Homeಕರ್ನಾಟಕಜನ ಸಾಯುತ್ತಿದ್ದರೂ ವೆಂಟಿಲೇಟರ್ ರಫ್ತು ಮಾಡುವ ಹೃದಯಹೀನ‌ ಸರ್ಕಾರ: ಸಿದ್ದರಾಮಯ್ಯ

ಜನ ಸಾಯುತ್ತಿದ್ದರೂ ವೆಂಟಿಲೇಟರ್ ರಫ್ತು ಮಾಡುವ ಹೃದಯಹೀನ‌ ಸರ್ಕಾರ: ಸಿದ್ದರಾಮಯ್ಯ

24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ.

- Advertisement -
- Advertisement -

ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ.‌ ಕೇಂದ್ರ ಸಚಿವ ಡಾ. ಹರ್ಷವರ್ಧನ್ ಪ್ರಕಾರ ಕೊರೊನಾ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಇದು ಹೃದಯಹೀನ‌ ಸರ್ಕಾರ ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ ಕೊರತೆಯೂ ಒಂದು ಕಾರಣ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 57,396. ಲಭ್ಯ ಇರುವ ವೆಂಟಿಲೇಟರ್ ‌ಗಳು ಕೇವಲ 801. ಒಟ್ಟು ರಾಜ್ಯದ ಸ್ಥಿತಿ ಇನ್ನೂ ಚಿಂತಾಜನಕ. ಇಂತಹ ಸಮಯದಲ್ಲಿ ನರೇಂದ್ರ ಮೋದಿ ಸರ್ಕಾರಕ್ಕೆ ರಫ್ತು ಹೆಚ್ಚಿಸುವ ಚಿಂತೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಅನಿಯಂತ್ರಿತವಾಗಿ ಹರಡುವುದಕ್ಕೂ, ಸರ್ಕಾರದ ಭ್ರಷ್ಟಾಚಾರಕ್ಕೂ ನೇರವಾದ ಸಂಪರ್ಕ ಇದೆ. ಈ ಕಾರಣಕ್ಕಾಗಿ ನಾವು ಅಭಿಯಾನದ ಮೂಲಕ ಜನರ ಬಳಿ ನೇರವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಜನರ ಕಷ್ಟದ ಕಾಲದಲ್ಲಿ ವಿರೋಧಪಕ್ಷಗಳು ಸಹಕಾರ ನೀಡಬೇಕು, ಆರೋಪ ಮಾಡುವುದು ಸರಿಯೇ ಎಂದು ಮುಖ್ಯಮಂತ್ರಿಗಳು ಕೇಳ್ತಿದ್ದಾರೆ. ಇಂತಹ ಸಾವು-ನೋವಿನ ಕಷ್ಟ ಕಾಲದಲ್ಲಿ ಜನರ ಜೀವ ಉಳಿಸಬೇಕೇ ಹೊರತು ಭ್ರಷ್ಟಾಚಾರ ಮಾಡುವುದು ಸರಿಯೇ? ಎಂದು ನಾವು ಕೇಳುತ್ತಿದ್ದೇವೆ. ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ ಹೇಳಿ ಎಂದು ಪ್ರಶ್ನಿಸಿದ್ದಾರೆ.

ನಮ್ಮಿಂದ ಸಹಕಾರ ನಿರೀಕ್ಷಿಸುವ ಕೇಂದ್ರ ಬಿಜೆಪಿ ಸರ್ಕಾರ, ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ ಯಾಕೆ‌ ಸಹಕಾರ ಕೊಡಲಿಲ್ಲ? ಅಲ್ಲಿ ಮತ್ತು ರಾಜಸ್ತಾನದ‌ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು ಎನ್ನುವ ಕಾರಣಕ್ಕೆ ಸಹಿಸಿಕೊಂಡು ಸುಮ್ಮನಿದ್ದೆವು. ಈಗ ಕೊರೊನಾ ಸಾವು-ನೋವುಗಳಲ್ಲಿ ಮಹಾರಾಷ್ಟ್ರ-ತಮಿಳುನಾಡುಗಳನ್ನು ಮೀರಿಸಿ ಕರ್ನಾಟಕ ನಂಬರ್ ಒನ್ ಆಗಲು ಹೊರಟಿದೆ. ಈಗಲೂ ಸುಮ್ಮನಿದ್ದರೆ ಜನದ್ರೋಹ‌ ಆಗಲಾರದೇ ಎಂದಿದ್ದಾರೆ.

ಬೆಡ್ ಇಲ್ಲ, ಔಷಧಿ, ಊಟ ಕೊಡ್ತಿಲ್ಲ, ಅಂಬ್ಯುಲೆನ್ಸ್ ಇಲ್ಲ, ವೆಂಟಿಲೇಟರ್ ಇಲ್ಲ. ಬೀದಿಯಲ್ಲಿಯೇ ಹೆಣವಾದರು, ಸತ್ತ ಮೇಲೆಯೂ ದಫನ್ ಮಾಡುವವರಿಲ್ಲ ಎನ್ನುವುದೇ ಮಾಧ್ಯಮಗಳಲ್ಲಿ ನಿತ್ಯ ಸುದ್ದಿ. ರಾಜ್ಯದಲ್ಲಿ ಸೋಂಕಿನ ಸಂಖ್ಯೆ,1,29,287ಕ್ಕೆ ಸಾವಿನ ಸಂಖ್ಯೆ 2412ಕ್ಕೆ ಏರಿದೆ. ಹೇಳಿ ನಾವು ಸುಮ್ಮನಿರಬೇಕಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

24 ಗಂಟೆಯೊಳಗೆ ಸಿದ್ದರಾಮಯ್ಯನವರ ಮನೆ ಬಾಗಿಲಿಗೆ ಮಾಹಿತಿ ಕಳಿಸಿಕೊಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿ 24 ದಿನ ಕಳೆದು ಹೋಗಿದೆ. ಇಲ್ಲಿಯ ವರೆಗೆ ರಾಜ್ಯ ಸರ್ಕಾರದಿಂದ ಒಂದು ಹಾಳೆ ಮಾಹಿತಿ ನನಗೆ ಬಂದಿಲ್ಲ. ಸತ್ಯ ಹೇಳಲು ನಿಮಗೆ ಭಯ ಯಾಕೆ ಎಂದು ಪ್ರಶ್ನಿಸಿದ್ದಾರೆ.

ನಾನು ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ. ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು ಬಿಜೆಪಿಯು ನಮ್ಮ‌ ಕೆಲಸವನ್ನು ಸುಲಭ‌ ಮಾಡಿದೆ. ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇ ಬೇಕಲ್ಲಾ? ಕೋರ್ಟ್ ನಲ್ಲಿಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ ಎಂದಿದ್ದಾರೆ.


ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ಹೋರಾಟಗಾರ ರವಿಕೃಷ್ಣಾರೆಡ್ಡಿಯವರ ಸಂದರ್ಶನ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿಜೆಪಿಯ ರಾಜಕಾರಣಿಗಳು ಕೊರೊನಾ ನೆಪದಲ್ಲಿ ಹಗಲು ದರೋಡೆ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...