Homeಕರ್ನಾಟಕಇದೊಂದು "ಅಡ್ಡಕಸುಬಿ" ಬಜೆಟ್‌: ಸಿದ್ದರಾಮಯ್ಯ ತೀವ್ರ ವಾಗ್ದಾಳಿ

ಇದೊಂದು “ಅಡ್ಡಕಸುಬಿ” ಬಜೆಟ್‌: ಸಿದ್ದರಾಮಯ್ಯ ತೀವ್ರ ವಾಗ್ದಾಳಿ

- Advertisement -
- Advertisement -

ರಾಜ್ಯ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಮುಖ್ಯಮಂತ್ರಿ ಯಡಿಯೂರಪ್ಪರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

“ಬಜೆಟ್ ತಯಾರಿಕೆ ಎನ್ನುವುದು ಗಂಭೀರವಾದ ಪವಿತ್ರ ಕಾರ್ಯ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಮಂಡಿಸಿದ ಬಜೆಟ್ ನೋಡಿದರೆ ಇದೊಂದು “ಅಡ್ಡಕಸುಬಿ” ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರ, ಗಣಿತ, ಹೀಗೆ ಯಾವ ವೃತ್ತಿಪರತೆಯೂ ಇಲ್ಲ ಎಲ್ಲವೂ ಅಸ್ಪಷ್ಟ, ಗೊಂದಲಮಯ” ಎಂದಿದ್ದಾರೆ.

“2013ರ ನನ್ನ ಮೊದಲ ಬಜೆಟ್ ಹಾಗೂ 2018ರ ಕೊನೆಯ ಬಜೆಟ್‌ ಗಾತ್ರದ ನಡುವಿನ ವ್ಯತ್ಯಾಸ ರೂ.1.16.000 ಕೋಟಿ. ಈ ಬಾರಿಯ ಬಜೆಟ್ ಗಾತ್ರ ಹಿಂದಿನ ಬಜೆಟ್‌ಗಿಂತ ಕೇವಲ 1.5% ಹೆಚ್ಚಾಗಿದೆ ಅಷ್ಟೆ. ಹೀಗಾದಾಗ ಎಲ್ಲಾ ವಲಯಗಳ ಅಭಿವೃದ್ಧಿಗೆ ಅಗತ್ಯ ಪ್ರಾಶಸ್ತ್ಯ ನೀಡಲು ಸಾಧ್ಯವಿಲ್ಲ. 14ನೇ ಹಣಕಾಸು ಆಯೋಗದ ಪ್ರಕಾರ ನಮ್ಮ ರಾಜ್ಯಕ್ಕೆ 4.71% ಅನುದಾನ ಹಂಚಿಕೆಯಾಗಿತ್ತು. ಇತ್ತೀಚೆಗೆ ಮಂಡಿಸಲಾದ 15ನೇ ಹಣಕಾಸು ಆಯೋಗದ ಪ್ರಕಾರ ನಮ್ಮ ಹಂಚಿಕೆ ಪಾಲು 3.64%ಗೆ ಇಳಿಕೆಯಾಗಿದೆ. ಇದರಿಂದ ರೂ.11,215 ಕೋಟಿ ನಷ್ಟವಾಗಿದೆ. ಯಡಿಯೂರಪ್ಪ ಅವರು ಎಲ್ಲದಕ್ಕೂ ಬಜೆಟ್ ಮೂಲಕ ಉತ್ತರಿಸುತ್ತೇನೆ ಅಂತಿದ್ರು, ಈಗೇನು ಹೇಳ್ತಾರೆ?” ಎಂದು ಪ್ರಶ್ನಿಸಿದ್ದಾರೆ.

“ಮಹದಾಯಿ ಯೋಜನೆಗೆ 500 ಕೋಟಿ, ಎತ್ತಿನಹೊಳೆ ಯೋಜನೆಗೆ 1,500 ಕೋಟಿ, ತುಂಗಭದ್ರಾ ಜಲಾಶಯದ ಹೂಳೆತ್ತಲು 20 ಕೋಟಿ ಅನುದಾನ ನೀಡಲಾಗುವುದು ಎಂದು ಬಜೆಟ್‍ನಲ್ಲಿ ಹೇಳಲಾಗಿದೆ. ರಾಜ್ಯದ ಎರಡು ಜೀವನದಿಗಳಾದ ಕೃಷ್ಣ ಮೇಲ್ದಂಡೆ ಮತ್ತು ಕಾವೇರಿ ನದಿ ಯೋಜನೆಗಳ ಅನುದಾನದ ಬಗ್ಗೆ ಬಜೆಟ್‍ನಲ್ಲಿ ಯಾವ ಉಲ್ಲೇಖವು ಇಲ್ಲ. ಪ್ರಸಕ್ತ ಬಜೆಟ್‌ನಲ್ಲಿ ರೈತರ ಸಾಲಮನ್ನಾದ ಬಗ್ಗೆ ಒಂದಕ್ಷರವೂ ಮಾಹಿತಿ ಇಲ್ಲ. ಹಿಂದಿನ ಸಮ್ಮಿಶ್ರ ಸರ್ಕಾರ ಹಂತ ಹಂತವಾಗಿ ಸಾಲ ಮನ್ನಾ ಮಾಡುವ ಘೋಷಣೆ ಮಾಡಿತ್ತು, ಅದರ ಬಗ್ಗೆ ಕನಿಷ್ಠ ಮಾಹಿತಿಯನ್ನಾದರೂ ನೀಡಬೇಕಲ್ಲವೇ?” ಎಂದರು.

“2018ರ ಬಜೆಟ್‌ನಲ್ಲಿ ನಾನು ಕೃಷಿ, ತೋಟಗಾರಿಕೆ, ನೀರಾವರಿ, ರೇಷ್ಮೆ, ಹೈನುಗಾರಿಕೆ ಸೇರಿದಂತೆ ಇದಕ್ಕೆ ಸಂಬಂಧಿತ ಚಟುವಟಿಕೆಗಳಿಗೆ ಒಟ್ಟು ರೂ.38,073 ಕೋಟಿ ಅನುದಾನ ಮೀಸಲಿಟ್ಟಿದ್ದೆ. ಪ್ರಸಕ್ತ ಬಜೆಟ್‌ನಲ್ಲಿ ಇದನ್ನು ರೂ.32,259 ಕೋಟಿಗೆ ಇಳಿಕೆ ಮಾಡಲಾಗಿದೆ. ಹಾಗಿದ್ದರೆ, ಇದು ಹೇಗೆ ರೈತಪರ ಬಜೆಟ್ ಆಗಲು ಸಾಧ್ಯ?” ಎಂದು ಹೇಳಿದರು.

ಶಿಕ್ಷಣ ಕ್ಷೇತ್ರಕ್ಕೆ 2018-19ರಲ್ಲಿ ಬಜೆಟ್‍ನ ಶೇ.12 ಪಾಲು ಇತ್ತು. ಈ ಬಾರಿ ಶೇ.11 ಮಾತ್ರ. ಹಿಂದಿಗಿಂತ ಶೇ.1 ರಷ್ಟು ಕಡಿಮೆ ಮಾಡಲಾಗಿದೆ. ಈ ಅನುದಾನ ವರ್ಷದಿಂದ ವರ್ಷಕ್ಕೆ ಏರಿಕೆ ಕಾಣಬೇಕೆ ಹೊರತು ಕಡಿಮೆಯಾಗಬಾರದು. ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಕಳೆದ ಬಾರಿ ರೂ.30,150 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ರೂ.26,131 ಕೋಟಿ ನೀಡಲಾಗಿದೆ. ಸುಮಾರು ರೂ.4000 ಕೋಟಿ ಅನುದಾನ ಕಡಿಮೆಯಾಗಿದೆ. ಬಜೆಟ್ ಗಾತ್ರ ಹೆಚ್ಚಾದಂತೆ ಈ ಅನುದಾನದ ಗಾತ್ರ ಕೂಡ ಹೆಚ್ಚಾಗಬೇಕು. ಇದು ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ ಎಂಬುದನ್ನು ತೋರಿಸುತ್ತದೆ” ಎಂದಿದ್ದಾರೆ.

“‘ಸಬ್ ಕ ಸಾಥ್, ಸಬ್ ಕ ವಿಕಾಸ್’ ಎನ್ನುವ ಬಿಜೆಪಿ ನಾಯಕರು ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. 5 ಅಲ್ಪಸಂಖ್ಯಾತ ವಸತಿ ಶಾಲೆಗಳ ಅಭಿವೃದ್ಧಿಪಡಿಸುವ ಯೋಜನೆ ಹೊರತುಪಡಿಸಿದರೆ ಈ ಸಮುದಾಯದ ಅಭಿವೃದ್ಧಿಗೆ ಬೇರೆಲ್ಲೂ ನಯಾಪೈಸೆ ಅನುದಾನ ನೀಡುವ ಕುರಿತು ಬಜೆಟ್‌ನಲ್ಲಿ ತಿಳಿಸಿಲ್ಲ. ಬಿಜೆಪಿ ಸರ್ಕಾರದ ‘ಕಲ್ಯಾಣ ಕರ್ನಾಟಕ’ ಎಂಬುದು ಬರೀ ಘೋಷಣೆಗಷ್ಟೇ ಸೀಮಿತವಾಗಿದೆ. ನಮ್ಮ ಸರ್ಕಾರದ ಕಡೆಯ ಎರಡು ಬಜೆಟ್‌ನಲ್ಲಿ ಈ ಭಾಗದ ಅಭಿವೃದ್ಧಿಗೆ ತಲಾ ರೂ.1,500 ಕೋಟಿ ಅನುದಾನ ನೀಡಿದ್ದೆ, ಈ ಬಾರಿಯೂ ಅಷ್ಟೇ ಅನುದಾನವನ್ನು ಮೀಸಲಿಡಲಾಗಿದೆ. ಹೆಸರು ಬದಲಾಯಿಸಿದ ಮಾತ್ರಕ್ಕೆ ಈ ಭಾಗದ ಕಲ್ಯಾಣವಾಗುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

“ರೂ.18,000 ಕೋಟಿ ವೆಚ್ಚದ ಉಪನಗರ ರೈಲು ಯೋಜನೆಗೆ ರಾಜ್ಯವು ಕೇವಲ ರೂ.500 ಕೋಟಿ ಅನುದಾನ ಮೀಸಲಿರಿಸಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ರೂ.1 ಕೋಟಿ ಅನುದಾನ ಮೀಸಲಿಟ್ಟಿದೆ. ಇಷ್ಟು ಕಡಿಮೆ ಅನುದಾನದಲ್ಲಿ ಈ ಯೋಜನೆ ಆರಂಭವಾಗುವ ಸಾಧ್ಯತೆಗಳೇ ಇಲ್ಲ. ಹೀಗಾದರೆ ನಗರದ ಸಂಚಾರ ದಟ್ಟಣೆ ನಿವಾರಿಸುವುದು ಹೇಗೆ? 2018-19ರಲ್ಲೇ ನಾನು ನಗರೋತ್ಥಾನ ಯೋಜನೆಯಡಿ ರೂ.10,000 ಕೋಟಿಗಳನ್ನು ಬೆಂಗಳೂರು ನಗರವೊಂದಕ್ಕೆ ನೀಡಿದ್ದೆ. ಈ ಬಾರಿ ರೂ.8,772 ಕೋಟಿಗಳನ್ನು ಮೀಸಲಿರಿಸಲಾಗಿದೆ. ಯಡಿಯೂರಪ್ಪ ಅವರು 6 ತಿಂಗಳಲ್ಲಿ ಬೆಂಗಳೂರು ಚಿತ್ರಣ ಬದಲಿಸುತ್ತೀನಿ ಅಂದಿದ್ರು. ಅಧಿಕಾರಕ್ಕೆ ಬಂದು 7 ತಿಂಗಳಾಯ್ತು, ನಗರದ ಚಿತ್ರಣ ಬದಲಾಗಿದೆಯೇ?” ಎಂದು ಕೇಳಿದರು.

“ಮೊನ್ನೆತಾನೆ ಶೇ.10 ರಷ್ಟು ಬಸ್ ದರವನ್ನು ಹೆಚ್ಚಿಸಲಾಗಿತ್ತು. ಏಪ್ರಿಲ್-2020 ರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.1.60, ಡಿಸೇಲ್ ಬೆಲೆ ರೂ.1.59 ರಷ್ಟು ಹೊಸ ತೆರಿಗೆ ಪ್ರಕಾರ ಏರಿಕೆಯಾಗಲಿದೆ. ಇದರ ಜೊತೆಗೆ ಸ್ಲೀಪರ್ ಕೋಚ್ ಬಸ್ ಹಾಗೂ ಮಿನಿ ಬಸ್‌ಗಳ ಮೇಲೆ ಹೊಸದಾಗಿ ಹೆಚ್ಚುವರಿ ತೆರಿಗೆ ವಿಧಿಸಲು ಹೊರಟಿದ್ದಾರೆ. ವಿತ್ತೀಯ ಜವಾಬ್ದಾರಿ ನೀತಿಯಲ್ಲೇ ಸಾಲ ಪಡೆಯಲು ಅವಕಾಶಗಳಿದ್ದರೂ ನಮ್ಮ ಸರ್ಕಾರವಿದ್ದಾಗ ಸಾಲ ಮಾಡಿ ಹೋಳಿಗೆ ತಿನ್ನುತ್ತೀರಿ ಎಂದು ಬಿಜೆಪಿಯವರು ಹಂಗಿಸುತ್ತಿದ್ದರು. ಈಗ ಅವರೇ ರೂ.52,000 ಕೋಟಿ ಸಾಲ ಮಾಡಲು ಹೊರಟಿದ್ದಾರೆ. ಇದೊಂದು ರೀತಿ ‘ಆಚಾರ ಹೇಳೋಕೆ, ಬದನೆಕಾಯಿ ತಿನ್ನೋಕೆ’ ಎಂಬಂತೆ ಆಯಿತಲ್ಲವೇ?” ಎಂದು ವ್ಯಂಗ್ಯವಾಡಿದರು.

“ರಾಜ್ಯದ 44 ಇಲಾಖೆಗಳನ್ನು ಆರು ವಲಯಗಳಲ್ಲಿ ವಿಂಗಡಿಸಿ ಇಲಾಖಾವಾರು ಯೋಜನೆ ಮತ್ತು ಅನುದಾನಗಳನ್ನು ಪ್ರತ್ಯೇಕವಾಗಿ ನಮೂದಿಸದೆ ತೆರಿಗೆದಾರರ ದಾರಿ ತಪ್ಪಿಸುವ ಹುನ್ನಾರವನ್ನು ಬಜೆಟ್‌ನಲ್ಲಿ ಕಾಣಬಹುದು. ತಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಇಂತಹದ್ದೊಂದು ಕುತಂತ್ರವನ್ನು ಮಾಡಿದ ಹಾಗೆ ಕಾಣುತ್ತಿದೆ. ಮುಖ್ಯಮಂತ್ರಿಗಳು ಬಜೆಟ್ ತಯಾರಿಕೆಯನ್ನು ಗಂಭೀರವಾಗಿ ಸ್ವೀಕರಿಸದೆ ಕಾಟಾಚಾರಕ್ಕೆ ಮಾಡಿ ಮುಗಿಸಿದಂತಿದೆ. ಈ ಬಜೆಟ್‌ನ ಇನ್ನಷ್ಟು ಹುಳುಕುಗಳನ್ನು ಒಂದೊಂದಾಗಿ ಮುಂದಿನ ದಿನಗಳಲ್ಲಿ ಜನತೆಯ ಮುಂದೆ ಬಿಚ್ಚಿಡುತ್ತೇನೆ” ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...