Homeಮುಖಪುಟಇದು ‘ಅದಾನಿ ಸರ್ಕಾರ’: ಪ್ರತಿಭಟನೆಯಲ್ಲಿ ಪ್ರತಿಪಕ್ಷಗಳ ಘೋಷಣೆ

ಇದು ‘ಅದಾನಿ ಸರ್ಕಾರ’: ಪ್ರತಿಭಟನೆಯಲ್ಲಿ ಪ್ರತಿಪಕ್ಷಗಳ ಘೋಷಣೆ

- Advertisement -
- Advertisement -

ಅದಾನಿ ಗುಂಪಿನ ಹಗರದ ವಿರುದ್ಧ ವಿರೋಧ ಪಕ್ಷಗಳ ಸದಸ್ಯರು ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲಿ ಘೋಷಣೆಗಳನ್ನು ಕೂಗಿದ್ದಾರೆ. ಯಾವುದೇ ಕ್ರಮ ಜರುಗಿಸದ ನರೇಂದ್ರ ಮೋದಿ ಸರ್ಕಾರವನ್ನು ‘ಅದಾನಿ ಸರ್ಕಾರ’ ಎಂದು ಟೀಕಿಸಿದ್ದಾರೆ. ಈ ಹಗರಣದ ವಿಚಾರವಾಗಿ ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ಪ್ರಧಾನಿಯವರು ದೇಶಕ್ಕೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥೆಯು ಅದಾನಿ ಗುಂಪಿನ ವಿರುದ್ಧ ಹೊರಿಸಿರುವ ವಂಚನೆಯ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕು ಎಂದು 16 ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ.

ಭಾರತೀಯ ಜೀವ ವಿಮಾ ನಿಗಮ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಅದಾನಿ ಗ್ರೂಪ್‌ನೊಂದಿಗೆ ಹೂಡಿಕೆ ಮಾಡುವ ಮೂಲಕ ಸಾರ್ವಜನಿಕ ಹಣವನ್ನು ಅಪಾಯಕ್ಕೆ ಸಿಲುಕಿಸಲಾಗಿದೆ ಎಂದು ವಿರೋಧ ಪಕ್ಷದ ಸದಸ್ಯರು ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು, “ಈ ರೀತಿಯ ಘೋಷಣೆ ಕೂಗುವುದು ಸರಿಯಲ್ಲ ಮತ್ತು ಸದನವು ಕ್ರಮಬದ್ಧವಾಗಿ ನಡೆಯುತ್ತಿಲ್ಲ” ಎಂದು ವಾದಿಸಿದರು. ಆದರೆ, ಪ್ರತಿಪಕ್ಷಗಳ ಸದಸ್ಯರು ಅದಾನಿ ವಿರುದ್ಧ ತನಿಖೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಿದ್ದಂತೆಯೇ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಬೇಕೆಂಬ ತಮ್ಮ ಬೇಡಿಕೆಗೆ ಸರ್ಕಾರ ಸಮ್ಮತಿಸದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸಭಾಪತಿ ಜಗದೀಪ್ ಧನಕರ್ ಅವರೂ ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಚರ್ಚೆಯನ್ನು ಕೈಗೆತ್ತಿಕೊಳ್ಳಲು ನಿಯಮ 267ರ ಅಡಿಯಲ್ಲಿ ಸಲ್ಲಿಸಲಾಗಿರುವ ನೋಟಿಸ್‌ಗಳನ್ನು ಧಂಕರ್ ಅವರು ತಿರಸ್ಕರಿಸಿದರು. ಇದನ್ನು ವಿರೋಧಿಸಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರತಿಪಕ್ಷದ ಸದಸ್ಯರು ಧರಣಿ ನಡೆಸಿ ಘೋಷಣೆಗಳನ್ನು ಕೂಗಿದರು.

“ನೀವು ಬಾಹ್ಯ ಉದ್ದೇಶಗಳಿಗಾಗಿ ಚರ್ಚಿಸಲು ಈ ವೇದಿಕೆಯನ್ನು ಆರಿಸಿಕೊಳ್ಳುವುದು ಸೂಕ್ತವಲ್ಲ … ನಾನು ನಿಮಗೆ ಮನವಿ ಮಾಡುತ್ತೇನೆ, ಸಾಮಾನ್ಯ ಜನರು ಏನು ಯೋಚಿಸುತ್ತಿದ್ದಾರೆಂದು ನಾವು ಯೋಚಿಸುವ ಸಮಯ ಇದು” ಎಂದು ದಂಕರ್‌ ಹೇಳಿದರು.

ಅದಾನಿ ಮೇಲಿನ ಆರೋಪಗಳ ತನಿಖೆಗಾಗಿ ಮೋದಿ ಸರ್ಕಾರದ ಮೇಲೆ ಒತ್ತಡವನ್ನು ಮುಂದುವರಿಸಲು, ಹಿಂದಿನ ದಿನ 16 ರಾಜಕೀಯ ಪಕ್ಷಗಳ ನಾಯಕರು ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಿದ್ದರು.

ಇದನ್ನೂ ಓದಿರಿ: ಅದಾನಿ ವಿಚಾರವಾಗಿ ಪ್ರತಿದಿನ ಕಾಂಗ್ರೆಸ್‌ನಿಂದ ಮೋದಿಗೆ ಮೂರು ಪ್ರಶ್ನೆ

ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಭಾರತ್ ರಾಷ್ಟ್ರ ಸಮಿತಿ, ಜನತಾ ದಳ ಯುನೈಟೆಡ್, ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಸಿಪಿಐ, ಕೇರಳ ಕಾಂಗ್ರೆಸ್ (ಜೋಸ್ ಮಣಿ), ಜಾರ್ಖಂಡ್ ಮುಕ್ತಿ ಮೋರ್ಚಾ, ರಾಷ್ಟ್ರೀಯ ಲೋಕದ, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ರಾಷ್ಟ್ರೀಯ ಜನತಾ ದಳ ಮತ್ತು ಶಿವಸೇನೆ ಈ ಸಭೆಯಲ್ಲಿ ಪಾಲ್ಗೊಂಡಿದ್ದವು.

ಸಭೆಯಲ್ಲಿ ಭಾಗವಹಿಸಿದ ಪಕ್ಷಗಳ ಸಂಸದರು, ಲೋಕಸಭೆ ಮತ್ತು ರಾಜ್ಯಸಭೆಯ ಒಳಗೆ, ಹೊರಗೆ ಈ ವಿಷಯದ ಬಗ್ಗೆ ಮತ್ತೊಮ್ಮೆ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ನಂತರ ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಪಕ್ಷಗಳ ಸಂಸದರು ಜಮಾಯಿಸಿದರು. ಕಾಂಗ್ರೆಸ್ ನಾಯಕರಾದ ಖರ್ಗೆ, ಅಧೀರ್ ರಂಜನ್ ಚೌಧರಿ, ಶಿವಸೇನೆಯ (ಯುಬಿಟಿ) ಸಂಜಯ್ ರಾವುತ್ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

“ರಾಷ್ಟ್ರಪತಿಗಳ ಭಾಷಣದ ಬಗ್ಗೆ ಚರ್ಚಿಸಲು ಸಿದ್ಧವಾಗಿವೆ. ಆದರೆ ಮೊದಲು ಅದಾನಿ ಗ್ರೂಪಿನ ವಿಷಯದ ಬಗ್ಗೆ ಮೋದಿಯವರಿಂದ ಉತ್ತರವನ್ನು ಬಯಸುತ್ತೇವೆ” ಎಂದು ಖರ್ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...