Homeಫ್ಯಾಕ್ಟ್‌ಚೆಕ್Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

- Advertisement -
- Advertisement -

ಕೊರೊನಾ ವೈರಸ್ ಹರಡಲು ಮುಸ್ಲಿಮರು ಪಾತ್ರೆಗಳನ್ನು ನೆಕ್ಕುತ್ತಿದ್ದಾರೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೊರೊನಾ ವೈರಸ್ ಮತ್ತು ಹೆಚ್ಚಿನ ಜನರಿಗೆ ಆ ಸೋಂಕು ತಗಲುವ ಉದ್ದೇಶದಿಂದ ಮಸೀದಿಗಳಲ್ಲಿ ಇದನ್ನು ಮಾಡಲಾಗುತ್ತಿದೆ ಎಂದು ದಾವೂಡಿ ಬೊಹ್ರಾ ಯುವಕರು ಬಳಸಿದ ಪಾತ್ರೆಗಳನ್ನು ನೆಕ್ಕುವ ಹಳೆಯ ವೀಡಿಯೊವನ್ನು ಸುಳ್ಳು ಕೋಮುವಾದಿ ತಲೆಬರಹ ನೀಡಿ ಹಂಚಿಕೊಳ್ಳಲಾಗುತ್ತಿದೆ.

ನೂರಾರು ಜನ ಹಂಚಿಕೊಂಡಿರುವ ಈ ವೀಡಿಯೊದ ಶೀರ್ಷಿಕೆ ಈ ಕೆಳಗಿನಂತಿದೆ. “ಮುಲ್ಲಾಗಳು ಮಸೀದಿಗಳಲ್ಲಿ ಖಾಲಿ ಪಾತ್ರೆಗಳನ್ನು ನೆಕ್ಕುತ್ತಾರೆ ಇದರಿಂದ ಈ ಸಾಂಕ್ರಾಮಿಕ ರೋಗಗಳು ಹೆಚ್ಚು ಹೆಚ್ಚು ಹರಡಬಹುದು. ಈ ಮುಲ್ಲಾಗಳು ಈಗಾಗಲೇ ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸರ್ಕಾರವು ಅವರನ್ನು ಹಿಡಿದು ಚಿಕಿತ್ಸೆ ನೀಡುತ್ತಿದೆ. ಇದುವರೆಗೂ ಕರೋನಾ ಭಾರತಕ್ಕೆ ಬಂದಿರಲಿಲ್ಲ. ಆದರೆ ಈಗ ಹರಡುತ್ತಿದೆ ಏಕೆ? ವೀಡಿಯೊದಲ್ಲಿ ನೋಡಿ” ಎಂದು ಬರೆಯಲಾಗಿದೆ.

ಈ ತಿಂಗಳ ಆರಂಭದಲ್ಲಿ ದೆಹಲಿಯ ನಿಜಾಮುದ್ದೀನ್ ಪಶ್ಚಿಮದಲ್ಲಿರುವ ತಬ್ಲೀಘಿ ಜಮಾಅತ್‌ನ ಮಾರ್ಕಾಜ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಹಲವಾರು ಜನರಿಗೆ ಕರೋನವೈರಸ್‌ಗೆ ಧೃಡಪಟ್ಟ ನಂತರ ಈ ವೀಡಿಯೊ ಮತ್ತೆ ಕಾಣಿಸಿಕೊಂಡಿದೆ. ಹಾಗಾಗಿ ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿಯಲು ಬೂಮ್‌ಲೈವ್‌ ಪ್ರಯತ್ನಿಸಿತು. ಆಗ ಇದೆಲ್ಲವೂ ಸಂಪೂರ್ಣ ಕಟ್ಟುಕಥೆಗಳು ಎಂದು ತಿಳಿದುಬಂದಿದೆ.

FACT-CHECK

ವಿಡಿಯೋಗಳ ಕೀಫ್ರೇಮ್‌ಗಳನ್ನು ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿದಾಗ ಈ ವಿಡಿಯೋ 2018 ರ ಜುಲೈಗೆ ಕರೆದುಕೊಂಡು ಹೋಗುತ್ತದೆ.

ಈ ವೀಡಿಯೊವನ್ನು ಜುಲೈ 31, 2018 ರಂದು ಮೊದಲ ಬಾರಿಗೆ ಅಪ್‌ಲೋಡ್ ಮಾಡಲಾಗಿದೆ. ಆಹಾರದ ಒಂದು ಅಗುಳನ್ನು ಸಹ ವ್ಯರ್ಥ ಮಾಡಬಾರದು ಎಂಬ ಸಂದೇಶ ನೀಡಲು ಬೋಹ್ರಾ ಸಮುದಾಯವು ನಡೆಸುವ ಸಾಂಕೇತಿಕ ಅಭ್ಯಾಸವನ್ನು ವೀಡಿಯೊ ಮಾಡಲಾಗಿದೆ. ಈ ಕ್ಲಿಪ್ ಹಳೆಯದು ಮತ್ತು ಕೊರೊನಾ ವೈರಸ್‌ಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ.

ವೈರಲ್ ವೀಡಿಯೊದಲ್ಲಿ ನೋಡಿದ ಹುಡುಗರನ್ನು ತನಗೆ ತಿಳಿದಿದೆ ಎಂದ ದಾವೂಡಿ ಬೊಹ್ರಾ ಸಂಘಟನೆಯ ಡಾನಾ ಸಮಿತಿಯ ಆಡಳಿತಾಧಿಕಾರಿ ಜೊಹರ್ ಅಲಿಯನ್ನು ಬೂಮ್ ಸಂಪರ್ಕಿಸಿದ್ದಾರೆ. “ಇದು ಮುಂಬೈನ ಮರೋಲ್ನಿಂದ ಬಂದ 3 ವರ್ಷದ ವಿಡಿಯೋ, ಅಲ್ಲಿನ ಸದಸ್ಯರು ಆಹಾರ ವ್ಯರ್ಥವಾಗುವುದನ್ನು ತಡೆಗಟ್ಟುವ ಸಲುವಾಗಿ ಆಹಾರದ ಎಂಜಲುಗಳನ್ನು ಸ್ವಚ್ಛಗೊಳಿಸುತ್ತಿದ್ದರು” ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ.

ಇದು ದಾವೂಡಿ ಬೊಹ್ರಾ ಸಮುದಾಯವು ಆಚರಿಸುವ ಸಾಂಕೇತಿಕ ಅಭ್ಯಾಸವಾಗಿದೆ ಮತ್ತು ಊಟ ಮುಗಿದ ನಂತರ ಮತ್ತು ಭಕ್ಷ್ಯಗಳನ್ನು ತೊಳೆಯುವ ಮೊದಲು ಇದನ್ನು ಮಾಡಲಾಗುತ್ತದೆ ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ. “ಈ ವೀಡಿಯೊ ಏನನ್ನು ತೋರಿಸುತ್ತದೆ ಎಂದರೆ ಯಾವುದೇ ಆಹಾರವನ್ನು ವ್ಯರ್ಥವಾಗದಂತೆ ನೋಡಿಕೊಳ್ಳಲು ಕಟ್ಲರಿ ಮತ್ತು ಡಿನ್ನರ್ ಪ್ಲೇಟ್‌ಗಳಿಂದ ಉಳಿದಿರುವ ಆಹಾರವನ್ನು ಸ್ವಚ್ಛಗೊಳಿಸುವ ಉಪಕ್ರಮಗಳಲ್ಲಿ ಒಂದಾಗಿದೆ. ಇದರ ಹಿಂದಿನ ಕಲ್ಪನೆಯು ಸರಳವಾಗಿದೆ ಜನರು ಆಹಾರದ ಮೌಲ್ಯವನ್ನು ಅರಿತುಕೊಳ್ಳಬೇಕು ಎಂದಿದ್ದಾರೆ.

ಡಾನಾ ಸಮಿತಿಯ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಯೂ ಸಹ ಇದಕ್ಕೆ ಸಂಬಂಧಿಸಿದ ಪೋಸ್ಟ್‌‌ಗಳು ಲಭ್ಯವಿದ್ದು ಪ್ರತಿಯೊಂದರಲ್ಲಿಯೂ ಸಹ ಆಹಾರ ವ್ಯರ್ಥ ಮಾಡಬಾರದು ಎಂದು ತಿಳಿಸಲಾಗಿದೆ. ಇಂತಹ ಉತ್ತಮ ಸಂದೇಶ ಸಾರಲು ಮಾಡಿದ ವಿಡಿಯೋ ಮತ್ತು ಫೋಟೊಗಳನ್ನು ಕೊರೊನಾ ಕುರಿತು ಸುಳ್ಳು ಹಬ್ಬಿಸಲು ಆ ಮೂಲಕ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟಿರುವುದು ಅಕ್ಷಮ್ಯ ಅಪರಾಧವಾಗಿದೆ.

ಹಾಗಾಗಿ ಯಾವುದೇ ಸುದ್ದಿಯನ್ನು ನಂಬುವ ಅಥವಾ ಹಂಚುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ. ಸುಳ್ಳು ಸುದ್ದಿಗಳ ಪ್ರಪಾತಕ್ಕೆ ಬೀಳಬೇಡಿ ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...