Homeಕರ್ನಾಟಕಇದೊಂದು "ಅಡ್ಡಕಸುಬಿ" ಬಜೆಟ್‌: ಸಿದ್ದರಾಮಯ್ಯ ತೀವ್ರ ವಾಗ್ದಾಳಿ

ಇದೊಂದು “ಅಡ್ಡಕಸುಬಿ” ಬಜೆಟ್‌: ಸಿದ್ದರಾಮಯ್ಯ ತೀವ್ರ ವಾಗ್ದಾಳಿ

- Advertisement -
- Advertisement -

ರಾಜ್ಯ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಮುಖ್ಯಮಂತ್ರಿ ಯಡಿಯೂರಪ್ಪರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

“ಬಜೆಟ್ ತಯಾರಿಕೆ ಎನ್ನುವುದು ಗಂಭೀರವಾದ ಪವಿತ್ರ ಕಾರ್ಯ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಮಂಡಿಸಿದ ಬಜೆಟ್ ನೋಡಿದರೆ ಇದೊಂದು “ಅಡ್ಡಕಸುಬಿ” ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರ, ಗಣಿತ, ಹೀಗೆ ಯಾವ ವೃತ್ತಿಪರತೆಯೂ ಇಲ್ಲ ಎಲ್ಲವೂ ಅಸ್ಪಷ್ಟ, ಗೊಂದಲಮಯ” ಎಂದಿದ್ದಾರೆ.

“2013ರ ನನ್ನ ಮೊದಲ ಬಜೆಟ್ ಹಾಗೂ 2018ರ ಕೊನೆಯ ಬಜೆಟ್‌ ಗಾತ್ರದ ನಡುವಿನ ವ್ಯತ್ಯಾಸ ರೂ.1.16.000 ಕೋಟಿ. ಈ ಬಾರಿಯ ಬಜೆಟ್ ಗಾತ್ರ ಹಿಂದಿನ ಬಜೆಟ್‌ಗಿಂತ ಕೇವಲ 1.5% ಹೆಚ್ಚಾಗಿದೆ ಅಷ್ಟೆ. ಹೀಗಾದಾಗ ಎಲ್ಲಾ ವಲಯಗಳ ಅಭಿವೃದ್ಧಿಗೆ ಅಗತ್ಯ ಪ್ರಾಶಸ್ತ್ಯ ನೀಡಲು ಸಾಧ್ಯವಿಲ್ಲ. 14ನೇ ಹಣಕಾಸು ಆಯೋಗದ ಪ್ರಕಾರ ನಮ್ಮ ರಾಜ್ಯಕ್ಕೆ 4.71% ಅನುದಾನ ಹಂಚಿಕೆಯಾಗಿತ್ತು. ಇತ್ತೀಚೆಗೆ ಮಂಡಿಸಲಾದ 15ನೇ ಹಣಕಾಸು ಆಯೋಗದ ಪ್ರಕಾರ ನಮ್ಮ ಹಂಚಿಕೆ ಪಾಲು 3.64%ಗೆ ಇಳಿಕೆಯಾಗಿದೆ. ಇದರಿಂದ ರೂ.11,215 ಕೋಟಿ ನಷ್ಟವಾಗಿದೆ. ಯಡಿಯೂರಪ್ಪ ಅವರು ಎಲ್ಲದಕ್ಕೂ ಬಜೆಟ್ ಮೂಲಕ ಉತ್ತರಿಸುತ್ತೇನೆ ಅಂತಿದ್ರು, ಈಗೇನು ಹೇಳ್ತಾರೆ?” ಎಂದು ಪ್ರಶ್ನಿಸಿದ್ದಾರೆ.

“ಮಹದಾಯಿ ಯೋಜನೆಗೆ 500 ಕೋಟಿ, ಎತ್ತಿನಹೊಳೆ ಯೋಜನೆಗೆ 1,500 ಕೋಟಿ, ತುಂಗಭದ್ರಾ ಜಲಾಶಯದ ಹೂಳೆತ್ತಲು 20 ಕೋಟಿ ಅನುದಾನ ನೀಡಲಾಗುವುದು ಎಂದು ಬಜೆಟ್‍ನಲ್ಲಿ ಹೇಳಲಾಗಿದೆ. ರಾಜ್ಯದ ಎರಡು ಜೀವನದಿಗಳಾದ ಕೃಷ್ಣ ಮೇಲ್ದಂಡೆ ಮತ್ತು ಕಾವೇರಿ ನದಿ ಯೋಜನೆಗಳ ಅನುದಾನದ ಬಗ್ಗೆ ಬಜೆಟ್‍ನಲ್ಲಿ ಯಾವ ಉಲ್ಲೇಖವು ಇಲ್ಲ. ಪ್ರಸಕ್ತ ಬಜೆಟ್‌ನಲ್ಲಿ ರೈತರ ಸಾಲಮನ್ನಾದ ಬಗ್ಗೆ ಒಂದಕ್ಷರವೂ ಮಾಹಿತಿ ಇಲ್ಲ. ಹಿಂದಿನ ಸಮ್ಮಿಶ್ರ ಸರ್ಕಾರ ಹಂತ ಹಂತವಾಗಿ ಸಾಲ ಮನ್ನಾ ಮಾಡುವ ಘೋಷಣೆ ಮಾಡಿತ್ತು, ಅದರ ಬಗ್ಗೆ ಕನಿಷ್ಠ ಮಾಹಿತಿಯನ್ನಾದರೂ ನೀಡಬೇಕಲ್ಲವೇ?” ಎಂದರು.

“2018ರ ಬಜೆಟ್‌ನಲ್ಲಿ ನಾನು ಕೃಷಿ, ತೋಟಗಾರಿಕೆ, ನೀರಾವರಿ, ರೇಷ್ಮೆ, ಹೈನುಗಾರಿಕೆ ಸೇರಿದಂತೆ ಇದಕ್ಕೆ ಸಂಬಂಧಿತ ಚಟುವಟಿಕೆಗಳಿಗೆ ಒಟ್ಟು ರೂ.38,073 ಕೋಟಿ ಅನುದಾನ ಮೀಸಲಿಟ್ಟಿದ್ದೆ. ಪ್ರಸಕ್ತ ಬಜೆಟ್‌ನಲ್ಲಿ ಇದನ್ನು ರೂ.32,259 ಕೋಟಿಗೆ ಇಳಿಕೆ ಮಾಡಲಾಗಿದೆ. ಹಾಗಿದ್ದರೆ, ಇದು ಹೇಗೆ ರೈತಪರ ಬಜೆಟ್ ಆಗಲು ಸಾಧ್ಯ?” ಎಂದು ಹೇಳಿದರು.

ಶಿಕ್ಷಣ ಕ್ಷೇತ್ರಕ್ಕೆ 2018-19ರಲ್ಲಿ ಬಜೆಟ್‍ನ ಶೇ.12 ಪಾಲು ಇತ್ತು. ಈ ಬಾರಿ ಶೇ.11 ಮಾತ್ರ. ಹಿಂದಿಗಿಂತ ಶೇ.1 ರಷ್ಟು ಕಡಿಮೆ ಮಾಡಲಾಗಿದೆ. ಈ ಅನುದಾನ ವರ್ಷದಿಂದ ವರ್ಷಕ್ಕೆ ಏರಿಕೆ ಕಾಣಬೇಕೆ ಹೊರತು ಕಡಿಮೆಯಾಗಬಾರದು. ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಕಳೆದ ಬಾರಿ ರೂ.30,150 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ರೂ.26,131 ಕೋಟಿ ನೀಡಲಾಗಿದೆ. ಸುಮಾರು ರೂ.4000 ಕೋಟಿ ಅನುದಾನ ಕಡಿಮೆಯಾಗಿದೆ. ಬಜೆಟ್ ಗಾತ್ರ ಹೆಚ್ಚಾದಂತೆ ಈ ಅನುದಾನದ ಗಾತ್ರ ಕೂಡ ಹೆಚ್ಚಾಗಬೇಕು. ಇದು ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ ಎಂಬುದನ್ನು ತೋರಿಸುತ್ತದೆ” ಎಂದಿದ್ದಾರೆ.

“‘ಸಬ್ ಕ ಸಾಥ್, ಸಬ್ ಕ ವಿಕಾಸ್’ ಎನ್ನುವ ಬಿಜೆಪಿ ನಾಯಕರು ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. 5 ಅಲ್ಪಸಂಖ್ಯಾತ ವಸತಿ ಶಾಲೆಗಳ ಅಭಿವೃದ್ಧಿಪಡಿಸುವ ಯೋಜನೆ ಹೊರತುಪಡಿಸಿದರೆ ಈ ಸಮುದಾಯದ ಅಭಿವೃದ್ಧಿಗೆ ಬೇರೆಲ್ಲೂ ನಯಾಪೈಸೆ ಅನುದಾನ ನೀಡುವ ಕುರಿತು ಬಜೆಟ್‌ನಲ್ಲಿ ತಿಳಿಸಿಲ್ಲ. ಬಿಜೆಪಿ ಸರ್ಕಾರದ ‘ಕಲ್ಯಾಣ ಕರ್ನಾಟಕ’ ಎಂಬುದು ಬರೀ ಘೋಷಣೆಗಷ್ಟೇ ಸೀಮಿತವಾಗಿದೆ. ನಮ್ಮ ಸರ್ಕಾರದ ಕಡೆಯ ಎರಡು ಬಜೆಟ್‌ನಲ್ಲಿ ಈ ಭಾಗದ ಅಭಿವೃದ್ಧಿಗೆ ತಲಾ ರೂ.1,500 ಕೋಟಿ ಅನುದಾನ ನೀಡಿದ್ದೆ, ಈ ಬಾರಿಯೂ ಅಷ್ಟೇ ಅನುದಾನವನ್ನು ಮೀಸಲಿಡಲಾಗಿದೆ. ಹೆಸರು ಬದಲಾಯಿಸಿದ ಮಾತ್ರಕ್ಕೆ ಈ ಭಾಗದ ಕಲ್ಯಾಣವಾಗುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

“ರೂ.18,000 ಕೋಟಿ ವೆಚ್ಚದ ಉಪನಗರ ರೈಲು ಯೋಜನೆಗೆ ರಾಜ್ಯವು ಕೇವಲ ರೂ.500 ಕೋಟಿ ಅನುದಾನ ಮೀಸಲಿರಿಸಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ರೂ.1 ಕೋಟಿ ಅನುದಾನ ಮೀಸಲಿಟ್ಟಿದೆ. ಇಷ್ಟು ಕಡಿಮೆ ಅನುದಾನದಲ್ಲಿ ಈ ಯೋಜನೆ ಆರಂಭವಾಗುವ ಸಾಧ್ಯತೆಗಳೇ ಇಲ್ಲ. ಹೀಗಾದರೆ ನಗರದ ಸಂಚಾರ ದಟ್ಟಣೆ ನಿವಾರಿಸುವುದು ಹೇಗೆ? 2018-19ರಲ್ಲೇ ನಾನು ನಗರೋತ್ಥಾನ ಯೋಜನೆಯಡಿ ರೂ.10,000 ಕೋಟಿಗಳನ್ನು ಬೆಂಗಳೂರು ನಗರವೊಂದಕ್ಕೆ ನೀಡಿದ್ದೆ. ಈ ಬಾರಿ ರೂ.8,772 ಕೋಟಿಗಳನ್ನು ಮೀಸಲಿರಿಸಲಾಗಿದೆ. ಯಡಿಯೂರಪ್ಪ ಅವರು 6 ತಿಂಗಳಲ್ಲಿ ಬೆಂಗಳೂರು ಚಿತ್ರಣ ಬದಲಿಸುತ್ತೀನಿ ಅಂದಿದ್ರು. ಅಧಿಕಾರಕ್ಕೆ ಬಂದು 7 ತಿಂಗಳಾಯ್ತು, ನಗರದ ಚಿತ್ರಣ ಬದಲಾಗಿದೆಯೇ?” ಎಂದು ಕೇಳಿದರು.

“ಮೊನ್ನೆತಾನೆ ಶೇ.10 ರಷ್ಟು ಬಸ್ ದರವನ್ನು ಹೆಚ್ಚಿಸಲಾಗಿತ್ತು. ಏಪ್ರಿಲ್-2020 ರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.1.60, ಡಿಸೇಲ್ ಬೆಲೆ ರೂ.1.59 ರಷ್ಟು ಹೊಸ ತೆರಿಗೆ ಪ್ರಕಾರ ಏರಿಕೆಯಾಗಲಿದೆ. ಇದರ ಜೊತೆಗೆ ಸ್ಲೀಪರ್ ಕೋಚ್ ಬಸ್ ಹಾಗೂ ಮಿನಿ ಬಸ್‌ಗಳ ಮೇಲೆ ಹೊಸದಾಗಿ ಹೆಚ್ಚುವರಿ ತೆರಿಗೆ ವಿಧಿಸಲು ಹೊರಟಿದ್ದಾರೆ. ವಿತ್ತೀಯ ಜವಾಬ್ದಾರಿ ನೀತಿಯಲ್ಲೇ ಸಾಲ ಪಡೆಯಲು ಅವಕಾಶಗಳಿದ್ದರೂ ನಮ್ಮ ಸರ್ಕಾರವಿದ್ದಾಗ ಸಾಲ ಮಾಡಿ ಹೋಳಿಗೆ ತಿನ್ನುತ್ತೀರಿ ಎಂದು ಬಿಜೆಪಿಯವರು ಹಂಗಿಸುತ್ತಿದ್ದರು. ಈಗ ಅವರೇ ರೂ.52,000 ಕೋಟಿ ಸಾಲ ಮಾಡಲು ಹೊರಟಿದ್ದಾರೆ. ಇದೊಂದು ರೀತಿ ‘ಆಚಾರ ಹೇಳೋಕೆ, ಬದನೆಕಾಯಿ ತಿನ್ನೋಕೆ’ ಎಂಬಂತೆ ಆಯಿತಲ್ಲವೇ?” ಎಂದು ವ್ಯಂಗ್ಯವಾಡಿದರು.

“ರಾಜ್ಯದ 44 ಇಲಾಖೆಗಳನ್ನು ಆರು ವಲಯಗಳಲ್ಲಿ ವಿಂಗಡಿಸಿ ಇಲಾಖಾವಾರು ಯೋಜನೆ ಮತ್ತು ಅನುದಾನಗಳನ್ನು ಪ್ರತ್ಯೇಕವಾಗಿ ನಮೂದಿಸದೆ ತೆರಿಗೆದಾರರ ದಾರಿ ತಪ್ಪಿಸುವ ಹುನ್ನಾರವನ್ನು ಬಜೆಟ್‌ನಲ್ಲಿ ಕಾಣಬಹುದು. ತಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಇಂತಹದ್ದೊಂದು ಕುತಂತ್ರವನ್ನು ಮಾಡಿದ ಹಾಗೆ ಕಾಣುತ್ತಿದೆ. ಮುಖ್ಯಮಂತ್ರಿಗಳು ಬಜೆಟ್ ತಯಾರಿಕೆಯನ್ನು ಗಂಭೀರವಾಗಿ ಸ್ವೀಕರಿಸದೆ ಕಾಟಾಚಾರಕ್ಕೆ ಮಾಡಿ ಮುಗಿಸಿದಂತಿದೆ. ಈ ಬಜೆಟ್‌ನ ಇನ್ನಷ್ಟು ಹುಳುಕುಗಳನ್ನು ಒಂದೊಂದಾಗಿ ಮುಂದಿನ ದಿನಗಳಲ್ಲಿ ಜನತೆಯ ಮುಂದೆ ಬಿಚ್ಚಿಡುತ್ತೇನೆ” ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...