Homeಮುಖಪುಟಇದು 'ಬಾಬಾ ಸಾಹೇಬ್ ಮತ್ತು ಬಾಬಾ' ನಡುವಿನ ಹೋರಾಟ - ಯುಪಿ ಉಪಚುನಾವಣೆ ಬಗ್ಗೆ ಅಖಿಲೇಶ್...

ಇದು ‘ಬಾಬಾ ಸಾಹೇಬ್ ಮತ್ತು ಬಾಬಾ’ ನಡುವಿನ ಹೋರಾಟ – ಯುಪಿ ಉಪಚುನಾವಣೆ ಬಗ್ಗೆ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನವೆಂಬರ್ 20ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಯು ”ಬಾಬಾಸಾಹೇಬ್ ಭೀಮ್ ರಾವ್ ಅಂಬೇಡ್ಕರ್” ಮತ್ತು “ಬಾಬಾ”ನನ್ನು ನಂಬುವವರ ನಡುವಿನ ಹೋರಾಟವಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಉಲ್ಲೇಖಿಸಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ. ಇದು ‘ಬಾಬಾ ಸಾಹೇಬ್

“ಇದು ಬಾಬಾ ಸಾಹೇಬರನ್ನು ನಂಬುವವರು ಮತ್ತು ‘ಬಾಬಾ’ರನ್ನು ನಂಬುವವರ ನಡುವಿನ ಹೋರಾಟವಾಗಿದೆ. ಒಂದು ಕಡೆ ಸಂವಿಧಾನವನ್ನು ರಚಿಸಿದವರು ಮತ್ತು ರಕ್ಷಿಸುವವರು ಮತ್ತೊಂದು ಕಡೆ, ಅದನ್ನು ನಾಶಪಡಿಸುವವರು” ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದು ‘ಬಾಬಾ ಸಾಹೇಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಲ್ಲಿಯವರೆಗೆ, ಸಂವಿಧಾನವು ‘ಹಿಂದುಳಿದ ವರ್ಗ, ದಲಿತ, ಮತ್ತು ಅಲ್ಪಸಂಖ್ಯಾತ(ಪಿಡಿಎ)’ರನ್ನು ರಕ್ಷಿಸಿದೆ; ಈಗ ಪಿಡಿಎ ಸಂವಿಧಾನವನ್ನು ರಕ್ಷಿಸುತ್ತದೆ! ಏಕತೆಯನ್ನು ಘೋಷಿಸಿ. ಜೈ ಸಂವಿಧಾನ, ಜೈ ಪಿಡಿಎ!,” ಎಂದು ಅವರು ಹೇಳಿದ್ದಾರೆ. ಅಖಿಲೇಶ್ ಅವರು ಲೋಕಸಭೆ ಚುನಾವಣೆಗೂ ಮುನ್ನ, ಪಿಡಿಎ ಅಂದರೆ ಪಿಚ್‌ಡೆ, ದಲಿತ, ಅಲ್ಪಸಂಖ್ಯಾಕ್ (ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ) ಎಂಬ ಘೋಷಣೆಯನ್ನು ರೂಪಿಸಿದ್ದರು.

ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಸ್ಥಾನಗಳಾದ ಕತೇಹಾರಿ (ಅಂಬೇಡ್ಕರ್ ನಗರ), ಕರ್ಹಾಲ್ (ಮೈನ್‌ಪುರಿ), ಮೀರಾಪುರ್ (ಮುಜಾಫರ್‌ನಗರ), ಘಾಜಿಯಾಬಾದ್, ಮಜವಾನ್ (ಮಿರ್ಜಾಪುರ), ಸಿಸಮಾವು (ಕಾನ್ಪುರ್ ನಗರ), ಖೈರ್ (ಅಲಿಗಢ), ಫುಲ್ಪುರ್ (ಪ್ರಯಾಗ್ರಾಜ್) ಮತ್ತು ಕುಂದರ್ಕಿ (ಮೊರಾದಾಬಾದ್) ಕ್ಷೇತ್ರಗಳಿಗೆ ನವೆಂಬರ್ 20 ರಂದು  ಚುನಾವಣೆ ನಡೆಯಲಿದೆ.

ಕ್ರಿಮಿನಲ್ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ಎಸ್‌ಪಿ ಶಾಸಕ ಇರ್ಫಾನ್ ಸೋಲಂಕಿ ಅವರ ಅನರ್ಹತೆಯಿಂದಾಗಿ ಸಿಸಾಮೌ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಉಳಿದ ಎಂಟು ಕ್ಷೇತ್ರಗಳ ಅವರ ಶಾಸಕರು ಲೋಕಸಭೆಯ ಸಂಸದರಾಗಿ ಆಯ್ಕೆಯಾದ ಕಾರಣಕ್ಕೆ ಕ್ಷೇತ್ರಗಳು ತೆರವಾಗಿದ್ದವು.

2022 ರ ವಿಧಾನಸಭಾ ಚುನಾವಣೆಯಲ್ಲಿ ಸಿಶಾಮೌ, ಕತೇಹಾರಿ, ಕರ್ಹಾಲ್ ಮತ್ತು ಕುಂದರ್ಕಿ ಎಸ್‌ಪಿ ವಶದಲ್ಲಿದ್ದರೆ, ಬಿಜೆಪಿ ಫುಲ್ಪುರ್, ಗಾಜಿಯಾಬಾದ್, ಮಜ್ವಾನ್ ಮತ್ತು ಖೈರ್ ಅನ್ನು ಗೆದ್ದುಕೊಂಡಿತು. ಮೀರಾಪುರ ಕ್ಷೇತ್ರವನ್ನು ಆರ್‌ಎಲ್‌ಡಿ ಹೊಂದಿದ್ದು, ಅದು ಈಗ ಎನ್‌ಡಿಎ ಮೈತ್ರಿಯ ಮೂಲಕ ಬಿಜೆಪಿಯ ಮಿತ್ರಪಕ್ಷವಾಗಿದೆ.

ಅದಾಗ್ಯೂ, ಈ 9 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿಲ್ಲ. ಬದಲಾಗಿ ಇಂಡಿಯಾ ಮೈತ್ರಿಕೂಟದ ಪಕ್ಷವಾದ ಎಸ್‌ಪಿಯನ್ನು ಬೆಂಬಲಿಸುತ್ತಿದೆ. ಆದರೆ ಬಿಎಸ್‌ಪಿ ಎಲ್ಲಾ ಒಂಬತ್ತು ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...