 ಕೋಟಿ ಅನುದಾನ ಕಡಿಮೆಯಾಗಿದೆ. ಬಜೆಟ್ ಗಾತ್ರ ಹೆಚ್ಚಾದಂತೆ ಈ ಅನುದಾನದ ಗಾತ್ರ ಕೂಡ ಹೆಚ್ಚಾಗಬೇಕು. ಇದು ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ ಎಂಬುದನ್ನು ತೋರಿಸುತ್ತದೆ” ಎಂದಿದ್ದಾರೆ.

“‘ಸಬ್ ಕ ಸಾಥ್, ಸಬ್ ಕ ವಿಕಾಸ್’ ಎನ್ನುವ ಬಿಜೆಪಿ ನಾಯಕರು ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. 5 ಅಲ್ಪಸಂಖ್ಯಾತ ವಸತಿ ಶಾಲೆಗಳ ಅಭಿವೃದ್ಧಿಪಡಿಸುವ ಯೋಜನೆ ಹೊರತುಪಡಿಸಿದರೆ ಈ ಸಮುದಾಯದ ಅಭಿವೃದ್ಧಿಗೆ ಬೇರೆಲ್ಲೂ ನಯಾಪೈಸೆ ಅನುದಾನ ನೀಡುವ ಕುರಿತು ಬಜೆಟ್‌ನಲ್ಲಿ ತಿಳಿಸಿಲ್ಲ. ಬಿಜೆಪಿ ಸರ್ಕಾರದ ‘ಕಲ್ಯಾಣ ಕರ್ನಾಟಕ’ ಎಂಬುದು ಬರೀ ಘೋಷಣೆಗಷ್ಟೇ ಸೀಮಿತವಾಗಿದೆ. ನಮ್ಮ ಸರ್ಕಾರದ ಕಡೆಯ ಎರಡು ಬಜೆಟ್‌ನಲ್ಲಿ ಈ ಭಾಗದ ಅಭಿವೃದ್ಧಿಗೆ ತಲಾ ರೂ.1,500 ಕೋಟಿ ಅನುದಾನ ನೀಡಿದ್ದೆ, ಈ ಬಾರಿಯೂ ಅಷ್ಟೇ ಅನುದಾನವನ್ನು ಮೀಸಲಿಡಲಾಗಿದೆ. ಹೆಸರು ಬದಲಾಯಿಸಿದ ಮಾತ್ರಕ್ಕೆ ಈ ಭಾಗದ ಕಲ್ಯಾಣವಾಗುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

“ರೂ.18,000 ಕೋಟಿ ವೆಚ್ಚದ ಉಪನಗರ ರೈಲು ಯೋಜನೆಗೆ ರಾಜ್ಯವು ಕೇವಲ ರೂ.500 ಕೋಟಿ ಅನುದಾನ ಮೀಸಲಿರಿಸಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ರೂ.1 ಕೋಟಿ ಅನುದಾನ ಮೀಸಲಿಟ್ಟಿದೆ. ಇಷ್ಟು ಕಡಿಮೆ ಅನುದಾನದಲ್ಲಿ ಈ ಯೋಜನೆ ಆರಂಭವಾಗುವ ಸಾಧ್ಯತೆಗಳೇ ಇಲ್ಲ. ಹೀಗಾದರೆ ನಗರದ ಸಂಚಾರ ದಟ್ಟಣೆ ನಿವಾರಿಸುವುದು ಹೇಗೆ? 2018-19ರಲ್ಲೇ ನಾನು ನಗರೋತ್ಥಾನ ಯೋಜನೆಯಡಿ ರೂ.10,000 ಕೋಟಿಗಳನ್ನು ಬೆಂಗಳೂರು ನಗರವೊಂದಕ್ಕೆ ನೀಡಿದ್ದೆ. ಈ ಬಾರಿ ರೂ.8,772 ಕೋಟಿಗಳನ್ನು ಮೀಸಲಿರಿಸಲಾಗಿದೆ. ಯಡಿಯೂರಪ್ಪ ಅವರು 6 ತಿಂಗಳಲ್ಲಿ ಬೆಂಗಳೂರು ಚಿತ್ರಣ ಬದಲಿಸುತ್ತೀನಿ ಅಂದಿದ್ರು. ಅಧಿಕಾರಕ್ಕೆ ಬಂದು 7 ತಿಂಗಳಾಯ್ತು, ನಗರದ ಚಿತ್ರಣ ಬದಲಾಗಿದೆಯೇ?” ಎಂದು ಕೇಳಿದರು.

“ಮೊನ್ನೆತಾನೆ ಶೇ.10 ರಷ್ಟು ಬಸ್ ದರವನ್ನು ಹೆಚ್ಚಿಸಲಾಗಿತ್ತು. ಏಪ್ರಿಲ್-2020 ರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.1.60, ಡಿಸೇಲ್ ಬೆಲೆ ರೂ.1.59 ರಷ್ಟು ಹೊಸ ತೆರಿಗೆ ಪ್ರಕಾರ ಏರಿಕೆಯಾಗಲಿದೆ. ಇದರ ಜೊತೆಗೆ ಸ್ಲೀಪರ್ ಕೋಚ್ ಬಸ್ ಹಾಗೂ ಮಿನಿ ಬಸ್‌ಗಳ ಮೇಲೆ ಹೊಸದಾಗಿ ಹೆಚ್ಚುವರಿ ತೆರಿಗೆ ವಿಧಿಸಲು ಹೊರಟಿದ್ದಾರೆ. ವಿತ್ತೀಯ ಜವಾಬ್ದಾರಿ ನೀತಿಯಲ್ಲೇ ಸಾಲ ಪಡೆಯಲು ಅವಕಾಶಗಳಿದ್ದರೂ ನಮ್ಮ ಸರ್ಕಾರವಿದ್ದಾಗ ಸಾಲ ಮಾಡಿ ಹೋಳಿಗೆ ತಿನ್ನುತ್ತೀರಿ ಎಂದು ಬಿಜೆಪಿಯವರು ಹಂಗಿಸುತ್ತಿದ್ದರು. ಈಗ ಅವರೇ ರೂ.52,000 ಕೋಟಿ ಸಾಲ ಮಾಡಲು ಹೊರಟಿದ್ದಾರೆ. ಇದೊಂದು ರೀತಿ ‘ಆಚಾರ ಹೇಳೋಕೆ, ಬದನೆಕಾಯಿ ತಿನ್ನೋಕೆ’ ಎಂಬಂತೆ ಆಯಿತಲ್ಲವೇ?” ಎಂದು ವ್ಯಂಗ್ಯವಾಡಿದರು.

“ರಾಜ್ಯದ 44 ಇಲಾಖೆಗಳನ್ನು ಆರು ವಲಯಗಳಲ್ಲಿ ವಿಂಗಡಿಸಿ ಇಲಾಖಾವಾರು ಯೋಜನೆ ಮತ್ತು ಅನುದಾನಗಳನ್ನು ಪ್ರತ್ಯೇಕವಾಗಿ ನಮೂದಿಸದೆ ತೆರಿಗೆದಾರರ ದಾರಿ ತಪ್ಪಿಸುವ ಹುನ್ನಾರವನ್ನು ಬಜೆಟ್‌ನಲ್ಲಿ ಕಾಣಬಹುದು. ತಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಇಂತಹದ್ದೊಂದು ಕುತಂತ್ರವನ್ನು ಮಾಡಿದ ಹಾಗೆ ಕಾಣುತ್ತಿದೆ. ಮುಖ್ಯಮಂತ್ರಿಗಳು ಬಜೆಟ್ ತಯಾರಿಕೆಯನ್ನು ಗಂಭೀರವಾಗಿ ಸ್ವೀಕರಿಸದೆ ಕಾಟಾಚಾರಕ್ಕೆ ಮಾಡಿ ಮುಗಿಸಿದಂತಿದೆ. ಈ ಬಜೆಟ್‌ನ ಇನ್ನಷ್ಟು ಹುಳುಕುಗಳನ್ನು ಒಂದೊಂದಾಗಿ ಮುಂದಿನ ದಿನಗಳಲ್ಲಿ ಜನತೆಯ ಮುಂದೆ ಬಿಚ್ಚಿಡುತ್ತೇನೆ” ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...