Homeಮುಖಪುಟಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

ಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

- Advertisement -
- Advertisement -

ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಸಾವಿರಾರು ಪ್ರತಿಭಟನಾಕಾರರು ಕೊಲಂಬೊದಲ್ಲಿರುವ ಶ್ರೀಲಂಕಾ ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದ ನಂತರ, ದ್ವೀಪ ರಾಷ್ಟ್ರದ ಮಾಜಿ ಕ್ರಿಕೆಟಿಗರು ಜನಾಂದೋಲನದ ಪರ ದನಿ ಎತ್ತಿದ್ದಾರೆ.

ಕ್ರಿಕೆಟ್ ದಂತಕಥೆ ಮತ್ತು ಶ್ರೀಲಂಕಾ ಕ್ರಿಕೆಟ್‌ ತಂಡದ ಮಾಜಿ ನಾಯಕ ಕುಮಾರ ಸಂಗಕ್ಕಾರ, ಮಹೇಲ ಜಯವರ್ಧನ, ಸನತ್‌ ಜಯಸೂರ್ಯ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಅಧ್ಯಕ್ಷೀಯ ಭವನದ ಹೊರಗೆ ಜಮಾಯಿಸಿರುವ ಪ್ರತಿಭಟನಾಕಾರರ ಮೂರು ಸೆಕೆಂಡುಗಳ ವೀಡಿಯೊ ಕ್ಲಿಪ್ ಅನ್ನು ಟ್ವೀಟ್ ಮಾಡಿದ ಕುಮಾರ ಸಂಗಕ್ಕಾರ, “ಇದು ನಮ್ಮ ಭವಿಷ್ಯಕ್ಕಾಗಿ” ಎಂದು ಬರೆದಿದ್ದಾರೆ.

ಲಂಕಾ ಧ್ವಜಗಳನ್ನು ಬೀಸುತ್ತಿರುವ ಬೃಹತ್ ಜನರ ಗುಂಪನ್ನು ವಿಡಿಯೊ ಕ್ಲಿಪ್‌ನಲ್ಲಿ ನೋಡಬಹುದು. ಜನರನ್ನು ಉದ್ದೇಶಿಸಿ ಧ್ವನಿವರ್ಧಕದ ಮೂಲಕ ಯಾರೋ ಒಬ್ಬರು ಮಾತನಾಡುವುದನ್ನು ಕೇಳಬಹುದು.

ಪ್ರತಿಭಟನಾಕಾರರು ಹಲವು ತಿಂಗಳಿಂದ ಅಧ್ಯಕ್ಷರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಜನರ ಒತ್ತಾಯಕ್ಕೆ ಮಣಿಯದ ಕಾರಣ ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಲಾಗಿದೆ.

ಮತ್ತೊಬ್ಬ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಕೂಡ ಪ್ರತಿಭಟನಾಕಾರರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರು ಅಧ್ಯಕ್ಷರನ್ನು “ವಿಫಲ ನಾಯಕ” ಎಂದು ಕರೆದಿದ್ದಾರೆ.

“ವಿಫಲ ನಾಯಕನನ್ನು ಹೊರಹಾಕುವ ಏಕೈಕ ಗುರಿಯೊಂದಿಗೆ ದೇಶ ಈ ರೀತಿಯಲ್ಲಿ ಒಗ್ಗೂಡಿದ್ದನ್ನು ನಾನು ಜೀವಮಾನದಲ್ಲಿ ನೋಡಿರಲಿಲ್ಲ. ದಯವಿಟ್ಟು ಶಾಂತಿಯಿಂದ ಹೋಗಿ” ಎಂದಿರುವ ಅವರು #GoHomeGota ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದಾರೆ.

“ನಾನು ಯಾವಾಗಲೂ ಶ್ರೀಲಂಕಾದ ಜನರೊಂದಿಗೆ ನಿಲ್ಲುತ್ತೇನೆ. ಶೀಘ್ರದಲ್ಲೇ ವಿಜಯವನ್ನು ಆಚರಿಸುತ್ತಾರೆ. ಯಾವುದೇ ಉಲ್ಲಂಘನೆಯಾಗದಂತೆ ಹೋರಾಟ ಮುಂದುವರಿಸಬೇಕು” ಎಂದಿದ್ದಾರೆ.

“ಜನ ರೊಚ್ಚಿಗೆದ್ದಿದ್ದಾರೆ. ರಾಜೀನಾಮೆ ನೀಡಿ ಅಥವಾ ಮನೆಗೆ ಹೋಗಿ ಎನ್ನುವುದು ನಿಮಗೆ ಅರ್ಥವಾಗುತ್ತಿಲ್ಲವೇ ಮಿಸ್ಟರ್ ಪ್ರೆಸಿಡೆಂಟ್ ಮತ್ತು ಮಿಸ್ಟರ್ ಪ್ರೈಮ್ ಮಿನಿಸ್ಟರ್? ಇದು ಮಿಸ್ಟರ್ ಬೀನ್ ಸಿನಿಮಾ ಅಲ್ಲ. ಇದು ನಿಜ ಜೀವನ. ನೀವು ಜನರ ಜೀವನದೊಂದಿಗೆ ಆಟವಾಡುತ್ತಿದ್ದೀರಿ” ಎಂದಿದ್ದಾರೆ.

ಇಂದಿನ ಪ್ರತಿಭಟನೆಗೆ ಸಂಬಂಧಿಸಿದಂತೆ ಹಲವು ಟ್ವೀಟ್ಗಳನ್ನು ರೀ ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ “ಮಿಸ್ಟರ್‌ ಬೀನ್‌ ಪ್ಲೀಸ್‌ ರಿಸೈನ್‌, ನೋ ಮೋರ್‌ ಡೀಲ್ಸ್‌” ಎಂದಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಕೊಲಂಬೊದ ತಮ್ಮ ಸರ್ಕಾರಿ ಅಧಿಕೃತ ನಿವಾಸದಿಂದ ಪರಾರಿಯಾದ ಕೆಲವೇ ಗಂಟೆಗಳ ನಂತರ, ಸಾವಿರಾರು ಪ್ರತಿಭಟನಾಕಾರರು ಅಧ್ಯಕ್ಷೀಯ ನಿವಾಸದ ಕಾಂಪೌಂಡ್‌ ದಾಟಿದರು. ಅಲ್ಲಿನ ಐಶಾರಾಮಿ ಈಜು ಕೊಳದಲ್ಲಿ ಈಜಿದರು. ಕಿಚನ್‌ನಲ್ಲಿ ಊಟ ಮಾಡಿದರು.

ಪ್ರತಿಭಟನೆಗೆ ಸಂಬಂಧಿಸಿದ ಹಲವಾರು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ವೈರಲ್ ಅಗಿರುವ ವಿಡಿಯೊದಲ್ಲಿ ಕೆಲವು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದರೆ, ಇನ್ನು ಕೆಲವರು ವೀಡಿಯೋ ಮಾಡುತ್ತಿರುವುದು ಕಾಣುತ್ತದೆ.

ದೇಶವನ್ನು ಆರ್ಥಿಕ ವಿನಾಶದಿಂದ ರಕ್ಷಿಸುವಲ್ಲಿ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನಾಕಾರರು ಬಸ್‌ಗಳು, ರೈಲುಗಳು ಮತ್ತು ಟ್ರಕ್‌ಗಳಲ್ಲಿ ರಾಜಧಾನಿಗೆ ಆಗಮಿಸಿದ್ದರು. ಅದಕ್ಕೂ ಮೊದಲು ರಾಷ್ಟ್ರಪತಿಯನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ.

ಉದ್ರಿಕ್ತ ಪ್ರತಿಭಟನಾಕಾರರು ರಾಷ್ಟ್ರಪತಿ ಗೋಟಬಯಾ ರಾಜಪಕ್ಷ ಅವರನ್ನು ಉಲ್ಲೇಖಿಸಿ “ಗೋಟಾ ಮನೆಗೆ ಹೋಗು” ಎಂದು ಕೂಗುತ್ತಿದ್ದಾರೆ.

ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ. ಪ್ರತಿಭಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಕನಿಷ್ಠ 21 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...