Homeಮುಖಪುಟಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ಹೈದರಾಬಾದ್‌ನಲ್ಲಿ ಪ್ರವಾಹ ಬಂದು, ಕೊಟ್ಯಾಂತರ ಮೌಲ್ಯದ ಹಾನಿಯಾಗಿದೆ. ಪ್ರವಾಹದ ನಂತರ ನಗರಕ್ಕೆ ಬಿಜೆಪಿಯ ಕೇಂದ್ರ ಸರ್ಕಾರ ಏನು ಪರಿಹಾರ ನೀಡಿದೆ..?

- Advertisement -
- Advertisement -

ಬಿಜೆಪಿಗೆ ತನ್ನ ಹೇಳಿಕೆ ಬಗ್ಗೆ ಪ್ರಾಮಾಣಿಕತೆ ಇದ್ದರೆ ಚುನಾವಣಾ ಮತದಾರರ ಪಟ್ಟಿಯಲ್ಲಿ 1,000 ರೋಹಿಂಗ್ಯಾಗಳ ಹೆಸರುಗಳನ್ನು ತೋರಿಸಲಿ ಎಂದು ಆಲ್ ಇಂಡಿಯ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿಜೆಪಿಗೆ ಸವಾಲು ಹಾಕಿದ್ದಾರೆ.

“ಮತದಾರರ ಪಟ್ಟಿಯಲ್ಲಿ 30,000 ರಿಂದ 40,000 ರೋಹಿಂಗ್ಯಾಗಳಿದ್ದಾರೆ ಎಂದು ಬಿಜೆಪಿ ಹೇಳುತ್ತಿದೆ. ಪಟ್ಟಿಯಲ್ಲಿ 30,000 ರೋಹಿಂಗ್ಯಾಗಳಿದ್ದರೆ, ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ? ಇಷ್ಟು ರೋಹಿಂಗ್ಯಾಗಳನ್ನು ಹೇಗೆ ಪಟ್ಟಿ ಮಾಡಲಾಗಿದೆ? ಎಂದು ನೋಡುವುದು ಅವರ ಕೆಲಸವಲ್ಲವೇ ” ಎಂದು ಓವೈಸಿ ಪ್ರಶ್ನಿಸಿದ್ದಾರೆ.

“ಪ್ರತಿದಿನ ಒಬ್ಬರಲ್ಲ, ಒಬ್ಬರು ದೆಹಲಿಯಿಂದ ಹೈದರಾಬಾದ್‌ಗೆ ಬಂದಿಳಿಯುತ್ತಿದ್ದಾರೆ. 2019 ರಿಂದ ಅಭಿವೃದ್ಧಿ ಕೆಲಸಗಳಿಗಾಗಿ ಹೈದರಾಬಾದ್‌ಗೆ ಕೇಂದ್ರದ ಬಿಜೆಪಿ ಎಷ್ಟು ಹಣ ಬಿಡುಗಡೆ ಮಾಡಿದೆ ಎಂದು ಕೇಳಿದರೆ ಒಬ್ಬರ ಬಳಿಯೂ ಉತ್ತರವಿಲ್ಲ” ಎಂದು ಅವರು ವ್ಯಂಗ್ಯವಾಡಿದ್ದಾರೆ.

’ಹೈದರಾಬಾದ್‌ನಲ್ಲಿ ಪ್ರವಾಹ ಬಂದು, ಕೊಟ್ಯಾಂತರ ಮೌಲ್ಯದ ಹಾನಿಯಾಗಿದೆ. ಪ್ರವಾಹದ ನಂತರ ನಗರಕ್ಕೆ ಬಿಜೆಪಿಯ ಕೇಂದ್ರ ಸರ್ಕಾರ ಏನು ಪರಿಹಾರ ನೀಡಿದೆ..?” ಎಂದು  ಒವೈಸಿ ಹೈದರಾಬಾದ್‌ನ ಮಲಕ್ಪೇಟೆ ಕ್ಷೇತ್ರದ ಅಜಂಪುರಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.

“ಬಿಜೆಪಿ ಈಗ ನಿರಾಶೆಗೊಂಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವರು ಇಲ್ಲಿಗೆ ಬಂದು ಜನರು ಎಐಎಂಐಎಂಗೆ ಮತ ಹಾಕಿದರೆ ಅದು ಟಿಆರ್‌ಎಸ್‌ಗೆ ಲಾಭವಾಗಲಿದೆ ಎಂದು ಹೇಳುತ್ತಾರೆ. ಮತ್ತೆ ಕೆಲವರು ನನ್ನನ್ನು ಮುಹಮ್ಮದ್ ಅಲಿ ಜಿನ್ನಾರಿಗೆ ಹೋಲಿಸಿ ಮಾತನಾಡುತ್ತಾರೆ, ಎಐಐಎಂಐಎಂ ಮೂಲಭೂತವನ್ನು ಉತ್ತೇಜಿಸುತ್ತದೆ ಎಂದು ಹೇಳಿಕೊಳ್ಳುತ್ತಾರೆ. ಸುಳ್ಳು ಆರೋಪಗಳನ್ನು ಮಾಡದೇ ಅವರ ಬಳಿ ಹೇಳಲು ಬೇರೆ ಏನೂ ಇಲ್ಲ” ಎಂದು ಒವೈಸಿ ಹೇಳಿದ್ದಾರೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್‌ (GHMC) ಚುನಾವಣೆಯ ಪ್ರಚಾರದಲ್ಲಿ ಸಂಸದ ಓವೈಸಿ ಅವರನ್ನು ಪಾಕಿಸ್ತಾನದ ರಾಷ್ಟ್ರಪಿತ ಮುಹಮ್ಮದ್ ಅಲಿ ಜಿನ್ನಾರಿಗೆ ಹೋಲಿಸಿ ಮಾತಾಡಿರುವುದಕ್ಕೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ದ್ವೇಷ ಸೃಷ್ಟಿಸುವುದು ಬಿಜೆಪಿ ಉದ್ದೇಶವಾಗಿದೆ. ಈ ಹೋರಾಟ ಹೈದರಾಬಾದ್ ಮತ್ತು ಭಾಗ್ಯನಗರದ ನಡುವೆ ನಡೆಯುತ್ತಿದೆ. ಯಾರು ಗೆಲ್ಲಬೇಕೆಂದು ನಿರ್ಧರಿಸುವುದು ನಿಮ್ಮ ಜವಾಬ್ದಾರಿ’ ಎಂದು ಓವೈಸಿ ಹೇಳಿದ್ದಾರೆ. ನಿನ್ನೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೈದರಾಬಾದ್ ಹೆಸರನ್ನು ಭಾಗ್ಯನಗರ ಎಂದು ಬದಲಿಸಬೇಕು ಎಂಬ ಹೇಳಿಕೆ ನೀಡಿ ಟ್ರೋಲ್‌ಗೊಳಗಾಗಿದ್ದರು.

ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ಮುಂದುವರಿದು ಮಾತನಾಡಿದ ತೇಜಸ್ವಿ ಸೂರ್ಯ, “ಜಿನ್ನಾ ಅವರ ಅವತಾರವಾದ ಒವೈಸಿಗೆ ನೀಡುವ ಪ್ರತಿ ಮತವು ಭಾರತದ ವಿರುದ್ಧವಾಗಿದೆ” ಎಂದು ಹೇಳಿದ್ದರು.


ಇದನ್ನೂ ಓದಿ: ಮೊದಲು ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ತನ್ನಿ, ನಂತರ ಕರಾಚಿಯ ಬಗ್ಗೆ ಯೋಚಿಸಿ: ಸಂಜಯ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...