Homeಕರ್ನಾಟಕಜನ ಸಾಯುತ್ತಿದ್ದರೂ ವೆಂಟಿಲೇಟರ್ ರಫ್ತು ಮಾಡುವ ಹೃದಯಹೀನ‌ ಸರ್ಕಾರ: ಸಿದ್ದರಾಮಯ್ಯ

ಜನ ಸಾಯುತ್ತಿದ್ದರೂ ವೆಂಟಿಲೇಟರ್ ರಫ್ತು ಮಾಡುವ ಹೃದಯಹೀನ‌ ಸರ್ಕಾರ: ಸಿದ್ದರಾಮಯ್ಯ

24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ.

- Advertisement -
- Advertisement -

ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ.‌ ಕೇಂದ್ರ ಸಚಿವ ಡಾ. ಹರ್ಷವರ್ಧನ್ ಪ್ರಕಾರ ಕೊರೊನಾ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಇದು ಹೃದಯಹೀನ‌ ಸರ್ಕಾರ ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ ಕೊರತೆಯೂ ಒಂದು ಕಾರಣ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 57,396. ಲಭ್ಯ ಇರುವ ವೆಂಟಿಲೇಟರ್ ‌ಗಳು ಕೇವಲ 801. ಒಟ್ಟು ರಾಜ್ಯದ ಸ್ಥಿತಿ ಇನ್ನೂ ಚಿಂತಾಜನಕ. ಇಂತಹ ಸಮಯದಲ್ಲಿ ನರೇಂದ್ರ ಮೋದಿ ಸರ್ಕಾರಕ್ಕೆ ರಫ್ತು ಹೆಚ್ಚಿಸುವ ಚಿಂತೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಅನಿಯಂತ್ರಿತವಾಗಿ ಹರಡುವುದಕ್ಕೂ, ಸರ್ಕಾರದ ಭ್ರಷ್ಟಾಚಾರಕ್ಕೂ ನೇರವಾದ ಸಂಪರ್ಕ ಇದೆ. ಈ ಕಾರಣಕ್ಕಾಗಿ ನಾವು ಅಭಿಯಾನದ ಮೂಲಕ ಜನರ ಬಳಿ ನೇರವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಜನರ ಕಷ್ಟದ ಕಾಲದಲ್ಲಿ ವಿರೋಧಪಕ್ಷಗಳು ಸಹಕಾರ ನೀಡಬೇಕು, ಆರೋಪ ಮಾಡುವುದು ಸರಿಯೇ ಎಂದು ಮುಖ್ಯಮಂತ್ರಿಗಳು ಕೇಳ್ತಿದ್ದಾರೆ. ಇಂತಹ ಸಾವು-ನೋವಿನ ಕಷ್ಟ ಕಾಲದಲ್ಲಿ ಜನರ ಜೀವ ಉಳಿಸಬೇಕೇ ಹೊರತು ಭ್ರಷ್ಟಾಚಾರ ಮಾಡುವುದು ಸರಿಯೇ? ಎಂದು ನಾವು ಕೇಳುತ್ತಿದ್ದೇವೆ. ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ ಹೇಳಿ ಎಂದು ಪ್ರಶ್ನಿಸಿದ್ದಾರೆ.

ನಮ್ಮಿಂದ ಸಹಕಾರ ನಿರೀಕ್ಷಿಸುವ ಕೇಂದ್ರ ಬಿಜೆಪಿ ಸರ್ಕಾರ, ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ ಯಾಕೆ‌ ಸಹಕಾರ ಕೊಡಲಿಲ್ಲ? ಅಲ್ಲಿ ಮತ್ತು ರಾಜಸ್ತಾನದ‌ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು ಎನ್ನುವ ಕಾರಣಕ್ಕೆ ಸಹಿಸಿಕೊಂಡು ಸುಮ್ಮನಿದ್ದೆವು. ಈಗ ಕೊರೊನಾ ಸಾವು-ನೋವುಗಳಲ್ಲಿ ಮಹಾರಾಷ್ಟ್ರ-ತಮಿಳುನಾಡುಗಳನ್ನು ಮೀರಿಸಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ. ಈಗಲೂ ಸುಮ್ಮನಿದ್ದರೆ ಜನದ್ರೋಹ‌ ಆಗಲಾರದೇ ಎಂದಿದ್ದಾರೆ.

ಬೆಡ್ ಇಲ್ಲ, ಔಷಧಿ, ಊಟ ಕೊಡ್ತಿಲ್ಲ, ಅಂಬ್ಯುಲೆನ್ಸ್ ಇಲ್ಲ, ವೆಂಟಿಲೇಟರ್ ಇಲ್ಲ. ಬೀದಿಯಲ್ಲಿಯೇ ಹೆಣವಾದರು, ಸತ್ತ ಮೇಲೆಯೂ ದಫನ್ ಮಾಡುವವರಿಲ್ಲ ಎನ್ನುವುದೇ ಮಾಧ್ಯಮಗಳಲ್ಲಿ ನಿತ್ಯ ಸುದ್ದಿ. ರಾಜ್ಯದಲ್ಲಿ ಸೋಂಕಿನ ಸಂಖ್ಯೆ,1,29,287ಕ್ಕೆ ಸಾವಿನ ಸಂಖ್ಯೆ 2412ಕ್ಕೆ ಏರಿದೆ. ಹೇಳಿ ನಾವು ಸುಮ್ಮನಿರಬೇಕಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ. ಸತ್ಯ ಹೇಳಲು ನಿಮಗೆ ಭಯ ಯಾಕೆ ಎಂದು ಪ್ರಶ್ನಿಸಿದ್ದಾರೆ.

ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ. ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು ಬಿಜೆಪಿಯು ನಮ್ಮ‌ ಕೆಲಸವನ್ನು ಸುಲಭ‌ ಮಾಡಿದೆ. ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ? ಕೋರ್ಟ್ ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ ಎಂದಿದ್ದಾರೆ.


ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ಹೋರಾಟಗಾರ ರವಿಕೃಷ್ಣಾರೆಡ್ಡಿಯವರ ಸಂದರ್ಶನ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಜೆಪಿಯ ರಾಜಕಾರಣಿಗಳು ಕೊರೊನಾ ನೆಪದಲ್ಲಿ ಹಗಲು ದರೋಡೆ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...