Homeಮುಖಪುಟ'ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ' : ಸಾಂತಾ ಟೋಪಿ ಮಾರಾಟಗಾರರಿಗೆ...

‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ

- Advertisement -
- Advertisement -

ಒಡಿಶಾದ ಭುವನೇಶ್ವರ ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಸ್ತೆ ಬದಿ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳಿಗೆ ದುಷ್ಕರ್ಮಿಗಳ ಗುಂಪು ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ.

ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ದುಷ್ಕರ್ಮಿಗಳ ಗುಂಪು, “ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳನ್ನು ಮಾರಾಟ ಮಾಡಲು ಅವಕಾಶವಿಲ್ಲ” ಎಂದು ವ್ಯಾಪಾರಿಗಳನ್ನು ಬೆದರಿಸಿರುವುದು ಮತ್ತು “ನೀವು ಎಲ್ಲಿಯವರು ಹಾಗೂ ನೀವು ಹಿಂದೂಗಳೇ?” ಎಂದು ದುಷ್ಕರ್ಮಿಯೊಬ್ಬ ಪ್ರಶ್ನಿಸುತ್ತಿರುವುದು ಇದೆ.

ಈ ಪ್ರಶ್ನೆಗೆ, “ನಾವು ನಿಜವಾಗಿಯೂ ಹಿಂದೂಗಳಾಗಿದ್ದು, ಬಡವರಾಗಿರುವುದರಿಂದ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದೇವೆ” ಎಂದು ವ್ಯಾಪಾರಿಗಳು ಉತ್ತರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ, “ಇಲ್ಲಿ ಕೇವಲ ಜಗನ್ನಾಥ ದೇವರು ಮಾತ್ರ ಆಳಲು ಸಾಧ್ಯ. ಹಿಂದುಗಳಾಗಿ ನೀವೇಗೆ ಇದನ್ನು ಮಾಡುತ್ತಿದ್ಧೀರಿ? ಮೂಟೆ ಕಟ್ಟಿ ಇಲ್ಲಿಂದ ತಕ್ಷಣವೇ ತೆರಳಿ. ನಿಮಗೇನಾದರೂ ಮಾರಾಟ ಮಾಡಬೇಕಿದ್ದರೆ ಜಗನ್ನಾಥ ದೇವರ ಸಾಮಗ್ರಿಗಳನ್ನು ಮಾರಾಟ ಮಾಡಿ” ಎಂದು ಆತ ಪ್ರತಿಕ್ರಿಯೆ ನೀಡಿದ್ದಾನೆ.

View this post on Instagram

A post shared by India Our Home (@indiaourhome)

ಇದಕ್ಕೆ, ಒಂದಿಬ್ಬರು ವ್ಯಾಪಾರಿಗಳು ನಾವು ರಾಜಸ್ಥಾನದಿಂದ ಬಂದಿದ್ದೇವೆ ಎಂದು ತಿಳಿಸಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ದುಷ್ಕರ್ಮಿ, “ನೀವು ಎಲ್ಲಿಯವರೆಗೆ ಕ್ರಿಶ್ಚಿಯನ್ ಕಲಾಕೃತಿಗಳನ್ನು ಮಾರಾಟ ಮಾಡುವುದಿಲ್ಲವೊ, ಅಲ್ಲಿಯವರೆಗೂ ನಿಮಗೆ ಯಾವುದೇ ತೊಂದರೆಯಿಲ್ಲ” ಎಂದು ಹೇಳಿದ್ದಾನೆ.

ಮತ್ತೊಂದೆಡೆಯೂ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳ ಬಳಿ ತೆರಳಿದ ದುಷ್ಕರ್ಮಿ “ಇದು ಹಿಂದೂ ರಾಷ್ಟ್ರ. ಇಲ್ಲಿ ಯಾರೂ ಕ್ರಿಸ್ಮಸ್ ಹಬ್ಬ ಆಚರಿಸಲು ನಾವು ಅವಕಾಶ ನೀಡುವುದಿಲ್ಲ. ಬಿಜೆಪಿ ಅಡಿಯ ಹೊಸ ಒಡಿಶಾಗೆ ಸುಸ್ವಾಗತ” ಎಂದು ನಿಂದಿಸಿ, ವ್ಯಾಪಾರಿಗೆ ಬೆದರಿಕೆ ಒಡ್ಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...