Homeಮುಖಪುಟಇದು ‘ಅದಾನಿ ಸರ್ಕಾರ’: ಪ್ರತಿಭಟನೆಯಲ್ಲಿ ಪ್ರತಿಪಕ್ಷಗಳ ಘೋಷಣೆ

ಇದು ‘ಅದಾನಿ ಸರ್ಕಾರ’: ಪ್ರತಿಭಟನೆಯಲ್ಲಿ ಪ್ರತಿಪಕ್ಷಗಳ ಘೋಷಣೆ

- Advertisement -
- Advertisement -

ಅದಾನಿ ಗುಂಪಿನ ಹಗರದ ವಿರುದ್ಧ ವಿರೋಧ ಪಕ್ಷಗಳ ಸದಸ್ಯರು ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲಿ ಘೋಷಣೆಗಳನ್ನು ಕೂಗಿದ್ದಾರೆ. ಯಾವುದೇ ಕ್ರಮ ಜರುಗಿಸದ ನರೇಂದ್ರ ಮೋದಿ ಸರ್ಕಾರವನ್ನು ‘ಅದಾನಿ ಸರ್ಕಾರ’ ಎಂದು ಟೀಕಿಸಿದ್ದಾರೆ. ಈ ಹಗರಣದ ವಿಚಾರವಾಗಿ ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ಪ್ರಧಾನಿಯವರು ದೇಶಕ್ಕೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆಯು ಅದಾನಿ ಗುಂಪಿನ ವಿರುದ್ಧ ಹೊರಿಸಿರುವ ವಂಚನೆಯ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕು ಎಂದು 16 ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ.

ಭಾರತೀಯ ಜೀವ ವಿಮಾ ನಿಗಮ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಅದಾನಿ ಗ್ರೂಪ್‌ನೊಂದಿಗೆ ಹೂಡಿಕೆ ಮಾಡುವ ಮೂಲಕ ಸಾರ್ವಜನಿಕ ಹಣವನ್ನು ಅಪಾಯಕ್ಕೆ ಸಿಲುಕಿಸಲಾಗಿದೆ ಎಂದು ವಿರೋಧ ಪಕ್ಷದ ಸದಸ್ಯರು ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು, “ಈ ರೀತಿಯ ಘೋಷಣೆ ಕೂಗುವುದು ಸರಿಯಲ್ಲ ಮತ್ತು ಸದನವು ಕ್ರಮಬದ್ಧವಾಗಿ ನಡೆಯುತ್ತಿಲ್ಲ” ಎಂದು ವಾದಿಸಿದರು. ಆದರೆ, ಪ್ರತಿಪಕ್ಷಗಳ ಸದಸ್ಯರು ಅದಾನಿ ವಿರುದ್ಧ ತನಿಖೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಿದ್ದಂತೆಯೇ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಬೇಕೆಂಬ ತಮ್ಮ ಬೇಡಿಕೆಗೆ ಸರ್ಕಾರ ಸಮ್ಮತಿಸದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸಭಾಪತಿ ಜಗದೀಪ್ ಧನಕರ್ ಅವರೂ ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಚರ್ಚೆಯನ್ನು ಕೈಗೆತ್ತಿಕೊಳ್ಳಲು ನಿಯಮ 267ರ ಅಡಿಯಲ್ಲಿ ಸಲ್ಲಿಸಲಾಗಿರುವ ನೋಟಿಸ್‌ಗಳನ್ನು ಧಂಕರ್ ಅವರು ತಿರಸ್ಕರಿಸಿದರು. ಇದನ್ನು ವಿರೋಧಿಸಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರತಿಪಕ್ಷದ ಸದಸ್ಯರು ಧರಣಿ ನಡೆಸಿ ಘೋಷಣೆಗಳನ್ನು ಕೂಗಿದರು.

“ನೀವು ಬಾಹ್ಯ ಉದ್ದೇಶಗಳಿಗಾಗಿ ಚರ್ಚಿಸಲು ಈ ವೇದಿಕೆಯನ್ನು ಆರಿಸಿಕೊಳ್ಳುವುದು ಸೂಕ್ತವಲ್ಲ … ನಾನು ನಿಮಗೆ ಮನವಿ ಮಾಡುತ್ತೇನೆ, ಸಾಮಾನ್ಯ ಜನರು ಏನು ಯೋಚಿಸುತ್ತಿದ್ದಾರೆಂದು ನಾವು ಯೋಚಿಸುವ ಸಮಯ ಇದು” ಎಂದು ದಂಕರ್‌ ಹೇಳಿದರು.

ಅದಾನಿ ಮೇಲಿನ ಆರೋಪಗಳ ತನಿಖೆಗಾಗಿ ಮೋದಿ ಸರ್ಕಾರದ ಮೇಲೆ ಒತ್ತಡವನ್ನು ಮುಂದುವರಿಸಲು, ಹಿಂದಿನ ದಿನ 16 ರಾಜಕೀಯ ಪಕ್ಷಗಳ ನಾಯಕರು ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಿದ್ದರು.

ಇದನ್ನೂ ಓದಿರಿ: ಅದಾನಿ ವಿಚಾರವಾಗಿ ಪ್ರತಿದಿನ ಕಾಂಗ್ರೆಸ್‌ನಿಂದ ಮೋದಿಗೆ ಮೂರು ಪ್ರಶ್ನೆ

ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಭಾರತ್ ರಾಷ್ಟ್ರ ಸಮಿತಿ, ಜನತಾ ದಳ ಯುನೈಟೆಡ್, ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಸಿಪಿಐ, ಕೇರಳ ಕಾಂಗ್ರೆಸ್ (ಜೋಸ್ ಮಣಿ), ಜಾರ್ಖಂಡ್ ಮುಕ್ತಿ ಮೋರ್ಚಾ, ರಾಷ್ಟ್ರೀಯ ಲೋಕದ, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ರಾಷ್ಟ್ರೀಯ ಜನತಾ ದಳ ಮತ್ತು ಶಿವಸೇನೆ ಈ ಸಭೆಯಲ್ಲಿ ಪಾಲ್ಗೊಂಡಿದ್ದವು.

ಸಭೆಯಲ್ಲಿ ಭಾಗವಹಿಸಿದ ಪಕ್ಷಗಳ ಸಂಸದರು, ಲೋಕಸಭೆ ಮತ್ತು ರಾಜ್ಯಸಭೆಯ ಒಳಗೆ, ಹೊರಗೆ ಈ ವಿಷಯದ ಬಗ್ಗೆ ಮತ್ತೊಮ್ಮೆ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ನಂತರ ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಪಕ್ಷಗಳ ಸಂಸದರು ಜಮಾಯಿಸಿದರು. ಕಾಂಗ್ರೆಸ್ ನಾಯಕರಾದ ಖರ್ಗೆ, ಅಧೀರ್ ರಂಜನ್ ಚೌಧರಿ, ಶಿವಸೇನೆಯ (ಯುಬಿಟಿ) ಸಂಜಯ್ ರಾವುತ್ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

“ರಾಷ್ಟ್ರಪತಿಗಳ ಭಾಷಣದ ಬಗ್ಗೆ ಚರ್ಚಿಸಲು ಸಿದ್ಧವಾಗಿವೆ. ಆದರೆ ಮೊದಲು ಅದಾನಿ ಗ್ರೂಪಿನ ವಿಷಯದ ಬಗ್ಗೆ ಮೋದಿಯವರಿಂದ ಉತ್ತರವನ್ನು ಬಯಸುತ್ತೇವೆ” ಎಂದು ಖರ್ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...