Homeಫ್ಯಾಕ್ಟ್‌ಚೆಕ್Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

- Advertisement -
- Advertisement -

ಕೊರೊನಾ ವೈರಸ್ ಹರಡಲು ಮುಸ್ಲಿಮರು ಪಾತ್ರೆಗಳನ್ನು ನೆಕ್ಕುತ್ತಿದ್ದಾರೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೊರೊನಾ ವೈರಸ್ ಮತ್ತು ಹೆಚ್ಚಿನ ಜನರಿಗೆ ಆ ಸೋಂಕು ತಗಲುವ ಉದ್ದೇಶದಿಂದ ಮಸೀದಿಗಳಲ್ಲಿ ಇದನ್ನು ಮಾಡಲಾಗುತ್ತಿದೆ ಎಂದು ದಾವೂಡಿ ಬೊಹ್ರಾ ಯುವಕರು ಬಳಸಿದ ಪಾತ್ರೆಗಳನ್ನು ನೆಕ್ಕುವ ಹಳೆಯ ವೀಡಿಯೊವನ್ನು ಸುಳ್ಳು ಕೋಮುವಾದಿ ತಲೆಬರಹ ನೀಡಿ ಹಂಚಿಕೊಳ್ಳಲಾಗುತ್ತಿದೆ.

ನೂರಾರು ಜನ ಹಂಚಿಕೊಂಡಿರುವ ಈ ವೀಡಿಯೊದ ಶೀರ್ಷಿಕೆ ಈ ಕೆಳಗಿನಂತಿದೆ. “ಮುಲ್ಲಾಗಳು ಮಸೀದಿಗಳಲ್ಲಿ ಖಾಲಿ ಪಾತ್ರೆಗಳನ್ನು ನೆಕ್ಕುತ್ತಾರೆ ಇದರಿಂದ ಈ ಸಾಂಕ್ರಾಮಿಕ ರೋಗಗಳು ಹೆಚ್ಚು ಹೆಚ್ಚು ಹರಡಬಹುದು. ಈ ಮುಲ್ಲಾಗಳು ಈಗಾಗಲೇ ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸರ್ಕಾರವು ಅವರನ್ನು ಹಿಡಿದು ಚಿಕಿತ್ಸೆ ನೀಡುತ್ತಿದೆ. ಇದುವರೆಗೂ ಕರೋನಾ ಭಾರತಕ್ಕೆ ಬಂದಿರಲಿಲ್ಲ. ಆದರೆ ಈಗ ಹರಡುತ್ತಿದೆ ಏಕೆ? ವೀಡಿಯೊದಲ್ಲಿ ನೋಡಿ” ಎಂದು ಬರೆಯಲಾಗಿದೆ.

ಈ ತಿಂಗಳ ಆರಂಭದಲ್ಲಿ ದೆಹಲಿಯ ನಿಜಾಮುದ್ದೀನ್ ಪಶ್ಚಿಮದಲ್ಲಿರುವ ತಬ್ಲೀಘಿ ಜಮಾಅತ್‌ನ ಮಾರ್ಕಾಜ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಹಲವಾರು ಜನರಿಗೆ ಕರೋನವೈರಸ್‌ಗೆ ಧೃಡಪಟ್ಟ ನಂತರ ಈ ವೀಡಿಯೊ ಮತ್ತೆ ಕಾಣಿಸಿಕೊಂಡಿದೆ. ಹಾಗಾಗಿ ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿಯಲು ಬೂಮ್‌ಲೈವ್‌ ಪ್ರಯತ್ನಿಸಿತು. ಆಗ ಇದೆಲ್ಲವೂ ಸಂಪೂರ್ಣ ಕಟ್ಟುಕಥೆಗಳು ಎಂದು ತಿಳಿದುಬಂದಿದೆ.

FACT-CHECK

ವಿಡಿಯೋಗಳ ಕೀಫ್ರೇಮ್‌ಗಳನ್ನು ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿದಾಗ ಈ ವಿಡಿಯೋ 2018 ರ ಜುಲೈಗೆ ಕರೆದುಕೊಂಡು ಹೋಗುತ್ತದೆ.

ಈ ವೀಡಿಯೊವನ್ನು ಜುಲೈ 31, 2018 ರಂದು ಮೊದಲ ಬಾರಿಗೆ ಅಪ್‌ಲೋಡ್ ಮಾಡಲಾಗಿದೆ. ಆಹಾರದ ಒಂದು ಅಗುಳನ್ನು ಸಹ ವ್ಯರ್ಥ ಮಾಡಬಾರದು ಎಂಬ ಸಂದೇಶ ನೀಡಲು ಬೋಹ್ರಾ ಸಮುದಾಯವು ನಡೆಸುವ ಸಾಂಕೇತಿಕ ಅಭ್ಯಾಸವನ್ನು ವೀಡಿಯೊ ಮಾಡಲಾಗಿದೆ. ಈ ಕ್ಲಿಪ್ ಹಳೆಯದು ಮತ್ತು ಕೊರೊನಾ ವೈರಸ್‌ಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ.

ವೈರಲ್ ವೀಡಿಯೊದಲ್ಲಿ ನೋಡಿದ ಹುಡುಗರನ್ನು ತನಗೆ ತಿಳಿದಿದೆ ಎಂದ ದಾವೂಡಿ ಬೊಹ್ರಾ ಸಂಘಟನೆಯ ಡಾನಾ ಸಮಿತಿಯ ಆಡಳಿತಾಧಿಕಾರಿ ಜೊಹರ್ ಅಲಿಯನ್ನು ಬೂಮ್ ಸಂಪರ್ಕಿಸಿದ್ದಾರೆ. “ಇದು ಮುಂಬೈನ ಮರೋಲ್ನಿಂದ ಬಂದ 3 ವರ್ಷದ ವಿಡಿಯೋ, ಅಲ್ಲಿನ ಸದಸ್ಯರು ಆಹಾರ ವ್ಯರ್ಥವಾಗುವುದನ್ನು ತಡೆಗಟ್ಟುವ ಸಲುವಾಗಿ ಆಹಾರದ ಎಂಜಲುಗಳನ್ನು ಸ್ವಚ್ಛಗೊಳಿಸುತ್ತಿದ್ದರು” ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ.

ಇದು ದಾವೂಡಿ ಬೊಹ್ರಾ ಸಮುದಾಯವು ಆಚರಿಸುವ ಸಾಂಕೇತಿಕ ಅಭ್ಯಾಸವಾಗಿದೆ ಮತ್ತು ಊಟ ಮುಗಿದ ನಂತರ ಮತ್ತು ಭಕ್ಷ್ಯಗಳನ್ನು ತೊಳೆಯುವ ಮೊದಲು ಇದನ್ನು ಮಾಡಲಾಗುತ್ತದೆ ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ. “ಈ ವೀಡಿಯೊ ಏನನ್ನು ತೋರಿಸುತ್ತದೆ ಎಂದರೆ ಯಾವುದೇ ಆಹಾರವನ್ನು ವ್ಯರ್ಥವಾಗದಂತೆ ನೋಡಿಕೊಳ್ಳಲು ಕಟ್ಲರಿ ಮತ್ತು ಡಿನ್ನರ್ ಪ್ಲೇಟ್‌ಗಳಿಂದ ಉಳಿದಿರುವ ಆಹಾರವನ್ನು ಸ್ವಚ್ಛಗೊಳಿಸುವ ಉಪಕ್ರಮಗಳಲ್ಲಿ ಒಂದಾಗಿದೆ. ಇದರ ಹಿಂದಿನ ಕಲ್ಪನೆಯು ಸರಳವಾಗಿದೆ ಜನರು ಆಹಾರದ ಮೌಲ್ಯವನ್ನು ಅರಿತುಕೊಳ್ಳಬೇಕು ಎಂದಿದ್ದಾರೆ.

ಡಾನಾ ಸಮಿತಿಯ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಯೂ ಸಹ ಇದಕ್ಕೆ ಸಂಬಂಧಿಸಿದ ಪೋಸ್ಟ್‌‌ಗಳು ಲಭ್ಯವಿದ್ದು ಪ್ರತಿಯೊಂದರಲ್ಲಿಯೂ ಸಹ ಆಹಾರ ವ್ಯರ್ಥ ಮಾಡಬಾರದು ಎಂದು ತಿಳಿಸಲಾಗಿದೆ. ಇಂತಹ ಉತ್ತಮ ಸಂದೇಶ ಸಾರಲು ಮಾಡಿದ ವಿಡಿಯೋ ಮತ್ತು ಫೋಟೊಗಳನ್ನು ಕೊರೊನಾ ಕುರಿತು ಸುಳ್ಳು ಹಬ್ಬಿಸಲು ಆ ಮೂಲಕ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟಿರುವುದು ಅಕ್ಷಮ್ಯ ಅಪರಾಧವಾಗಿದೆ.

ಹಾಗಾಗಿ ಯಾವುದೇ ಸುದ್ದಿಯನ್ನು ನಂಬುವ ಅಥವಾ ಹಂಚುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ. ಸುಳ್ಳು ಸುದ್ದಿಗಳ ಪ್ರಪಾತಕ್ಕೆ ಬೀಳಬೇಡಿ ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...