Homeಮುಖಪುಟಇದು ‘ಅದಾನಿ ಸರ್ಕಾರ’: ಪ್ರತಿಭಟನೆಯಲ್ಲಿ ಪ್ರತಿಪಕ್ಷಗಳ ಘೋಷಣೆ

ಇದು ‘ಅದಾನಿ ಸರ್ಕಾರ’: ಪ್ರತಿಭಟನೆಯಲ್ಲಿ ಪ್ರತಿಪಕ್ಷಗಳ ಘೋಷಣೆ

- Advertisement -
- Advertisement -

ಅದಾನಿ ಗುಂಪಿನ ಹಗರದ ವಿರುದ್ಧ ವಿರೋಧ ಪಕ್ಷಗಳ ಸದಸ್ಯರು ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲಿ ಘೋಷಣೆಗಳನ್ನು ಕೂಗಿದ್ದಾರೆ. ಯಾವುದೇ ಕ್ರಮ ಜರುಗಿಸದ ನರೇಂದ್ರ ಮೋದಿ ಸರ್ಕಾರವನ್ನು ‘ಅದಾನಿ ಸರ್ಕಾರ’ ಎಂದು ಟೀಕಿಸಿದ್ದಾರೆ. ಈ ಹಗರಣದ ವಿಚಾರವಾಗಿ ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ಪ್ರಧಾನಿಯವರು ದೇಶಕ್ಕೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆಯು ಅದಾನಿ ಗುಂಪಿನ ವಿರುದ್ಧ ಹೊರಿಸಿರುವ ವಂಚನೆಯ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕು ಎಂದು 16 ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ.

ಭಾರತೀಯ ಜೀವ ವಿಮಾ ನಿಗಮ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಅದಾನಿ ಗ್ರೂಪ್‌ನೊಂದಿಗೆ ಹೂಡಿಕೆ ಮಾಡುವ ಮೂಲಕ ಸಾರ್ವಜನಿಕ ಹಣವನ್ನು ಅಪಾಯಕ್ಕೆ ಸಿಲುಕಿಸಲಾಗಿದೆ ಎಂದು ವಿರೋಧ ಪಕ್ಷದ ಸದಸ್ಯರು ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು, “ಈ ರೀತಿಯ ಘೋಷಣೆ ಕೂಗುವುದು ಸರಿಯಲ್ಲ ಮತ್ತು ಸದನವು ಕ್ರಮಬದ್ಧವಾಗಿ ನಡೆಯುತ್ತಿಲ್ಲ” ಎಂದು ವಾದಿಸಿದರು. ಆದರೆ, ಪ್ರತಿಪಕ್ಷಗಳ ಸದಸ್ಯರು ಅದಾನಿ ವಿರುದ್ಧ ತನಿಖೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಿದ್ದಂತೆಯೇ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಬೇಕೆಂಬ ತಮ್ಮ ಬೇಡಿಕೆಗೆ ಸರ್ಕಾರ ಸಮ್ಮತಿಸದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸಭಾಪತಿ ಜಗದೀಪ್ ಧನಕರ್ ಅವರೂ ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಚರ್ಚೆಯನ್ನು ಕೈಗೆತ್ತಿಕೊಳ್ಳಲು ನಿಯಮ 267ರ ಅಡಿಯಲ್ಲಿ ಸಲ್ಲಿಸಲಾಗಿರುವ ನೋಟಿಸ್‌ಗಳನ್ನು ಧಂಕರ್ ಅವರು ತಿರಸ್ಕರಿಸಿದರು. ಇದನ್ನು ವಿರೋಧಿಸಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರತಿಪಕ್ಷದ ಸದಸ್ಯರು ಧರಣಿ ನಡೆಸಿ ಘೋಷಣೆಗಳನ್ನು ಕೂಗಿದರು.

“ನೀವು ಬಾಹ್ಯ ಉದ್ದೇಶಗಳಿಗಾಗಿ ಚರ್ಚಿಸಲು ಈ ವೇದಿಕೆಯನ್ನು ಆರಿಸಿಕೊಳ್ಳುವುದು ಸೂಕ್ತವಲ್ಲ … ನಾನು ನಿಮಗೆ ಮನವಿ ಮಾಡುತ್ತೇನೆ, ಸಾಮಾನ್ಯ ಜನರು ಏನು ಯೋಚಿಸುತ್ತಿದ್ದಾರೆಂದು ನಾವು ಯೋಚಿಸುವ ಸಮಯ ಇದು” ಎಂದು ದಂಕರ್‌ ಹೇಳಿದರು.

ಅದಾನಿ ಮೇಲಿನ ಆರೋಪಗಳ ತನಿಖೆಗಾಗಿ ಮೋದಿ ಸರ್ಕಾರದ ಮೇಲೆ ಒತ್ತಡವನ್ನು ಮುಂದುವರಿಸಲು, ಹಿಂದಿನ ದಿನ 16 ರಾಜಕೀಯ ಪಕ್ಷಗಳ ನಾಯಕರು ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಿದ್ದರು.

ಇದನ್ನೂ ಓದಿರಿ: ಅದಾನಿ ವಿಚಾರವಾಗಿ ಪ್ರತಿದಿನ ಕಾಂಗ್ರೆಸ್‌ನಿಂದ ಮೋದಿಗೆ ಮೂರು ಪ್ರಶ್ನೆ

ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಭಾರತ್ ರಾಷ್ಟ್ರ ಸಮಿತಿ, ಜನತಾ ದಳ ಯುನೈಟೆಡ್, ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಸಿಪಿಐ, ಕೇರಳ ಕಾಂಗ್ರೆಸ್ (ಜೋಸ್ ಮಣಿ), ಜಾರ್ಖಂಡ್ ಮುಕ್ತಿ ಮೋರ್ಚಾ, ರಾಷ್ಟ್ರೀಯ ಲೋಕದ, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ರಾಷ್ಟ್ರೀಯ ಜನತಾ ದಳ ಮತ್ತು ಶಿವಸೇನೆ ಈ ಸಭೆಯಲ್ಲಿ ಪಾಲ್ಗೊಂಡಿದ್ದವು.

ಸಭೆಯಲ್ಲಿ ಭಾಗವಹಿಸಿದ ಪಕ್ಷಗಳ ಸಂಸದರು, ಲೋಕಸಭೆ ಮತ್ತು ರಾಜ್ಯಸಭೆಯ ಒಳಗೆ, ಹೊರಗೆ ಈ ವಿಷಯದ ಬಗ್ಗೆ ಮತ್ತೊಮ್ಮೆ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ನಂತರ ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಪಕ್ಷಗಳ ಸಂಸದರು ಜಮಾಯಿಸಿದರು. ಕಾಂಗ್ರೆಸ್ ನಾಯಕರಾದ ಖರ್ಗೆ, ಅಧೀರ್ ರಂಜನ್ ಚೌಧರಿ, ಶಿವಸೇನೆಯ (ಯುಬಿಟಿ) ಸಂಜಯ್ ರಾವುತ್ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

“ರಾಷ್ಟ್ರಪತಿಗಳ ಭಾಷಣದ ಬಗ್ಗೆ ಚರ್ಚಿಸಲು ಸಿದ್ಧವಾಗಿವೆ. ಆದರೆ ಮೊದಲು ಅದಾನಿ ಗ್ರೂಪಿನ ವಿಷಯದ ಬಗ್ಗೆ ಮೋದಿಯವರಿಂದ ಉತ್ತರವನ್ನು ಬಯಸುತ್ತೇವೆ” ಎಂದು ಖರ್ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...