Homeಫ್ಯಾಕ್ಟ್‌ಚೆಕ್Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

- Advertisement -
- Advertisement -

ಕೊರೊನಾ ವೈರಸ್ ಹರಡಲು ಮುಸ್ಲಿಮರು ಪಾತ್ರೆಗಳನ್ನು ನೆಕ್ಕುತ್ತಿದ್ದಾರೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೊರೊನಾ ವೈರಸ್ ಮತ್ತು ಹೆಚ್ಚಿನ ಜನರಿಗೆ ಆ ಸೋಂಕು ತಗಲುವ ಉದ್ದೇಶದಿಂದ ಮಸೀದಿಗಳಲ್ಲಿ ಇದನ್ನು ಮಾಡಲಾಗುತ್ತಿದೆ ಎಂದು ದಾವೂಡಿ ಬೊಹ್ರಾ ಯುವಕರು ಬಳಸಿದ ಪಾತ್ರೆಗಳನ್ನು ನೆಕ್ಕುವ ಹಳೆಯ ವೀಡಿಯೊವನ್ನು ಸುಳ್ಳು ಕೋಮುವಾದಿ ತಲೆಬರಹ ನೀಡಿ ಹಂಚಿಕೊಳ್ಳಲಾಗುತ್ತಿದೆ.

ನೂರಾರು ಜನ ಹಂಚಿಕೊಂಡಿರುವ ಈ ವೀಡಿಯೊದ ಶೀರ್ಷಿಕೆ ಈ ಕೆಳಗಿನಂತಿದೆ. “ಮುಲ್ಲಾಗಳು ಮಸೀದಿಗಳಲ್ಲಿ ಖಾಲಿ ಪಾತ್ರೆಗಳನ್ನು ನೆಕ್ಕುತ್ತಾರೆ ಇದರಿಂದ ಈ ಸಾಂಕ್ರಾಮಿಕ ರೋಗಗಳು ಹೆಚ್ಚು ಹೆಚ್ಚು ಹರಡಬಹುದು. ಈ ಮುಲ್ಲಾಗಳು ಈಗಾಗಲೇ ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸರ್ಕಾರವು ಅವರನ್ನು ಹಿಡಿದು ಚಿಕಿತ್ಸೆ ನೀಡುತ್ತಿದೆ. ಇದುವರೆಗೂ ಕರೋನಾ ಭಾರತಕ್ಕೆ ಬಂದಿರಲಿಲ್ಲ. ಆದರೆ ಈಗ ಹರಡುತ್ತಿದೆ ಏಕೆ? ವೀಡಿಯೊದಲ್ಲಿ ನೋಡಿ” ಎಂದು ಬರೆಯಲಾಗಿದೆ.

ಈ ತಿಂಗಳ ಆರಂಭದಲ್ಲಿ ದೆಹಲಿಯ ನಿಜಾಮುದ್ದೀನ್ ಪಶ್ಚಿಮದಲ್ಲಿರುವ ತಬ್ಲೀಘಿ ಜಮಾಅತ್‌ನ ಮಾರ್ಕಾಜ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಹಲವಾರು ಜನರಿಗೆ ಕರೋನವೈರಸ್‌ಗೆ ಧೃಡಪಟ್ಟ ನಂತರ ಈ ವೀಡಿಯೊ ಮತ್ತೆ ಕಾಣಿಸಿಕೊಂಡಿದೆ. ಹಾಗಾಗಿ ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿಯಲು ಬೂಮ್‌ಲೈವ್‌ ಪ್ರಯತ್ನಿಸಿತು. ಆಗ ಇದೆಲ್ಲವೂ ಸಂಪೂರ್ಣ ಕಟ್ಟುಕಥೆಗಳು ಎಂದು ತಿಳಿದುಬಂದಿದೆ.

FACT-CHECK

ವಿಡಿಯೋಗಳ ಕೀಫ್ರೇಮ್‌ಗಳನ್ನು ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿದಾಗ ಈ ವಿಡಿಯೋ 2018 ರ ಜುಲೈಗೆ ಕರೆದುಕೊಂಡು ಹೋಗುತ್ತದೆ.

ಈ ವೀಡಿಯೊವನ್ನು ಜುಲೈ 31, 2018 ರಂದು ಮೊದಲ ಬಾರಿಗೆ ಅಪ್‌ಲೋಡ್ ಮಾಡಲಾಗಿದೆ. ಆಹಾರದ ಒಂದು ಅಗುಳನ್ನು ಸಹ ವ್ಯರ್ಥ ಮಾಡಬಾರದು ಎಂಬ ಸಂದೇಶ ನೀಡಲು ಬೋಹ್ರಾ ಸಮುದಾಯವು ನಡೆಸುವ ಸಾಂಕೇತಿಕ ಅಭ್ಯಾಸವನ್ನು ವೀಡಿಯೊ ಮಾಡಲಾಗಿದೆ. ಈ ಕ್ಲಿಪ್ ಹಳೆಯದು ಮತ್ತು ಕೊರೊನಾ ವೈರಸ್‌ಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ.

ವೈರಲ್ ವೀಡಿಯೊದಲ್ಲಿ ನೋಡಿದ ಹುಡುಗರನ್ನು ತನಗೆ ತಿಳಿದಿದೆ ಎಂದ ದಾವೂಡಿ ಬೊಹ್ರಾ ಸಂಘಟನೆಯ ಡಾನಾ ಸಮಿತಿಯ ಆಡಳಿತಾಧಿಕಾರಿ ಜೊಹರ್ ಅಲಿಯನ್ನು ಬೂಮ್ ಸಂಪರ್ಕಿಸಿದ್ದಾರೆ. “ಇದು ಮುಂಬೈನ ಮರೋಲ್ನಿಂದ ಬಂದ 3 ವರ್ಷದ ವಿಡಿಯೋ, ಅಲ್ಲಿನ ಸದಸ್ಯರು ಆಹಾರ ವ್ಯರ್ಥವಾಗುವುದನ್ನು ತಡೆಗಟ್ಟುವ ಸಲುವಾಗಿ ಆಹಾರದ ಎಂಜಲುಗಳನ್ನು ಸ್ವಚ್ಛಗೊಳಿಸುತ್ತಿದ್ದರು” ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ.

ಇದು ದಾವೂಡಿ ಬೊಹ್ರಾ ಸಮುದಾಯವು ಆಚರಿಸುವ ಸಾಂಕೇತಿಕ ಅಭ್ಯಾಸವಾಗಿದೆ ಮತ್ತು ಊಟ ಮುಗಿದ ನಂತರ ಮತ್ತು ಭಕ್ಷ್ಯಗಳನ್ನು ತೊಳೆಯುವ ಮೊದಲು ಇದನ್ನು ಮಾಡಲಾಗುತ್ತದೆ ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ. “ಈ ವೀಡಿಯೊ ಏನನ್ನು ತೋರಿಸುತ್ತದೆ ಎಂದರೆ ಯಾವುದೇ ಆಹಾರವನ್ನು ವ್ಯರ್ಥವಾಗದಂತೆ ನೋಡಿಕೊಳ್ಳಲು ಕಟ್ಲರಿ ಮತ್ತು ಡಿನ್ನರ್ ಪ್ಲೇಟ್‌ಗಳಿಂದ ಉಳಿದಿರುವ ಆಹಾರವನ್ನು ಸ್ವಚ್ಛಗೊಳಿಸುವ ಉಪಕ್ರಮಗಳಲ್ಲಿ ಒಂದಾಗಿದೆ. ಇದರ ಹಿಂದಿನ ಕಲ್ಪನೆಯು ಸರಳವಾಗಿದೆ ಜನರು ಆಹಾರದ ಮೌಲ್ಯವನ್ನು ಅರಿತುಕೊಳ್ಳಬೇಕು ಎಂದಿದ್ದಾರೆ.

ಡಾನಾ ಸಮಿತಿಯ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಯೂ ಸಹ ಇದಕ್ಕೆ ಸಂಬಂಧಿಸಿದ ಪೋಸ್ಟ್‌‌ಗಳು ಲಭ್ಯವಿದ್ದು ಪ್ರತಿಯೊಂದರಲ್ಲಿಯೂ ಸಹ ಆಹಾರ ವ್ಯರ್ಥ ಮಾಡಬಾರದು ಎಂದು ತಿಳಿಸಲಾಗಿದೆ. ಇಂತಹ ಉತ್ತಮ ಸಂದೇಶ ಸಾರಲು ಮಾಡಿದ ವಿಡಿಯೋ ಮತ್ತು ಫೋಟೊಗಳನ್ನು ಕೊರೊನಾ ಕುರಿತು ಸುಳ್ಳು ಹಬ್ಬಿಸಲು ಆ ಮೂಲಕ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟಿರುವುದು ಅಕ್ಷಮ್ಯ ಅಪರಾಧವಾಗಿದೆ.

ಹಾಗಾಗಿ ಯಾವುದೇ ಸುದ್ದಿಯನ್ನು ನಂಬುವ ಅಥವಾ ಹಂಚುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ. ಸುಳ್ಳು ಸುದ್ದಿಗಳ ಪ್ರಪಾತಕ್ಕೆ ಬೀಳಬೇಡಿ ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....