Homeಫ್ಯಾಕ್ಟ್‌ಚೆಕ್Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

- Advertisement -
- Advertisement -

ಕೊರೊನಾ ವೈರಸ್ ಹರಡಲು ಮುಸ್ಲಿಮರು ಪಾತ್ರೆಗಳನ್ನು ನೆಕ್ಕುತ್ತಿದ್ದಾರೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೊರೊನಾ ವೈರಸ್ ಮತ್ತು ಹೆಚ್ಚಿನ ಜನರಿಗೆ ಆ ಸೋಂಕು ತಗಲುವ ಉದ್ದೇಶದಿಂದ ಮಸೀದಿಗಳಲ್ಲಿ ಇದನ್ನು ಮಾಡಲಾಗುತ್ತಿದೆ ಎಂದು ದಾವೂಡಿ ಬೊಹ್ರಾ ಯುವಕರು ಬಳಸಿದ ಪಾತ್ರೆಗಳನ್ನು ನೆಕ್ಕುವ ಹಳೆಯ ವೀಡಿಯೊವನ್ನು ಸುಳ್ಳು ಕೋಮುವಾದಿ ತಲೆಬರಹ ನೀಡಿ ಹಂಚಿಕೊಳ್ಳಲಾಗುತ್ತಿದೆ.

ನೂರಾರು ಜನ ಹಂಚಿಕೊಂಡಿರುವ ಈ ವೀಡಿಯೊದ ಶೀರ್ಷಿಕೆ ಈ ಕೆಳಗಿನಂತಿದೆ. “ಮುಲ್ಲಾಗಳು ಮಸೀದಿಗಳಲ್ಲಿ ಖಾಲಿ ಪಾತ್ರೆಗಳನ್ನು ನೆಕ್ಕುತ್ತಾರೆ ಇದರಿಂದ ಈ ಸಾಂಕ್ರಾಮಿಕ ರೋಗಗಳು ಹೆಚ್ಚು ಹೆಚ್ಚು ಹರಡಬಹುದು. ಈ ಮುಲ್ಲಾಗಳು ಈಗಾಗಲೇ ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸರ್ಕಾರವು ಅವರನ್ನು ಹಿಡಿದು ಚಿಕಿತ್ಸೆ ನೀಡುತ್ತಿದೆ. ಇದುವರೆಗೂ ಕರೋನಾ ಭಾರತಕ್ಕೆ ಬಂದಿರಲಿಲ್ಲ. ಆದರೆ ಈಗ ಹರಡುತ್ತಿದೆ ಏಕೆ? ವೀಡಿಯೊದಲ್ಲಿ ನೋಡಿ” ಎಂದು ಬರೆಯಲಾಗಿದೆ.

ಈ ತಿಂಗಳ ಆರಂಭದಲ್ಲಿ ದೆಹಲಿಯ ನಿಜಾಮುದ್ದೀನ್ ಪಶ್ಚಿಮದಲ್ಲಿರುವ ತಬ್ಲೀಘಿ ಜಮಾಅತ್‌ನ ಮಾರ್ಕಾಜ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಹಲವಾರು ಜನರಿಗೆ ಕರೋನವೈರಸ್‌ಗೆ ಧೃಡಪಟ್ಟ ನಂತರ ಈ ವೀಡಿಯೊ ಮತ್ತೆ ಕಾಣಿಸಿಕೊಂಡಿದೆ. ಹಾಗಾಗಿ ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿಯಲು ಬೂಮ್‌ಲೈವ್‌ ಪ್ರಯತ್ನಿಸಿತು. ಆಗ ಇದೆಲ್ಲವೂ ಸಂಪೂರ್ಣ ಕಟ್ಟುಕಥೆಗಳು ಎಂದು ತಿಳಿದುಬಂದಿದೆ.

FACT-CHECK

ವಿಡಿಯೋಗಳ ಕೀಫ್ರೇಮ್‌ಗಳನ್ನು ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿದಾಗ ಈ ವಿಡಿಯೋ 2018 ರ ಜುಲೈಗೆ ಕರೆದುಕೊಂಡು ಹೋಗುತ್ತದೆ.

ಈ ವೀಡಿಯೊವನ್ನು ಜುಲೈ 31, 2018 ರಂದು ಮೊದಲ ಬಾರಿಗೆ ಅಪ್‌ಲೋಡ್ ಮಾಡಲಾಗಿದೆ. ಆಹಾರದ ಒಂದು ಅಗುಳನ್ನು ಸಹ ವ್ಯರ್ಥ ಮಾಡಬಾರದು ಎಂಬ ಸಂದೇಶ ನೀಡಲು ಬೋಹ್ರಾ ಸಮುದಾಯವು ನಡೆಸುವ ಸಾಂಕೇತಿಕ ಅಭ್ಯಾಸವನ್ನು ವೀಡಿಯೊ ಮಾಡಲಾಗಿದೆ. ಈ ಕ್ಲಿಪ್ ಹಳೆಯದು ಮತ್ತು ಕೊರೊನಾ ವೈರಸ್‌ಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ.

ವೈರಲ್ ವೀಡಿಯೊದಲ್ಲಿ ನೋಡಿದ ಹುಡುಗರನ್ನು ತನಗೆ ತಿಳಿದಿದೆ ಎಂದ ದಾವೂಡಿ ಬೊಹ್ರಾ ಸಂಘಟನೆಯ ಡಾನಾ ಸಮಿತಿಯ ಆಡಳಿತಾಧಿಕಾರಿ ಜೊಹರ್ ಅಲಿಯನ್ನು ಬೂಮ್ ಸಂಪರ್ಕಿಸಿದ್ದಾರೆ. “ಇದು ಮುಂಬೈನ ಮರೋಲ್ನಿಂದ ಬಂದ 3 ವರ್ಷದ ವಿಡಿಯೋ, ಅಲ್ಲಿನ ಸದಸ್ಯರು ಆಹಾರ ವ್ಯರ್ಥವಾಗುವುದನ್ನು ತಡೆಗಟ್ಟುವ ಸಲುವಾಗಿ ಆಹಾರದ ಎಂಜಲುಗಳನ್ನು ಸ್ವಚ್ಛಗೊಳಿಸುತ್ತಿದ್ದರು” ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ.

ಇದು ದಾವೂಡಿ ಬೊಹ್ರಾ ಸಮುದಾಯವು ಆಚರಿಸುವ ಸಾಂಕೇತಿಕ ಅಭ್ಯಾಸವಾಗಿದೆ ಮತ್ತು ಊಟ ಮುಗಿದ ನಂತರ ಮತ್ತು ಭಕ್ಷ್ಯಗಳನ್ನು ತೊಳೆಯುವ ಮೊದಲು ಇದನ್ನು ಮಾಡಲಾಗುತ್ತದೆ ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ. “ಈ ವೀಡಿಯೊ ಏನನ್ನು ತೋರಿಸುತ್ತದೆ ಎಂದರೆ ಯಾವುದೇ ಆಹಾರವನ್ನು ವ್ಯರ್ಥವಾಗದಂತೆ ನೋಡಿಕೊಳ್ಳಲು ಕಟ್ಲರಿ ಮತ್ತು ಡಿನ್ನರ್ ಪ್ಲೇಟ್‌ಗಳಿಂದ ಉಳಿದಿರುವ ಆಹಾರವನ್ನು ಸ್ವಚ್ಛಗೊಳಿಸುವ ಉಪಕ್ರಮಗಳಲ್ಲಿ ಒಂದಾಗಿದೆ. ಇದರ ಹಿಂದಿನ ಕಲ್ಪನೆಯು ಸರಳವಾಗಿದೆ ಜನರು ಆಹಾರದ ಮೌಲ್ಯವನ್ನು ಅರಿತುಕೊಳ್ಳಬೇಕು ಎಂದಿದ್ದಾರೆ.

ಡಾನಾ ಸಮಿತಿಯ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಯೂ ಸಹ ಇದಕ್ಕೆ ಸಂಬಂಧಿಸಿದ ಪೋಸ್ಟ್‌‌ಗಳು ಲಭ್ಯವಿದ್ದು ಪ್ರತಿಯೊಂದರಲ್ಲಿಯೂ ಸಹ ಆಹಾರ ವ್ಯರ್ಥ ಮಾಡಬಾರದು ಎಂದು ತಿಳಿಸಲಾಗಿದೆ. ಇಂತಹ ಉತ್ತಮ ಸಂದೇಶ ಸಾರಲು ಮಾಡಿದ ವಿಡಿಯೋ ಮತ್ತು ಫೋಟೊಗಳನ್ನು ಕೊರೊನಾ ಕುರಿತು ಸುಳ್ಳು ಹಬ್ಬಿಸಲು ಆ ಮೂಲಕ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟಿರುವುದು ಅಕ್ಷಮ್ಯ ಅಪರಾಧವಾಗಿದೆ.

ಹಾಗಾಗಿ ಯಾವುದೇ ಸುದ್ದಿಯನ್ನು ನಂಬುವ ಅಥವಾ ಹಂಚುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ. ಸುಳ್ಳು ಸುದ್ದಿಗಳ ಪ್ರಪಾತಕ್ಕೆ ಬೀಳಬೇಡಿ ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...