Homeಫ್ಯಾಕ್ಟ್‌ಚೆಕ್Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

Fact Check: ಕೊರೊನಾ ಹರಡಲು ಪಾತ್ರೆಗಳನ್ನು ಎಂಜಲು ಮಾಡಿದ ಮುಸ್ಲಿಮರು? ಇದು ಸುಳ್ಳು ಸುದ್ದಿ

- Advertisement -
- Advertisement -

ಕೊರೊನಾ ವೈರಸ್ ಹರಡಲು ಮುಸ್ಲಿಮರು ಪಾತ್ರೆಗಳನ್ನು ನೆಕ್ಕುತ್ತಿದ್ದಾರೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೊರೊನಾ ವೈರಸ್ ಮತ್ತು ಹೆಚ್ಚಿನ ಜನರಿಗೆ ಆ ಸೋಂಕು ತಗಲುವ ಉದ್ದೇಶದಿಂದ ಮಸೀದಿಗಳಲ್ಲಿ ಇದನ್ನು ಮಾಡಲಾಗುತ್ತಿದೆ ಎಂದು ದಾವೂಡಿ ಬೊಹ್ರಾ ಯುವಕರು ಬಳಸಿದ ಪಾತ್ರೆಗಳನ್ನು ನೆಕ್ಕುವ ಹಳೆಯ ವೀಡಿಯೊವನ್ನು ಸುಳ್ಳು ಕೋಮುವಾದಿ ತಲೆಬರಹ ನೀಡಿ ಹಂಚಿಕೊಳ್ಳಲಾಗುತ್ತಿದೆ.

ನೂರಾರು ಜನ ಹಂಚಿಕೊಂಡಿರುವ ಈ ವೀಡಿಯೊದ ಶೀರ್ಷಿಕೆ ಈ ಕೆಳಗಿನಂತಿದೆ. “ಮುಲ್ಲಾಗಳು ಮಸೀದಿಗಳಲ್ಲಿ ಖಾಲಿ ಪಾತ್ರೆಗಳನ್ನು ನೆಕ್ಕುತ್ತಾರೆ ಇದರಿಂದ ಈ ಸಾಂಕ್ರಾಮಿಕ ರೋಗಗಳು ಹೆಚ್ಚು ಹೆಚ್ಚು ಹರಡಬಹುದು. ಈ ಮುಲ್ಲಾಗಳು ಈಗಾಗಲೇ ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸರ್ಕಾರವು ಅವರನ್ನು ಹಿಡಿದು ಚಿಕಿತ್ಸೆ ನೀಡುತ್ತಿದೆ. ಇದುವರೆಗೂ ಕರೋನಾ ಭಾರತಕ್ಕೆ ಬಂದಿರಲಿಲ್ಲ. ಆದರೆ ಈಗ ಹರಡುತ್ತಿದೆ ಏಕೆ? ವೀಡಿಯೊದಲ್ಲಿ ನೋಡಿ” ಎಂದು ಬರೆಯಲಾಗಿದೆ.

ಈ ತಿಂಗಳ ಆರಂಭದಲ್ಲಿ ದೆಹಲಿಯ ನಿಜಾಮುದ್ದೀನ್ ಪಶ್ಚಿಮದಲ್ಲಿರುವ ತಬ್ಲೀಘಿ ಜಮಾಅತ್‌ನ ಮಾರ್ಕಾಜ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಹಲವಾರು ಜನರಿಗೆ ಕರೋನವೈರಸ್‌ಗೆ ಧೃಡಪಟ್ಟ ನಂತರ ಈ ವೀಡಿಯೊ ಮತ್ತೆ ಕಾಣಿಸಿಕೊಂಡಿದೆ. ಹಾಗಾಗಿ ಈ ಸುದ್ದಿಯ ಸತ್ಯಾಸತ್ಯತೆಯನ್ನು ತಿಳಿಯಲು ಬೂಮ್‌ಲೈವ್‌ ಪ್ರಯತ್ನಿಸಿತು. ಆಗ ಇದೆಲ್ಲವೂ ಸಂಪೂರ್ಣ ಕಟ್ಟುಕಥೆಗಳು ಎಂದು ತಿಳಿದುಬಂದಿದೆ.

FACT-CHECK

ವಿಡಿಯೋಗಳ ಕೀಫ್ರೇಮ್‌ಗಳನ್ನು ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿದಾಗ ಈ ವಿಡಿಯೋ 2018 ರ ಜುಲೈಗೆ ಕರೆದುಕೊಂಡು ಹೋಗುತ್ತದೆ.

ಈ ವೀಡಿಯೊವನ್ನು ಜುಲೈ 31, 2018 ರಂದು ಮೊದಲ ಬಾರಿಗೆ ಅಪ್‌ಲೋಡ್ ಮಾಡಲಾಗಿದೆ. ಆಹಾರದ ಒಂದು ಅಗುಳನ್ನು ಸಹ ವ್ಯರ್ಥ ಮಾಡಬಾರದು ಎಂಬ ಸಂದೇಶ ನೀಡಲು ಬೋಹ್ರಾ ಸಮುದಾಯವು ನಡೆಸುವ ಸಾಂಕೇತಿಕ ಅಭ್ಯಾಸವನ್ನು ವೀಡಿಯೊ ಮಾಡಲಾಗಿದೆ. ಈ ಕ್ಲಿಪ್ ಹಳೆಯದು ಮತ್ತು ಕೊರೊನಾ ವೈರಸ್‌ಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ.

ವೈರಲ್ ವೀಡಿಯೊದಲ್ಲಿ ನೋಡಿದ ಹುಡುಗರನ್ನು ತನಗೆ ತಿಳಿದಿದೆ ಎಂದ ದಾವೂಡಿ ಬೊಹ್ರಾ ಸಂಘಟನೆಯ ಡಾನಾ ಸಮಿತಿಯ ಆಡಳಿತಾಧಿಕಾರಿ ಜೊಹರ್ ಅಲಿಯನ್ನು ಬೂಮ್ ಸಂಪರ್ಕಿಸಿದ್ದಾರೆ. “ಇದು ಮುಂಬೈನ ಮರೋಲ್ನಿಂದ ಬಂದ 3 ವರ್ಷದ ವಿಡಿಯೋ, ಅಲ್ಲಿನ ಸದಸ್ಯರು ಆಹಾರ ವ್ಯರ್ಥವಾಗುವುದನ್ನು ತಡೆಗಟ್ಟುವ ಸಲುವಾಗಿ ಆಹಾರದ ಎಂಜಲುಗಳನ್ನು ಸ್ವಚ್ಛಗೊಳಿಸುತ್ತಿದ್ದರು” ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ.

ಇದು ದಾವೂಡಿ ಬೊಹ್ರಾ ಸಮುದಾಯವು ಆಚರಿಸುವ ಸಾಂಕೇತಿಕ ಅಭ್ಯಾಸವಾಗಿದೆ ಮತ್ತು ಊಟ ಮುಗಿದ ನಂತರ ಮತ್ತು ಭಕ್ಷ್ಯಗಳನ್ನು ತೊಳೆಯುವ ಮೊದಲು ಇದನ್ನು ಮಾಡಲಾಗುತ್ತದೆ ಎಂದು ಅಲಿ ಬೂಮ್‌ಗೆ ತಿಳಿಸಿದ್ದಾರೆ. “ಈ ವೀಡಿಯೊ ಏನನ್ನು ತೋರಿಸುತ್ತದೆ ಎಂದರೆ ಯಾವುದೇ ಆಹಾರವನ್ನು ವ್ಯರ್ಥವಾಗದಂತೆ ನೋಡಿಕೊಳ್ಳಲು ಕಟ್ಲರಿ ಮತ್ತು ಡಿನ್ನರ್ ಪ್ಲೇಟ್‌ಗಳಿಂದ ಉಳಿದಿರುವ ಆಹಾರವನ್ನು ಸ್ವಚ್ಛಗೊಳಿಸುವ ಉಪಕ್ರಮಗಳಲ್ಲಿ ಒಂದಾಗಿದೆ. ಇದರ ಹಿಂದಿನ ಕಲ್ಪನೆಯು ಸರಳವಾಗಿದೆ ಜನರು ಆಹಾರದ ಮೌಲ್ಯವನ್ನು ಅರಿತುಕೊಳ್ಳಬೇಕು ಎಂದಿದ್ದಾರೆ.

ಡಾನಾ ಸಮಿತಿಯ ಇನ್‌ಸ್ಟಾಗ್ರಾಮ್ ಖಾತೆಯಲ್ಲಿಯೂ ಸಹ ಇದಕ್ಕೆ ಸಂಬಂಧಿಸಿದ ಪೋಸ್ಟ್‌‌ಗಳು ಲಭ್ಯವಿದ್ದು ಪ್ರತಿಯೊಂದರಲ್ಲಿಯೂ ಸಹ ಆಹಾರ ವ್ಯರ್ಥ ಮಾಡಬಾರದು ಎಂದು ತಿಳಿಸಲಾಗಿದೆ. ಇಂತಹ ಉತ್ತಮ ಸಂದೇಶ ಸಾರಲು ಮಾಡಿದ ವಿಡಿಯೋ ಮತ್ತು ಫೋಟೊಗಳನ್ನು ಕೊರೊನಾ ಕುರಿತು ಸುಳ್ಳು ಹಬ್ಬಿಸಲು ಆ ಮೂಲಕ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟಿರುವುದು ಅಕ್ಷಮ್ಯ ಅಪರಾಧವಾಗಿದೆ.

ಹಾಗಾಗಿ ಯಾವುದೇ ಸುದ್ದಿಯನ್ನು ನಂಬುವ ಅಥವಾ ಹಂಚುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ. ಸುಳ್ಳು ಸುದ್ದಿಗಳ ಪ್ರಪಾತಕ್ಕೆ ಬೀಳಬೇಡಿ ಎಂಬುದು ನಮ್ಮ ಆಶಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...