Homeಕರ್ನಾಟಕಇದೊಂದು "ಅಡ್ಡಕಸುಬಿ" ಬಜೆಟ್‌: ಸಿದ್ದರಾಮಯ್ಯ ತೀವ್ರ ವಾಗ್ದಾಳಿ

ಇದೊಂದು “ಅಡ್ಡಕಸುಬಿ” ಬಜೆಟ್‌: ಸಿದ್ದರಾಮಯ್ಯ ತೀವ್ರ ವಾಗ್ದಾಳಿ

- Advertisement -
- Advertisement -

ರಾಜ್ಯ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಮುಖ್ಯಮಂತ್ರಿ ಯಡಿಯೂರಪ್ಪರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

“ಬಜೆಟ್ ತಯಾರಿಕೆ ಎನ್ನುವುದು ಗಂಭೀರವಾದ ಪವಿತ್ರ ಕಾರ್ಯ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಮಂಡಿಸಿದ ಬಜೆಟ್ ನೋಡಿದರೆ ಇದೊಂದು “ಅಡ್ಡಕಸುಬಿ” ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರ, ಗಣಿತ, ಹೀಗೆ ಯಾವ ವೃತ್ತಿಪರತೆಯೂ ಇಲ್ಲ ಎಲ್ಲವೂ ಅಸ್ಪಷ್ಟ, ಗೊಂದಲಮಯ” ಎಂದಿದ್ದಾರೆ.

“2013ರ ನನ್ನ ಮೊದಲ ಬಜೆಟ್ ಹಾಗೂ 2018ರ ಕೊನೆಯ ಬಜೆಟ್‌ ಗಾತ್ರದ ನಡುವಿನ ವ್ಯತ್ಯಾಸ ರೂ.1.16.000 ಕೋಟಿ. ಈ ಬಾರಿಯ ಬಜೆಟ್ ಗಾತ್ರ ಹಿಂದಿನ ಬಜೆಟ್‌ಗಿಂತ ಕೇವಲ 1.5% ಹೆಚ್ಚಾಗಿದೆ ಅಷ್ಟೆ. ಹೀಗಾದಾಗ ಎಲ್ಲಾ ವಲಯಗಳ ಅಭಿವೃದ್ಧಿಗೆ ಅಗತ್ಯ ಪ್ರಾಶಸ್ತ್ಯ ನೀಡಲು ಸಾಧ್ಯವಿಲ್ಲ. 14ನೇ ಹಣಕಾಸು ಆಯೋಗದ ಪ್ರಕಾರ ನಮ್ಮ ರಾಜ್ಯಕ್ಕೆ 4.71% ಅನುದಾನ ಹಂಚಿಕೆಯಾಗಿತ್ತು. ಇತ್ತೀಚೆಗೆ ಮಂಡಿಸಲಾದ 15ನೇ ಹಣಕಾಸು ಆಯೋಗದ ಪ್ರಕಾರ ನಮ್ಮ ಹಂಚಿಕೆ ಪಾಲು 3.64%ಗೆ ಇಳಿಕೆಯಾಗಿದೆ. ಇದರಿಂದ ರೂ.11,215 ಕೋಟಿ ನಷ್ಟವಾಗಿದೆ. ಯಡಿಯೂರಪ್ಪ ಅವರು ಎಲ್ಲದಕ್ಕೂ ಬಜೆಟ್ ಮೂಲಕ ಉತ್ತರಿಸುತ್ತೇನೆ ಅಂತಿದ್ರು, ಈಗೇನು ಹೇಳ್ತಾರೆ?” ಎಂದು ಪ್ರಶ್ನಿಸಿದ್ದಾರೆ.

“ಮಹದಾಯಿ ಯೋಜನೆಗೆ 500 ಕೋಟಿ, ಎತ್ತಿನಹೊಳೆ ಯೋಜನೆಗೆ 1,500 ಕೋಟಿ, ತುಂಗಭದ್ರಾ ಜಲಾಶಯದ ಹೂಳೆತ್ತಲು 20 ಕೋಟಿ ಅನುದಾನ ನೀಡಲಾಗುವುದು ಎಂದು ಬಜೆಟ್‍ನಲ್ಲಿ ಹೇಳಲಾಗಿದೆ. ರಾಜ್ಯದ ಎರಡು ಜೀವನದಿಗಳಾದ ಕೃಷ್ಣ ಮೇಲ್ದಂಡೆ ಮತ್ತು ಕಾವೇರಿ ನದಿ ಯೋಜನೆಗಳ ಅನುದಾನದ ಬಗ್ಗೆ ಬಜೆಟ್‍ನಲ್ಲಿ ಯಾವ ಉಲ್ಲೇಖವು ಇಲ್ಲ. ಪ್ರಸಕ್ತ ಬಜೆಟ್‌ನಲ್ಲಿ ರೈತರ ಸಾಲಮನ್ನಾದ ಬಗ್ಗೆ ಒಂದಕ್ಷರವೂ ಮಾಹಿತಿ ಇಲ್ಲ. ಹಿಂದಿನ ಸಮ್ಮಿಶ್ರ ಸರ್ಕಾರ ಹಂತ ಹಂತವಾಗಿ ಸಾಲ ಮನ್ನಾ ಮಾಡುವ ಘೋಷಣೆ ಮಾಡಿತ್ತು, ಅದರ ಬಗ್ಗೆ ಕನಿಷ್ಠ ಮಾಹಿತಿಯನ್ನಾದರೂ ನೀಡಬೇಕಲ್ಲವೇ?” ಎಂದರು.

“2018ರ ಬಜೆಟ್‌ನಲ್ಲಿ ನಾನು ಕೃಷಿ, ತೋಟಗಾರಿಕೆ, ನೀರಾವರಿ, ರೇಷ್ಮೆ, ಹೈನುಗಾರಿಕೆ ಸೇರಿದಂತೆ ಇದಕ್ಕೆ ಸಂಬಂಧಿತ ಚಟುವಟಿಕೆಗಳಿಗೆ ಒಟ್ಟು ರೂ.38,073 ಕೋಟಿ ಅನುದಾನ ಮೀಸಲಿಟ್ಟಿದ್ದೆ. ಪ್ರಸಕ್ತ ಬಜೆಟ್‌ನಲ್ಲಿ ಇದನ್ನು ರೂ.32,259 ಕೋಟಿಗೆ ಇಳಿಕೆ ಮಾಡಲಾಗಿದೆ. ಹಾಗಿದ್ದರೆ, ಇದು ಹೇಗೆ ರೈತಪರ ಬಜೆಟ್ ಆಗಲು ಸಾಧ್ಯ?” ಎಂದು ಹೇಳಿದರು.

ಶಿಕ್ಷಣ ಕ್ಷೇತ್ರಕ್ಕೆ 2018-19ರಲ್ಲಿ ಬಜೆಟ್‍ನ ಶೇ.12 ಪಾಲು ಇತ್ತು. ಈ ಬಾರಿ ಶೇ.11 ಮಾತ್ರ. ಹಿಂದಿಗಿಂತ ಶೇ.1 ರಷ್ಟು ಕಡಿಮೆ ಮಾಡಲಾಗಿದೆ. ಈ ಅನುದಾನ ವರ್ಷದಿಂದ ವರ್ಷಕ್ಕೆ ಏರಿಕೆ ಕಾಣಬೇಕೆ ಹೊರತು ಕಡಿಮೆಯಾಗಬಾರದು. ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಕಳೆದ ಬಾರಿ ರೂ.30,150 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ರೂ.26,131 ಕೋಟಿ ನೀಡಲಾಗಿದೆ. ಸುಮಾರು ರೂ.4000 ಕೋಟಿ ಅನುದಾನ ಕಡಿಮೆಯಾಗಿದೆ. ಬಜೆಟ್ ಗಾತ್ರ ಹೆಚ್ಚಾದಂತೆ ಈ ಅನುದಾನದ ಗಾತ್ರ ಕೂಡ ಹೆಚ್ಚಾಗಬೇಕು. ಇದು ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ ಎಂಬುದನ್ನು ತೋರಿಸುತ್ತದೆ” ಎಂದಿದ್ದಾರೆ.

“‘ಸಬ್ ಕ ಸಾಥ್, ಸಬ್ ಕ ವಿಕಾಸ್’ ಎನ್ನುವ ಬಿಜೆಪಿ ನಾಯಕರು ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. 5 ಅಲ್ಪಸಂಖ್ಯಾತ ವಸತಿ ಶಾಲೆಗಳ ಅಭಿವೃದ್ಧಿಪಡಿಸುವ ಯೋಜನೆ ಹೊರತುಪಡಿಸಿದರೆ ಈ ಸಮುದಾಯದ ಅಭಿವೃದ್ಧಿಗೆ ಬೇರೆಲ್ಲೂ ನಯಾಪೈಸೆ ಅನುದಾನ ನೀಡುವ ಕುರಿತು ಬಜೆಟ್‌ನಲ್ಲಿ ತಿಳಿಸಿಲ್ಲ. ಬಿಜೆಪಿ ಸರ್ಕಾರದ ‘ಕಲ್ಯಾಣ ಕರ್ನಾಟಕ’ ಎಂಬುದು ಬರೀ ಘೋಷಣೆಗಷ್ಟೇ ಸೀಮಿತವಾಗಿದೆ. ನಮ್ಮ ಸರ್ಕಾರದ ಕಡೆಯ ಎರಡು ಬಜೆಟ್‌ನಲ್ಲಿ ಈ ಭಾಗದ ಅಭಿವೃದ್ಧಿಗೆ ತಲಾ ರೂ.1,500 ಕೋಟಿ ಅನುದಾನ ನೀಡಿದ್ದೆ, ಈ ಬಾರಿಯೂ ಅಷ್ಟೇ ಅನುದಾನವನ್ನು ಮೀಸಲಿಡಲಾಗಿದೆ. ಹೆಸರು ಬದಲಾಯಿಸಿದ ಮಾತ್ರಕ್ಕೆ ಈ ಭಾಗದ ಕಲ್ಯಾಣವಾಗುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

“ರೂ.18,000 ಕೋಟಿ ವೆಚ್ಚದ ಉಪನಗರ ರೈಲು ಯೋಜನೆಗೆ ರಾಜ್ಯವು ಕೇವಲ ರೂ.500 ಕೋಟಿ ಅನುದಾನ ಮೀಸಲಿರಿಸಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ರೂ.1 ಕೋಟಿ ಅನುದಾನ ಮೀಸಲಿಟ್ಟಿದೆ. ಇಷ್ಟು ಕಡಿಮೆ ಅನುದಾನದಲ್ಲಿ ಈ ಯೋಜನೆ ಆರಂಭವಾಗುವ ಸಾಧ್ಯತೆಗಳೇ ಇಲ್ಲ. ಹೀಗಾದರೆ ನಗರದ ಸಂಚಾರ ದಟ್ಟಣೆ ನಿವಾರಿಸುವುದು ಹೇಗೆ? 2018-19ರಲ್ಲೇ ನಾನು ನಗರೋತ್ಥಾನ ಯೋಜನೆಯಡಿ ರೂ.10,000 ಕೋಟಿಗಳನ್ನು ಬೆಂಗಳೂರು ನಗರವೊಂದಕ್ಕೆ ನೀಡಿದ್ದೆ. ಈ ಬಾರಿ ರೂ.8,772 ಕೋಟಿಗಳನ್ನು ಮೀಸಲಿರಿಸಲಾಗಿದೆ. ಯಡಿಯೂರಪ್ಪ ಅವರು 6 ತಿಂಗಳಲ್ಲಿ ಬೆಂಗಳೂರು ಚಿತ್ರಣ ಬದಲಿಸುತ್ತೀನಿ ಅಂದಿದ್ರು. ಅಧಿಕಾರಕ್ಕೆ ಬಂದು 7 ತಿಂಗಳಾಯ್ತು, ನಗರದ ಚಿತ್ರಣ ಬದಲಾಗಿದೆಯೇ?” ಎಂದು ಕೇಳಿದರು.

“ಮೊನ್ನೆತಾನೆ ಶೇ.10 ರಷ್ಟು ಬಸ್ ದರವನ್ನು ಹೆಚ್ಚಿಸಲಾಗಿತ್ತು. ಏಪ್ರಿಲ್-2020 ರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.1.60, ಡಿಸೇಲ್ ಬೆಲೆ ರೂ.1.59 ರಷ್ಟು ಹೊಸ ತೆರಿಗೆ ಪ್ರಕಾರ ಏರಿಕೆಯಾಗಲಿದೆ. ಇದರ ಜೊತೆಗೆ ಸ್ಲೀಪರ್ ಕೋಚ್ ಬಸ್ ಹಾಗೂ ಮಿನಿ ಬಸ್‌ಗಳ ಮೇಲೆ ಹೊಸದಾಗಿ ಹೆಚ್ಚುವರಿ ತೆರಿಗೆ ವಿಧಿಸಲು ಹೊರಟಿದ್ದಾರೆ. ವಿತ್ತೀಯ ಜವಾಬ್ದಾರಿ ನೀತಿಯಲ್ಲೇ ಸಾಲ ಪಡೆಯಲು ಅವಕಾಶಗಳಿದ್ದರೂ ನಮ್ಮ ಸರ್ಕಾರವಿದ್ದಾಗ ಸಾಲ ಮಾಡಿ ಹೋಳಿಗೆ ತಿನ್ನುತ್ತೀರಿ ಎಂದು ಬಿಜೆಪಿಯವರು ಹಂಗಿಸುತ್ತಿದ್ದರು. ಈಗ ಅವರೇ ರೂ.52,000 ಕೋಟಿ ಸಾಲ ಮಾಡಲು ಹೊರಟಿದ್ದಾರೆ. ಇದೊಂದು ರೀತಿ ‘ಆಚಾರ ಹೇಳೋಕೆ, ಬದನೆಕಾಯಿ ತಿನ್ನೋಕೆ’ ಎಂಬಂತೆ ಆಯಿತಲ್ಲವೇ?” ಎಂದು ವ್ಯಂಗ್ಯವಾಡಿದರು.

“ರಾಜ್ಯದ 44 ಇಲಾಖೆಗಳನ್ನು ಆರು ವಲಯಗಳಲ್ಲಿ ವಿಂಗಡಿಸಿ ಇಲಾಖಾವಾರು ಯೋಜನೆ ಮತ್ತು ಅನುದಾನಗಳನ್ನು ಪ್ರತ್ಯೇಕವಾಗಿ ನಮೂದಿಸದೆ ತೆರಿಗೆದಾರರ ದಾರಿ ತಪ್ಪಿಸುವ ಹುನ್ನಾರವನ್ನು ಬಜೆಟ್‌ನಲ್ಲಿ ಕಾಣಬಹುದು. ತಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಇಂತಹದ್ದೊಂದು ಕುತಂತ್ರವನ್ನು ಮಾಡಿದ ಹಾಗೆ ಕಾಣುತ್ತಿದೆ. ಮುಖ್ಯಮಂತ್ರಿಗಳು ಬಜೆಟ್ ತಯಾರಿಕೆಯನ್ನು ಗಂಭೀರವಾಗಿ ಸ್ವೀಕರಿಸದೆ ಕಾಟಾಚಾರಕ್ಕೆ ಮಾಡಿ ಮುಗಿಸಿದಂತಿದೆ. ಈ ಬಜೆಟ್‌ನ ಇನ್ನಷ್ಟು ಹುಳುಕುಗಳನ್ನು ಒಂದೊಂದಾಗಿ ಮುಂದಿನ ದಿನಗಳಲ್ಲಿ ಜನತೆಯ ಮುಂದೆ ಬಿಚ್ಚಿಡುತ್ತೇನೆ” ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...