Homeಫ್ಯಾಕ್ಟ್‌ಚೆಕ್Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

- Advertisement -
- Advertisement -

ಕೊರೊನಾ ವೈರಸ್ ಹರಡಲು ಮುಸ್ಲಿಮರು ಪಾತ್ರೆಗಳನ್ನು ನೆಕ್ಕುತ್ತಿದ್ದಾರೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೊರೊನಾ ವೈರಸ್ ಮತ್ತು ಹೆಚ್ಚಿನ ಜನರಿಗೆ ಆ ಸೋಂಕು ತಗಲುವ ಉದ್ದೇಶದಿಂದ ಮಸೀದಿಗಳಲ್ಲಿ ಇದನ್ನು ಮಾಡಲಾಗುತ್ತಿದೆ ಎಂದು ದಾವೂಡಿ ಬೊಹ್ರಾ ಯುವಕರು ಬಳಸಿದ ಪಾತ್ರೆಗಳನ್ನು ನೆಕ್ಕುವ ಹಳೆಯ ವೀಡಿಯೊವನ್ನು ಸುಳ್ಳು ಕೋಮುವಾದಿ ತಲೆಬರಹ ನೀಡಿ ಹಂಚಿಕೊಳ್ಳಲಾಗುತ್ತಿದೆ.

ನೂರಾರು ಜನ ಹಂಚಿಕೊಂಡಿರುವ ಈ ವೀಡಿಯೊದ ಶೀರ್ಷಿಕೆ ಈ ಕೆಳಗಿನಂತಿದೆ. “ಮುಲ್ಲಾಗಳು ಮಸೀದಿಗಳಲ್ಲಿ ಖಾಲಿ ಪಾತ್ರೆಗಳನ್ನು ನೆಕ್ಕುತ್ತಾರೆ ಇದರಿಂದ ಈ ಸಾಂಕ್ರಾಮಿಕ ರೋಗಗಳು ಹೆಚ್ಚು ಹೆಚ್ಚು ಹರಡಬಹುದು. ಈ ಮುಲ್ಲಾಗಳು ಈಗಾಗಲೇ ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸರ್ಕಾರವು ಅವರನ್ನು ಹಿಡಿದು ಚಿಕಿತ್ಸೆ ನೀಡುತ್ತಿದೆ. ಇದುವರೆಗೂ ಕರೋನಾ ಭಾರತಕ್ಕೆ ಬಂದಿರಲಿಲ್ಲ. ಆದರೆ ಈಗ ಹರಡುತ್ತಿದೆ ಏಕೆ? ವೀಡಿಯೊದಲ್ಲಿ ನೋಡಿ” ಎಂದು ಬರೆಯಲಾಗಿದೆ.

ಈ ತಿಂಗಳ ಆರಂಭದಲ್ಲಿ ದೆಹಲಿಯ ನಿಜಾಮುದ್ದೀನ್ ಪಶ್ಚಿಮದಲ್ಲಿರುವ ತಬ್ಲೀಘಿ ಜಮಾಅತ್‌ನ ಮಾರ್ಕಾಜ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಹಲವಾರು ಜನರಿಗೆ ಕರೋನವೈರಸ್‌ಗೆ ಧೃಡಪಟ್ಟ ನಂತರ ಈ ವೀಡಿಯೊ ಮತ್ತೆ ಕಾಣಿಸಿಕೊಂಡಿದೆ. ಹಾಗಾಗಿ ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿಯಲು ಬೂಮ್‌ಲೈವ್‌ ಪ್ರಯತ್ನಿಸಿತು. ಆಗ ಇದೆಲ್ಲವೂ ಸಂಪೂರ್ಣ ಕಟ್ಟುಕಥೆಗಳು ಎಂದು ತಿಳಿದುಬಂದಿದೆ.

FACT-CHECK

ವಿಡಿಯೋಗಳ ಕೀಫ್ರೇಮ್‌ಗಳನ್ನು ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿದಾಗ ಈ ವಿಡಿಯೋ 2018 ರ ಜುಲೈಗೆ ಕರೆದುಕೊಂಡು ಹೋಗುತ್ತದೆ.

ಈ ವೀಡಿಯೊವನ್ನು ಜುಲೈ 31, 2018 ರಂದು ಮೊದಲ ಬಾರಿಗೆ ಅಪ್‌ಲೋಡ್ ಮಾಡಲಾಗಿದೆ. ಆಹಾರದ ಒಂದು ಅಗುಳನ್ನು ಸಹ ವ್ಯರ್ಥ ಮಾಡಬಾರದು ಎಂಬ ಸಂದೇಶ ನೀಡಲು ಬೋಹ್ರಾ ಸಮುದಾಯವು ನಡೆಸುವ ಸಾಂಕೇತಿಕ ಅಭ್ಯಾಸವನ್ನು ವೀಡಿಯೊ ಮಾಡಲಾಗಿದೆ. ಈ ಕ್ಲಿಪ್ ಹಳೆಯದು ಮತ್ತು ಕೊರೊನಾ ವೈರಸ್‌ಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ.

ವೈರಲ್ ವೀಡಿಯೊದಲ್ಲಿ ನೋಡಿದ ಹುಡುಗರನ್ನು ತನಗೆ ತಿಳಿದಿದೆ ಎಂದ ದಾವೂಡಿ ಬೊಹ್ರಾ ಸಂಘಟನೆಯ ಡಾನಾ ಸಮಿತಿಯ ಆಡಳಿತಾಧಿಕಾರಿ ಜೊಹರ್ ಅಲಿಯನ್ನು ಬೂಮ್ ಸಂಪರ್ಕಿಸಿದ್ದಾರೆ. “ಇದು ಮುಂಬೈನ ಮರೋಲ್ನಿಂದ ಬಂದ 3 ವರ್ಷದ ವಿಡಿಯೋ, ಅಲ್ಲಿನ ಸದಸ್ಯರು ಆಹಾರ ವ್ಯರ್ಥವಾಗುವುದನ್ನು ತಡೆಗಟ್ಟುವ ಸಲುವಾಗಿ ಆಹಾರದ ಎಂಜಲುಗಳನ್ನು ಸ್ವಚ್ಛಗೊಳಿಸುತ್ತಿದ್ದರು” ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ.

ಇದು ದಾವೂಡಿ ಬೊಹ್ರಾ ಸಮುದಾಯವು ಆಚರಿಸುವ ಸಾಂಕೇತಿಕ ಅಭ್ಯಾಸವಾಗಿದೆ ಮತ್ತು ಊಟ ಮುಗಿದ ನಂತರ ಮತ್ತು ಭಕ್ಷ್ಯಗಳನ್ನು ತೊಳೆಯುವ ಮೊದಲು ಇದನ್ನು ಮಾಡಲಾಗುತ್ತದೆ ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ. “ಈ ವೀಡಿಯೊ ಏನನ್ನು ತೋರಿಸುತ್ತದೆ ಎಂದರೆ ಯಾವುದೇ ಆಹಾರವನ್ನು ವ್ಯರ್ಥವಾಗದಂತೆ ನೋಡಿಕೊಳ್ಳಲು ಕಟ್ಲರಿ ಮತ್ತು ಡಿನ್ನರ್ ಪ್ಲೇಟ್‌ಗಳಿಂದ ಉಳಿದಿರುವ ಆಹಾರವನ್ನು ಸ್ವಚ್ಛಗೊಳಿಸುವ ಉಪಕ್ರಮಗಳಲ್ಲಿ ಒಂದಾಗಿದೆ. ಇದರ ಹಿಂದಿನ ಕಲ್ಪನೆಯು ಸರಳವಾಗಿದೆ ಜನರು ಆಹಾರದ ಮೌಲ್ಯವನ್ನು ಅರಿತುಕೊಳ್ಳಬೇಕು ಎಂದಿದ್ದಾರೆ.

ಡಾನಾ ಸಮಿತಿಯ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಯೂ ಸಹ ಇದಕ್ಕೆ ಸಂಬಂಧಿಸಿದ ಪೋಸ್ಟ್‌‌ಗಳು ಲಭ್ಯವಿದ್ದು ಪ್ರತಿಯೊಂದರಲ್ಲಿಯೂ ಸಹ ಆಹಾರ ವ್ಯರ್ಥ ಮಾಡಬಾರದು ಎಂದು ತಿಳಿಸಲಾಗಿದೆ. ಇಂತಹ ಉತ್ತಮ ಸಂದೇಶ ಸಾರಲು ಮಾಡಿದ ವಿಡಿಯೋ ಮತ್ತು ಫೋಟೊಗಳನ್ನು ಕೊರೊನಾ ಕುರಿತು ಸುಳ್ಳು ಹಬ್ಬಿಸಲು ಆ ಮೂಲಕ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟಿರುವುದು ಅಕ್ಷಮ್ಯ ಅಪರಾಧವಾಗಿದೆ.

ಹಾಗಾಗಿ ಯಾವುದೇ ಸುದ್ದಿಯನ್ನು ನಂಬುವ ಅಥವಾ ಹಂಚುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ. ಸುಳ್ಳು ಸುದ್ದಿಗಳ ಪ್ರಪಾತಕ್ಕೆ ಬೀಳಬೇಡಿ ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...