Homeಮುಖಪುಟಇದು 'ಬಾಬಾ ಸಾಹೇಬ್ ಮತ್ತು ಬಾಬಾ' ನಡುವಿನ ಹೋರಾಟ - ಯುಪಿ ಉಪಚುನಾವಣೆ ಬಗ್ಗೆ ಅಖಿಲೇಶ್...

ಇದು ‘ಬಾಬಾ ಸಾಹೇಬ್ ಮತ್ತು ಬಾಬಾ’ ನಡುವಿನ ಹೋರಾಟ – ಯುಪಿ ಉಪಚುನಾವಣೆ ಬಗ್ಗೆ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನವೆಂಬರ್ 20ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಯು ”ಬಾಬಾಸಾಹೇಬ್ ಭೀಮ್ ರಾವ್ ಅಂಬೇಡ್ಕರ್” ಮತ್ತು “ಬಾಬಾ”ನನ್ನು ನಂಬುವವರ ನಡುವಿನ ಹೋರಾಟವಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಉಲ್ಲೇಖಿಸಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ. ಇದು ‘ಬಾಬಾ ಸಾಹೇಬ್

“ಇದು ಬಾಬಾ ಸಾಹೇಬರನ್ನು ನಂಬುವವರು ಮತ್ತು ‘ಬಾಬಾ’ರನ್ನು ನಂಬುವವರ ನಡುವಿನ ಹೋರಾಟವಾಗಿದೆ. ಒಂದು ಕಡೆ ಸಂವಿಧಾನವನ್ನು ರಚಿಸಿದವರು ಮತ್ತು ರಕ್ಷಿಸುವವರು ಮತ್ತೊಂದು ಕಡೆ, ಅದನ್ನು ನಾಶಪಡಿಸುವವರು” ಎಂದು ಅಖಿಲೇಶ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದು ‘ಬಾಬಾ ಸಾಹೇಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಲ್ಲಿಯವರೆಗೆ, ಸಂವಿಧಾನವು ‘ಹಿಂದುಳಿದ ವರ್ಗ, ದಲಿತ, ಮತ್ತು ಅಲ್ಪಸಂಖ್ಯಾತ(ಪಿಡಿಎ)’ರನ್ನು ರಕ್ಷಿಸಿದೆ; ಈಗ ಪಿಡಿಎ ಸಂವಿಧಾನವನ್ನು ರಕ್ಷಿಸುತ್ತದೆ! ಏಕತೆಯನ್ನು ಘೋಷಿಸಿ. ಜೈ ಸಂವಿಧಾನ, ಜೈ ಪಿಡಿಎ!,” ಎಂದು ಅವರು ಹೇಳಿದ್ದಾರೆ. ಅಖಿಲೇಶ್ ಅವರು ಲೋಕಸಭೆ ಚುನಾವಣೆಗೂ ಮುನ್ನ, ಪಿಡಿಎ ಅಂದರೆ ಪಿಚ್‌ಡೆ, ದಲಿತ, ಅಲ್ಪಸಂಖ್ಯಾಕ್ (ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ) ಎಂಬ ಘೋಷಣೆಯನ್ನು ರೂಪಿಸಿದ್ದರು.

ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಸ್ಥಾನಗಳಾದ ಕತೇಹಾರಿ (ಅಂಬೇಡ್ಕರ್ ನಗರ), ಕರ್ಹಾಲ್ (ಮೈನ್‌ಪುರಿ), ಮೀರಾಪುರ್ (ಮುಜಾಫರ್‌ನಗರ), ಘಾಜಿಯಾಬಾದ್, ಮಜವಾನ್ (ಮಿರ್ಜಾಪುರ), ಸಿಸಮಾವು (ಕಾನ್ಪುರ್ ನಗರ), ಖೈರ್ (ಅಲಿಗಢ), ಫುಲ್ಪುರ್ (ಪ್ರಯಾಗ್ರಾಜ್) ಮತ್ತು ಕುಂದರ್ಕಿ (ಮೊರಾದಾಬಾದ್) ಕ್ಷೇತ್ರಗಳಿಗೆ ನವೆಂಬರ್ 20 ರಂದು  ಚುನಾವಣೆ ನಡೆಯಲಿದೆ.

ಕ್ರಿಮಿನಲ್ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ಎಸ್‌ಪಿ ಶಾಸಕ ಇರ್ಫಾನ್ ಸೋಲಂಕಿ ಅವರ ಅನರ್ಹತೆಯಿಂದಾಗಿ ಸಿಸಾಮೌ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಉಳಿದ ಎಂಟು ಕ್ಷೇತ್ರಗಳ ಅವರ ಶಾಸಕರು ಲೋಕಸಭೆಯ ಸಂಸದರಾಗಿ ಆಯ್ಕೆಯಾದ ಕಾರಣಕ್ಕೆ ಕ್ಷೇತ್ರಗಳು ತೆರವಾಗಿದ್ದವು.

2022 ರ ವಿಧಾನಸಭಾ ಚುನಾವಣೆಯಲ್ಲಿ ಸಿಶಾಮೌ, ಕತೇಹಾರಿ, ಕರ್ಹಾಲ್ ಮತ್ತು ಕುಂದರ್ಕಿ ಎಸ್‌ಪಿ ವಶದಲ್ಲಿದ್ದರೆ, ಬಿಜೆಪಿ ಫುಲ್ಪುರ್, ಗಾಜಿಯಾಬಾದ್, ಮಜ್ವಾನ್ ಮತ್ತು ಖೈರ್ ಅನ್ನು ಗೆದ್ದುಕೊಂಡಿತು. ಮೀರಾಪುರ ಕ್ಷೇತ್ರವನ್ನು ಆರ್‌ಎಲ್‌ಡಿ ಹೊಂದಿದ್ದು, ಅದು ಈಗ ಎನ್‌ಡಿಎ ಮೈತ್ರಿಯ ಮೂಲಕ ಬಿಜೆಪಿಯ ಮಿತ್ರಪಕ್ಷವಾಗಿದೆ.

ಅದಾಗ್ಯೂ, ಈ 9 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿಲ್ಲ. ಬದಲಾಗಿ ಇಂಡಿಯಾ ಮೈತ್ರಿಕೂಟದ ಪಕ್ಷವಾದ ಎಸ್‌ಪಿಯನ್ನು ಬೆಂಬಲಿಸುತ್ತಿದೆ. ಆದರೆ ಬಿಎಸ್‌ಪಿ ಎಲ್ಲಾ ಒಂಬತ್ತು ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...