Homeಮುಖಪುಟಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

ಇದು ನಮ್ಮ ಭವಿಷ್ಯಕ್ಕಾಗಿ: ಜನಾಂದೋಲನಕ್ಕೆ ಲಂಕಾ ಮಾಜಿ ಕ್ರಿಕೆಟಿಗರ ಬೆಂಬಲ

- Advertisement -
- Advertisement -

ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಸಾವಿರಾರು ಪ್ರತಿಭಟನಾಕಾರರು ಕೊಲಂಬೊದಲ್ಲಿರುವ ಶ್ರೀಲಂಕಾ ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದ ನಂತರ, ದ್ವೀಪ ರಾಷ್ಟ್ರದ ಮಾಜಿ ಕ್ರಿಕೆಟಿಗರು ಜನಾಂದೋಲನದ ಪರ ದನಿ ಎತ್ತಿದ್ದಾರೆ.

ಕ್ರಿಕೆಟ್ ದಂತಕಥೆ ಮತ್ತು ಶ್ರೀಲಂಕಾ ಕ್ರಿಕೆಟ್‌ ತಂಡದ ಮಾಜಿ ನಾಯಕ ಕುಮಾರ ಸಂಗಕ್ಕಾರ, ಮಹೇಲ ಜಯವರ್ಧನ, ಸನತ್‌ ಜಯಸೂರ್ಯ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಅಧ್ಯಕ್ಷೀಯ ಭವನದ ಹೊರಗೆ ಜಮಾಯಿಸಿರುವ ಪ್ರತಿಭಟನಾಕಾರರ ಮೂರು ಸೆಕೆಂಡುಗಳ ವೀಡಿಯೊ ಕ್ಲಿಪ್ ಅನ್ನು ಟ್ವೀಟ್ ಮಾಡಿದ ಕುಮಾರ ಸಂಗಕ್ಕಾರ, “ಇದು ನಮ್ಮ ಭವಿಷ್ಯಕ್ಕಾಗಿ” ಎಂದು ಬರೆದಿದ್ದಾರೆ.

ಲಂಕಾ ಧ್ವಜಗಳನ್ನು ಬೀಸುತ್ತಿರುವ ಬೃಹತ್ ಜನರ ಗುಂಪನ್ನು ವಿಡಿಯೊ ಕ್ಲಿಪ್‌ನಲ್ಲಿ ನೋಡಬಹುದು. ಜನರನ್ನು ಉದ್ದೇಶಿಸಿ ಧ್ವನಿವರ್ಧಕದ ಮೂಲಕ ಯಾರೋ ಒಬ್ಬರು ಮಾತನಾಡುವುದನ್ನು ಕೇಳಬಹುದು.

ಪ್ರತಿಭಟನಾಕಾರರು ಹಲವು ತಿಂಗಳಿಂದ ಅಧ್ಯಕ್ಷರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಜನರ ಒತ್ತಾಯಕ್ಕೆ ಮಣಿಯದ ಕಾರಣ ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಲಾಗಿದೆ.

ಮತ್ತೊಬ್ಬ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಕೂಡ ಪ್ರತಿಭಟನಾಕಾರರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರು ಅಧ್ಯಕ್ಷರನ್ನು “ವಿಫಲ ನಾಯಕ” ಎಂದು ಕರೆದಿದ್ದಾರೆ.

“ವಿಫಲ ನಾಯಕನನ್ನು ಹೊರಹಾಕುವ ಏಕೈಕ ಗುರಿಯೊಂದಿಗೆ ದೇಶ ಈ ರೀತಿಯಲ್ಲಿ ಒಗ್ಗೂಡಿದ್ದನ್ನು ನಾನು ಜೀವಮಾನದಲ್ಲಿ ನೋಡಿರಲಿಲ್ಲ. ದಯವಿಟ್ಟು ಶಾಂತಿಯಿಂದ ಹೋಗಿ” ಎಂದಿರುವ ಅವರು #GoHomeGota ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದಾರೆ.

“ನಾನು ಯಾವಾಗಲೂ ಶ್ರೀಲಂಕಾದ ಜನರೊಂದಿಗೆ ನಿಲ್ಲುತ್ತೇನೆ. ಶೀಘ್ರದಲ್ಲೇ ವಿಜಯವನ್ನು ಆಚರಿಸುತ್ತಾರೆ. ಯಾವುದೇ ಉಲ್ಲಂಘನೆಯಾಗದಂತೆ ಹೋರಾಟ ಮುಂದುವರಿಸಬೇಕು” ಎಂದಿದ್ದಾರೆ.

“ಜನ ರೊಚ್ಚಿಗೆದ್ದಿದ್ದಾರೆ. ರಾಜೀನಾಮೆ ನೀಡಿ ಅಥವಾ ಮನೆಗೆ ಹೋಗಿ ಎನ್ನುವುದು ನಿಮಗೆ ಅರ್ಥವಾಗುತ್ತಿಲ್ಲವೇ ಮಿಸ್ಟರ್ ಪ್ರೆಸಿಡೆಂಟ್ ಮತ್ತು ಮಿಸ್ಟರ್ ಪ್ರೈಮ್ ಮಿನಿಸ್ಟರ್? ಇದು ಮಿಸ್ಟರ್ ಬೀನ್ ಸಿನಿಮಾ ಅಲ್ಲ. ಇದು ನಿಜ ಜೀವನ. ನೀವು ಜನರ ಜೀವನದೊಂದಿಗೆ ಆಟವಾಡುತ್ತಿದ್ದೀರಿ” ಎಂದಿದ್ದಾರೆ.

ಇಂದಿನ ಪ್ರತಿಭಟನೆಗೆ ಸಂಬಂಧಿಸಿದಂತೆ ಹಲವು ಟ್ವೀಟ್ಗಳನ್ನು ರೀ ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ “ಮಿಸ್ಟರ್‌ ಬೀನ್‌ ಪ್ಲೀಸ್‌ ರಿಸೈನ್‌, ನೋ ಮೋರ್‌ ಡೀಲ್ಸ್‌” ಎಂದಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಕೊಲಂಬೊದ ತಮ್ಮ ಸರ್ಕಾರಿ ಅಧಿಕೃತ ನಿವಾಸದಿಂದ ಪರಾರಿಯಾದ ಕೆಲವೇ ಗಂಟೆಗಳ ನಂತರ, ಸಾವಿರಾರು ಪ್ರತಿಭಟನಾಕಾರರು ಅಧ್ಯಕ್ಷೀಯ ನಿವಾಸದ ಕಾಂಪೌಂಡ್‌ ದಾಟಿದರು. ಅಲ್ಲಿನ ಐಶಾರಾಮಿ ಈಜು ಕೊಳದಲ್ಲಿ ಈಜಿದರು. ಕಿಚನ್‌ನಲ್ಲಿ ಊಟ ಮಾಡಿದರು.

ಪ್ರತಿಭಟನೆಗೆ ಸಂಬಂಧಿಸಿದ ಹಲವಾರು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ವೈರಲ್ ಅಗಿರುವ ವಿಡಿಯೊದಲ್ಲಿ ಕೆಲವು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದರೆ, ಇನ್ನು ಕೆಲವರು ವೀಡಿಯೋ ಮಾಡುತ್ತಿರುವುದು ಕಾಣುತ್ತದೆ.

ದೇಶವನ್ನು ಆರ್ಥಿಕ ವಿನಾಶದಿಂದ ರಕ್ಷಿಸುವಲ್ಲಿ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನಾಕಾರರು ಬಸ್‌ಗಳು, ರೈಲುಗಳು ಮತ್ತು ಟ್ರಕ್‌ಗಳಲ್ಲಿ ರಾಜಧಾನಿಗೆ ಆಗಮಿಸಿದ್ದರು. ಅದಕ್ಕೂ ಮೊದಲು ರಾಷ್ಟ್ರಪತಿಯನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ.

ಉದ್ರಿಕ್ತ ಪ್ರತಿಭಟನಾಕಾರರು ರಾಷ್ಟ್ರಪತಿ ಗೋಟಬಯಾ ರಾಜಪಕ್ಷ ಅವರನ್ನು ಉಲ್ಲೇಖಿಸಿ “ಗೋಟಾ ಮನೆಗೆ ಹೋಗು” ಎಂದು ಕೂಗುತ್ತಿದ್ದಾರೆ.

ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದ್ದಾರೆ. ಪ್ರತಿಭಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಕನಿಷ್ಠ 21 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...