Homeಕರ್ನಾಟಕಇದೊಂದು "ಅಡ್ಡಕಸುಬಿ" ಬಜೆಟ್‌: ಸಿದ್ದರಾಮಯ್ಯ ತೀವ್ರ ವಾಗ್ದಾಳಿ

ಇದೊಂದು “ಅಡ್ಡಕಸುಬಿ” ಬಜೆಟ್‌: ಸಿದ್ದರಾಮಯ್ಯ ತೀವ್ರ ವಾಗ್ದಾಳಿ

- Advertisement -
- Advertisement -

ರಾಜ್ಯ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಮುಖ್ಯಮಂತ್ರಿ ಯಡಿಯೂರಪ್ಪರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

“ಬಜೆಟ್ ತಯಾರಿಕೆ ಎನ್ನುವುದು ಗಂಭೀರವಾದ ಪವಿತ್ರ ಕಾರ್ಯ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಮಂಡಿಸಿದ ಬಜೆಟ್ ನೋಡಿದರೆ ಇದೊಂದು “ಅಡ್ಡಕಸುಬಿ” ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರ, ಗಣಿತ, ಹೀಗೆ ಯಾವ ವೃತ್ತಿಪರತೆಯೂ ಇಲ್ಲ ಎಲ್ಲವೂ ಅಸ್ಪಷ್ಟ, ಗೊಂದಲಮಯ” ಎಂದಿದ್ದಾರೆ.

“2013ರ ನನ್ನ ಮೊದಲ ಬಜೆಟ್ ಹಾಗೂ 2018ರ ಕೊನೆಯ ಬಜೆಟ್‌ ಗಾತ್ರದ ನಡುವಿನ ವ್ಯತ್ಯಾಸ ರೂ.1.16.000 ಕೋಟಿ. ಈ ಬಾರಿಯ ಬಜೆಟ್ ಗಾತ್ರ ಹಿಂದಿನ ಬಜೆಟ್‌ಗಿಂತ ಕೇವಲ 1.5% ಹೆಚ್ಚಾಗಿದೆ ಅಷ್ಟೆ. ಹೀಗಾದಾಗ ಎಲ್ಲಾ ವಲಯಗಳ ಅಭಿವೃದ್ಧಿಗೆ ಅಗತ್ಯ ಪ್ರಾಶಸ್ತ್ಯ ನೀಡಲು ಸಾಧ್ಯವಿಲ್ಲ. 14ನೇ ಹಣಕಾಸು ಆಯೋಗದ ಪ್ರಕಾರ ನಮ್ಮ ರಾಜ್ಯಕ್ಕೆ 4.71% ಅನುದಾನ ಹಂಚಿಕೆಯಾಗಿತ್ತು. ಇತ್ತೀಚೆಗೆ ಮಂಡಿಸಲಾದ 15ನೇ ಹಣಕಾಸು ಆಯೋಗದ ಪ್ರಕಾರ ನಮ್ಮ ಹಂಚಿಕೆ ಪಾಲು 3.64%ಗೆ ಇಳಿಕೆಯಾಗಿದೆ. ಇದರಿಂದ ರೂ.11,215 ಕೋಟಿ ನಷ್ಟವಾಗಿದೆ. ಯಡಿಯೂರಪ್ಪ ಅವರು ಎಲ್ಲದಕ್ಕೂ ಬಜೆಟ್ ಮೂಲಕ ಉತ್ತರಿಸುತ್ತೇನೆ ಅಂತಿದ್ರು, ಈಗೇನು ಹೇಳ್ತಾರೆ?” ಎಂದು ಪ್ರಶ್ನಿಸಿದ್ದಾರೆ.

“ಮಹದಾಯಿ ಯೋಜನೆಗೆ 500 ಕೋಟಿ, ಎತ್ತಿನಹೊಳೆ ಯೋಜನೆಗೆ 1,500 ಕೋಟಿ, ತುಂಗಭದ್ರಾ ಜಲಾಶಯದ ಹೂಳೆತ್ತಲು 20 ಕೋಟಿ ಅನುದಾನ ನೀಡಲಾಗುವುದು ಎಂದು ಬಜೆಟ್‍ನಲ್ಲಿ ಹೇಳಲಾಗಿದೆ. ರಾಜ್ಯದ ಎರಡು ಜೀವನದಿಗಳಾದ ಕೃಷ್ಣ ಮೇಲ್ದಂಡೆ ಮತ್ತು ಕಾವೇರಿ ನದಿ ಯೋಜನೆಗಳ ಅನುದಾನದ ಬಗ್ಗೆ ಬಜೆಟ್‍ನಲ್ಲಿ ಯಾವ ಉಲ್ಲೇಖವು ಇಲ್ಲ. ಪ್ರಸಕ್ತ ಬಜೆಟ್‌ನಲ್ಲಿ ರೈತರ ಸಾಲಮನ್ನಾದ ಬಗ್ಗೆ ಒಂದಕ್ಷರವೂ ಮಾಹಿತಿ ಇಲ್ಲ. ಹಿಂದಿನ ಸಮ್ಮಿಶ್ರ ಸರ್ಕಾರ ಹಂತ ಹಂತವಾಗಿ ಸಾಲ ಮನ್ನಾ ಮಾಡುವ ಘೋಷಣೆ ಮಾಡಿತ್ತು, ಅದರ ಬಗ್ಗೆ ಕನಿಷ್ಠ ಮಾಹಿತಿಯನ್ನಾದರೂ ನೀಡಬೇಕಲ್ಲವೇ?” ಎಂದರು.

“2018ರ ಬಜೆಟ್‌ನಲ್ಲಿ ನಾನು ಕೃಷಿ, ತೋಟಗಾರಿಕೆ, ನೀರಾವರಿ, ರೇಷ್ಮೆ, ಹೈನುಗಾರಿಕೆ ಸೇರಿದಂತೆ ಇದಕ್ಕೆ ಸಂಬಂಧಿತ ಚಟುವಟಿಕೆಗಳಿಗೆ ಒಟ್ಟು ರೂ.38,073 ಕೋಟಿ ಅನುದಾನ ಮೀಸಲಿಟ್ಟಿದ್ದೆ. ಪ್ರಸಕ್ತ ಬಜೆಟ್‌ನಲ್ಲಿ ಇದನ್ನು ರೂ.32,259 ಕೋಟಿಗೆ ಇಳಿಕೆ ಮಾಡಲಾಗಿದೆ. ಹಾಗಿದ್ದರೆ, ಇದು ಹೇಗೆ ರೈತಪರ ಬಜೆಟ್ ಆಗಲು ಸಾಧ್ಯ?” ಎಂದು ಹೇಳಿದರು.

ಶಿಕ್ಷಣ ಕ್ಷೇತ್ರಕ್ಕೆ 2018-19ರಲ್ಲಿ ಬಜೆಟ್‍ನ ಶೇ.12 ಪಾಲು ಇತ್ತು. ಈ ಬಾರಿ ಶೇ.11 ಮಾತ್ರ. ಹಿಂದಿಗಿಂತ ಶೇ.1 ರಷ್ಟು ಕಡಿಮೆ ಮಾಡಲಾಗಿದೆ. ಈ ಅನುದಾನ ವರ್ಷದಿಂದ ವರ್ಷಕ್ಕೆ ಏರಿಕೆ ಕಾಣಬೇಕೆ ಹೊರತು ಕಡಿಮೆಯಾಗಬಾರದು. ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಕಳೆದ ಬಾರಿ ರೂ.30,150 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ರೂ.26,131 ಕೋಟಿ ನೀಡಲಾಗಿದೆ. ಸುಮಾರು ರೂ.4000 ಕೋಟಿ ಅನುದಾನ ಕಡಿಮೆಯಾಗಿದೆ. ಬಜೆಟ್ ಗಾತ್ರ ಹೆಚ್ಚಾದಂತೆ ಈ ಅನುದಾನದ ಗಾತ್ರ ಕೂಡ ಹೆಚ್ಚಾಗಬೇಕು. ಇದು ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ ಎಂಬುದನ್ನು ತೋರಿಸುತ್ತದೆ” ಎಂದಿದ್ದಾರೆ.

“‘ಸಬ್ ಕ ಸಾಥ್, ಸಬ್ ಕ ವಿಕಾಸ್’ ಎನ್ನುವ ಬಿಜೆಪಿ ನಾಯಕರು ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. 5 ಅಲ್ಪಸಂಖ್ಯಾತ ವಸತಿ ಶಾಲೆಗಳ ಅಭಿವೃದ್ಧಿಪಡಿಸುವ ಯೋಜನೆ ಹೊರತುಪಡಿಸಿದರೆ ಈ ಸಮುದಾಯದ ಅಭಿವೃದ್ಧಿಗೆ ಬೇರೆಲ್ಲೂ ನಯಾಪೈಸೆ ಅನುದಾನ ನೀಡುವ ಕುರಿತು ಬಜೆಟ್‌ನಲ್ಲಿ ತಿಳಿಸಿಲ್ಲ. ಬಿಜೆಪಿ ಸರ್ಕಾರದ ‘ಕಲ್ಯಾಣ ಕರ್ನಾಟಕ’ ಎಂಬುದು ಬರೀ ಘೋಷಣೆಗಷ್ಟೇ ಸೀಮಿತವಾಗಿದೆ. ನಮ್ಮ ಸರ್ಕಾರದ ಕಡೆಯ ಎರಡು ಬಜೆಟ್‌ನಲ್ಲಿ ಈ ಭಾಗದ ಅಭಿವೃದ್ಧಿಗೆ ತಲಾ ರೂ.1,500 ಕೋಟಿ ಅನುದಾನ ನೀಡಿದ್ದೆ, ಈ ಬಾರಿಯೂ ಅಷ್ಟೇ ಅನುದಾನವನ್ನು ಮೀಸಲಿಡಲಾಗಿದೆ. ಹೆಸರು ಬದಲಾಯಿಸಿದ ಮಾತ್ರಕ್ಕೆ ಈ ಭಾಗದ ಕಲ್ಯಾಣವಾಗುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

“ರೂ.18,000 ಕೋಟಿ ವೆಚ್ಚದ ಉಪನಗರ ರೈಲು ಯೋಜನೆಗೆ ರಾಜ್ಯವು ಕೇವಲ ರೂ.500 ಕೋಟಿ ಅನುದಾನ ಮೀಸಲಿರಿಸಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ರೂ.1 ಕೋಟಿ ಅನುದಾನ ಮೀಸಲಿಟ್ಟಿದೆ. ಇಷ್ಟು ಕಡಿಮೆ ಅನುದಾನದಲ್ಲಿ ಈ ಯೋಜನೆ ಆರಂಭವಾಗುವ ಸಾಧ್ಯತೆಗಳೇ ಇಲ್ಲ. ಹೀಗಾದರೆ ನಗರದ ಸಂಚಾರ ದಟ್ಟಣೆ ನಿವಾರಿಸುವುದು ಹೇಗೆ? 2018-19ರಲ್ಲೇ ನಾನು ನಗರೋತ್ಥಾನ ಯೋಜನೆಯಡಿ ರೂ.10,000 ಕೋಟಿಗಳನ್ನು ಬೆಂಗಳೂರು ನಗರವೊಂದಕ್ಕೆ ನೀಡಿದ್ದೆ. ಈ ಬಾರಿ ರೂ.8,772 ಕೋಟಿಗಳನ್ನು ಮೀಸಲಿರಿಸಲಾಗಿದೆ. ಯಡಿಯೂರಪ್ಪ ಅವರು 6 ತಿಂಗಳಲ್ಲಿ ಬೆಂಗಳೂರು ಚಿತ್ರಣ ಬದಲಿಸುತ್ತೀನಿ ಅಂದಿದ್ರು. ಅಧಿಕಾರಕ್ಕೆ ಬಂದು 7 ತಿಂಗಳಾಯ್ತು, ನಗರದ ಚಿತ್ರಣ ಬದಲಾಗಿದೆಯೇ?” ಎಂದು ಕೇಳಿದರು.

“ಮೊನ್ನೆತಾನೆ ಶೇ.10 ರಷ್ಟು ಬಸ್ ದರವನ್ನು ಹೆಚ್ಚಿಸಲಾಗಿತ್ತು. ಏಪ್ರಿಲ್-2020 ರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.1.60, ಡಿಸೇಲ್ ಬೆಲೆ ರೂ.1.59 ರಷ್ಟು ಹೊಸ ತೆರಿಗೆ ಪ್ರಕಾರ ಏರಿಕೆಯಾಗಲಿದೆ. ಇದರ ಜೊತೆಗೆ ಸ್ಲೀಪರ್ ಕೋಚ್ ಬಸ್ ಹಾಗೂ ಮಿನಿ ಬಸ್‌ಗಳ ಮೇಲೆ ಹೊಸದಾಗಿ ಹೆಚ್ಚುವರಿ ತೆರಿಗೆ ವಿಧಿಸಲು ಹೊರಟಿದ್ದಾರೆ. ವಿತ್ತೀಯ ಜವಾಬ್ದಾರಿ ನೀತಿಯಲ್ಲೇ ಸಾಲ ಪಡೆಯಲು ಅವಕಾಶಗಳಿದ್ದರೂ ನಮ್ಮ ಸರ್ಕಾರವಿದ್ದಾಗ ಸಾಲ ಮಾಡಿ ಹೋಳಿಗೆ ತಿನ್ನುತ್ತೀರಿ ಎಂದು ಬಿಜೆಪಿಯವರು ಹಂಗಿಸುತ್ತಿದ್ದರು. ಈಗ ಅವರೇ ರೂ.52,000 ಕೋಟಿ ಸಾಲ ಮಾಡಲು ಹೊರಟಿದ್ದಾರೆ. ಇದೊಂದು ರೀತಿ ‘ಆಚಾರ ಹೇಳೋಕೆ, ಬದನೆಕಾಯಿ ತಿನ್ನೋಕೆ’ ಎಂಬಂತೆ ಆಯಿತಲ್ಲವೇ?” ಎಂದು ವ್ಯಂಗ್ಯವಾಡಿದರು.

“ರಾಜ್ಯದ 44 ಇಲಾಖೆಗಳನ್ನು ಆರು ವಲಯಗಳಲ್ಲಿ ವಿಂಗಡಿಸಿ ಇಲಾಖಾವಾರು ಯೋಜನೆ ಮತ್ತು ಅನುದಾನಗಳನ್ನು ಪ್ರತ್ಯೇಕವಾಗಿ ನಮೂದಿಸದೆ ತೆರಿಗೆದಾರರ ದಾರಿ ತಪ್ಪಿಸುವ ಹುನ್ನಾರವನ್ನು ಬಜೆಟ್‌ನಲ್ಲಿ ಕಾಣಬಹುದು. ತಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಇಂತಹದ್ದೊಂದು ಕುತಂತ್ರವನ್ನು ಮಾಡಿದ ಹಾಗೆ ಕಾಣುತ್ತಿದೆ. ಮುಖ್ಯಮಂತ್ರಿಗಳು ಬಜೆಟ್ ತಯಾರಿಕೆಯನ್ನು ಗಂಭೀರವಾಗಿ ಸ್ವೀಕರಿಸದೆ ಕಾಟಾಚಾರಕ್ಕೆ ಮಾಡಿ ಮುಗಿಸಿದಂತಿದೆ. ಈ ಬಜೆಟ್‌ನ ಇನ್ನಷ್ಟು ಹುಳುಕುಗಳನ್ನು ಒಂದೊಂದಾಗಿ ಮುಂದಿನ ದಿನಗಳಲ್ಲಿ ಜನತೆಯ ಮುಂದೆ ಬಿಚ್ಚಿಡುತ್ತೇನೆ” ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...