Homeಮುಖಪುಟಇದು 'ಬಾಬಾ ಸಾಹೇಬ್ ಮತ್ತು ಬಾಬಾ' ನಡುವಿನ ಹೋರಾಟ - ಯುಪಿ ಉಪಚುನಾವಣೆ ಬಗ್ಗೆ ಅಖಿಲೇಶ್...

ಇದು ‘ಬಾಬಾ ಸಾಹೇಬ್ ಮತ್ತು ಬಾಬಾ’ ನಡುವಿನ ಹೋರಾಟ – ಯುಪಿ ಉಪಚುನಾವಣೆ ಬಗ್ಗೆ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನವೆಂಬರ್ 20ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಯು ”ಬಾಬಾಸಾಹೇಬ್ ಭೀಮ್ ರಾವ್ ಅಂಬೇಡ್ಕರ್” ಮತ್ತು “ಬಾಬಾ”ನನ್ನು ನಂಬುವವರ ನಡುವಿನ ಹೋರಾಟವಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಉಲ್ಲೇಖಿಸಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ. ಇದು ‘ಬಾಬಾ ಸಾಹೇಬ್

“ಇದು ಬಾಬಾ ಸಾಹೇಬರನ್ನು ನಂಬುವವರು ಮತ್ತು ‘ಬಾಬಾ’ರನ್ನು ನಂಬುವವರ ನಡುವಿನ ಹೋರಾಟವಾಗಿದೆ. ಒಂದು ಕಡೆ ಸಂವಿಧಾನವನ್ನು ರಚಿಸಿದವರು ಮತ್ತು ರಕ್ಷಿಸುವವರು ಮತ್ತೊಂದು ಕಡೆ, ಅದನ್ನು ನಾಶಪಡಿಸುವವರು” ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದು ‘ಬಾಬಾ ಸಾಹೇಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಲ್ಲಿಯವರೆಗೆ, ಸಂವಿಧಾನವು ‘ಹಿಂದುಳಿದ ವರ್ಗ, ದಲಿತ, ಮತ್ತು ಅಲ್ಪಸಂಖ್ಯಾತ(ಪಿಡಿಎ)’ರನ್ನು ರಕ್ಷಿಸಿದೆ; ಈಗ ಪಿಡಿಎ ಸಂವಿಧಾನವನ್ನು ರಕ್ಷಿಸುತ್ತದೆ! ಏಕತೆಯನ್ನು ಘೋಷಿಸಿ. ಜೈ ಸಂವಿಧಾನ, ಜೈ ಪಿಡಿಎ!,” ಎಂದು ಅವರು ಹೇಳಿದ್ದಾರೆ. ಅಖಿಲೇಶ್ ಅವರು ಲೋಕಸಭೆ ಚುನಾವಣೆಗೂ ಮುನ್ನ, ಪಿಡಿಎ ಅಂದರೆ ಪಿಚ್‌ಡೆ, ದಲಿತ, ಅಲ್ಪಸಂಖ್ಯಾಕ್ (ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ) ಎಂಬ ಘೋಷಣೆಯನ್ನು ರೂಪಿಸಿದ್ದರು.

ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಸ್ಥಾನಗಳಾದ ಕತೇಹಾರಿ (ಅಂಬೇಡ್ಕರ್ ನಗರ), ಕರ್ಹಾಲ್ (ಮೈನ್‌ಪುರಿ), ಮೀರಾಪುರ್ (ಮುಜಾಫರ್‌ನಗರ), ಘಾಜಿಯಾಬಾದ್, ಮಜವಾನ್ (ಮಿರ್ಜಾಪುರ), ಸಿಸಮಾವು (ಕಾನ್ಪುರ್ ನಗರ), ಖೈರ್ (ಅಲಿಗಢ), ಫುಲ್ಪುರ್ (ಪ್ರಯಾಗ್ರಾಜ್) ಮತ್ತು ಕುಂದರ್ಕಿ (ಮೊರಾದಾಬಾದ್) ಕ್ಷೇತ್ರಗಳಿಗೆ ನವೆಂಬರ್ 20 ರಂದು  ಚುನಾವಣೆ ನಡೆಯಲಿದೆ.

ಕ್ರಿಮಿನಲ್ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ಎಸ್‌ಪಿ ಶಾಸಕ ಇರ್ಫಾನ್ ಸೋಲಂಕಿ ಅವರ ಅನರ್ಹತೆಯಿಂದಾಗಿ ಸಿಸಾಮೌ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಉಳಿದ ಎಂಟು ಕ್ಷೇತ್ರಗಳ ಅವರ ಶಾಸಕರು ಲೋಕಸಭೆಯ ಸಂಸದರಾಗಿ ಆಯ್ಕೆಯಾದ ಕಾರಣಕ್ಕೆ ಕ್ಷೇತ್ರಗಳು ತೆರವಾಗಿದ್ದವು.

2022 ರ ವಿಧಾನಸಭಾ ಚುನಾವಣೆಯಲ್ಲಿ ಸಿಶಾಮೌ, ಕತೇಹಾರಿ, ಕರ್ಹಾಲ್ ಮತ್ತು ಕುಂದರ್ಕಿ ಎಸ್‌ಪಿ ವಶದಲ್ಲಿದ್ದರೆ, ಬಿಜೆಪಿ ಫುಲ್ಪುರ್, ಗಾಜಿಯಾಬಾದ್, ಮಜ್ವಾನ್ ಮತ್ತು ಖೈರ್ ಅನ್ನು ಗೆದ್ದುಕೊಂಡಿತು. ಮೀರಾಪುರ ಕ್ಷೇತ್ರವನ್ನು ಆರ್‌ಎಲ್‌ಡಿ ಹೊಂದಿದ್ದು, ಅದು ಈಗ ಎನ್‌ಡಿಎ ಮೈತ್ರಿಯ ಮೂಲಕ ಬಿಜೆಪಿಯ ಮಿತ್ರಪಕ್ಷವಾಗಿದೆ.

ಅದಾಗ್ಯೂ, ಈ 9 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿಲ್ಲ. ಬದಲಾಗಿ ಇಂಡಿಯಾ ಮೈತ್ರಿಕೂಟದ ಪಕ್ಷವಾದ ಎಸ್‌ಪಿಯನ್ನು ಬೆಂಬಲಿಸುತ್ತಿದೆ. ಆದರೆ ಬಿಎಸ್‌ಪಿ ಎಲ್ಲಾ ಒಂಬತ್ತು ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...